For Quick Alerts
ALLOW NOTIFICATIONS  
For Daily Alerts

30-11-2018: ಶುಕ್ರವಾರದ ದಿನ ಭವಿಷ್ಯ

By Lekhaka
|

ಶುಕ್ರವಾರದ ದಿನ ಲಕ್ಷ್ಮಿ - ಹಿಂದೂ ಧರ್ಮದಲ್ಲಿನ ದೇವತೆಗಳಲ್ಲೊಬ್ಬರು. ವೈಕುಂಠದ ಅಧಿಪತಿ ಶ್ರೀವಿಷ್ಣುವಿನ(ನಾರಾಯಣ) ಪತ್ನಿ. ಹಣ, ಐಶ್ವರ್ಯ, ಸಿರಿ, ಸಂಪತ್ತುಗಳ ಅಧಿದೇವತೆಯೆಂದು ಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮಿಯನ್ನು ಮಹಾಲಕ್ಷ್ಮಿ ಎಂದೂ ಕರೆಯಲಾಗುತ್ತದೆ.ಪ್ರತಿವರ್ಷದ ಶುಕ್ರವಾರದಂದು ಲಕ್ಷ್ಮಿಗೆ ವಿಶೇಷ ಪೂಜೆಗಳನ್ನು ಆಚರಿಸವಾಗುತ್ತದೆ.ಗಾಯತ್ರಿ ದೇವಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807

ಮೇಷ

ಮೇಷ

ನಿಮ್ಮ ಇತ್ತೀಚಿನ ಕಾರ್ಯಕ್ರಮವು ಜನಮನ್ನಣೆ ಗಳಿಸಿದೆ. ಆದರೆ ಅದರಲ್ಲೂ ತಪ್ಪು ಹುಡುಕುವವರಿದ್ದಾರೆ. ಅನ್ಯರು ನಿಮ್ಮನ್ನು ಹೊಗಳಲಿ ಅಥವಾ ತೆಗಳಲಿ ಎಲ್ಲವನ್ನು ನಗುಮುಖದಿಂದ ಸ್ವಾಗತಿಸುವಿರಿ. ಇದರಿಂದ ನಿಮ್ಮ ಘನತೆ ಹೆಚ್ಚುವುದು.ಹಲವು ದಿನಗಳಿಂದ ಒಂದು ಸ್ಪಷ್ಟ ಸ್ವರೂಪ ಕೊಡಲು ಸಾಧ್ಯವಾಗದ ಒಂದು ಸಂಗತಿಗೆ ನಿಶ್ಚಿತ ರೂಪ ದೊರೆಯಲಿದೆ. ಇದರಿಂದ ಆರ್ಥಿಕ ಸಂಕಷ್ಟ ಕಡಿಮೆ ಆಗಲಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು. ಮಾತು ಮನೆ ಕೆಡಿಸಿತು. ತೂತು ಒಲೆ ಕೆಡಿಸಿತು ಎಂಬಂತೆ ನೀವು ಆಡುವ ಮಾತು ನಿಮ್ಮ ಹತ್ತಿರದ ವೃಕ್ತಿಗೆ ಘಾಸಿಯನ್ನುಂಟು ಮಾಡುವುದು. ಅದರಿಂದ ಆತ ಕುಪಿತನಾಗಿ ನಿಮ್ಮ ಮೇಲೆ ಜಗಳಕ್ಕೆ ಬರುವ ಸಾಧ್ಯತೆ ಇರುತ್ತದೆ. ಆದಷ್ಟು ತಾಳ್ಮೆಯಿಂದ ಇರಿ. ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ನಿಮ್ಮ ವಿಶೇಷವಾದ ಪ್ರವಾಸ ಕಾರ್ಯಕ್ರಮ ನಿಗದಿಗೊಳ್ಳಲು ಅವಕಾಶ ದಿಢೀರಾಗಿ ಕೂಡಿಬರುತ್ತದೆ. ಇದನ್ನು ಉಪಯೋಗಿಸಿಕೊಂಡಲ್ಲಿ ನಿಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮ ವಾಗಿರುವುದು.ಅನವಶ್ಯಕ ಖರ್ಚುಗಳು ನಿಮ್ಮನ್ನು ಹೈರಾಣ ಮಾಡುವುದು. ಬರಬೇಕಾದ ಹಣ ಸಕಾಲದಲ್ಲಿ ಬರದೆ ಇರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗುವುದು. ಮನೋನಿಯಾಮಕ ರುದ್ರದೇವರನ್ನು ಮನಸಾ ಸ್ಮರಿಸಿ, ಒಳಿತಾಗುವುದು.ನೀವು ನಿಮ್ಮ ಮಕ್ಕಳಿಗೆ ತಿಳಿಸಬೇಕೆಂದಿರುವ ಮಹತ್ವದ ವಿಷಯವನ್ನು ತಿಳಿಸಲು ಇಂದು ಉತ್ತಮ ದಿನವಾಗಿದೆ. ಇದರಿಂದ ಮುಂದಿನ ದಿನಗಳನ್ನು ಸರಾಗವಾಗಿ ರೂಪಿಸಿಕೊಳ್ಳಲು ಸಹಾಯವಾಗುವುದು. ಮಕ್ಕಳಿಗೂ ಸ್ವಲ್ಪ ಜವಾಬ್ದಾರಿಯನ್ನು ಕಲಿಸಿಕೊಡಿ. ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಏನೋ ಆತಂಕ ಎದುರಾಗಲಿದೆ ಎಂದು ವಿಚಲಿತರಾಗುವ ಸಾಧ್ಯತೆ ಇದ್ದು ಎಲ್ಲವೂ ದೈವಕೃಪೆಯಿಂದ ಪರಿಹಾರವಾಗಲಿದೆ ಮತ್ತು ಆತಂಕದಿಂದ ದೂರ ಉಳಿಯುವಿರಿ. ಹಾಸಿಗೆ ಇದ್ದಷ್ಟು ಕಾಲು ಚಾಚುವುದನ್ನು ಅಭ್ಯಾಸ ಮಾಡಿಕೊಳ್ಳಿ. ಅಜೀರ್ಣ ಅಥವಾ ವಾಯು ತೊಂದರೆ ಎದುರಾಗುವ ಸಾಧ್ಯತೆ ಇರುವುದು. ವೈದ್ಯರ ಸಲಹೆಯಂತೆ ಔಷಧೋಪಚಾರ ಪಡೆದುಕೊಳ್ಳಿ ಮತ್ತು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ.ಕುಟುಂಬಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಟಿಲ ಸಮಸ್ಯೆಗಳು ಎದುರಾಗುವವು. ಭಗವಂತನ ಮೊರೆ ಹೋಗಿ. ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ಸ್ನೇಹಿತರ ಹಣಕಾಸು ವಿಚಾರದಲ್ಲಿ ಮಧ್ಯವರ್ತಿಯಾಗಿ ಕಾಗದ ಪತ್ರಗಳಿಗೆ ಸಹಿ ಮಾಡದಿರಿ. ಅದೃಷ್ಟ ಸಂಖ್ಯೆ:5

ಕಟಕ

ಕಟಕ

ನಿಮಗೆ ಸಂಬಂಧಪಡದ ವ್ಯಕ್ತಿಗಳು ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಮೂಗು ತೂರಿಸುವುದರಿಂದ ಮುಜುಗರಕ್ಕೆ ಒಳಗಾಗುವಿರಿ. ಅಂತಹ ವ್ಯಕ್ತಿಗಳಿಗೆ ಕಠಿಣ ಪದಗಳನ್ನು ಉಪಯೋಗಿಸಿ ದೂರ ಇರಲು ತಿಳಿಸಿ. ಅನುಕೂಲ ವಾಗುವುದು.ಯಾರೇ ನಿಮ್ಮ ನಿಲುವನ್ನು ಟೀಕಿಸಲಿ, ತರ್ಕಪೂರ್ಣವಾಗಿದ್ದಲ್ಲಿ ನಿಮ್ಮ ಹೆಜ್ಜೆಯನ್ನು ಹಿಂದೆ ಇಡಲೇ ಬೇಡಿ. ಸಾಹಸವಂತನಿಗೆ ಭಗವಂತನು ಸಹಾಯಹಸ್ತ ನೀಡುವನು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.

ನಿಮ್ಮ ವಿಚಾರದಲ್ಲಿ ಜನರು ತಿಳಿದುಕೊಂಡ ತಪ್ಪು ಗ್ರಹಿಕೆಗಳು ದೂರವಾಗಲು ಇಂದು ಶುಭದಿನವಾಗಿದೆ. ಹಾಗಾಗಿ ನಿಮ್ಮ ಮನಸ್ಸು ಹಕ್ಕಿಯಂತೆ ಹಾರಾಡುವುದು. ನೂತನ ಕೆಲಸ ಮಾಡಲು ಹೊಸ ಉತ್ಸಾಹ ಮೂಡುವುದು. ಅದೃಷ್ಟ ಸಂಖ್ಯೆ:5

 ಸಿಂಹ

ಸಿಂಹ

ನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಪಾಲುದಾರರ ಜೊತೆ ಮುಕ್ತ ಮಾತುಕತೆಗಳನ್ನು ನಡೆಸಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದಿಲ್ಲ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ಸುಮ್ಮನೆ ಮತ್ತೊಬ್ಬರಿಗೆ ಅನುಕಂಪ ತೋರಿ ಹಣದ ಸಹಾಯ ಮಾಡದಿರಿ. ನಿಮ್ಮ ಹೃದಯ ವೈಶಾಲ್ಯವನ್ನು ಇತರರು ದುರುಪಯೋಗ ಪಡಿಸಿಕೊಳ್ಳುವರು. ಇದರಿಂದ ಮಾನಸಿಕ ಚಿಂತೆಗಳು ಹೆಚ್ಚು ಕಾಡುತ್ತವೆ.ದೂರದ ಸ್ಥಳಕ್ಕೆ ವರ್ಗಾವಣೆ ಆಗುವ ಸಾಧ್ಯತೆ ಜಾಸ್ತಿಯಾಗಿದೆ. ಬದಲಾವಣೆ ಈಗ ಅನಿವಾರ್ಯ ವಾಗಿರುತ್ತದೆ. ಬೇರೊಂದು ಕಡೆ ವರ್ಗ ಆಗುವ ಜಾಗ ಉತ್ತಮವಾಗಿರುತ್ತದೆ. ಅದೃಷ್ಟ ಸಂಖ್ಯೆ:6

ಕನ್ಯಾ

ಕನ್ಯಾ

ಹಿರಿಯರು ನಡೆಸಿದ ಆದರ್ಶ ಜೀವನ, ನಿಮ್ಮ ಬದುಕಿಗೆ ದಾರಿದೀಪವಾಗಲಿದೆ. ಅಂತೆಯೇ ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ ಮತ್ತು ನಿಮ್ಮ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸುವುದು ಉತ್ತಮ.ತಿಳಿದವರಿಗೆ ಹೆಚ್ಚಿನ ಸಲಹೆ ಸೂಚನೆಗಳು ಬೇಡ ಎಂಬುದು ಸರಿಯಾದರೂ ಮಕ್ಕಳಿಗೆ ಸೂಕ್ತ ಸಲಹೆಗಳನ್ನು ನೀಡಬಹುದಾಗಿದೆ. ಆಂಜನೇಯ ಸ್ತೋತ್ರವನ್ನು ಪಠಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ಗಾದೆ ಮಾತಿದೆ. ಅಂತೆಯೇ ನಿಮ್ಮ ಕಾರ್ಯಗಳು ನೆರವೇರಬೇಕೆಂದರೆ ನಿಮ್ಮ ಶತ್ರುಗಳ ಸಹಾಯವನ್ನು ಪಡೆಯಬೇಕಾಗುವುದು. ಈ ಬಗ್ಗೆ ಹಿಂಜರಿಕೆ ಬೇಡ. ಅದೃಷ್ಟ ಸಂಖ್ಯೆ:4

ತುಲಾ

ತುಲಾ

ರಾಜಕೀಯ ನೇತಾರರು ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಬಹು ಎಚ್ಚರಿಕೆಯಿಂದ ಇರಬೇಕು. ಅನವಶ್ಯಕವಾಗಿ ಅಪವಾದಗಳನ್ನು ಎದುರಿಸಬೇಕಾಗುವುದು.ಸರ್ವ ಶಕ್ತಳಾದ ದುರ್ಗಾಮಾತೆಯನ್ನು ಆರಾಧಿಸಿ. ದೇವಿ ದೇವಸ್ಥಾನಕ್ಕೆ ಹುರುಳಿ ಕಾಳನ್ನು ದಾನ ಮಾಡುವುದರಿಂದ ಕಾರ್ಯಗಳು ಸುಗಮವಾಗುವುವು. ಹಣಕಾಸಿನ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡು ಬರುವುದು. ಬೆಟ್ಟಿಂಗ್‌, ಜೂಜು, ರೇಸು ಇತ್ಯಾದಿಗಳಿಂದ ಹಣ ಕಳೆದು ಕೊಳ್ಳುವ ಸಾಧ್ಯತೆ ಇದೆ. ಕಾದು ನೋಡಿ, ಮುಂದಿನ ದಿನಗಳಲ್ಲಿ ಒಳಿತಾಗುವುದು. ಅಧಿಕ ಸುತ್ತಾಟದಿಂದ ಅನಾರೋಗ್ಯ ಉಂಟಾಗುವ ಸಾಧ್ಯತೆ ಇದೆ. ಸೂಕ್ತ ವೈದ್ಯಕೀಯ ಚಿಕಿತ್ಸೆ ಮಾಡಿಸಿ.ಅದೃಷ್ಟ ಸಂಖ್ಯೆ:9

ವೃಶ್ಚಿಕ

ವೃಶ್ಚಿಕ

ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ ಉಂಟಾಗುವುದು. ಸಂಬಂಧಿಕರೊಂದಿಗೆ ಸುದೀರ್ಘ ಸಮಾಲೋಚನೆಯಿಂದ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯುವುದು.ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ತಾಂತ್ರಿಕ ಇಲಾಖೆಯ ಕಂಪ್ಯೂಟರ್‌ ವಿಭಾಗದವರಿಗೆ ಭತ್ಯೆಯಲ್ಲಿ ಹೆಚ್ಚಳ ಕಂಡು ಬರುವುದು. ರಾಜಕೀಯದಲ್ಲಿರುವವರಿಗೆ ಉತ್ತಮ ಕಾಲ.ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಹಾಯ, ಸಲಹೆ ಕೋರಿ ಬರುವವರಿಗೆ ಸಹಾಯ ಮಾಡಿ. ಅದೃಷ್ಟ ಸಂಖ್ಯೆ:6

ಧನುಸ್ಸು

ಧನುಸ್ಸು

ಮನದಾಳದ ಚಿಂತನೆಗಳನ್ನು ದೂರಮಾಡಿ ಒಳಿತುಗಳನ್ನು ಪಡೆಯುವ ಸಿದ್ದಿಯನ್ನು ಕಂಡುಕೊಳ್ಳುವಿರಿ. ಇದಕ್ಕೆ ಪೂರಕವಾಗಿ ಬಂಧುಗಳು ಮತ್ತು ಸ್ನೇಹಿತರು ಸಹಾಯಹಸ್ತ ನೀಡುವರು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.ಹಠ ಯಾರಿಗೂ ಒಳ್ಳೆಯದಲ್ಲ. ನಿಮ್ಮ ಹಠದಿಂದ ಸಾಂಸಾರಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಬರುವುದು. ಒಂದು ವೇಳೆ ಕೋಪ, ಹಠವನ್ನು ನಿಯಂತ್ರಿಸಿಕೊಳ್ಳದೆ ಇದ್ದಲ್ಲಿ ತೊಂದರೆ ಅನುಭವಿಸುವಿರಿ. ಬಾಳಸಂಗಾತಿ ಸಲಹೆ ಸಹಕಾರಗಳನ್ನು ಸ್ವೀಕರಿಸಿ. ಅಂತೆಯೇ ಹೆತ್ತ ತಂದೆ ತಾಯಿಯ ಮಾತನ್ನು ನಡೆಸಿಕೊಡುವುದು ಒಳ್ಳೆಯದು. ಇದರಿಂದ ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ.ಅದೃಷ್ಟ ಸಂಖ್ಯೆ:5

ಮಕರ

ಮಕರ

ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಯೋಜನೆಯನ್ನು ಸ್ವಲ್ಪ ದಿನ ಮುಂದೂಡಿ. ಇದರಿಂದ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಹಾಯವಾಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಸಾಧಾರಣ ಪ್ರಗತಿ ಇರುತ್ತದೆ. ಮಾಡಿದ್ದುಣ್ಣೊ ಮಹರಾಯ ಎಂಬ ಸಂಗತಿ ನೆನಪಿಡಿ. ಇದರಿಂದ ನೀವು ನಿಮ್ಮನ್ನು ನಿಯಂತ್ರಿಸಿ ಕೊಳ್ಳಬೇಕಾಗುವುದು. ಆದಷ್ಟು ಉಡಾಫೆ ಮಾತುಗಳನ್ನು ಆಡದಿರಿ. ಇದರಿಂದ ನಿಮ್ಮ ಗೌರವಕ್ಕೆ ಚ್ಯುತಿ ಬರುವುದು.ವ್ಯಕ್ತಿತ್ವದ ವಿಚಾರದಲ್ಲಿ ಹೊಸ ಎತ್ತರ ಪಡೆಯಲು ಸಂಬಂಧಿಕರು ಸಹಾಯ ಮಾಡುವರು. ಇದರಿಂದ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ಹೆಚ್ಚಲಿವೆ. ಆತ್ಮೀಯರು ನಿಮ್ಮನ್ನು ಸನ್ಮಾನಿಸುವ ಸಾಧ್ಯತೆ ಇದೆ.ಅದೃಷ್ಟ ಸಂಖ್ಯೆ:9

ಕುಂಭ

ಕುಂಭ

ಕಿರಿಕಿರಿಗಳಿಂದ ಪಾರಾಗಲು ಅಪಾರವಾದ ತಾಳ್ಮೆಯಿರಲಿ. ತಂತಾನೇ ಕೆಲವು ಪರಿಹಾರದ ಮಾರ್ಗೋಪಾಯಗಳು ಲಭಿಸುವುವು. ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಆರಾಧಿಸಿ.ಸಿಟ್ಟಿಗೆ ಬುದ್ಧಿ ಕೊಡದಿರಿ. ನಿಮ್ಮ ಮಾತುಕತೆಯಲ್ಲಿ ತಪ್ಪು ನುಸುಳದಂತೆ ಎಚ್ಚರ ವಹಿಸಿ. ಎದುರು ವ್ಯಕ್ತಿಯ ಜೊತೆ ವ್ಯವಹರಿಸುವಾಗ ಹುಷಾರಾಗಿರಿ. ಆಂಜನೇಯ ಸ್ವಾಮಿಯ ಸ್ಮರಣೆ ಮಾಡಿ.ಸ್ವಾಭಿಮಾನಿಗಳಾದ ನೀವು ಸಾಧಿಸಬೇಕಾದ ಕೆಲಸವನ್ನು ಪೂರ್ಣಗೊಳಿಸುವಿರಿ. ಇದರಿಂದ ನೀವಷ್ಟೇ ಅಲ್ಲದೆ ನಿಮ್ಮ ಕುಟುಂಬದ ಸದಸ್ಯರು ಸಂತೋಷ ಪಡುವರು. ಆದರೆ ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಇರಲಿ. ಅದೃಷ್ಟ ಸಂಖ್ಯೆ:2

ಮೀನ

ಮೀನ

ಹಾಸಿಗೆ ಇದ್ದಷ್ಟು ಕಾಲು ಚಾಚುವುದನ್ನು ರೂಢಿಸಿಕೊಳ್ಳಿ. ಹಣಕಾಸಿನ ಮುಗ್ಗಟ್ಟನ್ನು ಅನುಭವಿಸುವಿರಿ ಮತ್ತು ನೀವು ಸಾಲ ಪಡೆದವರಿಂದ ನೋಟಿಸು ಜಾರಿ ಆಗುವ ಸಂದರ್ಭವಿರುತ್ತದೆ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಒತ್ತಡದಲ್ಲಿ ಸಿಲುಕಿಕೊಳ್ಳುವ ಸಂಭವ ಜಾಸ್ತಿ ಇದೆ. ಯೋಚಿಸದೆ ಯಾರಿಗೂ ಹಣ ಅಥವಾ ಮಾತು ಕೊಡಲು ಮುಂದಾಗದಿರಿ. ಕೊಟ್ಟ ಹಣ ವಾಪಸ್ಸು ಬರದೆ ಇರುವ ಸಾಧ್ಯತೆ ಇದೆ. ನಿಮ್ಮ ಕುಲದೇವರನ್ನು ಸ್ಮರಿಸಿಕೊಳ್ಳಿ. ರಸ್ತೆಯಲ್ಲಿ ಹೋಗುವ ಮಾರಿಯನ್ನು ಮನೆಗೆ ಕರೆದಂತೆ ನೀವಾಗಿಯೇ ಕೆಲವು ಸಮಸ್ಯೆಗಳನ್ನು ಮೈಮೇಲೆ ಹಾಕಿಕೊಳ್ಳುವಿರಿ. ಈ ಬಗ್ಗೆ ಜಾಗ್ರತೆಯಿಂದ ಇರಿ. ಶಿವಾಲಯದಲ್ಲಿ ರುದ್ರಾಭಿಷೇಕ ಮಾಡಿಸಿ.ಅದೃಷ್ಟ ಸಂಖ್ಯೆ:1

ದೈವಜ್ಞ ಜ್ಯೋತಿಷ್ಯರು 9845743807

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

English summary

your daily horoscope-30-November-2018

Know what astrology and the planets have in store for you today. Choose your zodiac sign and read the details...
Story first published: Friday, November 30, 2018, 10:11 [IST]
X
Desktop Bottom Promotion