Just In
- 41 min ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 2 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 3 hrs ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 5 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
Don't Miss
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
30-10-2018: ಮಂಗಳವಾರದ ದಿನ ಭವಿಷ್ಯ
ಮಂಗಳವಾರದ ದಿನ ಜಗನ್ಮಾತೆಯ ರೂಪವಾದ ದೇವಿ ಕಾಳಿ ಎನ್ನುವುದರ ಅರ್ಥ "ಕಪ್ಪಗಿರುವುದು". ಶಿವನನ್ನು ಕಾಲ ಎನ್ನುವುದರಿಂದ -ಅನಂತ ಕಾಲ, ಕಾಳಿ ಆತನ ಪತ್ನಿ, "ಸಮಯ" ಅಥವಾ "ಸಾವು" ಎನ್ನುವ ಅರ್ಥಗಳೂ ಇವೆ. (ಕಾಲವು ಬಂದಂತೆ). ಹೀಗೆ ಕಾಳಿಯು ಕಾಲ ಮತ್ತು ಪರಿವರ್ತನೆಯ ದೇವತೆ. ಹೀಗಿದ್ದರೂ ಕೆಲವೊಮ್ಮೆ ಕಪ್ಪಾಗಿ ಮತ್ತು ರೌದ್ರಾಕಾರವಾಗಿ ಕಾಣಿಸಿಕೊಳ್ಳುವಳು.
ಕಾಳಿಯು ಭಗವಂತ ಶಿವನ ಜೊತೆಗಾರ್ತಿಯಾಗಿ ಪ್ರತಿನಿಧಿಸಲ್ಪಡುತ್ತಾಳೆ. ಶಿವನ ಶರೀರದ ಮೇಲೆ ಕಾಳಿ ನಿಂತಿರುತ್ತಾಳೆ. ದುರ್ಗಾ, ಭದ್ರಕಾಳಿ, ಸತಿ, ರುದ್ರಾಣಿ,ಪಾರ್ವತಿ ಮತ್ತು ಚಾಮುಂಡಾ ಮುಂತಾದ ಇನ್ನೂ ಅನೇಕ ಹಿಂದೂ ದೇವತೆಗಳ ಜೊತೆಗೂ ಆಕೆಯ ಸಂಬಂಧವಿದೆ. ದಶ ಮಹಾವಿದ್ಯಾಗಳು, ಹತ್ತು ಭೀಕರ ತಾಂತ್ರಿಕ ದೇವಿಯರಲ್ಲಿ ಆಕೆ ಮುಂಚೂಣಿಯಲ್ಲಿದ್ದಾಳೆ.
ಜಗನ್ಮಾತೆಯಾದ ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ. ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು.9845743807
ಮೇಷ
ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.ಜಯವಿರುವವರೆಗೆ ಭಯವಿಲ್ಲ ಎನ್ನುವಂತೆ ನಿಮ್ಮ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವವು. ನಿಮ್ಮ ಹೆಸರನ್ನು ಹೇಳಿ ಬೇರೆಯವರು ತಮ್ಮ ಕೆಲಸವನ್ನು ಸಾಧಿಸಿಕೊಳ್ಳುವರು. ಅಂತಹವರ ಬಗ್ಗೆ ಎಚ್ಚರದಿಂದ ಇರಬೇಕು.ಈದಿನದ ನಿಮ್ಮ ಮನೋಕಾಮನೆಗಳು ಯಶಸ್ಸಿನತ್ತ ಸಾಗುವುದು. ಪರಿಶ್ರಮದಿಂದ ಧನಸಂಪಾದನೆಗೆ ಮುಂದಾಗಿರಿ. ದೈವಬಲದ ದೆಸೆಯಿಂದ ಹೆಚ್ಚಿನ ಅನುಕೂಲವಾಗುವುದು. ವಿದ್ಯಾರ್ಥಿಗಳು ಸಾಕಷ್ಟು ಓದಿನ ಕಡೆ ಗಮನ ಹರಿಸಬೇಕು.
ಅದೃಷ್ಟ ಸಂಖ್ಯೆ:2
ವೃಷಭ
ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.
ಜೀವನದಲ್ಲಿ ಹಲವಾರು ಪರೀಕ್ಷೆಗಳನ್ನು ಎದುರಿಸಿ ಜಯಶೀಲರಾಗಿರುವಿರಿ. ಆದರೆ ಮನೋವ್ಯಾಕುಲದಿಂದ ಹೊರಬರಲು ಆಗುತ್ತಿಲ್ಲ. ಆದಷ್ಟು ಶಿವಸ್ತುತಿಯನ್ನು ಪಠಿಸಿ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ಆರೋಗ್ಯದ ಕಡೆ ಗಮನ ಕೊಡಿ.ನಿಮ್ಮ ಮನೋಧೈರ್ಯವನ್ನು ಕೆಡಿಸುವಂತಹ ಅನ್ಯರ ಮಾತುಗಳನ್ನು ಬೇಗನೆ ನಂಬದಿರಿ. ಮನಸ್ಸಿನ ಸಂತುಲವನ್ನು ಕಾಯ್ದುಕೊಂಡರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಕೇವಲ ಔಷಧಿಗಳಿಂದ ಖಾಯಿಲೆ ವಾಸಿಯಾಗುವುದಿಲ್ಲ. ಅದರ ಬಗ್ಗೆ ನಂಬಿಕೆಯೂ ಬೇಕು.
ಅದೃಷ್ಟ ಸಂಖ್ಯೆ:1
ಮಿಥುನ
ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು.ಮನಸ್ಸು ಕೊಳೆಯಾಗದಂತೆ ಎಚ್ಚರಿಕೆ ವಹಿಸಿ. ತಿಳಿಯಾದ ಮನಸ್ಸು ಶುಭವನ್ನು ಚಿಂತಿಸಿದರೆ ಕೊಳೆಯಾದ ಮನಸ್ಸು ಅಶುಭವನ್ನು ಚಿಂತಿಸುತ್ತದೆ. ಹಾಗಾಗಿ ಧನಾತ್ಮಕ ಚಿಂತನೆಯಿಂದ ಮನಸ್ಸನ್ನು ಪ್ರಸನ್ನಗೊಳಿಸಿ.ಅನೇಕ ರೀತಿಯ ಅಡೆತಡೆಗಳನ್ನು ದಾಟಿಕೊಂಡು ಬಂದಿರುವಿರಿ. ನಿಮ್ಮ ಈದಿನದ ಸಂಕಲ್ಪ ಶಕ್ತಿಯು ಹೆಚ್ಚು ಪ್ರಖರವಾಗಿದ್ದು ಮಹತ್ತರ ಕೆಲಸವನ್ನು ಗೆಲ್ಲಲಿದ್ದೀರಿ. ಆದರೆ ಅದರ ಸಾಮಥ್ರ್ಯವು ನಿಮ್ಮಲ್ಲಿ ಅಹಂಕಾರ ಬರದಂತೆ ನೋಡಿಕೊಳ್ಳಿರಿ.
ಅದೃಷ್ಟ ಸಂಖ್ಯೆ:2
ಕಟಕ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ.
ಸುಖಸ್ಥಾನದ ಶುಭಗ್ರಹ ಸಂಚಾರದಿಂದಾಗಿ ಮನೆ, ಮಡದಿ, ಮಕ್ಕಳು ನಿಮಗೆ ಸಂತಸವನ್ನುಂಟು ಮಾಡುವರು. ಇದರ ಜತೆ ವಾಹನ ಸುಖವೂ ದೊರೆತು ಮನಸ್ಸು ಪ್ರಫುಲ್ಲವಾಗುವುದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ.
ಗುರು ಹಿರಿಯರ ಸೇವೆ ಎಂದರೆ ಅವರನ್ನು ಒಂದೆಡೆ ಕೂಡಿ ಅರ್ಚನೆ ಮಾಡುವುದಲ್ಲ. ಅವರಿಗೆ ಬೇಕಾದ ಇಷ್ಟನಿಷ್ಟಗಳನ್ನು ಪೂರೈಸುವುದು. ಅವರಿಗೆ ನೋವಾಗದಂತೆ ಇರುವುದೇ ಸೇವೆ. ಇಂತಹ ಸೇವೆಯಿಂದ ಈದಿನ ಒಳಿತಾಗುವುದು.
ಅದೃಷ್ಟ ಸಂಖ್ಯೆ:9
ಸಿಂಹ
ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ.ಬೇಸಿಗೆಯ ಬಿಸಿಲಿನ ಝಳವನ್ನು ನೀವು ತಡೆದುಕೊಳ್ಳಲಾರರಿ. ಆದಷ್ಟು ಹೊರಗೆ ಸುತ್ತಾಡುವುದನ್ನು ಕಡಿಮೆ ಮಾಡಿ. ತಂಪಾದ ಪಾನೀಯಗಳ ಸೇವನೆಯಿಂದ ದೇಹಕ್ಕೂ ಮತ್ತು ಮನಸ್ಸಿಗೂ ಹಿತವಾಗುವುದು.
ಸಿಂಹವು ಗಾಂಭೀರ್ಯಕ್ಕೆ ಹೆಸರಾದ ಪ್ರಾಣಿ. ಅಂತೆಯೇ ನೀವು ಉದ್ಯೋಗದಲ್ಲಿ ಗಾಂಭೀರ್ಯತೆಯನ್ನು ಕಾಯ್ದುಕೊಳ್ಳಿರಿ. ಸಣ್ಣಪುಟ್ಟ ಟೀಕೆಗಳಿಗೆ ಆತ್ಮ ಸಂಯಮವನ್ನು ಕಳೆದುಕೊಳ್ಳದಿರಿ. ಕುಲದೇವತಾ ಪ್ರಾರ್ಥನೆ ಮಾಡಿರಿ.
ಅದೃಷ್ಟ ಸಂಖ್ಯೆ:6
ಕನ್ಯಾ
ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು.
ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ದಿಢೀರನೆ ಯಶಸ್ಸಿನತ್ತ ದಾಪುಗಾಲು ಹಾಕುವುದು. ಇದರಿಂದ ಜೀವನದಲ್ಲಿ ಜಡತ್ವ ತೊಲಗಿ ಫೀನಿಕ್ಸ್ ಪಕ್ಷಿಯಂತೆ ಚುರುಕಾಗುವಿರಿ. ಹಣಕಾಸು ಕೂಡಾ ನಿಮಗೆ ಒದಗಿ ಬರುವುದು.
ಜವಾಬ್ದಾರಿಯನ್ನು ನಿರ್ವಹಿಸಿ, ಅಡೆತಡೆಗಳನ್ನು ಎದುರಿಸಿ ನಿಲ್ಲುವಂತಹ ಶಕ್ತಿಯು ಇಂದು ತನ್ನಿಂದ ತಾನೇ ಲಭಿಸುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿದ್ದು, ನಿಮ್ಮ ಬಹುದಿನದ ಕನಸು ನನಸಾಗುವುದು.
ಅದೃಷ್ಟ ಸಂಖ್ಯೆ:3
ತುಲಾ
ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.ಜೀವನದ ಪಥ ಸರಾಗವಾಗಿ ಆಗುತ್ತಿರುವುದು. ನಿಮಗೆ ಸಂತಸ ತರುವುದು. ಇದರ ಹಿಂದೆ ಗುರು ಹಿರಿಯರ ಆಶೀರ್ವಾದದಿಂದ ಮಾತಾಪಿತರ ತ್ಯಾಗವಿದೆ ಎಂಬುದನ್ನು ಮರೆಯದಿರಿ. ಯಾವುದನ್ನು ದಿಢೀರನೆ ತೀರ್ಮಾನ ಮಾಡುವುದು ಸೂಕ್ತವಲ್ಲ.
ಗೆಳೆಯನೊಬ್ಬನ ಸಹಾಯವು ಇಂದು ನಿಮಗೆ ದೊರೆಯಲಿರುವುದು. ಮತ್ತು ಭಗವಂತ ನಿಮ್ಮ ಮೇಲೆ ಅಪಾರ ಕರುಣೆಯನ್ನು ತೋರುವುದರಿಂದ ಆರಂಭಿಸಿದ ಕಾರ್ಯಗಳೆಲ್ಲವೂ ಕೈಗೂಡುವುದು.
ಅದೃಷ್ಟ ಸಂಖ್ಯೆ:2
ವೃಶ್ಚಿಕ
ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು.ತೋಳ ಹಳ್ಳಕ್ಕೆ ಬಿದ್ದಾಗ ಆಳಿಗೊಂದು ಕಲ್ಲನ್ನು ಎಸೆಯುವರು. ಅಂತೆಯೇ ಸದ್ಯಕ್ಕೆ ನಿಮ್ಮ ಗ್ರಹಸ್ಥಿತಿಗಳು ಉತ್ತಮವಾಗಿಲ್ಲದಿರುವಾಗ ಅನಾವಶ್ಯಕ ವಾದ, ವಿವಾದಗಳಲ್ಲಿ ಭಾಗವಹಿಸದಿರಿ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರದಿಂದಿರಿ.
ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಈಗ ಯಾರನ್ನು ನಂಬದೆ ಭಗವಂತನನ್ನೆ ಮೊರೆ ಹೋಗುವುದು ಸೂಕ್ತ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಾದ್ದರಿಂದ ನಡೆ-ನುಡಿಯಲ್ಲಿ ಎಚ್ಚರಿಕೆ ವಹಿಸಿರಿ.
ಅದೃಷ್ಟ ಸಂಖ್ಯೆ:1
ಧನಸ್ಸು
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿ ಯಾಗುವುದಿಲ್ಲ.ನಿಮ್ಮ ಮಾತಿನ ಜಾಣ್ಮೆ ಮೆಚ್ಚುವಂತಹುದು. ಆದರೆ ಅಯೋಗ್ಯರ ಎದುರು ಆ ಜಾಣ್ಮೆ ಉಪಯೋಗಕ್ಕೆ ಬರುವುದಿಲ್ಲ. ಆಂಜನೇಯ ಸ್ವಾಮಿಯ ಮಂತ್ರವನ್ನು ಪಠಿಸಿ. ಅಗತ್ಯಕ್ಕೆ ತಕ್ಕಷ್ಟು ಹಣ ಖರ್ಚು ಮಾಡಿ.
ಊರದೇವರ ನೋಡಬೇಕಣ್ಣ ಎಂದರು ಅನುಭಾವಿಗಳು. ಅಂತೆಯೇ ಇಂದಿನ ಸುಸ್ಥಿತಿಗೆ ಕುಲದೇವರ ಅನುಗ್ರಹವೇ ಕಾರಣ. ಹಾಗಾಗಿ ಕುಲದೇವರ ಸನ್ನಿಧಿಗೆ ಹೋಗಿ ಬನ್ನಿರಿ. ಮತ್ತು ಈದಿನ ಎಲ್ಲಾ ಕೆಲಸಗಳಲ್ಲೂ ಜಯ ಗಳಿಸುವಿರಿ.
ಅದೃಷ್ಟ ಸಂಖ್ಯೆ:6
ಮಕರ
ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.ವಯಸ್ಸಿಗೆ ಬಂದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕೆನ್ನುವರು. ಅಂತೆಯೇ ಬೆಳೆದ ಮಕ್ಕಳು ಮಾಡುವ ದುಷ್ಟತನಕ್ಕೆ ಶಿಕ್ಷಿಸುವಂತಿಲ್ಲ. ಇಲ್ಲವೆ ಅದನ್ನು ಸ್ವೀಕರಿಸುವಂತಿಲ್ಲ ಎಂಬ ಇಬ್ಬದಿಯ ಸಂಕಟ ನಿಮ್ಮದಾಗುವುದು. ಕುಲದೇವರನ್ನು ಮನಸಾ ಸ್ಮರಿಸಿ.
ಯಾರದೋ ಸಹಾಯ ಬರಬಹುದು ಎಂಬ ಅತಿಯಾದ ನಿರೀಕ್ಷೆಯಲ್ಲಿಯೇ ಈದಿನದ ಬಹುಪಾಲು ಸಮಯ ವ್ಯರ್ಥವಾಗುವುದು. ಹಾಗಾಗಿ ಅವರ ನಿರೀಕ್ಷೆ ಮಾಡದೆ ಅನ್ಯರ ಸಹಾಯವನ್ನು ಪಡೆಯಿರಿ ಒಳಿತಾಗುವುದು.
ಅದೃಷ್ಟ ಸಂಖ್ಯೆ:9
ಕುಂಭ
ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ.ಬರಹಗಾರರಿಗೆ, ಪತ್ರಿಕೋದ್ಯಮಿಗಳಿಗೆ, ಪ್ರಾಧ್ಯಾಪಕರುಗಳಿಗೆ ಮನ್ನಣೆ ದೊರೆಯುವ ಸಾಧ್ಯತೆ ಹೇರಳವಾಗುವುದು. ನಿಮ್ಮ ಮನೋಕಾಮನೆಗಳು ಬಹುತೇಕ ಈಡೇರುವುದು. ಸಮಾಜದಲ್ಲಿ ಗೌರವ ಆದರಗಳು ದೊರೆಯುವವು.ಕಾಲವು ಶೀಘ್ರಗತಿಯಲ್ಲಿ ಉರುಳುತ್ತಿದೆ ಎನಿಸುತ್ತಿದೆ. ನೀವು ಮಾಡಬೇಕಾದ ಕಾರ್ಯಗಳು ಬಹಳಷ್ಟಿದ್ದು ಆದ್ಯತೆಯ ಮೇರೆಗೆ ಕೆಲಸ ಪೂರೈಸಿರಿ. ಮನೆಯಲ್ಲಿ ನಿಮ್ಮ ಮದುವೆಯ ಬಗ್ಗೆ ಮಾತುಕತೆಗಳು ನಡೆಯುವುದು.
ಅದೃಷ್ಟ ಸಂಖ್ಯೆ:2
ಮೀನ
ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ.ಚಿಂತೆಯು ನಿಮ್ಮನ್ನು ಕಾಡುವುದು. ಚಿಂತೆಯಿಂದ ಮುಕ್ತರಾಗಲು ಸ್ನೇಹಿತರನ್ನು ಭೇಟಿ ಮಾಡಿ. ಇಲ್ಲವೆ ಧಾರ್ಮಿಕ ಮಂದಿರಗಳಲ್ಲಿ ಪ್ರಾರ್ಥನೆ ಮಾಡಿ. ಕ್ರಿಯಾಶೀಲತೆಯನ್ನು ರೂಢಿಸಿಕೊಂಡಲ್ಲಿ ಉತ್ತಮ ಸಮಯ ನಿಮ್ಮದಾಗುವುದು.ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದು ಯಾರೂ ಗಮನಿಸುತ್ತಿಲ್ಲ ಎಂದು ಭಾವಿಸಿದಂತೆ ನೀವು ಮಾಡುವುದು ಬೇಡ. ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಹೊಂದಿರುವ ನೀವು ಎಲ್ಲಾ ನಡೆಯನ್ನು ಗಮನಿಸುವ ಜನರಿದ್ದಾರೆ.
ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp