Just In
- 56 min ago ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- 3 hrs ago ವೀಲ್ಚೇರ್ನಲ್ಲಿ ಮಾವನ ಹೆಣವಿಟ್ಟು ಬ್ಯಾಂಕ್ಗೆ ತಂದ ಸೊಸೆ..! ಲೋನ್ ಮಾಡಿಸುವಾಗ ಸಿಕ್ಕಿಬಿದ್ಲು..!
- 4 hrs ago ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- 5 hrs ago ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
Don't Miss
- News Hevay Rain: ಬಿರುಗಾಳಿ ಮಳೆಗೆ ನೆಲ ಕಚ್ಚಿದ ಬಾಳೆ, ಟೊಮೆಟೊ
- Movies ಕಬೀರ್ ಸಿಂಗ್ ನನ್ನ ಬದುಕಿನ ಬಹುದೊಡ್ಡ ತಪ್ಪು ಎಂದ ನಟ ; ಕೆರಳಿ ಕೆಂಡವಾದ ಸಂದೀಪ್ ರೆಡ್ಡಿ ವಂಗಾ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
5 January 2018 ಶುಕ್ರವಾರದ ದಿನ ಭವಿಷ್ಯ
ಹೊರ ಮನಸ್ಸು ಹೇಳುತ್ತದೆ, ಸಿಟ್ಟಾದವರನ್ನು ಮತ್ತೆ ಮಾತನಾಡಿಸಬೇಡ ಅಂತ. ಒಳ ಮನಸ್ಸು ಹೇಳುತ್ತದೆ ಯಾರನ್ನು ಕಳೆದುಕೊಳ್ಳಬೇಡ ಅಂತ. ಒಂದು ಕ್ಷಣದ ಕೋಪಕ್ಕೆ ಯಾವ ಸಂಬಂಧವೂ ಹಾಳಾಗದಂತೆ ನೋಡಿಕೊಳ್ಳಬೇಕು. ಆಗಲೇ ಜೀವನವು ಸುಖ ಮಯವಾಗಿರುತ್ತದೆ. ಸಿಟ್ಟನ್ನೇ ಮುಂದುವರಿಸಿಕೊಂಡು ಸಾಗಿದರೆ ಸಂಬಂಧಗಳಲ್ಲಿ ಸಾಮರಸ್ಯವು ಇರುವುದಿಲ್ಲ. ಅಲ್ಲದೆ ಹೆಚ್ಚು ಜನರನ್ನು ಆಕರ್ಷಿಸಲು ಸಾಧ್ಯವಾಗುವುದಿಲ್ಲ. ನಾವು ಎಷ್ಟು ನಮ್ಮ ಸಿಟ್ಟು ಹಾಗೂ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟು ಕೊಂಡಿರುತ್ತೇವೆಯೋ ಅಷ್ಟು ಪ್ರಮಾಣದಲ್ಲಿಯೇ ಹೆಚ್ಚು ಖುಷಿಯನ್ನು ಅನುಭವಿಸಲು ಸಾಧ್ಯವಾಗುವುದು.
ಶುಕ್ರವಾರವಾದ ಇಂದು ಲಕ್ಷ್ಮಿದೇವಿಯು ಎಲ್ಲರ ಮನೆಗೆ ಆಗಮಿಸುತ್ತಾಳೆ ಎನ್ನುವ ನಂಬಿಕೆಯಿದೆ. ಅಂತೆಯೇ ನಮ್ಮ ಗ್ರಹಗತಿಗಳು ಸಹ ಎಷ್ಟು ಪ್ರಮಾಣದಲ್ಲಿ ಸಹಾಯ ಮಾಡುತ್ತದೆ ಎನ್ನುವುದನ್ನು ನೀವು ತಿಳಿದುಕೊಳ್ಳುವ ಉತ್ಸಾಹದಲ್ಲಿದ್ದರೆ ಈ ಮುಂದೆ ವಿವರಿಸಿರುವ ರಾಶಿ ಭವಿಷ್ಯವನ್ನು ಪರಿಶೀಲಿಸಿ.....
ಮೇಷ: 28 ಮಾರ್ಚ್ -20 ಏಪ್ರಿಲ್
ಸಮಾಧಾನದ ಬದುಕನ್ನು ಕಾಣುವಿರಿ. ಮನೆಯಲ್ಲಿ ನೆಮ್ಮದಿಯ ವಾತಾವರಣ ನೆಲೆಸಿರುವುದು. ಮಕ್ಕಳಿಂದ ಶುಭ ವಾರ್ತೆಯನ್ನೇ ಕೇಳುವಿರಿ. ಮಾಡುತ್ತಿರುವ ಉದ್ಯೋಗದಲ್ಲಿ ಲಾಭವನ್ನು ಗಳಿಸುವಿರಿ. ನಿರುದ್ಯೋಗಿಗಳಿಗೂ ಉತ್ತಮ ಉದ್ಯೋಗ ದೊರೆಯುವ ಸಾಧ್ಯತೆಗಳಿವೆ. ಚಿತ್ರೋದ್ಯಮಗಳಲ್ಲಿ ಕೆಲಸ ಮಾಡುವವರು ನೆಮ್ಮದಿಯನ್ನು ಪಡೆದುಕೊಳ್ಳುವರು. ಸುಂದರವಾದ ಬದುಕು ಹಗೂ ಸಮಸ್ಯೆಗಳ ನಿವಾರಣೆಗೆ ಗಣೇಶನ ಮತ್ತು ಲಕ್ಷ್ಮಿಯ ಆರಾಧನೆ ಹಾಗೂ ಕುಲದೇವರ ಪ್ರಾರ್ಥನೆ ಮಾಡಿ.
ವೃಷಭ 21 ಏಪ್ರಿಲ್ -21 ಮೇ
ಅಷ್ಟಮ ಶನಿ ಇರುವುದರಿಂದ ಸಂಪೂರ್ಣ ಪ್ರಮಾಣದ ಸಮಾಧಾನ ದೊರೆಯದು. ಚಿನ್ನ ವ್ಯಾಪಾರಿಗಳು ಆದಷ್ಟು ಜಾಗರೂಕರಾಗಿರಬೇಕು. ಇಂದು ಒಂದಿಷ್ಟು ಲೋಹ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ. ಖನಿಜೋತ್ಪನ್ನಗಳ ವ್ಯಾಪಾರ ವಹಿವಾಟುಗಳಲ್ಲಿ ಸಂಪೂರ್ಣ ಪ್ರಮಾಣದ ಲಾಭ ಪಡೆದುಕೊಳ್ಳಲು ಸಾಧ್ಯವಾಗದು. ಬಂಧು ಮಿತ್ರರ ನಡುವೆ ಕಲಹ ಉಂಟಾಗುವ ಸಾಧ್ಯತೆಗಳಿವೆ. ಆಸ್ತಿಗಾಗಿ ಸಹೋದರರ ನಡುವೆ ಕಿತ್ತಾಟ ಉಂಟಾಗುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳು ನಿಮ್ಮ ಮೇಲೆ ಇಲ್ಲ ಸಲ್ಲದ ಪಿತೂರಿ ನಡೆಸುವ ಸಾಧ್ಯತೆಗಳಿವೆ. ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ದೇವಿಯ ಆರಾಧನೆ ಹಾಗೂ ಶಿವನ ಪ್ರಾರ್ಥನೆ ಮಾಡಿ.
ಮಿಥುನ: ಮೇ 21 ಜೂನ್ 20
ಇಂದು ನಿಮಗೆ ಶುಭ ದಿನ. ಮನೆಯಲ್ಲಿ ನೆಮ್ಮದಿಯನ್ನು ಕಾಣುವಿರಿ. ಬಂಧುಮಿತ್ರರ ಆಗಮನ ಉಂಟಾಗುವುದು. ನಿರ್ದಿಷ್ಟ ಗುರಿಯನ್ನು ತಲುಪುವಿರಿ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿಯನ್ನು ಕಾಣುವಿರಿ. ಸಮಸ್ಯೆಗಳ ನಿವಾರಣೆ ಹಾಗೂ ಬದುಕಲ್ಲಿ ಇನ್ನಷ್ಟು ಪ್ರಗತಿಯನ್ನು ಕಾಣಲು ದೇವಿಯ ಆರಾಧನೆ ಮಾಡಿ.
ಕರ್ಕ: ಜೂನ್ 21-ಜುಲೈ 22
ಇಂದು ನಿಮಗೆ ಶುಭ ದಿನ. ನೀವು ಕೈಗೊಳ್ಳುವ ಎಲ್ಲಾ ಕೆಲಸ ಕಾರ್ಯಗಳಲ್ಲೂ ಯಶಸ್ಸು ಹಾಗೂ ಶುಭಕರ ಫಲಿತಾಂಶವನ್ನೇ ಪಡೆದುಕೊಳ್ಳುವಿರಿ. ಮಕ್ಕಳಿಂದಲೂ ಶುಭ ವಾರ್ತೆ ಕೇಳುವಿರಿ. ಉನ್ನತ ವ್ಯಾಸಂಗದ ಕನಸು ಹೊಂದಿದವರಿಗೆ ಕನಸು ನನಸಾಗುವುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಒಂದಿಷ್ಟು ಹೊಸ ಅವಕಾಶಗಳು ದೊರೆಯುವುದು. ಧಾರ್ಮಿಕ ಚಿಂತಕರಿಗೆ ಅನುಕೂಲ ಉಂಟಾಗುವುದು. ಹಿರಿಯರ ಆರೋಗ್ಯದಲ್ಲೂ ಗಣನೀಯವಾದ ಸುಧಾರಣೆಯನ್ನು ಕಾಣುವ ಸಾಧ್ಯತೆಗಳಿವೆ. ಪ್ರಗತಿಯ ಬದುಕು ಹಾಗೂ ಸಮಸ್ಯೆಗಳ ನಿವಾರಣೆಗೆ ದೇವಿಯ ಆರಾಧನೆ ಮಾಡಿ.
ಸಿಂಹ: ಜುಲೈ 23-ಆಗಸ್ಟ್ 23
ನಿಮಗೆ ಮಾನಸಿಕ ಕಿರಿಕಿರಿ ಮುಂದುವರಿಯುವುದು. ಅನಿರೀಕ್ಷಿತವಾದ ಸೋಲು ನಿಮ್ಮನ್ನು ಹೈರಾಣಗೊಳಿಸುವುದು. ಆರ್ಥಿಕ ವಲಯದಲ್ಲಿ ಏರುಪೇರು ಉಂಟಾಗುವ ಲಕ್ಷಣಗಳು ಕಂಡುಬರುವುದು. ಅನಿವಾರ್ಯ ಕಾರಣದಿಂದ ಕೆಟ್ಟ ಮಾತುಗಳನ್ನು ಕೇಳಬೇಕಾದ ಪರಿಸ್ಥಿತಿ ಒದಗಿ ಬರುವುದು. ಸಮಾಜ ಸುಧಾರಕರಿಗೂ ಅಷ್ಟು ಅನುಕೂಲಕರವಲ್ಲದ ದಿನ ಎಂದೇ ಹೇಳಬಹುದು. ಜೀವನದ ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ಗಣೇಶನ ಆರಾಧನೆ ಮಾಡಿ.
ಕನ್ಯಾ: ಆಗಸ್ಟ್ 24-ಸೆಪ್ಟಂಬರ್ 23
ಇಂದು ನಿಮಗೆ ಸಾಮಾನ್ಯವಾದಂತಹ ದಿನ. ಸಂಪೂರ್ಣ ಪ್ರಮಾಣದ ಉತ್ಸಾಹ ಇರದು. ಆದಷ್ಟು ಕಾಳಜಿಯಿಂದ ಇರಿ. ಮನಸ್ಸು ಬಯಸಿದ ಆಸೆಗಳ ಮೇಲೆ ಹಿಡಿತವಿರಲಿ. ಕೆಲವು ಅವಘಡ ಸಂಭವಿಸುವ ಸಾಧ್ಯತೆಗಳಿರುತ್ತವೆ. ವೈಜ್ಞಾನಿಕ ವಲಯದಲ್ಲಿ ಒಂದಿಷ್ಟು ಪ್ರಮಾಣದ ಹಿನ್ನಡೆಯನ್ನು ಅನುಭವಿಸಬೇಕಾಗುವುದು. ಕೃಷಿಕರಿಗೆ ಅನುಕೂಲ ಲಭ್ಯವಾಗುವುದು. ಅನೇಕ ವಿಚಾರದಲ್ಲಿ ಕೆಲವು ಅಡೆತಡೆಗಳನ್ನು ಅನುಭವಿಸಬೇಕಾದಂತಹ ಪರಿಸ್ಥಿತಿ ಎದುರಾಗುವುದು. ಸಮಸ್ಯೆಗಳ ನಿವಾರಣೆ ಹಾಗೂ ಯಶಸ್ವಿ ಬದುಕಿಗಾಗಿ ದೇವಿಯ ಆರಾಧನೆ ಮಾಡಿ. ನಿಮ್ಮನ್ನು ಉತ್ತುಂಗಕ್ಕೆ ಏರಿಸುವುದು.
ತುಲಾ: ಸೆಪ್ಟಂಬರ್ 24-ಅಕ್ಟೋಬರ್ 23
ಇಂದು ನಿಮಗೆ ಉತ್ತಮವಾದ ದಿನ. ಮನೆಯಲ್ಲಿ ನೆಮ್ಮದಿ ಹಾಗೂ ಬಂಧುಗಳ ಸಹಕಾರ ದೊರೆಯುವುದು. ನಿರೀಕ್ಷಿತ ಮಟ್ಟದ ಯಶಸ್ಸು ಲಭಿಸುವುದು. ಸ್ಥಿರಾಸ್ತಿಯನ್ನು ಖರೀದಿಸುವ ಸಾಧ್ಯತೆಗಳಿವೆ. ಮಾಡುತ್ತಿರುವ ಉದ್ಯೋಗ ಹಾಗೂ ವ್ಯಾಪಾರದಲ್ಲಿ ಲಾಭವನ್ನು ಗಳಿಸುವಿರಿ. ಖನಿಜ ಮತ್ತು ತೈಲೋತ್ಪನ್ನ ವ್ಯವಹಾರದಲ್ಲಿ ಅಧಿಕ ಪ್ರಮಾಣದ ಲಾಭವನ್ನು ಗಳಿಸುವಿರಿ. ಸಮಸ್ಯೆಗಳ ನಿವಾರಣೆ ಹಾಗೂ ಸಂತೋಷಕರವಾದ ಜೀವನಕ್ಕೆ ಗಣೇಶನ ಆರಾಧನೆ ಹಾಗೂ ಕುಲದೇವರ ಪ್ರಾರ್ಥನೆ ಮಾಡಿ.
ವೃಶ್ಚಿಕ: 24 ಅಕ್ಟೋಬರ್ -22 ನವೆಂಬರ್
ಇಂದು ನೀವು ಅನೇಕ ವಿಚಾರಗಳಿಗೆ ಅಡೆತಡೆಗಳನ್ನು ಅನುಭವಿಸುವಿರಿ. ಬಂಧು ಮಿತ್ರರಿಂದ ಕಿರಿಕಿರಿ ಉಂಟಾಗುವುದು. ಅನಿರೀಕ್ಷಿತ ಸೋಲನ್ನು ಅನುಭವಿಸುವಿರಿ. ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗುವ ಸಾಧ್ಯತೆಗಳಿವೆ. ಸಮಸ್ಯೆಗಳ ನಿವಾರಣೆ ಹಾಗೂ ಪ್ರಗತಿಪರ ಬದುಕಿಗಾಗಿ ಶಿವನ ಆರಾಧನೆ ಮಾಡಿ.
ಧನು: 23 ನವೆಂಬರ್ -22 ಡಿಸೆಂಬರ್
ಜನ್ಮ ಶನಿಯ ಪ್ರಭಾವ ಇರುವುದರಿಂದ ಆಂತರಿಕ ವಿಚಾರ ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳಿಂದ ಅವಮಾನ ಎದುರಿಸಬೇಕಾದ ಪರಿಸ್ಥಿತಿ ಒದಗಿ ಬರುವುದು. ಸರ್ಕಾರಿ ನೌಕರರಿಗೂ ಒಂದಿಷ್ಟು ಅಡೆತಡೆ ಉಂಟಾಗುವುದು. ಮಾಡದಿರುವ ತಪ್ಪಿಗೆ ಶಿಕ್ಷೆಯನ್ನು ನೀವು ಅನುಭವಿಸಬೇಕಾಗುವುದು. ನೀವು ಕೆಲವು ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಚೋರ ಭಯದ ಬಗ್ಗೆ ಕೊಂಚ ಎಚ್ಚರಿಕೆಯಿಂದ ಇರಿ. ಸಮಸ್ಯೆಗಳ ನಿವಾರಣೆ ಹಾಗೂ ಅಭಿವೃದ್ಧಿ ಬದುಕಿಗಾಗಿ ಶಿವನ ಆರಾಧನೆ ಹಾಗೂ ದೇವಿಯ ಉಪಾಸನೆ ಮಾಡಿ.
ಮಕರ: ಡಿಸೆಂಬರ್ 23-ಜನವರಿ 20
ಕೆಲವರು ಮಾತ್ರ ಸಮಾಧಾನಕರ ಬದುಕನ್ನು ಕಾಣಲಿದ್ದಾರೆ. ವಿಪರೀತವಾದ ದೇಹದ ಆಯಾಸ ಕಾಣಿಸಿಕೊಳ್ಳುವುದು. ಅಧಿಕ ಹಣವನ್ನು ವ್ಯಯಿಸಿ, ದೂರದ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಒದಗಿ ಬರುವುದು. ಕಬ್ಬಿಣ ವ್ಯಾಪಾರದಲ್ಲಿ ಏರು ಪೇರು ಉಂಟಾಗುವುದು. ಸಮಸ್ಯೆಗಳ ನಿವಾರಣೆಗೆ ಶಿವ ಮತ್ತು ವಿಷ್ಣುವಿನ ಆರಾಧನೆ ಮಾಡಿ.
ಕುಂಬ: 21 ಜನವರಿ -19 ಫೆಬ್ರುವರಿ
ಕುಂಬ ರಾಶಿಯವರಿಗೆ ಸಮಾಧಾನ ಲಭ್ಯವಾಗುವುದು. ಸ್ತ್ರೀಯರು ಮಾಡುತ್ತಿರುವ ಉದ್ಯೋಗದಲ್ಲಿ ಪ್ರಗತಿಯನ್ನು ಕಾಣುವರು. ಮನೆಯಲ್ಲಿ ನೆಮ್ಮದಿಯ ವಾತಾವರಣ ಲಭಿಸುವುದು. ಬಂಧು ಮಿತ್ರರ ಆಗಮನ. ನಿರ್ದಿಷ್ಟ ಗುರಿಯನ್ನು ತಲುಪುವಿರಿ. ಸಹೋದ್ಯೋಗಿಗಳಿಂದಲೂ ಸಹಕಾರ ಲಭ್ಯವಾಗುವುದು. ಸಮಸ್ಯೆಗಳ ನಿವಾರಣೆ ಹಾಗೂ ಶಾಂತಿಯುತವಾದ ಬದುಕಿಗೆ ಗಣೇಶನ ಆರಾಧನೆ ಹಾಗೂ ಕುಲದೇವರ ಪ್ರಾರ್ಥನೆ ಮಾಡಿ.
ಮೀನ: 20 ಫೆಬ್ರವರಿ -20 ಮಾರ್ಚ್
ಸುಂದರವಾದ ಬದುಕಿಗೆ ನಿಮ್ಮ ಜೀವನ ಸಾಕ್ಷಿಯಾಗುವುದು. ಬಂಧುಗಳ ಆಗಮನ ಆಗುವುದು. ಹೊಸದಾದ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ. ಅನೇಕ ದಿನಗಳಿಂದ ತೀರ್ಮಾನಿಸಿದ ವಿಚಾರದ ನಿಮಿತ್ತ ಲಾಭವನ್ನು ಗಳಿಸುವಿರಿ. ಬರಬೇಕಿದ್ದ ಹಣಕಾಸು ನಿಮ್ಮ ಕೈ ಸೇರುವುಸು. ಕೃಷಿಕರಿಗೆ ನೆಮ್ಮದಿ ದೊರೆಯುವುದು. ಮಕ್ಕಳಿಂದಲೂ ಶುಭ ಸುದ್ದಿಯನ್ನೇ ನಿರೀಕ್ಷಿಸಬಹುದು. ಎಲ್ಲಾರೀತಿಯ ಪ್ರಗತಿ ಹಾಗೂ ಸಮಸ್ಯೆಗಳ ನಿವಾರಣೆಗೆ ಶಿವನ ಆರಾಧನೆ ಹಾಗೂ ದೇವಿಯ ಉಪಾಸನೆ ಮಾಡಿ.