Just In
- 2 hrs ago ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- 15 hrs ago ಪೂರ್ವಜನರಿಗೆ ಗ್ರಹಣಗಳು ಹೇಗೆ ತಿಳಿಯುತ್ತಿತ್ತು..? ಅವರು ಏನೆಲ್ಲಾ ಕಥೆ ನಂಬಿದ್ದರು ಗೊತ್ತೆ.?
- 16 hrs ago ಇವುಗಳಿಂದ ತೊಂದರೆಯಿಲ್ಲ ಅಂದ್ಕೊಳ್ಳುತ್ತೇವೆ, ಆದರೆ ಸಂಸಾರ ಹಾಳುಮಾಡುವ 6 ಸಂಗತಿಗಳಿವು
- 17 hrs ago ನಾರಾಯಣ ಮೂರ್ತಿ 4 ತಿಂಗಳ ಮೊಮ್ಮಗ ಈಗ ₹240 ಕೋಟಿ ಆಸ್ತಿ ಒಡೆಯ..! ಹೇಗೆ ಸಾಧ್ಯ..?
Don't Miss
- News ಕನ್ನಡ ನಾಮಫಲಕ: ಬಲವಂತದ ಕ್ರಮ ಬೇಡ ಎಂದ ಕೋರ್ಟ್
- Finance ಟಿಸಿಎಸ್ನಿಂದ ಭಾರತೀಯ ಸೇನೆಗೆ ಸೇರಿದ ಲೆಫ್ಟಿನೆಂಟ್ ದಿವ್ಯಾಂಗಿನಿ ತ್ರಿಪಾಠಿ
- Movies 'ಹಿಟ್ಲರ್ ಕಲ್ಯಾಣ' ಅಂತ್ಯ; ಧಾರಾವಾಹಿ ಬಿಟ್ಟು ಸಿನಿಮಾದಲ್ಲಿ ಬ್ಯುಸಿಯಾಗ್ತಾರಾ 'ಉಪಾಧ್ಯಕ್ಷ'ನ ಬೆಡಗಿ?
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈತ ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಂಡು ಆಸ್ಪತ್ರೆ ಸೇರಿದ! ಅಷ್ಟಕ್ಕೂ ಏನಾಯಿತು ಗೊತ್ತೇ?
ತುಂಬಾ ಬಳಲಿರುವಂತಹ ದೇಹಕ್ಕೆ ಸಂಪೂರ್ಣವಾಗಿ ಎಣ್ಣೆ ಹಚ್ಚಿಕೊಂಡು ಮಸಾಜ್ ಮಾಡಿಸಿಕೊಂಡರೆ ಆಗ ಸಿಗುವಂತಹ ಸುಖವೇ ಬೇರೆ. ಅದೇ ರೀತಿ ನಾವು ಸೆಲೂನ್ ಗೆ ಹೋದರೆ ಅಲ್ಲಿ ಕ್ಷೌರ ಮಾಡಿಸಿಕೊಂಡ ಬಳಿಕ ಕೆಲವು ಮಂದಿ ನಮ್ಮ ಬೆನ್ನು ಹಾಗೂ ಕುತ್ತಿಗೆಗೆ ಮಸಾಜ್ ಮಾಡುವರು. ಇದು ತುಂಬಾ ಆರಾಮದಾಯಕ ಎಂದು ಅನಿಸುವುದು. ಆದರೆ ಇಂತಹ ಮಸಾಜ್ ಮಾಡುವವರು ತುಂಬಾ ಅನುಭವಿಗಳು ಆಗಿರಬೇಕು.
ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯು ಬರಬಹುದು. ಯಾಕೆಂದರೆ ಸರಿಯಾಗಿ ಮಸಾಜ್ ಮಾಡದೆ ಇದ್ದರೆ ನರಗಳ ಮೇಲೆ ಪರಿಣಾವಾಗಿ ಬೇರೆ ಸಮಸ್ಯೆಯು ಕಾಣಿಸಿಕೊಳ್ಳಬಹುದು. ಇದಕ್ಕಾಗಿ ನೀವು ಕ್ಷೌರದ ಅಂಗಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುವ ವೇಳೆ ತುಂಬಾ ಎಚ್ಚರಿಕೆ ವಹಿಸಿ. ಇಲ್ಲೊಬ್ಬ ವ್ಯಕ್ತಿಯು ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಳ್ಳಲು ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯು ನಡೆದಿದೆ. ಈ ಬಗ್ಗೆ ನೀವು ವಿವರವಾಗಿ ಮತ್ತಷ್ಟು ಮಾಹಿತಿ ತಿಳಿಯಿರಿ.
ಆ ವ್ಯಕ್ತಿ ಕ್ಷೌರದಂಗಡಿಗೆ ತೆರಳಿದ
ನಮ್ಮದೇ ದೇಶದ ಈ ವ್ಯಕ್ತಿ ಯಾವಾಗಲೂ ಕ್ಷೌರದಂಗಡಿಗೆ ಹೋಗಿ ಅಲ್ಲಿ ಕೂದಲು ಕತ್ತರಿಸಿಕೊಂಡ ಬಳಿಕ ಸ್ವಲ್ಪ ಮಸಾಜ್ ಮಾಡಿಸುವುದು ಹವ್ಯಾಸ ಮಾಡಿಕೊಂಡಿದ್ದ. ಕ್ಷೌರದಂಗಡಿಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಆತನಿಗೆ ಉಸಿರಾಟದ ಸಮಸ್ಯೆಯು ಕಾಣಿಸಿಕೊಂಡಿತು.
ವೈದ್ಯರು ಆತನ ಪರೀಕ್ಷೆ ಮಾಡಿದರು
ವೈದ್ಯರು ಆ ವ್ಯಕ್ತಿಯ ಎಂಆರ್ ಐ ಸ್ಕ್ಯಾನ್ ಮಾಡಿದರು. ಈ ವೇಳೆ ಅವರಿಗೆ ಕುತ್ತಿಗೆಯಲ್ಲಿ ಗಂಭೀರವಾದ ಗಾಯಗಳು ಕಾಣಿಸಿಕೊಂಡವು. ಕುತ್ತಿಗೆಗೆ ಮಸಾಜ್ ಮಾಡಿಕೊಂಡ ವೇಳೆ ಕಾಣಿಸಿಕೊಂಡ ಗಾಯಗಳು ಇದಾಗಿದ್ದವು.
Most Read: ನಿಮಗೆ ಗೊತ್ತಾ? ಈ ಮಹಿಳೆ ಕಣ್ಣುಗಳನ್ನು ಕೂಡ ಸ್ವಚ್ಛಗೊಳಿಸುತ್ತಾಳಂತೆ!
ಆತನ ನರಗಳಿಗೆ ಹಾನಿಯಾಗಿತ್ತು
ವೈದ್ಯರು ಹೇಳುವ ಪ್ರಕಾರ ಫರೆನಿಕ್ ನರಕ್ಕೆ ಹಾನಿ ಉಂಟಾಗಿತ್ತು. ಈ ನರವು ಧ್ವನಿಫಲಕವನ್ನು ನಿಯಂತ್ರಿಸುವುದು. ಇದು ಉಸಿರಾಟದ ಪ್ರಮುಖ ಸ್ನಾಯುವಾಗಿದೆ.
ಆತ ಈಗ ಆಸ್ಪತ್ರೆಯಲ್ಲಿದ್ದಾನೆ
ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆತನಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆ ವ್ಯಕ್ತಿಯ ಡಯಾಫರ್ಮ್ ಸಂಪೂರ್ಣವಾಗಿ ಹಾನಿಯಾಗಿದೆ ಮತ್ತು ಇದರಿಂದ ಆತನಿಗೆ ಜೀವಮಾನವಿಡಿ ಸಮಸ್ಯೆನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಇಂತಹ ನರಗಳು ಪುನರ್ ಜೀವನ ಪಡೆಯುವುದು ತುಂಬಾ ಅಪರೂಪವಾಗಿದೆ.
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು? ನಿಮ್ಮ ಅಭಿಪ್ರಾಯ ಕಮೆಂಟ್ ಬಾಕ್ಸ್ ಗೆ ಹಾಕಿ.