Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಈತ ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಂಡು ಆಸ್ಪತ್ರೆ ಸೇರಿದ! ಅಷ್ಟಕ್ಕೂ ಏನಾಯಿತು ಗೊತ್ತೇ?
ತುಂಬಾ ಬಳಲಿರುವಂತಹ ದೇಹಕ್ಕೆ ಸಂಪೂರ್ಣವಾಗಿ ಎಣ್ಣೆ ಹಚ್ಚಿಕೊಂಡು ಮಸಾಜ್ ಮಾಡಿಸಿಕೊಂಡರೆ ಆಗ ಸಿಗುವಂತಹ ಸುಖವೇ ಬೇರೆ. ಅದೇ ರೀತಿ ನಾವು ಸೆಲೂನ್ ಗೆ ಹೋದರೆ ಅಲ್ಲಿ ಕ್ಷೌರ ಮಾಡಿಸಿಕೊಂಡ ಬಳಿಕ ಕೆಲವು ಮಂದಿ ನಮ್ಮ ಬೆನ್ನು ಹಾಗೂ ಕುತ್ತಿಗೆಗೆ ಮಸಾಜ್ ಮಾಡುವರು. ಇದು ತುಂಬಾ ಆರಾಮದಾಯಕ ಎಂದು ಅನಿಸುವುದು. ಆದರೆ ಇಂತಹ ಮಸಾಜ್ ಮಾಡುವವರು ತುಂಬಾ ಅನುಭವಿಗಳು ಆಗಿರಬೇಕು.

ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯು ಬರಬಹುದು. ಯಾಕೆಂದರೆ ಸರಿಯಾಗಿ ಮಸಾಜ್ ಮಾಡದೆ ಇದ್ದರೆ ನರಗಳ ಮೇಲೆ ಪರಿಣಾವಾಗಿ ಬೇರೆ ಸಮಸ್ಯೆಯು ಕಾಣಿಸಿಕೊಳ್ಳಬಹುದು. ಇದಕ್ಕಾಗಿ ನೀವು ಕ್ಷೌರದ ಅಂಗಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುವ ವೇಳೆ ತುಂಬಾ ಎಚ್ಚರಿಕೆ ವಹಿಸಿ. ಇಲ್ಲೊಬ್ಬ ವ್ಯಕ್ತಿಯು ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಳ್ಳಲು ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯು ನಡೆದಿದೆ. ಈ ಬಗ್ಗೆ ನೀವು ವಿವರವಾಗಿ ಮತ್ತಷ್ಟು ಮಾಹಿತಿ ತಿಳಿಯಿರಿ.

ಆ ವ್ಯಕ್ತಿ ಕ್ಷೌರದಂಗಡಿಗೆ ತೆರಳಿದ
ನಮ್ಮದೇ ದೇಶದ ಈ ವ್ಯಕ್ತಿ ಯಾವಾಗಲೂ ಕ್ಷೌರದಂಗಡಿಗೆ ಹೋಗಿ ಅಲ್ಲಿ ಕೂದಲು ಕತ್ತರಿಸಿಕೊಂಡ ಬಳಿಕ ಸ್ವಲ್ಪ ಮಸಾಜ್ ಮಾಡಿಸುವುದು ಹವ್ಯಾಸ ಮಾಡಿಕೊಂಡಿದ್ದ. ಕ್ಷೌರದಂಗಡಿಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಆತನಿಗೆ ಉಸಿರಾಟದ ಸಮಸ್ಯೆಯು ಕಾಣಿಸಿಕೊಂಡಿತು.

ವೈದ್ಯರು ಆತನ ಪರೀಕ್ಷೆ ಮಾಡಿದರು
ವೈದ್ಯರು ಆ ವ್ಯಕ್ತಿಯ ಎಂಆರ್ ಐ ಸ್ಕ್ಯಾನ್ ಮಾಡಿದರು. ಈ ವೇಳೆ ಅವರಿಗೆ ಕುತ್ತಿಗೆಯಲ್ಲಿ ಗಂಭೀರವಾದ ಗಾಯಗಳು ಕಾಣಿಸಿಕೊಂಡವು. ಕುತ್ತಿಗೆಗೆ ಮಸಾಜ್ ಮಾಡಿಕೊಂಡ ವೇಳೆ ಕಾಣಿಸಿಕೊಂಡ ಗಾಯಗಳು ಇದಾಗಿದ್ದವು.

ಆತನ ನರಗಳಿಗೆ ಹಾನಿಯಾಗಿತ್ತು
ವೈದ್ಯರು ಹೇಳುವ ಪ್ರಕಾರ ಫರೆನಿಕ್ ನರಕ್ಕೆ ಹಾನಿ ಉಂಟಾಗಿತ್ತು. ಈ ನರವು ಧ್ವನಿಫಲಕವನ್ನು ನಿಯಂತ್ರಿಸುವುದು. ಇದು ಉಸಿರಾಟದ ಪ್ರಮುಖ ಸ್ನಾಯುವಾಗಿದೆ.

ಆತ ಈಗ ಆಸ್ಪತ್ರೆಯಲ್ಲಿದ್ದಾನೆ
ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆತನಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆ ವ್ಯಕ್ತಿಯ ಡಯಾಫರ್ಮ್ ಸಂಪೂರ್ಣವಾಗಿ ಹಾನಿಯಾಗಿದೆ ಮತ್ತು ಇದರಿಂದ ಆತನಿಗೆ ಜೀವಮಾನವಿಡಿ ಸಮಸ್ಯೆನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಇಂತಹ ನರಗಳು ಪುನರ್ ಜೀವನ ಪಡೆಯುವುದು ತುಂಬಾ ಅಪರೂಪವಾಗಿದೆ.
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು? ನಿಮ್ಮ ಅಭಿಪ್ರಾಯ ಕಮೆಂಟ್ ಬಾಕ್ಸ್ ಗೆ ಹಾಕಿ.



Click it and Unblock the Notifications
