Latest Updates
-
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಈತ ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಂಡು ಆಸ್ಪತ್ರೆ ಸೇರಿದ! ಅಷ್ಟಕ್ಕೂ ಏನಾಯಿತು ಗೊತ್ತೇ?
ತುಂಬಾ ಬಳಲಿರುವಂತಹ ದೇಹಕ್ಕೆ ಸಂಪೂರ್ಣವಾಗಿ ಎಣ್ಣೆ ಹಚ್ಚಿಕೊಂಡು ಮಸಾಜ್ ಮಾಡಿಸಿಕೊಂಡರೆ ಆಗ ಸಿಗುವಂತಹ ಸುಖವೇ ಬೇರೆ. ಅದೇ ರೀತಿ ನಾವು ಸೆಲೂನ್ ಗೆ ಹೋದರೆ ಅಲ್ಲಿ ಕ್ಷೌರ ಮಾಡಿಸಿಕೊಂಡ ಬಳಿಕ ಕೆಲವು ಮಂದಿ ನಮ್ಮ ಬೆನ್ನು ಹಾಗೂ ಕುತ್ತಿಗೆಗೆ ಮಸಾಜ್ ಮಾಡುವರು. ಇದು ತುಂಬಾ ಆರಾಮದಾಯಕ ಎಂದು ಅನಿಸುವುದು. ಆದರೆ ಇಂತಹ ಮಸಾಜ್ ಮಾಡುವವರು ತುಂಬಾ ಅನುಭವಿಗಳು ಆಗಿರಬೇಕು.

ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯು ಬರಬಹುದು. ಯಾಕೆಂದರೆ ಸರಿಯಾಗಿ ಮಸಾಜ್ ಮಾಡದೆ ಇದ್ದರೆ ನರಗಳ ಮೇಲೆ ಪರಿಣಾವಾಗಿ ಬೇರೆ ಸಮಸ್ಯೆಯು ಕಾಣಿಸಿಕೊಳ್ಳಬಹುದು. ಇದಕ್ಕಾಗಿ ನೀವು ಕ್ಷೌರದ ಅಂಗಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುವ ವೇಳೆ ತುಂಬಾ ಎಚ್ಚರಿಕೆ ವಹಿಸಿ. ಇಲ್ಲೊಬ್ಬ ವ್ಯಕ್ತಿಯು ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಳ್ಳಲು ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯು ನಡೆದಿದೆ. ಈ ಬಗ್ಗೆ ನೀವು ವಿವರವಾಗಿ ಮತ್ತಷ್ಟು ಮಾಹಿತಿ ತಿಳಿಯಿರಿ.

ಆ ವ್ಯಕ್ತಿ ಕ್ಷೌರದಂಗಡಿಗೆ ತೆರಳಿದ
ನಮ್ಮದೇ ದೇಶದ ಈ ವ್ಯಕ್ತಿ ಯಾವಾಗಲೂ ಕ್ಷೌರದಂಗಡಿಗೆ ಹೋಗಿ ಅಲ್ಲಿ ಕೂದಲು ಕತ್ತರಿಸಿಕೊಂಡ ಬಳಿಕ ಸ್ವಲ್ಪ ಮಸಾಜ್ ಮಾಡಿಸುವುದು ಹವ್ಯಾಸ ಮಾಡಿಕೊಂಡಿದ್ದ. ಕ್ಷೌರದಂಗಡಿಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಆತನಿಗೆ ಉಸಿರಾಟದ ಸಮಸ್ಯೆಯು ಕಾಣಿಸಿಕೊಂಡಿತು.

ವೈದ್ಯರು ಆತನ ಪರೀಕ್ಷೆ ಮಾಡಿದರು
ವೈದ್ಯರು ಆ ವ್ಯಕ್ತಿಯ ಎಂಆರ್ ಐ ಸ್ಕ್ಯಾನ್ ಮಾಡಿದರು. ಈ ವೇಳೆ ಅವರಿಗೆ ಕುತ್ತಿಗೆಯಲ್ಲಿ ಗಂಭೀರವಾದ ಗಾಯಗಳು ಕಾಣಿಸಿಕೊಂಡವು. ಕುತ್ತಿಗೆಗೆ ಮಸಾಜ್ ಮಾಡಿಕೊಂಡ ವೇಳೆ ಕಾಣಿಸಿಕೊಂಡ ಗಾಯಗಳು ಇದಾಗಿದ್ದವು.

ಆತನ ನರಗಳಿಗೆ ಹಾನಿಯಾಗಿತ್ತು
ವೈದ್ಯರು ಹೇಳುವ ಪ್ರಕಾರ ಫರೆನಿಕ್ ನರಕ್ಕೆ ಹಾನಿ ಉಂಟಾಗಿತ್ತು. ಈ ನರವು ಧ್ವನಿಫಲಕವನ್ನು ನಿಯಂತ್ರಿಸುವುದು. ಇದು ಉಸಿರಾಟದ ಪ್ರಮುಖ ಸ್ನಾಯುವಾಗಿದೆ.

ಆತ ಈಗ ಆಸ್ಪತ್ರೆಯಲ್ಲಿದ್ದಾನೆ
ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆತನಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆ ವ್ಯಕ್ತಿಯ ಡಯಾಫರ್ಮ್ ಸಂಪೂರ್ಣವಾಗಿ ಹಾನಿಯಾಗಿದೆ ಮತ್ತು ಇದರಿಂದ ಆತನಿಗೆ ಜೀವಮಾನವಿಡಿ ಸಮಸ್ಯೆನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಇಂತಹ ನರಗಳು ಪುನರ್ ಜೀವನ ಪಡೆಯುವುದು ತುಂಬಾ ಅಪರೂಪವಾಗಿದೆ.
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು? ನಿಮ್ಮ ಅಭಿಪ್ರಾಯ ಕಮೆಂಟ್ ಬಾಕ್ಸ್ ಗೆ ಹಾಕಿ.



Click it and Unblock the Notifications