Latest Updates
-
ಮಂಗಳ-ಗುರು ಸಂಯೋಗದಿಂದ ಕಾದಿಗೆ ಅಪರೂಪದ ಯೋಗ: ಈ ಮೂರು ರಾಶಿಯವರ ಜೀವನದಲ್ಲಿ ಶುಭಯೋಗ! -
March 15 Horoscope: ಹಣಕಾಸು ಕುರಿತಾದ ವಿಚಾರವಾಗಿ ನಿಮ್ಮಲ್ಲಿ ಚಿಂತೆ ಇದೆ -
ಲವ್ನಲ್ಲಿ ಇರುವವರಿಗೆ ಶುಭ ಸುದ್ದಿ ಸಿಗುತ್ತೆ! ದೀರ್ಘಕಾಲದ ಸಮಸ್ಯೆ ಬಗೆಹರಿಯುತ್ತೆ -
ಸಖತ್ ರುಚಿ ನೀಡುವ ಸುಲಭದ ಧನಿಯಾ ರಸಂ: ಸೂಪ್ನಂತೆ ಕುಡಿಯಬಹುದು! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಗ್ಯಾಸ್ ಹಚ್ಚೋದೆ ಬೇಡ; ಸುಲಭವಾಗಿ ಮಾಡಿ ಈ ಅದ್ಭುತ ರುಚಿಯ ಸ್ವೀಟ್! -
ಕೆಲಸ ಮಾಡಲು ದೇಹಕ್ಕೆ ಬಲಬೇಕಾದರೆ ಈ ಹೆಸರುಕಾಳಿನ ಸೂಪರ್ಫುಡ್ ತಿನ್ನಿ! ವಾರಕ್ಕೊಂದು ಉಂಡೆ ಸಾಕು! -
ಅರ್ಧದಷ್ಟು ಭಾರತೀಯರಲ್ಲಿ 6 ಗಂಟೆಗೂ ಕಡಿಮೆ ನಿದ್ರೆ: ಸಮೀಕ್ಷೆಯಲ್ಲಿದೆ ಆತಂಕಕಾರಿ ವಿಚಾರ! -
ವಿವಾಹ ಯೋಗ ಕೂಡುವ ಸಾಧ್ಯತೆ ಇದೆ! ಸಂಗಾತಿಗೆ ಗಿಫ್ಸ್ ನೀಡಬಹುದು
ಈತ ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಂಡು ಆಸ್ಪತ್ರೆ ಸೇರಿದ! ಅಷ್ಟಕ್ಕೂ ಏನಾಯಿತು ಗೊತ್ತೇ?
ತುಂಬಾ ಬಳಲಿರುವಂತಹ ದೇಹಕ್ಕೆ ಸಂಪೂರ್ಣವಾಗಿ ಎಣ್ಣೆ ಹಚ್ಚಿಕೊಂಡು ಮಸಾಜ್ ಮಾಡಿಸಿಕೊಂಡರೆ ಆಗ ಸಿಗುವಂತಹ ಸುಖವೇ ಬೇರೆ. ಅದೇ ರೀತಿ ನಾವು ಸೆಲೂನ್ ಗೆ ಹೋದರೆ ಅಲ್ಲಿ ಕ್ಷೌರ ಮಾಡಿಸಿಕೊಂಡ ಬಳಿಕ ಕೆಲವು ಮಂದಿ ನಮ್ಮ ಬೆನ್ನು ಹಾಗೂ ಕುತ್ತಿಗೆಗೆ ಮಸಾಜ್ ಮಾಡುವರು. ಇದು ತುಂಬಾ ಆರಾಮದಾಯಕ ಎಂದು ಅನಿಸುವುದು. ಆದರೆ ಇಂತಹ ಮಸಾಜ್ ಮಾಡುವವರು ತುಂಬಾ ಅನುಭವಿಗಳು ಆಗಿರಬೇಕು.

ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯು ಬರಬಹುದು. ಯಾಕೆಂದರೆ ಸರಿಯಾಗಿ ಮಸಾಜ್ ಮಾಡದೆ ಇದ್ದರೆ ನರಗಳ ಮೇಲೆ ಪರಿಣಾವಾಗಿ ಬೇರೆ ಸಮಸ್ಯೆಯು ಕಾಣಿಸಿಕೊಳ್ಳಬಹುದು. ಇದಕ್ಕಾಗಿ ನೀವು ಕ್ಷೌರದ ಅಂಗಡಿಯಲ್ಲಿ ಮಸಾಜ್ ಮಾಡಿಸಿಕೊಳ್ಳುವ ವೇಳೆ ತುಂಬಾ ಎಚ್ಚರಿಕೆ ವಹಿಸಿ. ಇಲ್ಲೊಬ್ಬ ವ್ಯಕ್ತಿಯು ಕ್ಷೌರದಂಗಡಿಯಲ್ಲಿ ಕುತ್ತಿಗೆ ಮಸಾಜ್ ಮಾಡಿಸಿಕೊಳ್ಳಲು ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯು ನಡೆದಿದೆ. ಈ ಬಗ್ಗೆ ನೀವು ವಿವರವಾಗಿ ಮತ್ತಷ್ಟು ಮಾಹಿತಿ ತಿಳಿಯಿರಿ.

ಆ ವ್ಯಕ್ತಿ ಕ್ಷೌರದಂಗಡಿಗೆ ತೆರಳಿದ
ನಮ್ಮದೇ ದೇಶದ ಈ ವ್ಯಕ್ತಿ ಯಾವಾಗಲೂ ಕ್ಷೌರದಂಗಡಿಗೆ ಹೋಗಿ ಅಲ್ಲಿ ಕೂದಲು ಕತ್ತರಿಸಿಕೊಂಡ ಬಳಿಕ ಸ್ವಲ್ಪ ಮಸಾಜ್ ಮಾಡಿಸುವುದು ಹವ್ಯಾಸ ಮಾಡಿಕೊಂಡಿದ್ದ. ಕ್ಷೌರದಂಗಡಿಯಿಂದ ಹೊರಬಂದ ಕೆಲವೇ ನಿಮಿಷಗಳಲ್ಲಿ ಆತನಿಗೆ ಉಸಿರಾಟದ ಸಮಸ್ಯೆಯು ಕಾಣಿಸಿಕೊಂಡಿತು.

ವೈದ್ಯರು ಆತನ ಪರೀಕ್ಷೆ ಮಾಡಿದರು
ವೈದ್ಯರು ಆ ವ್ಯಕ್ತಿಯ ಎಂಆರ್ ಐ ಸ್ಕ್ಯಾನ್ ಮಾಡಿದರು. ಈ ವೇಳೆ ಅವರಿಗೆ ಕುತ್ತಿಗೆಯಲ್ಲಿ ಗಂಭೀರವಾದ ಗಾಯಗಳು ಕಾಣಿಸಿಕೊಂಡವು. ಕುತ್ತಿಗೆಗೆ ಮಸಾಜ್ ಮಾಡಿಕೊಂಡ ವೇಳೆ ಕಾಣಿಸಿಕೊಂಡ ಗಾಯಗಳು ಇದಾಗಿದ್ದವು.

ಆತನ ನರಗಳಿಗೆ ಹಾನಿಯಾಗಿತ್ತು
ವೈದ್ಯರು ಹೇಳುವ ಪ್ರಕಾರ ಫರೆನಿಕ್ ನರಕ್ಕೆ ಹಾನಿ ಉಂಟಾಗಿತ್ತು. ಈ ನರವು ಧ್ವನಿಫಲಕವನ್ನು ನಿಯಂತ್ರಿಸುವುದು. ಇದು ಉಸಿರಾಟದ ಪ್ರಮುಖ ಸ್ನಾಯುವಾಗಿದೆ.

ಆತ ಈಗ ಆಸ್ಪತ್ರೆಯಲ್ಲಿದ್ದಾನೆ
ಈ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆತನಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಆ ವ್ಯಕ್ತಿಯ ಡಯಾಫರ್ಮ್ ಸಂಪೂರ್ಣವಾಗಿ ಹಾನಿಯಾಗಿದೆ ಮತ್ತು ಇದರಿಂದ ಆತನಿಗೆ ಜೀವಮಾನವಿಡಿ ಸಮಸ್ಯೆನ್ನು ಎದುರಿಸಬೇಕಾಗುತ್ತದೆ. ಯಾಕೆಂದರೆ ಇಂತಹ ನರಗಳು ಪುನರ್ ಜೀವನ ಪಡೆಯುವುದು ತುಂಬಾ ಅಪರೂಪವಾಗಿದೆ.
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು? ನಿಮ್ಮ ಅಭಿಪ್ರಾಯ ಕಮೆಂಟ್ ಬಾಕ್ಸ್ ಗೆ ಹಾಕಿ.



Click it and Unblock the Notifications











