Latest Updates
-
ವಿಶ್ವ ಸೈಕಲ್ ದಿನ: ಫಿಟ್ನೆಸ್ ಕಾಯ್ದುಕೊಳ್ಳಲು ಮತ್ತು ಸುರಕ್ಷಿತ ಸೈಕ್ಲಿಂಗ್ಗೆ ಇಲ್ಲಿದೆ ಬೆಸ್ಟ್ ಟಿಪ್ಸ್ -
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಎಡ ಕೈ ಮೂಳೆ ಮುರಿದರೆ ಬಲದ ಕೈಗೆ ಪ್ಲಾಸ್ಟರ್ ಹಾಕಿದ ವೈದ್ಯರು!!
ನಾವು ಏನಾದರೂ ಆಸ್ಪತ್ರೆಗೆ ಹೋದರೆ ಆಗ ಅಲ್ಲಿ ವೈದ್ಯರು ನಮ್ಮ ಸಮಸ್ಯೆಯ ಬಗ್ಗೆ ಸರಿಯಾಗಿ ಮಾಹಿತಿ ಪಡೆದುಕೊಳ್ಳಬೇಕು. ಎಲ್ಲಿ ನೋವಿದೆ ಎನ್ನುವ ಬಗ್ಗೆ ರೋಗಿಯಿಂದ ಮಾಹಿತಿ ಪಡೆದುಕೊಂಡ ಬಳಿಕ ಚಿಕಿತ್ಸೆ ನೀಡಬೇಕು. ಇಲ್ಲವಾದರೆ ಕೆಲವೊಂದು ಸಮಸ್ಯೆಗಳು ಕಾಡುವುದು. ಹೀಗೆ ವೈದ್ಯಕೀಯ ಲೋಕದಲ್ಲಿ ಕೆಲವೊಂದು ಸಲ ತಪ್ಪುಗಳು ನಡೆಯುವುದು ಸಹಜ. ಯಾಕೆಂದರೆ ವೈದ್ಯರು ಕೂಡ ಮನುಷ್ಯರಾಗಿರುವ ಕಾರಣದಿಂದಾಗಿ ತಪ್ಪು ನಡೆಯುತ್ತದೆ. ಇನ್ನು ಕೆಲವು ಸಲ ದೀರ್ಘಕಾಲದ ತನಕ ಪಾಳಿಯಲ್ಲಿರುವುದು ಮತ್ತು ಉದಾಸೀನದಿಂದಲೂ ತಪ್ಪುಗಳು ನಡೆಯುವುದು.
ಇಲ್ಲೊಂದು ಇಂತಹ ಘಟನೆ ಬಗ್ಗೆ ನಿಮಗೆ ಹೇಳಲಿದ್ದೇವೆ. ಅದೇನೆಂದರೆ ಇಲ್ಲಿ ಬಾಲಕನೊಬ್ಬ ಕೈ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗುತ್ತಾನೆ. ಆದರೆ ಆತನ ಗಾಯವಿಲ್ಲದ ಕೈಗೆ ವೈದ್ಯರು ಪ್ಲಾಸ್ಟರ್ ಹಾಕಿರುವರು. ಈ ನಿರ್ಲಕ್ಷ್ಯದ ಬಗ್ಗೆ ನೀವು ಈ ಲೇಖನದಲ್ಲಿ ಓದಿಕೊಂಡು ತಿಳಿಯಿರಿ.

ಬಿಹಾರದ ದರ್ಬಾಂಗ್ ಜಿಲ್ಲೆಯಲ್ಲಿರುವ ಅತೀ ದೊಡ್ಡ ಸರ್ಕಾರ ಆಸ್ಪತ್ರೆಯಲ್ಲಿ ಈ ಘಟನೆಯು ನಡೆದಿದೆ. ಏಳರ ಹರೆಯದ ಬಾಲಕ ಫೈಝನ್ ಮರದಿಂದ ಬಿದ್ದು ಕೈಗೆ ಗಾಯ ಮಾಡಿಕೊಂಡಿದ್ದಾನೆ. ಆತನ ಮೂಳೆ ಮುರಿದಿದೆ ಮತ್ತು ಆತನನ್ನು ತಕ್ಷಣವೇ ದರ್ಬಾಂಗ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್(ಡಿಎಂಸಿಎಚ್)ಗೆ ದಾಖಲಿಸಲಾಯಿತು.
ಮರದಿಂದ ಬಿದ್ದ ಬಾಲಕನ ಎಡ ಕೈಯ ಮೂಳೆ ಮುರಿತಕ್ಕೆ ಒಳಗಾಗಿತ್ತು ಮತ್ತು ಆತನ ಕೈಗೆ ಪ್ಲಾಸ್ಟರ್ ಮಾಡುವ ಅಗತ್ಯವಿತ್ತು. ಆದರೆ ವೈದ್ಯರು ನಿರ್ಲಕ್ಷ್ಯದಿಂದಾಗಿ ಬಾಲಕನ ಬಲದ ಕೈಗೆ ಪ್ಲಾಸ್ಟರ್ ಹಾಕಿ ಬಿಟ್ಟರು. ಬಾಲಕನು ತನ್ನ ಎಡದ ಕೈಗೆ ನೋವಾಗಿದೆ ಎಂದು ಹೇಳುತ್ತಲಿದ್ದರೂ ವೈದ್ಯರು ಮಾತ್ರ ಇದನ್ನು ಪರಿಗಣಿಸಲೇ ಇಲ್ಲ.
ಎಲ್ಲವೂ ಸರಿಯಾಗಿಯೇ ಇದ್ದ ಬಲ ಕೈಗೆ ವೈದ್ಯರು ಪ್ಲಾಸ್ಟರ್ ಹಾಕಿದರು. ಎಕ್ಸ ರೇಯಲ್ಲಿ ಕೂಡ ಬಾಲಕನ ಎಡ ಕೈಯ ಮೂಳೆ ಮುರಿತಕ್ಕೆ ಒಳಗಾಗಿರುವುದು ತಿಳಿದುಬರುತ್ತಿತ್ತು. ಆದರೂ ವೈದ್ಯರು ಇದನ್ನೆಲ್ಲಾ ಕಡೆಗಣಿಸಿ ಬಲ ಕೈಗೆ ಪ್ಲಾಸ್ಟರ್ ಹಾಕಿಬಿಟ್ಟರು. ವೈದ್ಯರು ಪ್ಲಾಸ್ಟರ್ ಹಾಕುವ ವೇಳೆ ಬಾಲಕನು ಅವರ ತಪ್ಪಿನ ಬಗ್ಗೆ ಹೇಳಿದರೂ ಅದನ್ನು ಕೂಡ ವೈದ್ಯರು ಕಡೆಗಣಿಸಿದರು. ವೈದ್ಯರು ಬಾಲಕನ ಮಾತನ್ನು ಕೂಡ ನಿರ್ಲಕ್ಷ್ಯ ಮಾಡಿದರು.
ಇನ್ನೊಬ್ಬ ವೈದ್ಯರು ನೀಡಿರುವಂತಹ ವರದಿಯಲ್ಲಿ ಕೂಡ ಬಾಲಕನ ಎಡದ ಕೈಯ ಮೂಳೆ ಮುರಿತಕ್ಕೆ ಒಳಗಾಗಿದೆ ಎಂದು ಸ್ಪಷ್ಟವಾಗಿ ಬರೆಯಲಾಗಿತ್ತು. ಬಾಲಕನ ಕುಟುಂಬಸ್ಥರು ಈ ಬಗ್ಗೆ ಆಸ್ಪತ್ರೆಯ ಅಧೀಕ್ಷಕರಿಗೆ ದೂರು ನೀಡಿದರು ಮತ್ತು ಅವರು ಈ ಬಗ್ಗೆ ತನಿಖೆ ಮಾಡಿ ವೈದ್ಯರ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ. ಈ ಘಟನೆಗೆ ತಾನು ಕಾರಣವೆಂದು ವೈದ್ಯರು ಜವಾಬ್ದಾರಿ ತೆಗೆದುಕೊಂಡಿದ್ದಾರೆ.
ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬಾಲಕನ ಮನೆಯವರು ಒತ್ತಾಯಿಸಿದ್ದಾರೆ. ಬಿಹಾರದ ಸರ್ಕಾರಿ ಆಸ್ಪತ್ರೆಗಳು ಮತ್ತು ಇಲ್ಲಿನ ವೈದ್ಯರ ನಿರ್ಲಕ್ಷ್ಯಗಳು ಆಗಾಗ ವರದಿಯಾಗುತ್ತಲೇ ಇದೆ. ಇಲ್ಲಿ ಮಕ್ಕಳು ಮೆದುಳು ಜ್ವರದಿಂದ ಬಳಲುತ್ತಿರುವುದು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಲಿದೆ.



Click it and Unblock the Notifications

