Latest Updates
-
ಬೆಂಗಳೂರಿನಲ್ಲಿ 2 ದಿನ ಭಾರಿ ಪವರ್ ಕಟ್: ಈ 70 ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಮುನ್ನೆಚ್ಚರಿಕೆ ವಹಿಸಿ! -
ಈರುಳ್ಳಿ ಬೆಲೆ ಏರಿಕೆ ಬಿಸಿ: ₹800ರಲ್ಲಿ ವಾರಪೂರ್ತಿ ಪ್ರೋಟೀನ್ ಯುಕ್ತ ಆರೋಗ್ಯಕರ ಊಟದ ಪ್ಲಾನ್! -
ಹಬ್ಬದ ಸಿಹಿ ತಯಾರಿಗೆ ಸಕ್ಕರೆ ಬೆಲೆ ಬಿಸಿ: ಜೇಬಿಗೆ ಹೊರೆಯಾಗದಂತೆ ಸಂಭ್ರಮಿಸುವುದು ಹೇಗೆ? -
LPG e-KYC ಗಡುವು: ನಾಳೆಯೇ ಕೊನೆಯ ದಿನ, ನಿಮ್ಮ ಗ್ಯಾಸ್ ಸಂಪರ್ಕ ಕಡಿತವಾಗದಂತೆ ತಡೆಯುವುದು ಹೇಗೆ? -
BWF ಸೆಮಿಫೈನಲ್ ವೀಕ್ಷಿಸುವಾಗ ಮೈಕೈ ನೋವೇ? 8 ನಿಮಿಷದ ಈ ಸಿಂಪಲ್ ವ್ಯಾಯಾಮ ಮಾಡಿ! -
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್!
ಕಲ್ಲು, ಮುಚ್ಚಳ, ನಾಣ್ಯ ನುಂಗಿ ತನ್ನ ಆತಂಕ ನಿವಾರಿಸಿಕೊಳ್ಳುತಿದ್ದ ವ್ಯಕ್ತಿ!
ನಾವು ನಮ್ಮ ಸುತ್ತಮುತ್ತಲು ಚಿತ್ರವಿಚಿತ್ರವಾಗಿರುವ ಜನರನ್ನು ಕಾಣುತ್ತೇವೆ. ಇಂತಹ ವ್ಯಕ್ತಿಗಳು ಮಾನಸಿಕವಾಗಿ ಸ್ಥಿಮಿತದಲ್ಲಿರುವುದಿಲ್ಲ. ಈ ಕಾರಣದಿಂದಾಗಿ ಅವರ ವರ್ತನೆಯಲ್ಲಿಯೂ ಬದಲಾವಣೆಗಳು ಕಂಡುಬರುವುದು. ಮಣ್ಣು ತಿನ್ನುವುದು, ಪೆಟ್ರೋಲ್ ಕುಡಿಯುವುದು, ಹುಲ್ಲು ತಿನ್ನುವುದು ಇತ್ಯಾದಿಗಳ ಬಗ್ಗೆ ನಾವು ಕೇಳಿದ್ದೇವೆ. ಇಂತಹ ವ್ಯಕ್ತಿಗಳು ನಿಜವಾಗಿಯೂ ಮಾನಸಿಕವಾಗಿ ಏನೋ ಸಮಸ್ಯೆಯನ್ನು ಎದುರಿಸುತ್ತಾ ಇರುವರು. ಈ ಲೇಖನದಲ್ಲಿ ಇಂತಹ ಒಬ್ಬ ವ್ಯಕ್ತಿಯ ಬಗ್ಗೆ ನಾವು ತಿಳಿಸಿಕೊಡಲಿದ್ದೇವೆ.
ಇಲ್ಲೊಬ್ಬ ವ್ಯಕ್ತಿಯು ತನ್ನ ಆತಂಕ ನಿವಾರಣೆ ಮಾಡಲು ಕಲ್ಲು, ಬಾಟಲಿಯ ಮುಚ್ಚಳ ಮತ್ತು ನಾಣ್ಯಗಳನ್ನು ತಿಂದಿದ್ದಾನೆ. ಈತನ ಹೊಟ್ಟೆಯಲ್ಲಿ ಸುಮಾರು 2 ಕೆಜಿಯಷ್ಟು ಕಲ್ಲು, ಬಾಟಲಿ ಮುಚ್ಚಳ, ನಾಣ್ಯ ಇತ್ಯಾದಿ ಪತ್ತೆಯಾಗಿದೆ. ಇದನ್ನು ಕಂಡು ವೈದ್ಯರು ಕೂಡ ಬೆಚ್ಚಿ ಬಿದ್ದಿದ್ದಾರೆ. ಕಲ್ಲು, ನಾಣ್ಯ, ಬಾಟಲಿ ಮುಚ್ಚಳ ಇತ್ಯಾದಿಗಳನ್ನು ತಿನ್ನುವಂತಹ ವ್ಯಕ್ತಿಯ ಬಗ್ಗೆ ನಾವು ಈ ಲೇಖನದಲ್ಲಿ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಓದುತ್ತಾ ಸಾಗಿ...

ದಕ್ಷಿಣ ಕೊರಿಯಾದಲ್ಲಿ ಈ ಘಟನೆ ನಡೆದಿದೆ
ಹೊಟ್ಟೆ ನೋವಿನ ಸಮಸ್ಯೆಯಿದ್ದ ವ್ಯಕ್ತಿಯು ಆಸ್ಪತ್ರೆಗೆ ದಾಖಲಾಗುತ್ತಾನೆ. ಆದರೆ ಈ ವ್ಯಕ್ತಿಯನ್ನು ಪರಿಶೀಲಿಸಿದ ವೇಳೆ ವೈದ್ಯರೇ ದಂಗಾದರು.

ಪರಿಶೀಲನೆ ವೇಳೆ ಕಂಡುಬಂದಿರುವುದು
ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯ ಹೊಟ್ಟೆಯು ಉಬ್ಬರಗೊಂಡಿತ್ತು ಮತ್ತು ಹೊಟ್ಟೆಯನ್ನು ವೈದ್ಯರು ಮುಟ್ಟಿ ನೋಡಿದ ವೇಳೆ ಸಣ್ಣ ಸಣ್ಣ ಕಲ್ಲುಗಳು ಪತ್ತೆಯಾಗಿದೆ. ಮತ್ತಷ್ಟು ಪರಿಶೀಲನೆ ನಡೆಸಿದ ವೇಳೆ ವೈದ್ಯರಿಗೆ ಆಘಾತ ಉಂಟಾಯಿತು. ಯಾಕೆಂದರೆ ಆ ವ್ಯಕ್ತಿಯ ಹೊಟ್ಟೆಯೊಳಗಡೆ ಸಣ್ಣ ಸಣ್ಣ ಕಲ್ಲುಗಳು, ಬಾಟಲಿಯ ಮುಚ್ಚಳ ಇತ್ಯಾದಿಗಳು ಕಂಡುಬಂದವು. ಇದು ಸಂಪೂರ್ಣ ಹೊಟ್ಟೆಯನ್ನು ವ್ಯಾಪಿಸಿತ್ತು.

ಈ ಬಗ್ಗೆ ಆ ವ್ಯಕ್ತಿಯು ಏನು ಹೇಳಿದ
ತನ್ನ ಹೊಟ್ಟೆಯಲ್ಲಿದ್ದ ಕಲ್ಲುಗಳು, ಬಾಟಲಿ ಮುಚ್ಚಳ ಇತ್ಯಾದಿಗಳನ್ನು ಕಂಡು ವೈದ್ಯರು ಅಚ್ಚರಿಗೊಂಡರು. ಈ ಬಗ್ಗೆ ಆ ವ್ಯಕ್ತಿಯಲ್ಲಿ ಕೇಳಿದಾಗ, ತನಗೆ ಆತಂಕ ಉಂಟಾದ ವೇಳೆ ನಾನು ಶಾಂತವಾಗಲು ಔಷಧಿ ತೆಗೆದುಕೊಳ್ಳುತ್ತಾ ಇದ್ದೆ. ಇದರೊಂದಿಗೆ ನಾಣ್ಯ, ಮುಚ್ಚಳ ಮತ್ತು ಸಣ್ಣ ಸಣ್ಣ ಕಲ್ಲುಗಳನ್ನು ಕೂಡ ನುಂಗುತ್ತಲಿದ್ದೆ ಎಂದು ಹೇಳಿದ್ದಾನೆ.

ತಕ್ಷಣವೇ ಆತನ ಶಸ್ತ್ರಚಿಕಿತ್ಸೆ ಮಾಡಲಾಯಿತು
ಈ ವ್ಯಕ್ತಿಯನ್ನು ತಕ್ಷಣವೇ ಶಸ್ತ್ರಚಿಕಿತ್ಸೆ ಮಾಡಲಾಯಿತು ಮತ್ತು ವೈದ್ಯರ ಪ್ರಕಾರ ಇದು ತುಂಬಾ ಕಠಿಣ ಶಸ್ತ್ರಚಿಕಿತ್ಸೆಯಾಗಿತ್ತು. ಯಾಕೆಂದರೆ ಇಂತಹ ಶಸ್ತ್ರಚಿಕಿತ್ಸೆಯು ತುಂಬಾ ಕಠಿಣವಾಗಿರುವುದು ಮತ್ತು ಗ್ಯಾಸ್ಟ್ರೋಸ್ಕೋಪಿ ಮೂಲಕವಾಗಿ ಇದನ್ನು ತೆಗೆಯಬೇಕಾಯಿತು. ಬಾಯಿಯ ಮೂಲಕವಾಗಿ ತುಂಬಾ ತೆಳುವಾದ ಟ್ಯೂಬ್ ನ್ನು ಹಾಕಲಾಯಿತು. ಇದರ ಬಳಿಕ ತುಂಬಾ ಭಿನ್ನವಾಗಿರುವಂತಹ ಶಸ್ತ್ರಚಿಕಿತ್ಸೆ ವಿಧಾನದ ಮೂಲಕ ಹೊಟ್ಟೆಯಲ್ಲಿ ಇದ್ದ ಕಲ್ಲುಗಳು ಹಾಗೂ ಇತರ ಸಾಮಗ್ರಿಗಳನ್ನು ಹೊರಗೆ ತೆಗೆಯಲಾಯಿತು.

ಆ ವ್ಯಕ್ತಿ ಚೇತರಿಸಿಕೊಂಡ
ಸುಮಾರು 2 ಕೆಜಿಯಷ್ಟು ಕಲ್ಲು, ಮುಚ್ಚಳ, ನಾಣ್ಯವನ್ನು ಆತ ನುಂಗಿ ಕೊಂಡಿದ್ದ. ವೈದ್ಯರು ತುಂಬಾ ಕಠಿಣವಾಗಿರುವಂತಹ ಶಸ್ತ್ರಚಿಕಿತ್ಸೆ ಮಾಡಿ ಅದರಲ್ಲಿ ಯಶಸ್ವಿ ಕೂಡ ಆದರು. ಆತನ ಹೊಟ್ಟೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ಹೊರಗೆ ತೆಗೆಯಲಾಯಿತು. ಶಸ್ತ್ರಚಿಕಿತ್ಸೆ ನಡೆಸಿದ ಬಳಿಕ ಸುಮಾರು 9 ದಿನಗಳ ಕಾಲ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾಯಿತು. ಇದರ ಬಳಿಕ ಆತ ಸಂಪೂರ್ಣವಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದಾನೆ. ಆತಂಕ ನಿವಾರಣೆ ಮಾಡಲು ಈಗ ಆತನಿಗೆ ಚಿಕಿತ್ಸೆ ಕೂಡ ನೀಡಲಾಗುತ್ತಿದೆ. ಇಂತಹ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತದೆ. ಇದರ ಬಗ್ಗೆ ನಿಮ್ಮ ಅಭಿಪ್ರಾಯ ಹಾಗೂ ಅನಿಸಿಕೆಯನ್ನು ಕಮೆಂಟ್ ಬಾಕ್ಸ್ ನಲ್ಲಿ ನಮಗೆ ಬರೆದು ತಿಳಿಸಿ.



Click it and Unblock the Notifications