Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಂತಾನಹರಣ ಚಿಕಿತ್ಸೆ ಮಾಡಿಸಿಯೂ ಪತ್ನಿ ಗರ್ಭಿಣಿಯಾದಳು!
ಗರ್ಭಧಾರಣೆ ಮಾಡುವುದು ತುಂಬಾ ಸಂಭ್ರಮದ ಕ್ಷಣ. ಆದರೆ ಗರ್ಭ ಧರಿಸಲು ನಿಮಗೆ ಇಷ್ಟವಿಲ್ಲದೆ ಇರುವಾಗ ಇದು ನಡೆದರೆ ಆಗ ಖಂಡಿತವಾಗಿಯೂ ಆಘಾತ ಆಗುವುದು. ಕೆಲವೊಂದು ತಡೆಗಳನ್ನು ನಿವಾರಣೆ ಮಾಡಿಕೊಂಡು ದಂಪತಿಯು ಗರ್ಭನಿರೋಧಕ ವ್ಯವಸ್ಥೆ ಮಾಡಿಕೊಳ್ಳುವರು. ಕಾಂಡೋಮ್, ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸಿಯೂ ಗರ್ಭ ನಿಲ್ಲದಂತೆ ಮಾಡಬಹುದು. ಒಂದೆರಡು ಮಕ್ಕಳಾದ ಬಳಿಕ ಮಹಿಳೆಯು ಗರ್ಭ ನಿಲ್ಲದಂತೆ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುವಳು ಅಥವಾ ಪುರುಷ ಕೂಡ ಹಾಗೆ ಮಾಡಬಹುದು.

ಆದರೆ ಇಂತಹ ಮುನ್ನೆಚ್ಚರಿಕೆ ಕ್ರಮಗಳು ವಿಫಲವಾದರೆ ಆಗ ಏನು ಮಾಡಬೇಕು ಮತ್ತು ನೀವು ಮುನ್ನೆಚ್ಚರಿಕೆ ವಹಿಸಿಯೂ ಗರ್ಭಧಾರಣೆ ಮಾಡಿದರೆ? ಪುರುಷನು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಕೊಳ್ಳುತ್ತಾನೆ. ಆದರೂ ಆತನ ಪತ್ನಿ ಮಾತ್ರ ಗರ್ಭಧರಿಸಿದರೆ ಆಗ ಹೇಗಾಗಬಹುದು ಎಂದು ಊಹಿಸಿ. ಈ ಸಂಪೂರ್ಣ ಘಟನೆ ಬಗ್ಗೆ ನೀವು ಓದಿಕೊಳ್ಳಿ.

ಇನ್ನು ಮಕ್ಕಳು ಬೇಡ ಎಂದು ದಂಪತಿ ನಿರ್ಧರಿಸಿದರು
ತೈಪೇಯಿಯ ದಂಪತಿಗೆ ಅದಾಗಲೇ ಮೂರು ಮಂದಿ ಮಕ್ಕಳಿದ್ದ ಕಾರಣದಿಂದಾಗಿ ಇನ್ನು ಮುಂದೆ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿಬಿಟ್ಟರು ಮತ್ತು ಇನ್ನು ಹೆಚ್ಚು ಮಕ್ಕಳನ್ನು ಸಾಕಲು ಅವರಿಗೆ ಸಾಧ್ಯವಿರಲಿಲ್ಲ.

ಸಂತಾನಹರಣ ಚಿಕಿತ್ಸೆ ಮಾಡಲು ದಂಪತಿ ನಿರ್ಧರಿಸಿದರು
ದಂಪತಿಯು ಸಂತಾನಹರಣ ಚಿಕಿತ್ಸೆ ಮಾಡಲು ನಿರ್ಧಾರ ಮಾಡಿದರು. ಇದರಿಂದ ಲೈಂಗಿಕ ಜೀವನವನ್ನು ಹೆಚ್ಚು ಆನಂದಿಸಲು ಪುರುಷನು ಸಂತಾನಹರಣ ಚಿಕಿತ್ಸೆಗೆ ಮುಂದಾದ.

ದಂಪತಿಗೆ ಆಘಾತ ಕಾದಿತ್ತು
ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ಎರಡು ವರ್ಷಗಳ ಬಳಿಕ ಪತ್ನಿ ಮತ್ತೆ ಗರ್ಭಿಣಿಯಾಗಿದ್ದಳು. ಸಂತಾನಹರಣ ಚಿಕಿತ್ಸೆಯು ವಿಫಲವಾಗಿದೆ ಮತ್ತು ಗರ್ಭಧಾರಣೆಯನ್ನು ಮುಂದುವರಿಸಲು ಅವರು ನಿರ್ಧಾರ ಮಾಡಿದರು.

ವೈದ್ಯರು ವಿಭಿನ್ನ ಸಂಶೋಧನೆ ಮಾಡಿದರು
ಸ್ತ್ರೀರೋಗ ತಜ್ಞರು ಸಂತಾನಹರಣ ಚಿಕಿತ್ಸೆ ವಿಫಲವಾಗಿದೆ ಮತ್ತು ಮೂತ್ರ ತಜ್ಞರಲ್ಲಿ ಪರೀಕ್ಷೆ ಮಾಡಿಸಿಕೊಳ್ಳಲು ಹೇಳಿದರು. ಈ ಪರೀಕ್ಷೆ ಮಾಡಿಸಿಕೊಂಡ ವೇಳೆ ಅವರಿಗೆ ದೊಡ್ಡ ಆಘಾತ ಕಾದಿತ್ತು. ಯಾಕೆಂದರೆ ಆ ವ್ಯಕ್ತಿಯ ವೀರ್ಯಗಳು ತುಂಬಾ ಬಲಿಷ್ಠವಾಗಿದ್ದವು ಮತ್ತು ಇದರಿಂದ ಅದು ತುಂಬಾ ಚೆನ್ನಾಗಿ ಈಜಿಕೊಂಡು ಹೋಗಿ ಪತ್ನಿಯನ್ನು ಗರ್ಭಿಣಿಯನ್ನಾಗಿ ಮಾಡಿದೆ.



Click it and Unblock the Notifications