Latest Updates
-
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ
ಕುಡಿದ ಮತ್ತಿನಲ್ಲಿ ತನ್ನ ಕಣ್ಣಗುಡ್ಡೆಗಳನ್ನು ಕಳೆದುಕೊಂಡರೂ, ಆತನಿಗೆ ಗೊತ್ತೇ ಆಗಿಲ್ಲವಂತೆ!!
ಮದ್ಯಪಾನದಿಂದಾಗಿ ಆರೋಗ್ಯ ಕೆಡುವುದು ಎಂದು ಪ್ರತಿಯೊಬ್ಬರಿಗೂ ತಿಳಿದಿರುವಂತಹ ವಿಚಾರ. ಕೆಲವರು ವಿಪರೀತವಾಗಿ ಕುಡಿದು ಮೈಮೇಲೆ ಪರಿಜ್ಞಾನವೇ ಇರುವುದಿಲ್ಲ. ತಮ್ಮ ದೇಹ ಅಥವಾ ಸುತ್ತಮುತ್ತಲು ಏನಾಗುತ್ತಿದೆ ಎನ್ನುವುದೇ ತಿಳಿದಿರುವುದಿಲ್ಲ. ಕುಡಿಯುವುದರಿಂದ ಆಗುವಂತಹ ಅನಾಹುತಗಳ ಬಗ್ಗೆ ಆಗಾಗ ಸುದ್ದಿಯಾಗುತ್ತಿದ್ದರೂ ಕುಡಿಯುದನ್ನು ಮಾತ್ರ ಜನರು ಕಡಿಮೆ ಮಾಡುವುದಿಲ್ಲ. ಅದರಲ್ಲೂ ಕೆಲವರು ಮಿತಿಮೀರಿ ಕುಡಿಯುತ್ತಾರೆ. ಇದು ದೇಹಕ್ಕೆ ಮಾತ್ರವಲ್ಲದೆ, ಸುತ್ತಲಿನವರಿಗೂ ತುಂಬಾ ಅಪಾಯಕಾರಿ.
ಕುಡಿತದಲ್ಲಿ ಮತ್ತಿನಲ್ಲಿ ತಮಗೆ ಏನಾಗುತ್ತಿದೆ ಎನ್ನುವುದೇ ಕೆಲವು ಜನರಿಗೆ ತಿಳಿದಿರುವುದಿಲ್ಲ. ಅಂತಹ ಒಂದು ಘಟನೆ ಬಗ್ಗೆ ಈ ಲೇಖನದಲ್ಲಿ ಹೇಳಲು ಹೊರಟಿರುವುದು. ಇಲ್ಲೊಬ್ಬ ವ್ಯಕ್ತಿ ವಿಪರೀತವಾಗಿ ಕುಡಿದು ಮಾಡಿಕೊಂಡಿರುವ ಅವಾಂತರವು ಇದಕ್ಕೆ ಸಾಕ್ಷಿಯಾಗಿದೆ. ವಿಪರೀತವಾಗಿ ಕುಡಿದಿದ್ದ ವ್ಯಕ್ತಿಯು ಅಪಘಾತಕ್ಕೆ ಸಿಲುಕಿ ಆತನ ಕಣ್ಣಗುಡ್ಡೆಗಳು ಹೊರಗೆ ಬಂದು ಗಂಟೆಗಳ ಕಾಲ ನೆಲದ ಮೇಲೆ ಬಿದ್ದಿದ್ದರೂ ಕುಡಿದ ಮತ್ತಿನಲ್ಲಿದ್ದ ಆತನಿಗೆ ಏನೂ ತಿಳಿದಿರಲಿಲ್ಲ. ಈ ವಿಚಿತ್ರ ಘಟನೆ ಬಗ್ಗೆ ನೀವು ಮುಂದಕ್ಕೆ ಓದಿಕೊಂಡು ಹೋಗಿ...

ಈ ಘಟನೆ ನಡೆದಿರುವು ಚೀನಾದಲ್ಲಿ
26ರ ಹರೆಯದ ವ್ಯಕ್ತಿ(ಹೆಸರನ್ನು ಬಹಿರಂಗಪಡಿಸಲಾಗಿಲ್ಲ) ವಿಪರೀತವಾಗಿ ಕುಡಿದ ಮತ್ತಿನಲ್ಲಿ ಇದ್ದಾಗ ಆತ ಅಪಘಾತಕ್ಕೆ ಸಿಲುಕಿದ. ಚಿನಾದ ಶಾನ್ ಡಾಂಗ್ ಪ್ರಾಂತ್ಯದ ಜಿನಾಣ್ ನ ಲಿಕ್ಸಿಯಾ ಜಿಲ್ಲೆಯಲ್ಲಿ ವಾಸವಿದ್ದ ಈ ವ್ಯಕ್ತಿ ವಿಪರೀತ ಕುಡಿದ ಮತ್ತಿನಲ್ಲಿ ಜಾರಿ ಬಿದ್ದಿದ್ದ.

ಆತನ ಕುಟುಂಬವು ಆಸ್ಪತ್ರೆಗೆ ದಾಖಲಿಸಿತು
ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಗ ಆತನ ಕುಟುಂಬ ಸದಸ್ಯರು ಇದನ್ನೆಉ ನೋಡಿ ಆಸ್ಪತ್ರೆಗೆ ದಾಖಲು ಮಾಡಿದರು. ಅಪಘಾತವಾದ ಆರು ಗಂಟೆಗಳ ಬಳಿಕ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ವ್ಯಕ್ತಿಯ ಕಣ್ಣಗುಡ್ಡೆಯೇ ಇಲ್ಲವೆಂದು ವೈದ್ಯರು ತಿಳಿಸಿದರು!
ವೈದ್ಯರು ಆ ವ್ಯಕ್ತಿಯನ್ನು ಪರೀಕ್ಷೆ ಮಾಡಿದಾಗ ಅವರಿಗೆ ಅಚ್ಚರಿ ಕಾದಿತ್ತು. ಅದೇನೆಂದರೆ ಆತನ ಕಣ್ಣ ಗುಡ್ಡೆಗಳೇ ಮಾಯವಾಗಿದ್ದವು. ಕೆಲವೇ ಸಮಯದ ಬಳಿಕ ವೈದ್ಯರಿಗೆ ಫೋನ್ ಕರೆಯೊಂದು ಬಂದಿದ್ದು, ಮನೆಯಲ್ಲಿ ಕಣ್ಣಗುಡ್ಡೆಯು ಪತ್ತೆಯಾಗಿದೆ ಎಂದು ಕುಟುಂಬದವರು ತಿಳಿಸಿದರು.

ದೀರ್ಘಕಾಲ ತನಕ ಕಣ್ಣಗುಡ್ಡೆಯು ಬಿದ್ದುಕೊಂಡಿತ್ತು!
ಕಣ್ಣಗುಡ್ಡೆಯು ದೀರ್ಘಕಾಲದ ತನಕ ನೆಲದ ಮೇಲೆ ಬಿದ್ದುಕೊಂಡಿದ್ದ ಕಾರಣದಿಂದಾಗಿ ಇದನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕೆಲವು ಗಂಟೆಗಳ ಕಾಲ ಕಣ್ಣಗುಡ್ಡೆಯು ನೆಲದ ಮೇಲಿದ್ದ ಕಾರಣದಿಂದಾಗಿ ಅದು ಕಲುಷಿತವಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಆ ವ್ಯಕ್ತಿ ಕಣ್ಣು ಕಳಕೊಂಡ
ಆ ವ್ಯಕ್ತಿಯ ಸೂಕ್ಷ್ಮ ಸ್ನಾಯುಗಳು ಮತ್ತು ಆಪ್ಟಿಕ್ ನರಗಳು ಹೊರಗೆ ಬಂದಿದ್ದ ಕಾರಣದಿಂದಾಗಿ ಏನೂ ಮಾಡುವಂತೆ ಇರಲಿಲ್ಲ ಮತ್ತು ಇದರಿಂದ ಸೋಂಕು ಬರುವುದನ್ನು ತಪ್ಪಿಸಲು ಕೂಡ ಸಾಧ್ಯ ವಾಗಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಇದರಿಂದಾಗಿ ಗಾಯಕ್ಕೆ ಹೊಲಿಗೆ ಹಾಕಲಾಗಿದೆ. ಆಘಾತದಿಂದ ಆ ವ್ಯಕ್ತಿಯು ಈಗ ಚೇತರಿಸಿಕೊಳ್ಳುತ್ತಿದ್ದಾನೆ. ಈ ಘಟನೆ ಬಗ್ಗೆ ನಿಮ್ಮ ಅನಿಸಿಕೆ ಏನು? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ ಗೆ ಹಾಕಿಬಿಡಿ.



Click it and Unblock the Notifications
