Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ತಪ್ಪಾದ ಅಭ್ಯರ್ಥಿಗೆ ಮತ ನೀಡಿರುವುದಕ್ಕೆ ತನ್ನ ಬೆರಳನ್ನೇ ಕತ್ತರಿಸಿಕೊಂಡ ವ್ಯಕ್ತಿ
ಮತದಾನ ಎನ್ನುವುದು ಪ್ರಜಾಪ್ರಭುತ್ವದಲ್ಲಿ ಇರುವ ಅಮೂಲ್ಯವಾದ ಹಕ್ಕು. ಸೂಕ್ತ ಅಭ್ಯರ್ಥಿಗೆ ಬಹು ಮತ ನೀಡುವುದರ ಮೂಲಕ ಆರಿಸಿ ತರುವುದು ನಿಯಮ. ಈ ಒಂದು ಶ್ರೇಷ್ಠ ಹಕ್ಕನ್ನು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಅಭ್ಯರ್ಥಿಗೂ ಇರುತ್ತದೆ. ಪ್ರಜಾ ಪ್ರಭುತ್ವ ರಾಷ್ಟ್ರವಾದ ನಮ್ಮ ದೇಶದಲ್ಲಿ ಪ್ರತಿಯೊಬ್ಬ ವಯಸ್ಕರಿಗೂ ತಮ್ಮ ನೆಚ್ಚಿನ ನಾಯಕನನ್ನು ಆರಿಸುವ ಹಕ್ಕನ್ನು ನಮ್ಮ ದೇಶದಲ್ಲಿ ನೀಡಲಾಗಿದೆ. ಮತ ನೀಡುವ ಹಕ್ಕನ್ನು ಬಳಸಿಕೊಂಡು ದೇಶದ ಅಭಿವೃದ್ಧಿಗೆ ದುಡಿಯುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಉತ್ತಮ ಉದ್ದೇಶವನ್ನು ಪ್ರತಿಯೊಬ್ಬ ಅಭ್ಯರ್ಥಿ ಹೊಂದಿರಬೇಕು.
ದೇಶ ಅಭಿವೃದ್ಧಿ ಕಾಣಬೇಕು, ಅಭಿವೃದ್ಧಿ ಹೊಂದಿರುವ ರಾಷ್ಟ್ರದಲ್ಲಿ ನಮ್ಮ ರಾಷ್ಟ್ರವೂ ಒಂದಾಗಬೇಕು, ದೇಶದಲ್ಲಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡಬೇಕು, ದೇಶದ ಪ್ರಜೆಗಳಿಗೆ ತೊಂದರೆ ಉಂಟಾಗದಂತೆ ನಿರ್ಣಯ ಕೈಗೊಳ್ಳುವಂತಹ ನಾಯಕನ ಆಯ್ಕೆ ಮಾಡಬೇಕು ಎನ್ನುವಂತಹ ಸಂಗತಿಗಳನ್ನು ಮನದಲ್ಲಿ ಇಟ್ಟುಕೊಂಡು ರಾಷ್ಟ್ರದ ನಾಯಕನ ಆಯ್ಕೆ ಆಗಬೇಕು. ಆಗಲೇ ದೇಶದಲ್ಲಿ ಅಭಿವೃದ್ಧಿ ಉಂಟಾಗುವುದು.

ದೇಶದಲ್ಲಿ ಇರುವ ಎಲ್ಲಾ ವ್ಯಕ್ತಿಗಳ ಆಯ್ಕೆ, ಮಾನಸಿಕ ಚಿಂತನೆ, ಉದ್ದೇಶ, ನಿಲುವು ಎಲ್ಲವೂ ವಿಭಿನ್ನತೆಯಿಂದ ಕೂಡಿರುತ್ತದೆ. ಹಾಗಾಗಿ ರಾಷ್ಟ್ರ ನಾಯಕರ ಆಯ್ಕೆಗಳ ವಿಚಾರದಲ್ಲಿ ಭಿನ್ನತೆಗಳು ಇರುವುದು ಸಹಜವಾಗಿರುತ್ತದೆ. ಯಾರ ಆಯ್ಕೆಯಲ್ಲಿ ಬಹುಮತ ಇರುತ್ತದೆಯೋ ಅಂತಹ ವ್ಯಕ್ತಿಗಳು ಆಯ್ಕೆಯಾಗಿ ಬರುತ್ತಾರೆ. ಅದೇ ಪ್ರಜಾ ಪ್ರಭುತ್ವ ರಾಷ್ಟ್ರದ ನಿಯಮಗಳು.
ಮತ ನೀಡುವುದು ಅಥವಾ ಮತದಾನ ಮಾಡುವುದು ಎಂದರೆ ಅತ್ಯಂತ ಮಹತ್ತರವಾದ ಕರ್ತವ್ಯ ಹಾಗೂ ಹಕ್ಕು. ಇಂತಹ ಹಕ್ಕು ಹಾಗೂ ಕರ್ತವ್ಯದಲ್ಲಿ ಯಾವುದೇ ಲೋಪ ದೋಷಗಳು ಉಂಟಾಗಬಾರದು. ಹಾಗೊಮ್ಮೆ ನಮ್ಮ ಮತದಾನ ತಪ್ಪು ಆಯ್ಕೆಯಾಗಿದ್ದರೆ. ತಪ್ಪಾದ ಅಭ್ಯರ್ಥಿಯು ಆಯ್ಕೆ ಆಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಹಾಗಾಗಿ ಪ್ರತಿ ಒಂದೊಂದು ಮತವು ಅತ್ಯಂತ ಅಮೂಲ್ಯವಾದದ್ದು. ಈ ಹಿನ್ನೆಲೆಯಲ್ಲಿಯೇ ಬ್ರಷ್ಟಾಚಾರ ಹಾಗೂ ಆಮಿಷಗಳನ್ನು ಒಡ್ಡುವ ಮೂಲಕ ಜನರನ್ನು ತಪ್ಪು ದಾರಿಗೆ ಕೊಂಡೊಯ್ಯುವವರೇ ಹೆಚ್ಚಾಗಿದ್ದಾರೆ.
ಇಂತಹ ವಿಚಾರದಲ್ಲಿ ಹುಬ್ಬೇರಿಸುವಂತಹ ಕೆಲಸವನ್ನು ಉತ್ತರ ಪ್ರದೇಶದ ಯುವಕನೊಬ್ಬ ಮಾಡಿದ್ದಾನೆ. ಹೌದು, ಪವನ್ ಕುಮಾರ್ ಎನ್ನುವ 25 ವರ್ಷದ ಯುವಕನೊಬ್ಬ ತಪ್ಪಾದ ವ್ಯಕ್ತಿಗೆ ಮತ ನೀಡಿದ್ದೇನೆ ಎಂದು ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ನೀವು ನಿಮ್ಮ ಆಯ್ಕೆಯ ಅಭ್ಯರ್ಥಿಯೇ ಆರಿಸಿ ಬರಬೇಕು, ನಮ್ಮ ರಾಷ್ಟ್ರವನ್ನು ಆಳುವ ನಾಯಕನಾಗಬೇಕು ಎನ್ನುವ ಹಂಬಲ ಇರುತ್ತದೆ. ಆದರೆ ಅದೇ ಯಾವುದೋ ಒಂದು ಸಣ್ಣ ತಪ್ಪಿನಿಂದ ನಿಮ್ಮ ಮತ ಬೇರೆ ವ್ಯಕ್ತಿಗೆ ನೀವೇ ನೀಡಿದ್ದೀದ್ದರೆ ಏನು ಮಾಡುತ್ತಿದ್ದಿರಿ? ಅಂತಹ ಸಂದರ್ಭದಲ್ಲಿ ನಿಮ್ಮ ಮಾನಸಿಕ ಚಿಂತನೆಗಳು ಹೇಗಿರುತ್ತಿದ್ದವು? ಎನ್ನುವುದರ ಬಗ್ಗೆ ಒಮ್ಮೆ ಯೋಚಿಸಿ.
ಇದೇ ರೀತಿಯ ಸನ್ನಿವೇಶ ಪವನ್ ಕುಮಾರ್ ಎನ್ನುವ ಉತ್ತರ ಪ್ರದೇಶದ ವ್ಯಕ್ತಿಗೆ ಎದುರಾಗಿತ್ತು. ತನ್ನ ಯಾವುದೋ ಒಂದು ಸಣ್ಣ ತಪ್ಪಿನಿಂದಾಗಿ ತಾನು ಅಂದುಕೊಂಡ ವ್ಯಕ್ತಿಗೆ ಮತ ನೀಡುವುದರ ಬದಲಿಗೆ ವಿರೋಧ ಪಕ್ಷದ ಅಭ್ಯರ್ಥಿಗೆ ನೀಡಿದ್ದಾನೆ. ಇದರ ಹಿನ್ನೆಲೆಯಲ್ಲಿಯೇ ಅತ್ಯಂತ ಬೇಸರಕ್ಕೆ ಒಳಗಾಗಿ ತನ್ನ ತೋರು ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಇದರ ವೀಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಹೆಚ್ಚು ಜನರು ಇದನ್ನು ನೋಡುವುದರ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಈ ಸಂಗತಿ ಹಾಗೂ ವೀಡಿಯೋ ನೋಡಿದ ಬಳಿಕ ನಿಮ್ಮ ಅಭಿಪ್ರಾಯ ಏನು ಎನ್ನುವುದರ ಬಗ್ಗೆ ಚಿಂತನೆ ನಡೆಸಿ, ಅಭಿಪ್ರಾಯ ತಿಳಿಸಿ.



Click it and Unblock the Notifications











