Just In
- 1 hr ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 2 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 2 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 2 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...
ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.
ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.
ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.