Latest Updates
-
ರೆಪೋ ದರ ಸ್ಥಿರ: ಸಾಲಗಾರರೇ ಎಚ್ಚರ, ನಿಮ್ಮ EMI ಹೊರೆಯನ್ನು ಕಡಿಮೆ ಮಾಡಲು ಈ ಸ್ಮಾರ್ಟ್ ಟಿಪ್ಸ್ ಫಾಲೋ ಮಾಡಿ -
ಬೆಂಗಳೂರಿನಲ್ಲಿ 'ಫ್ರೀಡಂ ಫ್ರಮ್ ವೇಸ್ಟ್': ದಂಡದಿಂದ ಪಾರಾಗಲು ಆಗಸ್ಟ್ 15ರೊಳಗೆ ಈ ಕೆಲಸ ಮಾಡಿ! -
8,000mAh ಬ್ಯಾಟರಿಯ ರೆಡ್ಮಿ ನೋಟ್ 17 ಲಾಂಚ್: ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ಪ್ರಮುಖ ವಿಷಯಗಳಿವು! -
ಬಾಣಂತಿಯರಿಗೆ ಬೆಂಬಲ: ತಾಯಿಯ ಆರೋಗ್ಯಕ್ಕೆ ತಂದೆಯ ಸಣ್ಣ ಸಹಾಯ ಎಷ್ಟು ಮುಖ್ಯ? -
8,000mAh ಬ್ಯಾಟರಿಯ POCO M8 Power ಲಾಂಚ್: ಈ ಫೋನ್ ಖರೀದಿಸುವ ಮುನ್ನ ನೀವು ತಿಳಿಯಲೇಬೇಕಾದ ವಿಷಯಗಳಿವು! -
ರಾಷ್ಟ್ರೀಯ ಮೂಳೆ ಮತ್ತು ಕೀಲು ದಿನ: ಬೆನ್ನು ಮತ್ತು ಮೊಣಕಾಲು ನೋವಿಗೆ ಈ 10 ನಿಮಿಷದ ವ್ಯಾಯಾಮವೇ ಮದ್ದು! -
ಫ್ರೆಂಡ್ಶಿಪ್ ಡೇ ವಿಶ್ ಮಾಡೋಕೆ ಮರೆತಿದ್ದೀರಾ? ನಿಮ್ಮ ಸ್ನೇಹಿತರ ಮನ ಗೆಲ್ಲಲು ಇಲ್ಲಿದೆ ಸಿಂಪಲ್ ಟಿಪ್ಸ್! -
ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್: 999 ರೂ. ಒಳಗಿನ ಬೆಸ್ಟ್ ಡೀಲ್ಗಳು ಮತ್ತು ಶಾಪಿಂಗ್ ಟಿಪ್ಸ್! -
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು!
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...

ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.

ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.



Click it and Unblock the Notifications