Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...

ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.

ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.



Click it and Unblock the Notifications