Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...

ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.

ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.



Click it and Unblock the Notifications