Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
28ರ ಹರೆಯದ ಕಾಮುಕನಿಂದಾಗಿ ಮೂಕ ಪ್ರಾಣಿ ಆಡು ಬಲಿ ಆಯಿತು
ಕಾಮಾತುರಂ ನಾ ಲಜ್ಜಂ ನಾ ಭಯಂ ಎನ್ನುವ ಮಾತಿದೆ. ಆದರೆ ಇಲ್ಲೊಬ್ಬ ಮಾಡಿರುವುದು ಮಾತ್ರ ಮನುಷ್ಯ ಸಮಾಜವೇ ತಲೆ ತಗ್ಗಿಸುವಂತಹ ಕೆಲಸ. ಈ ಕಾಮಾಂಧನು ತನ್ನ ತೃಷೆಯನ್ನು ಆಡಿನೊಂದಿಗೆ ತೀರಿಸಿ ಕೊಂಡಿದ್ದಾನೆ. ಬಿಹಾರದ ಪಟ್ನಾದಲ್ಲಿ ನಡೆದಿರುವಂತಹ ಘಟನೆಯಿದು.
28ರ ಹರೆಯದ ವ್ಯಕ್ತಿಯೊಬ್ಬ ಆಡಿನೊಂಡಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದರ ಬಗ್ಗೆ ಪಟ್ನಾ ಜಿಲ್ಲೆಯ ಪರ್ಸಾ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಕಳೆದ ವಾರ ನಡೆದಿದ್ದು, ಬಂಧಿತ ವ್ಯಕ್ತಿಯನ್ನು ಮಧೇಪುರ ಜಿಲ್ಲೆಯ ಮೊಹಮ್ಮದ್ ಸಿರ್ಮನ್ ಎಂದು ಗುರುತಿಸಲಾಗಿದೆ...

ಕಾಮುಕನಿಂದಾಗಿ ಆಡು ಬಲಿಯಾಗಿದೆ!
ಹೌದು ಕಾಮುಕನಿಂದಾಗಿ ಆಡು ಬಲಿಯಾಗಿದೆ. ಈ ಘಟನೆ ನೋಡಿದ ಸ್ಥಳೀಯರು ಮಕ್ಕಳು ಆಡಿನ ಯಜಮಾನರಾದ ಮಹಾಜಿನಿ ದೇವಿ ಅವರಿಗೆ ವಿಚಾರ ತಿಳಿಸಿದ ಬಳಿಕ ದೂರು ದಾಖಲಿಸಲಾಗಿದೆ. ಆಕೆ ಮೊದಲು ಆರೋಪಿಯನ್ನು ಹಿಡಿದು ತಂದಿದ್ದಾರೆ ಮತ್ತು ಇದರ ಬಳಿಕ ಗ್ರಾಮಸ್ಥರೆಲ್ಲರೂ ಸೇರಿಕೊಂಡು ಸರಿಯಾದ ಹೊಡೆದು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಎಸ್ ಎಚ್ ಒ ಜಯ ಪ್ರಕಾಶ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ
ಮಹಾಜಿನಿ ದೇವಿ ಅವರು ನೀಡಿರುವಂತಹ ದೂರಿನಲ್ಲಿ ಸಿರ್ಮನ್ ಆಡಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರಿಂದ ಆಡು ಸಾವನ್ನಪ್ಪಿದೆ. ಗ್ರಾಮದ ಮಕ್ಕಳು ಈ ಘಟನೆಯನ್ನು ಕಣ್ಣಾರೆ ನೊಡಿದ್ದಾರೆ ಎಂದು ಆಕೆ ಹೇಳಿದ್ದಾಗಿ ಎಸ್ ಎಚ್ ಒ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ
ಆ ವ್ಯಕ್ತಿಯ ವಿರುದ್ಧ ಭಾರತೀಯ ದಂಡಸಂಹಿತೆ 429, 377ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿಜವಾಗಿಯೂ ಆ ವ್ಯಕ್ತಿಯು ಈ ಕೃತ್ಯ ಎಸಗಿದ್ದಾನೆಯಾ ಅಥವಾ ಬೇರೆ ಯಾವುದೇ ಕಾರಣದಿಂದ ಆಡು ಸತ್ತಿದೆಯಾ ಎಂದು ತನಿಖೆ ನಡೆಸಲಾಗುತ್ತಿದೆ. ಅದಾಗ್ಯೂ, ಆರೋಪಿಯು ಆರೋಪಗಳನ್ನು ತಳ್ಳಿಹಾಕಿದ್ದಾನೆ.

ಆಡಿನ ದೇಹವನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಶವಪರೀಕ್ಷೆಗಾಗಿ ಆಡಿನ ದೇಹವನ್ನು ಶೇಖ್ ಪುರದಲ್ಲಿ ಇರುವಂತಹ ಪಶು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಿರ್ಮನ್ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಆತನ ಕುಟುಂಬ ಮತ್ತು ವೈದ್ಯಕೀಯ ಇತಿಹಾಸದ ಬಗ್ಗೆ ನಾವು ಮಾಹಿತಿ ಕಲೆ ಹಾಕುತ್ತಲಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ತನಗೆ ಮದುವೆಯಾಗಿದೆ ಮತ್ತು ತಾನು ಬೇರೆ ಕೂಲಿ ಕಾರ್ಮಿಕರ ಜತೆಗೆ ಪುನ್ ಪುನ್ ನಲ್ಲಿ ವಾಸವಾಗಿದ್ದೇನೆ ಎಂದು ಸಿರ್ಮನ್ ಹೇಳಿರುವುದಾಗಿ ಎಸ್ ಎಚ್ ಒ ತಿಳಿಸಿದ್ದಾರೆ.



Click it and Unblock the Notifications
