For Quick Alerts
ALLOW NOTIFICATIONS  
For Daily Alerts

11-6-2019-ಮಂಗಳವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯ�
|

ಮಂಗಳವಾರದ ದಿನ ಕಾಳಿ ಎನ್ನುವುದರ ಅರ್ಥ "ಕಪ್ಪಗಿರುವುದು". ಶಿವನನ್ನು ಕಾಲ ಎನ್ನುವುದರಿಂದ -ಅನಂತ ಕಾಲ, ಕಾಳಿ ಆತನ ಪತ್ನಿ, "ಸಮಯ" ಅಥವಾ "ಸಾವು" ಎನ್ನುವ ಅರ್ಥಗಳೂ ಇವೆ. (ಕಾಲವು ಬಂದಂತೆ). ಹೀಗೆ ಕಾಳಿಯು ಕಾಲ ಮತ್ತು ಪರಿವರ್ತನೆಯ ದೇವತೆ. ಹೀಗಿದ್ದರೂ ಕೆಲವೊಮ್ಮೆ ಕಪ್ಪಾಗಿ ಮತ್ತು ರೌದ್ರಾಕಾರವಾಗಿ ಕಾಣಿಸಿಕೊಳ್ಳುವಳು.

horoscope

ಅವಳ ಮೊತ್ತಮೊದಲ ಅವತಾರ ಸರ್ವನಾಶಕ ಶಕ್ತಿಸ್ವರೂಪಿಣಿಯದು, ಇನ್ನೂ ಕೆಲವು ಪ್ರಭಾವವನ್ನು ಹೊಂದಿದೆ. ವಿವಿಧ ಶಾಕ್ತ ಹಿಂದೂ ವಿಶ್ವಶಾಸ್ತ್ರಗಳಲ್ಲಿ, ಅದೇ ರೀತಿ ಶಾಕ್ತ ತಾಂತ್ರಿಕ ನಂಬಿಕೆಗಳಲ್ಲಿ ಆಕೆಯನ್ನೇ ಪರಮಸತ್ಯ ಅಥವಾ ಬ್ರಹ್ಮನ್ ಎಂದು ಪೂಜಿಸುತ್ತಾರೆ. ಅವಳನ್ನು ಭವತಾರಿಣಿ (ಅಕ್ಷರಶಃ "ಭವಬಂಧನದಿಂದ ಪಾರುಮಾಡುವವಳು") ಎಂದು ಪೂಜಿಸುತ್ತಾರೆ. ಇತ್ತೀಚಿನ ಭಕ್ತಿ ಪಂಥದವರು ಕಾಳಿಯನ್ನು ಮಂಗಳವನ್ನುಂಟುವಾಡುವ ಮಹಾಮಾತೆ ಮಹಾದೇವಿ ಎಂದು ಪರಿಗಣಿಸಿದ್ದಾರೆ. ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ (11 ಜೂನ್ 2019)

ಮೇಷ (11 ಜೂನ್ 2019)

ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷೆಗಿಂತ ಕಡಿಮೆ ಲಾಭ ಬರುವುದು. ಈ ಬಗ್ಗೆ ಹೆಚ್ಚು ಚಿಂತಿಸುವುದು ಬೇಡ. ಒಂದು ಬೊಗಸೆ ಅವರೆಕಾಳನ್ನು ದಾನ ಮಾಡಿ. ಗುರು ಮಂತ್ರ ಪಠಿಸಿ.ಸಾದಾ, ಸೀದಾ ವ್ಯಕ್ತಿಯಾಗಿರುವ ನಿಮ್ಮನ್ನು ಇತರರು ಮೋಸ ಮಾಡುವ ಇಲ್ಲವೆ ಯಾಮಾರಿಸುವ ಯೋಜನೆಯಲ್ಲಿರುವರು. ಹಾಗಾಗಿ ಎಲ್ಲರೆದುರು ನಿಮ್ಮತನ ಪ್ರದರ್ಶಿಸಬೇಡಿ. ಇದರಿಂದ ತೊಂದರೆಗಳಿಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ನಿಮ್ಮ ಕುಟುಂಬದ ಹಳೆಯ ಸ್ನೇಹಿತರ ಹೊಸ ಯೋಜನೆಗಳು ಕಾರ್ಯರೂಪಕ್ಕೆ ಬರುವವು. ಆದರೆ ಹಣಕಾಸಿನ ವಿಚಾರವನ್ನು ತೂಗಿಸಲು ಅನ್ಯರ ಬಳಿ ಸಾಲ ಮಾಡಬೇಕಾಗುವುದು. ಮಾತಿನಲ್ಲಿ ನಯ ವಿನಯ ರೂಢಿಸಿಕೊಳ್ಳಿ. ಗುರುವಿನ ಶುಭ ದೃಷ್ಟಿಯಿದೆ. ಕೈಯಲ್ಲಿ ಯಥೇಚ್ಛವಾಗಿ ಹಣ ಹರಿದಾಡುತ್ತಿದೆ ಎಂದು ಮತ್ತೆ ಹಳೆಯ ದಾರಿ ಹಿಡಿಯಬೇಡಿ. ಉತ್ತಮ ಸ್ನೇಹಿತರ ಸಹವಾಸ ಮಾಡಿ. ಕೆಟ್ಟ ಸ್ನೇಹಿತರು ನಿಮ್ಮಲ್ಲಿರುವ ಹಣ ಖರ್ಚು ಮಾಡಲು ಚಿಂತಿಸುತ್ತಿರುವರು.9845743807 ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎನ್ನುವಂತೆ ಭಗವಂತನ ಒಲುಮೆ ಆಗುವವರೆಗೂ ಸುಮ್ಮನಿರುವುದು ಒಳ್ಳೆಯದು. ನಿಮ್ಮ ಘನತೆ, ಗೌರವವನ್ನು ರಕ್ಷಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಮಾತಿನಲ್ಲಿ ಸಣ್ಣತನ ತೋರಿ ಸಣ್ಣವರಾಗಬೇಡಿ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡುವಿರಿ. ನಿಮ್ಮ ವಿರೋಧಿಗಳು ಸಹ ನಿಮ್ಮ ಸ್ನೇಹ ಸಂಪಾದಿಸಲು ಹಾತೊರೆಯುವರು. ಈ ಹಿಂದೆ ದೂರವಾಗಿದ್ದ ಬಂಧುಗಳು ನಿಮ್ಮ ಸಖ್ಯ ಬೆಳೆಸಲು ಮುಂದೆ ಬರುವರು.9845743807 ಅದೃಷ್ಟ ಸಂಖ್ಯೆ:7

ಕಟಕ

ಕಟಕ

ದಿಢೀರ್‌ ಶ್ರೀಮಂತರಾಗಬೇಕೆಂಬ ಯೋಜನೆಗಳನ್ನು ಕೈಬಿಡಿ. ಇದೇ ತೆರನಾದ ಯೋಜನೆಗಳಿಂದ ಈಗಾಗಲೇ ಸಾಕಷ್ಟು ಹಣ ಕಳೆದುಕೊಂಡಿರುವಿರಿ. ನಿಮ್ಮ ಇತಿಮಿತಿಗಳನ್ನು ಅರಿತು ನಡೆಯುವುದು ಒಳ್ಳೆಯದು. ಹಣವನ್ನು ನೀರಿನಂತೆ ಖರ್ಚು ಮಾಡದಿರಿ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹಳೆಯ ಆದರ್ಶಗಳು ನಿಜಜೀವನಕ್ಕೆ ಉಪಯೋಗಕ್ಕೆ ಬರುವುದಿಲ್ಲ. ಕಾಲಕ್ಕೆ ತಕ್ಕಂತೆ ಕೊಡೆ ಹಿಡಿಯಬೇಕು ಎಂಬಂತೆ ವ್ಯಾಪಾರ ವ್ಯವಹಾರದಲ್ಲಿ ಕೆಲವೊಮ್ಮೆ ಮೋಸ ಮಾಡುವ ಪ್ರಸಂಗಗಳು ಎದುರಾಗುತ್ತವೆ.9845743807 ಅದೃಷ್ಟ ಸಂಖ್ಯೆ:5

ಸಿಂಹ

ಸಿಂಹ

ಪಾಲುಗಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯಗಳು ಎದುರಾಗುವವು. ಇದರಿಂದ ವ್ಯವಹಾರದಲ್ಲಿ ನಷ್ಟ ಉಂಟಾಗುವುದು. ನಿಮಗೆ ಒಪ್ಪಿಗೆ ಇಲ್ಲದಿದ್ದಲ್ಲಿ ಪಾಲುಗಾರಿಕೆ ವ್ಯವಹಾರದಿಂದ ಹೊರಬನ್ನಿ. ವಿವಿಧ ರೀತಿಯ ಕೆಲಸಗಳು ನಿಮ್ಮ ಯೋಜನಾ ಸ್ವರೂಪದಲ್ಲಿ ಸೂಕ್ತ ಎನಿಸುವವು. ಗುರು ಲಾಭ ಸ್ಥಾನದಲ್ಲಿ ಸಂಚರಿಸುವ ಮೂಲಕ ಹೇರಳ ಧನಾಗಮನವನ್ನೇ ನೀಡುವನು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:4

ಕನ್ಯಾ

ಕನ್ಯಾ

ಮನೆಯಲ್ಲಿ ಶಾಂತಿ ನೆಲೆಸುವುದು. ಕಚೇರಿಯ ಕೆಲಸದಲ್ಲಿ ಮೇಲಧಿಕಾರಿಗಳು ನಿಮ್ಮ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವರು. ಹಣಕಾಸಿನ ನೆರವು ದೊರೆಯುವುದು. ಸಿನಿಮಾ ಹಂಚಿಕೆದಾರರು, ನಿರ್ಮಾಪಕರು, ಫೈನಾನ್ಸಿಯರ್‌ಗಳು ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಯಾರೋ ಮಾಡಿದ ತಪ್ಪಿಗೆ ಮತ್ತ್ಯಾರೋ ಶಿಕ್ಷೆಯನ್ನು ಅನುಭವಿಸುವಂತೆ ಆಗುತ್ತದೆ. ವ್ಯವಹಾರ ಪಾರದರ್ಶಕವಾಗಿರಲಿ.9845743807 ಅದೃಷ್ಟ ಸಂಖ್ಯೆ:6

ತುಲಾ

ತುಲಾ

ಎಷ್ಟೇ ಹಣ ಇದ್ದರೂ ಸಾಲದು ಎಂಬ ಭಾವನೆ ಬರಬಹುದು. ಧನಕಾರಕ ಗುರು ಅಷ್ಟಮ ಸ್ಥಾನದಲ್ಲಿದ್ದು, ಹಣ ನೀರಿನಂತೆ ಖರ್ಚಾಗುವುದು. ಆರೋಗ್ಯದ ಸಲುವಾಗಿ ಆಸ್ಪತ್ರೆ ಖರ್ಚು ಹೆಚ್ಚುವುದು. ಗುರು ಸ್ತೋತ್ರ ಪಠಿಸಿ.ಗೆಳೆಯರನ್ನು ಪ್ರೀತಿಯಿಂದ ಕಾಣಬೇಕು. ಸ್ವಂತ ಮಕ್ಕಳನ್ನು ಸಹ ಸ್ನೇಹಿತರಂತೆ ಕಾಣಬೇಕು. ಅವರ ತಪ್ಪುಗಳನ್ನು ಕ್ಷ ಮಿಸುವ ಔದಾರ‍್ಯ ಇಟ್ಟುಕೊಂಡರೆ ಬಾಂಧವ್ಯ ಗಟ್ಟಿಗೊಳ್ಳುವುದು. ಅವರನ್ನು ನಗು ನಗುತ್ತಾ ತಿದ್ದುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:3

ವೃಶ್ಚಿಕ

ವೃಶ್ಚಿಕ

ಹಮ್ಮಿಕೊಂಡಿರುವ ಕೆಲಸಗಳಲ್ಲಿ ಅಡಚಣೆಗಳು ಬಾರದಿರಲಿ ಎಂದು ವಿಘ್ನನಾಶಕ ಗಣಪತಿಯನ್ನು ಪ್ರಾರ್ಥಿಸಿ. ಇದರಿಂದ ಅನುಕೂಲವಾಗುವುದು. ಸಂಗಾತಿಯ ಸಂಗಡ ಮನಸ್ತಾಪ ಬೇಡ.ವಿವಿಧ ಮೂಲಗಳಿಂದ ಹಣ ಬರುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ಆತುರ ಪ್ರವೃತ್ತಿಯಿಂದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಸಾವಧಾನದಿಂದ ಹೆಜ್ಜೆಯಿಟ್ಟರೆ ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:9

ಧನುಸ್ಸು

ಧನುಸ್ಸು

ಯಾವ ಹುತ್ತದಲ್ಲಿ ಯಾವ ಹಾವೋ ಎಂಬಂತೆ ನಿಮ್ಮ ಸಮೀಪಕ್ಕೆ ಬರುವ ವ್ಯಕ್ತಿಗಳ ಗುಣಾವಗುಣಗಳನ್ನು ತಿಳಿಯಲು ಅಸಮರ್ಥರಾಗುವಿರಿ. ಯಾರೊಂದಿಗೂ ವಿರೋಧ ಮಾಡಿಕೊಳ್ಳದೆ ಚಾಣಾಕ್ಷ ತನದಿಂದ ಅವರೊಡನೆವ್ಯವಹರಿಸಿದರೆಒಳಿತಾಗುವುದು.ಅವಕಾಶವಾದಿಗಳು ನಿಮ್ಮ ಸುತ್ತಲೇ ಗಿರಕಿ ಹೊಡೆಯಬಹುದು. ವ್ಯಾವಹಾರಿಕ ಜಾಣ್ಮೆ ಪ್ರದರ್ಶಿಸದಿದ್ದರೆ ನಿಮಗೆ ದೊಡ್ಡ ಪ್ರಮಾಣದ ಹಾನಿ ಆಗುವುದು. ಹಾವು ಹೊಡೆದು ಹದ್ದಿಗೆ ಹಾಕುವಂತೆ ನಿಮ್ಮ ಶ್ರಮದ ಫಲ ಪರರ ಪಾಲಾಗುವುದು.9845743807 ಅದೃಷ್ಟ ಸಂಖ್ಯೆ:8

ಮಕರ

ಮಕರ

ಬಂಧುಗಳ ಒಳ ಜಗಳಗಳು ನಿಮ್ಮನ್ನು ಹೈರಾಣ ಮಾಡುವವು. ಯಾರೊಬ್ಬರ ಪರವಾಗಿ ನಿಂತರೂ ಮತ್ತೊಬ್ಬರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಬಹು ವಿವೇಚನೆಯಿಂದ ಪರಿಸ್ಥಿತಿ ನಿಭಾಯಿಸುವಿರಿ. ಇದಕ್ಕೆ ಗುರುವಿನ ಬೆಂಬಲ ಪಡೆಯಿರಿ.ವೃಥಾ ಮನೋವ್ಯಾಕುಲ, ಅಂಜಿಕೆ, ಅಭದ್ರತೆಗಳು ಬೇಡ. ದುರ್ಗಾದೇವಿಯನ್ನು ಪ್ರಾರ್ಥಿಸಿ. ಗುರುವಿನ ಶುಭ ಆಶೀರ್ವಾದದಿಂದ ಒಳಿತಾಗುವುದು. ಆಹಾರ ದಾನ ಮಾಡಿ. ಅಗತ್ಯಕ್ಕೆ ತಕ್ಕಷ್ಟು ಹಣ ವಿನಿಯೋಗಿಸಿ.9845743807 ಅದೃಷ್ಟ ಸಂಖ್ಯೆ:5

ಕುಂಭ

ಕುಂಭ

ಕೆಲಸಗಳು ಮಂದಗತಿಯಲ್ಲಿ ಸಾಗುವವು. ಹಣಕಾಸಿನ ಮುಗ್ಗಟ್ಟು ನಿಮ್ಮ ಮನೋಧೈರ್ಯವನ್ನು ಕುಗ್ಗಿಸುವುದು. ಶಿವ ಪಂಚಾಕ್ಷ ರಿ ಮಂತ್ರ ಜಪಿಸಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ಪ್ರತಿಯೊಬ್ಬರ ಮನೆಯ ದೋಸೆಯೂ ತೂತೇ. ಆದರೆ ನಿಮ್ಮ ಮನೆಯ ಕಾವಲಿಯೇ ತೂತಾಗಿರುವುದರಿಂದ ಅನ್ಯರ ವಿಚಾರಧಾರೆಗಳ ಕುರಿತು ಟೀಕೆ ಮಾಡಬೇಡಿ. ಮಾಡಿದರೆ ಅಪಹಾಸ್ಯಕ್ಕೆ ಗುರಿಯಾಗುವಿರಿ.9845743807 ಅದೃಷ್ಟ ಸಂಖ್ಯೆ:2

ಮೀನ

ಮೀನ

ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಎಚ್ಚರವಿರಲಿ. ಶಾಲಾ ಕಾಲೇಜುಗಳಿಂದ ಬರಬೇಕಾಗಿದ್ದ ಗೌರವ ಧನ ಸದ್ಯದಲ್ಲಿಯೇ ನಿಮ್ಮ ಕೈ ಸೇರುವುದು. ವಿವಾಹಕ್ಕೆ ಇನ್ನೂ ಕೆಲಕಾಲ ಕಾಯಬೇಕಾಗುವುದು.ನೀವು ಆದರಿಸುವ ಜನರಿಂದಲೇ ವಿಶ್ವಾಸದ್ರೋಹ ಆಗುವ ಸಾಧ್ಯತೆ ಇದೆ. ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬುದನ್ನು ತಿಳಿಯಿರಿ. ಗುರು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ. ಇದರಿಂದ ನಿಮ್ಮ ಕಾರ್ಯಗಳು ಕೈಗೂಡುವವು.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

English summary

your daily horoscope 11 June 2019

Know what astrology and the planets have in store for you today. Choose your zodiac sign and read the details..
Story first published: Monday, June 10, 2019, 16:12 [IST]
X
Desktop Bottom Promotion