For Quick Alerts
ALLOW NOTIFICATIONS  
For Daily Alerts

12-1-2019: ಶನಿವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು
|

ಆಂಜನೇಯನು ಅಂಜನಾದೇವಿಯ ಪುತ್ರನು. ವಾಯುದೇವನಿಂದ ಹುಟ್ಟಿದವನು. ಆತನು ಹುಟ್ಟುತ್ತಿದ್ದ ಹಾಗೆಯೇ ಸೂರ್ಯನನ್ನು ನೋಡಿ ಹಣ್ಣೆಂದು ಭ್ರಮಿಸಿ ಹಿಡಿಯುವುದಕ್ಕೆಂದು ಹಾರಿದನು. ಇವನನ್ನು ನಿಗ್ರಹಿಸಬೇಕೆಂದು ಇಂದ್ರನು ವಜ್ರಾಯುಧವನ್ನು ಪ್ರಯೋಗಿಸಿದ. ಅದರಿಂದ ಹನುಮಂತ ಮೂರ್ಛೆಹೋದ. ಇದಕ್ಕೆ ಕೋಪಗೊಂಡ ವಾಯು ಚಲಿಸದೆ ನಿಂತ. ಆಗ ಲೋಕದ ಚರಾಚರ ಪ್ರಾಣಿಗಳು ಮರಣ ಬಂದಂತಾಗಿ ತತ್ತರಿಸಿದವು.

horoscope

ಆಗ ಬ್ರಹ್ಮನು ವಾಯುವನ್ನು ಸಮಾಧಾನಪಡಿಸಿದ. ಆ ಸಮಯದಲ್ಲಿ ದೇವಾನುದೇವತೆಗಳು ಆಂಜನೇಯನಿಗೆ ವರದಾನ ಮಾಡಿದರು. ಜೊತೆಗೆ ತನ್ನ ಬಲ, ವೀರ್ಯ, ಸಾಮರ್ಥ್ಯಗಳಿಂದ ಆಂಜನೇಯ ಗರುಡನಿಗೂ, ವಾಯುವಿಗೂ ಸಮಾನನಾದನು. ಯೋಗಶಾಸ್ತ್ರದ ಪರಮ ರಹಸ್ಯವೆಲ್ಲವನ್ನೂ ಅರಿತನು. ಅವನ ಸಾಮರ್ಥ್ಯ ಕೇವಲ ದೇಹದ್ದು ಮಾತ್ರವಲ್ಲ; ಬುದ್ಧಿಯದು, ಮನಸ್ಸಿನದು ಕೂಡ.ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ಶಾಸ್ತ್ರೀ. 9845743807

ಮೇಷ(12 ಜನವರಿ 2019)

ಮೇಷ(12 ಜನವರಿ 2019)

ನಿಮ್ಮ ಶಕ್ತಿಯ ವಿಚಾರದಲ್ಲಿ ನಂಬಿಕೆ ಕಳೆದುಕೊಳ್ಳಬೇಡಿ. ನಿಮ್ಮ ಸರಳ ಜೀವನದಿಂದ ನೀವು ಪರರಿಗೆ ಮಾರ್ಗದರ್ಶಕರಾಗುವಿರಿ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು. ಮಾತಾ ದುರ್ಗಾದೇವಿಯ ಪ್ರಾರ್ಥನೆಯಿಂದ ಸಕಲ ದುರಿತಗಳು ನಾಶವಾಗುವವು. ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ. ಕೆಮ್ಮು, ಕಫದಂತಹ ತೊಂದರೆಗಳು ಕಾಡುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. 9845743807 ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ಹಣಕಾಸಿನ ವೃದ್ಧಿಗೆ ಒಂಟಿ ಹೋರಾಟ ಬೇಡ. ಎಲ್ಲಾ ವಿಚಾರದಲ್ಲೂ ಬಾಳಸಂಗಾತಿಯ ಸಹಕಾರ ಪಡೆದು ಮುಂದುವರೆಯಿರಿ. ಕೆಲವು ವಿಷಯಗಳಲ್ಲಿ ಸಂಗಾತಿಯ ತೀರ್ಮಾನವೇ ಅಂತ್ಯವಾಗುವುದು.ನಿಮ್ಮ ಪ್ರತಿಭೆಯನ್ನು ಸಕಾರಾತ್ಮಕವಾಗಿ ನಿರೂಪಿಸಿ. ಯಶ ಗಳಿಸಲು ಸೂಕ್ತ ಸಮಯವಾಗಿದೆ. ಆಕಸ್ಮಿಕವಾಗಿ ಹಣಕಾಸು ಬರುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. 9845743807 ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಆಪ್ತ ಗೆಳೆಯನ ಭೇಟಿ ಸಾಧ್ಯತೆ ಇದೆ. ಆತನ ಕರುಣಾಜನಕ ಕಥೆ ಕೇಳಿ ಮನಸ್ಸು ಮರುಗುವುದು. ಆತನಿಗೆ ನಿಮ್ಮಿಂದ ಸಹಾಯ ಬೇಕಾಗಿರುತ್ತದೆ. ನಿಸ್ವಾರ್ಥದಿಂದ ಸಹಾಯ ಹಸ್ತ ನೀಡಿ. ಮುಂದೆ ಆತನಿಂದ ಅನುಕೂಲವಾಗುವುದು.ವ್ಯಾಜ್ಯದ ವಿಚಾರದಲ್ಲಿ ಸೋತು ಗೆಲ್ಲುವ ಯೋಚನೆ ಇರಲಿ. ಮುಂದಿನ ದಾರಿ ಯಶಸ್ಸಿಗೆ ಮುಖ ಮಾಡಲಿದೆ. ಮುಷ್ಠಿ ಕಾಳು ಚೆಲ್ಲಿ ಮೂಟೆ ಕಾಳು ಬಾಚುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸನ್ನು ಹೊಂದಲು ಹಣವನ್ನು ಚೆಲ್ಲುವುದು ಅನಿವಾರ್ಯವಾಗಲಿದೆ.9845743807 ಅದೃಷ್ಟ ಸಂಖ್ಯೆ:2

ಕಟಕ

ಕಟಕ

ವ್ಯಾಪಾರ, ವ್ಯವಹಾರದಲ್ಲಿ ಮುಂದಾಲೋಚನೆಯಿಲ್ಲದೆ ಹಣ ಹೂಡಿದ ಪರಿಣಾಮ ನಷ್ಟ ಎದುರಿಸುವಿರಿ. ನಷ್ಟ ಸರಿದೂಗಿಸಲು ಸಾಲ ಮಾಡಬೇಕಾದ ಪ್ರಸಂಗ ಎದುರಾಗಲಿದೆ. ಆದರೆ ಈಗಾಗಲೇ ಮಾಡಿರುವ ಸಾಲವೇ ಬಹಳಷ್ಟು ಇರುವಾಗ ನಿಮಗೆ ಬೇರೆಯವರು ಸಾಲ ನೀಡಲಾರರು. ಮಹತ್ತರ ಕಾರ್ಯಗಳನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಹಣ ಉಳಿತಾಯ ಮಾಡಲಾಗುವುದಿಲ್ಲ. ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿ ಬನ್ನಿ. ಮನಸ್ಸಿಗೆ ಶಾಂತಿ ದೊರಕುವುದು. ಮೌನದಿಂದ ಕಾರ್ಯ ನಿರ್ವಹಿಸಿ.9845743807

ಅದೃಷ್ಟ ಸಂಖ್ಯೆ:4

ಸಿಂಹ

ಸಿಂಹ

ಪರರ ಜೀವನಕ್ಕೆ ನಿಮ್ಮ ಜೀವನವನ್ನು ಹೋಲಿಸಿಕೊಂಡು ಖಿನ್ನರಾಗದಿರಿ. ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಒಂದು ವ್ಯಕ್ತಿತ್ವ ನೀಡಿರುವನು. ಆ ಪ್ರತ್ಯೇಕತೆಯ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುವಿರಿ. ಹಣಕಾಸಿನ ಸ್ಥಿತಿ ಸಾಧಾರಣ ವಾಗಿರುತ್ತದೆ.ಶಕ್ತಿದೇವಿಯ ಆರಾಧನೆಗೆ ಒಳ್ಳೆಯ ದಿನ. ಹಾಗಾಗಿ ಆ ಶಕ್ತಿದೇವಿಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.9845743807

ಅದೃಷ್ಟ ಸಂಖ್ಯೆ:6

ಕನ್ಯಾ

ಕನ್ಯಾ

ಹಣಕಾಸಿನ ಮುಗ್ಗಟ್ಟು ಅನುಭವಿಸುವಿರಿ. ಆದರೆ ಸಕಾಲದಲ್ಲಿ ನೆಂಟರ ಅಥವಾ ಸ್ನೇಹಿತರಿಂದ ಸಹಕಾರ ದೊರೆಯುವುದು. ಹಾಗಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ. ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧರಿಸುತ್ತಾರೆ ಎಂದು ತಿಳಿದು ಕಾರ್ಯದಿಂದ ಹಿಂದೆ ಸರಿಯಬೇಡಿ. ಮುನ್ನುಗ್ಗಿ ಪ್ರವೃತ್ತರಾದಲ್ಲಿ ಇಚ್ಛಿತ ಗುರಿ ತಲುಪುವಿರಿ.9845743807 ಅದೃಷ್ಟ ಸಂಖ್ಯೆ:2

ತುಲಾ

ತುಲಾ

ಆತ್ಮವಿಶ್ವಾಸವೇ ನಿಮಗೆ ಶ್ರೀರಕ್ಷೆ. ಅನ್ಯರ ಹಸ್ತಕ್ಷೇಪವನ್ನು ಉಪಾಯವಾಗಿ ನಿರಾಕರಿಸುವಿರಿ. ಗುರುವಿನ ಬಲ ಇಲ್ಲದಿದ್ದರೂ ನೀವು ಈ ಹಿಂದೆ ಮಾಡಿದ ಪುಣ್ಯದ ಕಾರ್ಯವು ನಿಮಗೆ ಸಹಾಯ ಮಾಡುವುದು.ವಿರೋಧಿಗಳು ನಿಮ್ಮ ಬಗ್ಗೆ ಚಾಡಿ ಮಾತುಗಳನ್ನು ಸೃಷ್ಟಿಸಿ ಗೊಂದಲ ತರುವ ಸಾಧ್ಯತೆ ಇದೆ. ಈ ಬಗ್ಗೆ ಎಚ್ಚರವಿರಲಿ. ಬಹಳ ಆತ್ಮೀಯ ವ್ಯಕ್ತಿ ಎಂದು ಎಲ್ಲವನ್ನೂ ಅವರ ಮುಂದೆ ಹೇಳದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:5

ವೃಶ್ಚಿಕ

ವೃಶ್ಚಿಕ

ಹೊಯ್ದಾಟವನ್ನು ನಿಯಂತ್ರಿಸಿ ತರ್ಕಬದ್ಧವಾದ ವಿಚಾರಗಳಿಂದ ಜ್ಞಾನಿಗಳೊಡನೆ ಮಾತುಕತೆ ನಡೆಸಿ. ನಿಮ್ಮ ಮಾನಸಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಹಣಕಾಸಿನ ಪರಿಸ್ಥಿತಿ ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದುವುದು. ಸಕಾರಾತ್ಮಕವಾದ ಚಿಂತನೆಗಳ ಜತೆಗೆ ಬಂಧುಗಳ, ಸಂಬಂಧಿಗಳ ಬೆಂಬಲಗಳಿಂದ ಗೆಲುವು ಲಭಿಸುವುದು. ಗುರುವಿನ ಅನುಗ್ರಹವಿರುವುದರಿಂದ ಹಣಕಾಸು ಕೂಡಾ ಬರುವುದು. ನಿಮ್ಮ ಮನೋಕಾಮನೆಗಳು ಈಡೇರುವವು.9845743807 ಅದೃಷ್ಟ ಸಂಖ್ಯೆ:6

ಧನುಸ್ಸು

ಧನುಸ್ಸು

ಕೆಲಸದ ಸ್ಥಳದಲ್ಲಿನ ಕಹಿ ಅನುಭವಗಳು ನಿಮ್ಮನ್ನು ಕಂಗೆಡಿಸುವುದು. ಯಾರನ್ನೂ ಅತಿಯಾಗಿ ಹಚ್ಚಿಕೊಳ್ಳದಿರಿ. ನಿಷ್ಠುರವಾದಿ ಲೋಕಕ್ಕೆ ವಿರೋಧಿ ಎಂಬ ಮಾತಿದೆ. ಆದರೆ ಕೆಲವು ವಿಷಯಗಳಲ್ಲಿ ನಿಷ್ಠುರವಾಗಿಯೇ ವರ್ತಿಸಬೇಕಾಗುವುದು. ನಿಮಗೆ ಜಾಣತನವಿದೆ. ಆದರೆ ಅವಸರ ಮಾಡದಿರಿ. ಸಾವಧಾನವೇ ನಿಮಗೆ ಶ್ರೀರಕ್ಷೆ. ಆದಷ್ಟು ತಾಳ್ಮೆಯಿಂದ ಇರಿ. ನಿಮ್ಮ ಕಾರ್ಯಗಳು ಸುಲಲಿತವಾಗಿ ನಡೆಯುವವು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು.9845743807 ಅದೃಷ್ಟ ಸಂಖ್ಯೆ:8

ಮಕರ

ಮಕರ

ಶಕ್ತಿ ಸಂವರ್ಧನೆ ಸಿದ್ಧಿಯನ್ನು ಸಾಧಿಸಿಕೊಳ್ಳಲು ದೇವಿ ಸ್ತೋತ್ರವನ್ನು ಪಾರಾಯಣ ಮಾಡಿ ಮತ್ತು ಗುರು ರಾಘವೇಂದ್ರ ಸ್ವಾಮಿಯನ್ನು ಅನನ್ಯ ಶ್ರದ್ಧಾ ಭಕ್ತಿಯಿಂದ ಪ್ರಾರ್ಥಿಸಿ. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ಆರೋಗ್ಯದ ಬಗ್ಗೆ ಎಚ್ಚರವಿರಲಿ. ಪ್ರವಾಸದ ಸಂದರ್ಭದಲ್ಲಿ ಕಟ್ಟುನಿಟ್ಟಿನ ಆಹಾರ ಕ್ರಮ ಅನುಸರಿಸಿ. ಆರೋಗ್ಯ ಹದಗೆಡುವ ಸಾಧ್ಯತೆ ಇದ್ದು, ಸೂಕ್ತ ಮನೆ ವೈದ್ಯರ ಸಲಹೆ ಪಡೆಯಿರಿ. 9845743807 ಅದೃಷ್ಟ ಸಂಖ್ಯೆ:3

ಕುಂಭ

ಕುಂಭ

ಹಣಕಾಸಿನ ಕುರಿತು ಗಮನವಿರಲಿ. ಸುಖಾಸುಮ್ಮನೆ ಖರ್ಚಿನ ದಾರಿ ಬೆಳೆಯುತ್ತಾ ಹೋಗುತ್ತದೆ. ಜನ್ಮಸ್ಥ ಶನಿಯು ಅಸಿಡಿಟಿ, ವಾಯು ಪ್ರಕೋಪದಂತಹ ತೊಂದರೆಗಳನ್ನು ನೀಡುವ ಸಾಧ್ಯತೆ ಇರುವುದು. ಪ್ರಯಾಣದಲ್ಲಿ ಎಚ್ಚರವಿರಲಿ. ನಿಮ್ಮ ಯೋಚನೆ ಹಾಗೂ ಕಾರ‍್ಯತಂತ್ರಗಳನ್ನು ಹತ್ತಿರದವರೇ ಕೆಡಿಸುವ ಸಾಧ್ಯತೆ ಇರುವುದು. ಹಾಗಾಗಿ ನೀವು ಬಯಸಿದ ಕಾರ್ಯ ಪೂರ್ಣವಾಗುವವರೆಗೂ ಗೌಪ್ಯತೆಯನ್ನು ಕಾಯ್ದುಕೊಳ್ಳಿ. ಕೆಲವರಿಗೆ ಸ್ಥಳ ಬದಲಾವಣೆಯ ಸಾಧ್ಯತೆ ಇರುವುದು.9845743807 ಅದೃಷ್ಟ ಸಂಖ್ಯೆ:2

ಮೀನ

ಮೀನ

ನಿಮಗೆ ದೈವಬಲ ಕಡಿಮೆ ಇದ್ದರೂ ನೀವು ಆಚರಿಸುತ್ತಿರುವ ಪುಣ್ಯ ಕಾರ್ಯಗಳಿಂದ ಭಗವಂತನು ನಿಮಗೆ ಒಳಿತನ್ನೇ ಮಾಡುವನು. ಹಣಕಾಸಿನ ಪರಿಸ್ಥಿತಿ ಸುಧಾರಣೆ ಕಷ್ಟವಾಗುತ್ತದೆ. ಆದರೆ ನಿತ್ಯ ಜೀವನಕ್ಕೆ ತೊಂದರೆಯಿರುವುದಿಲ್ಲ.ಮಕ್ಕಳಿಂದ ಕಿರಿಕಿರಿಯನ್ನು ಅನುಭವಿಸುವಿರಿ. ವಿದ್ಯಾರ್ಥಿಗಳಿಗೆ ವಿದ್ಯೆಯಲ್ಲಿ ಅಲ್ಪ ಹಿನ್ನಡೆ ಕಂಡುಬರುವುದು. ಮನೆಯ ಹಿರಿಯರಿಗೆ ಗೌರವ, ಸನ್ಮಾನಗಳು ಏರ್ಪಡುವವು.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

English summary

your daily horoscope 12-january-2019

Know what astrology and the planets have in store for you today. Choose your zodiac sign and read the details..
Story first published: Friday, January 11, 2019, 16:05 [IST]
X
Desktop Bottom Promotion