Just In
- 14 min ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 2 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- 2 hrs ago ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- 3 hrs ago ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
Don't Miss
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13-5-2019- ಸೋಮವಾರದ ದಿನ ಭವಿಷ್ಯ
ತಿಳುವಳಿಕೆ ಎನ್ನುವುದು ಜೀವನದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ನಾವು ಮಾತನಾಡುವ ಪ್ರತಿಯೊಂದು ವಿಚಾರವು ನಮ್ಮ ವಯಸ್ಸಿಗೆ ಹಾಗೂ ಪ್ರೌಢಿಮೆಗೆ ತಕ್ಕಂತೆ ಇರಬೇಕು. ವಯಸ್ಸಿಗೆ ಸೂಕ್ತವಲ್ಲದ ರೀತಿಯಲ್ಲಿ, ತಿಳುವಳಿಕೆ ಶೂನ್ಯರಂತೆ ಮಾತನಾಡಿದರೆ ನಮ್ಮ ಮಾತಿಗೆ ಹಾಗೂ ವ್ಯಕ್ತಿತ್ವಕ್ಕೆ ಯಾವುದೇ ಗೌರವ ಇರುವುದಿಲ್ಲ. ನಮ್ಮ ಸ್ಥಾನಕ್ಕೆ ತಕ್ಕಂತೆ ತಿಳುವಳಿಕೆ ಪೂರ್ಣರಾಗಿ ವರ್ತಿಸುವುದರಿಂದ ಸುತ್ತಲಿನ ಜನರಿಗೂ ಯಾವುದೇ ಗೊಂದಲ ಉಂಟಾಗದು.
ಜೊತೆಗೆ ಜೀವನವನ್ನು ಸಂಪೂರ್ಣವಾಗಿ ಆನಂದಿಸಬಹುದು. ವಾರದ ಆರಂಭದ ದಿನವಾದ ಇಂದು ಪ್ರತಿಯೊಬ್ಬರೂ ಜೀವನದಲ್ಲಿ ಒಳ್ಳೆಯದಾಗಲಿ ಎಂದು ಬಯಸುವುದು ಸಹಜ. ಆದರೆ ಕೆಲವು ಗ್ರಹಗತಿಗಳಿಗೆ ಅನುಗುಣವಾಗಿ ಭವಿಷ್ಯದಲ್ಲಿ ಬದಲಾವಣೆಯನ್ನು ಕಾಣಲೇ ಬೇಕಾಗುತ್ತದೆ. ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಯಾವೆಲ್ಲಾ ಬದಲಾವಣೆಗಳು ಉಂಟಾಗಲಿದೆ ಎನ್ನುವುದನ್ನು ತಿಳಿಯಲು ಮುಂದೆ ನೀಡಲಿರುವ ರಾಶಿ ಭವಿಷ್ಯವನ್ನು ಅರಿಯಿರಿ...
ಮೇಷ(13 ಮೇ 2019)
ನಿಮ್ಮ ಉತ್ತಮ ಬೌದ್ಧಿಕ ಶಕ್ತಿಯಿಂದಾಗಿ ಜನರಿಂದ ಗೌರವ ಮತ್ತು ಪ್ರಶಂಸೆಗೆ ಗುರಿಯಾಗುವಿರಿ. ಇದರಿಂದ ನಿಮ್ಮಲ್ಲಿ ಉತ್ಸಾಹ ಹೆಚ್ಚಿ ಇನ್ನಷ್ಟು ಸಾಮಾಜಿಕ ಕಾರ್ಯಗಳನ್ನುಮಾಡಲುನಿರ್ಧರಿಸುವಿರಿ.ಅಪರಿಚಿತರನ್ನು ಹೆಚ್ಚು ಪರಿಚಯ ಮಾಡಿಕೊಂಡು ಸಂಕಷ್ಟಕ್ಕೆ ಗುರಿಯಾಗುವಿರಿ. ಅಂತಹವರಿಂದ ಆದಷ್ಟು ದೂರ ಇರುವುದು ಒಳ್ಳೆಯದು. ಸಂಗಾತಿಯ ಸಲಹೆಯಂತೆ ನಡೆದರೆ ಕ್ಷೇಮ.9845743807 ಅದೃಷ್ಟ ಸಂಖ್ಯೆ:2
ವೃಷಭ
ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಿ. ಕಚೇರಿಗೆ ಹೊರಡುವಾಗ ಐದು ಅಥವಾ ಹತ್ತು ನಿಮಿಷ ಮುಂಚೆಯೇ ಮನೆಯಿಂದ ಹೊರಡಿ. ಅನಗತ್ಯ ಒತ್ತಡದಿಂದ ದೂರವಿರಿ. ಕೆಲಸಗಳು ಮನಸ್ಸಿಗೆ ನೆಮ್ಮದಿ ನೀಡುವವು. ಮೇಲಧಿಕಾರಿಗಳಿಂದ ಕಿರುಕುಳವಿದ್ದರೂ ತಾಳ್ಮೆ ಕಳೆದುಕೊಳ್ಳಬೇಡಿ. ನೀವು ಮಾಡಿರುವ ಕೆಲಸ ಸರಿಯಾಗಿಯೇ ಇದೆ. ಆದರೆ ನಿಮಗೆ ಆಗದವರೊಬ್ಬರು ನಿಮ್ಮ ಬಗ್ಗೆ ಇಲ್ಲಸಲ್ಲದ ವಿಚಾರವನ್ನು ನಿಮ್ಮ ಬಾಸ್ಗೆ ತಿಳಿಸಿ ಅವರು ನಿಮ್ಮ ಮೇಲೆ ಕೋಪಗೊಳ್ಳುವಂತೆ ಮಾಡಿರುವರು.9845743807 ಅದೃಷ್ಟ ಸಂಖ್ಯೆ:1
ಮಿಥುನ
ಮಕ್ಕಳ ಸಮಸ್ಯೆ ನಿಮಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಶ್ರೀ ನಾರಸಿಂಹ ದೇವರನ್ನು ನೆನೆಯಿರಿ. ಆತನ ಕರುಣೆಯಿಂದ ನಿಮ್ಮ ಸಂತತಿಗೆ ಸೂಕ್ತ ಸಂಗಾತಿ ದೊರೆಯುತ್ತಾರೆ. ಮಡದಿಯ ಮಾತನ್ನು ತಿರಸ್ಕರಿಸಬೇಡಿ. ವಿಪರೀತ ದಣಿದು ಕೆಲಸಕ್ಕೆ ಮುಂದಾಗದಿರಿ. ಕೆಲಸದ ಒತ್ತಡದ ನಡುವೆ ಸ್ವಲ್ಪ ವಿಶ್ರಾಂತಿ ಪಡೆಯಿರಿ. ನಿಮ್ಮ ಕೈಲಿ ಆಗುವಷ್ಟು ಕೆಲಸವನ್ನು ಮಾತ್ರ ಒಪ್ಪಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:2
ಕಟಕ
ಚಿಕ್ಕ ಮತ್ತು ಚೊಕ್ಕ ಮನೆಯನ್ನು ಶುಭ್ರವಾಗಿಟ್ಟುಕೊಳ್ಳುವುದೇ ದೇವರ ಒಲುಮೆಗೆ ಸೋಪಾನ. ಸ್ವಚ್ಛತೆಯಿದ್ದಲ್ಲಿ ಭಗವಂತ ಇರುತ್ತಾನೆ. ಹಾಗಾಗಿ ಆತನ ಒಲುಮೆಗೆ ಮನೆ ಮತ್ತು ಮನಸ್ಸಿನ ಸ್ವಚ್ಛತೆಗೆ ಮೀಸಲಿಡಿ. ನೀವು ಮಾಡುವ ಕೆಲಸವನ್ನು ಜನರು ಬಹಿರಂಗವಾಗಿ ಹೊಗಳದಿದ್ದರೂ ನಿಮ್ಮ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವರು. ಹಾಗಾಗಿ ನೀವು ತೀರಿಸಬೇಕಾಗಿರುವ ಸಾಲದ ಬಗೆಗೂ ಯಾರೂ ಒತ್ತಡ ಹೇರುತ್ತಿಲ್ಲ. ನ್ಯಾಯಯುತವಾಗಿ ದುಡಿದು ಹಣ ಮರು ಪಾವತಿಸುವಿರಿ.9845743807 ಅದೃಷ್ಟ ಸಂಖ್ಯೆ:4
ಸಿಂಹ
ವಿವಾಹ ಆಪೇಕ್ಷೆಯುಳ್ಳವರಿಗೆ ಸ್ವಲ್ಪ ನಿರಾಶೆ ಕಾಡುವುದು. ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎನ್ನುವಂತೆ ಕೊನೆಯ ಕ್ಷ ಣದಲ್ಲಿ ವಧುವಿನ ಕಡೆಯುವರು ತಮ್ಮ ಅಸಮ್ಮತಿಯನ್ನು ತಿಳಿಸುವರು. ಇನ್ನೂ ಸ್ವಲ್ಪ ದಿನ ಕಾಯುವುದು ಅನಿವಾರ್ಯ. ಕೆಲಸಕ್ಕೆ ಬಾರದ ಜನ ತಲೆ ತಿನ್ನುವ ಸಾಧ್ಯತೆ ಹೆಚ್ಚಿದೆ. ದೂರ ಪ್ರವಾಸ ಮಾಡುವ ಯೋಗವಿದೆ. ಪತಿ ಪತ್ನಿಯರಲ್ಲಿ ಮನಸ್ತಾಪ ಬರುವುದು. ಶಿವ ಪಂಚಾಕ್ಷ ರಿ ಮಂತ್ರವನ್ನು ತಪ್ಪದೆ ಪಠಿಸಿ.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ನೀವು ಹುಟ್ಟಿದ ಊರಿನಲ್ಲಿ ಸಂಭ್ರಮದ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮ್ಮೊಡನೆ ಆಡಿ ಬೆಳೆದ ಸಹಪಾಠಿಗಳ ಭೇಟಿ ನಿಮಗೆ ಸಂತಸ ನೀಡುವುದು.ಹಣಕಾಸಿನಪರಿಸ್ಥಿತಿಉತ್ತಮಗೊಳ್ಳುವುದು. ಅನಿರೀಕ್ಷಿತ ಬೆಳವಣಿಗೆಗಳು ನಿಮ್ಮ ಪರವಾಗಿ ಆಗುವುದರಿಂದ ತಡೆ ಹಿಡಿಯಲ್ಪಟ್ಟಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಜೀವನದಲ್ಲಿ ಹೊಸ ಆಶಾಕಿರಣ ಮೂಡುವುದು. ಮನಸ್ಸು ಹಕ್ಕಿಯಂತೆ ಹಾರಾಡುವುದು.9845743807 ಅದೃಷ್ಟ ಸಂಖ್ಯೆ:4
ತುಲಾ
ಎಷ್ಟೇ ಹಣ ಇದ್ದರೂ ಸಾಲದು ಎಂಬ ಭಾವನೆ ಬರಬಹುದು. ಧನಕಾರಕ ಗುರು ಅಷ್ಟಮ ಸ್ಥಾನದಲ್ಲಿದ್ದು, ಹಣ ನೀರಿನಂತೆ ಖರ್ಚಾಗುವುದು. ಆರೋಗ್ಯದ ಸಲುವಾಗಿ ಆಸ್ಪತ್ರೆ ಖರ್ಚು ಹೆಚ್ಚುವುದು. ಗುರು ಸ್ತೋತ್ರ ಪಠಿಸಿ.ಗೆಳೆಯರನ್ನು ಪ್ರೀತಿಯಿಂದ ಕಾಣಬೇಕು. ಸ್ವಂತ ಮಕ್ಕಳನ್ನು ಸಹ ಸ್ನೇಹಿತರಂತೆ ಕಾಣಬೇಕು. ಅವರ ತಪ್ಪುಗಳನ್ನು ಕ್ಷ ಮಿಸುವ ಔದಾರ್ಯ ಇಟ್ಟುಕೊಂಡರೆ ಬಾಂಧವ್ಯ ಗಟ್ಟಿಗೊಳ್ಳುವುದು. ಅವರನ್ನು ನಗು ನಗುತ್ತಾ ತಿದ್ದುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2
ವೃಶ್ಚಿಕ
ಹಮ್ಮಿಕೊಂಡಿರುವ ಕೆಲಸಗಳಲ್ಲಿ ಅಡಚಣೆಗಳು ಬಾರದಿರಲಿ ಎಂದು ವಿಘ್ನನಾಶಕ ಗಣಪತಿಯನ್ನು ಪ್ರಾರ್ಥಿಸಿ. ಇದರಿಂದ ಅನುಕೂಲವಾಗುವುದು. ಸಂಗಾತಿಯ ಸಂಗಡ ಮನಸ್ತಾಪ ಬೇಡ.ವಿವಿಧ ಮೂಲಗಳಿಂದ ಹಣ ಬರುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ಆತುರ ಪ್ರವೃತ್ತಿಯಿಂದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಸಾವಧಾನದಿಂದ ಹೆಜ್ಜೆಯಿಟ್ಟರೆ ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:9
ಧನುಸ್ಸು
ಯಾವ ಹುತ್ತದಲ್ಲಿ ಯಾವ ಹಾವೋ ಎಂಬಂತೆ ನಿಮ್ಮ ಸಮೀಪಕ್ಕೆ ಬರುವ ವ್ಯಕ್ತಿಗಳ ಗುಣಾವಗುಣಗಳನ್ನು ತಿಳಿಯಲು ಅಸಮರ್ಥರಾಗುವಿರಿ. ಯಾರೊಂದಿಗೂ ವಿರೋಧ ಮಾಡಿಕೊಳ್ಳದೆ ಚಾಣಾಕ್ಷ ತನದಿಂದ ಅವರೊಡನೆವ್ಯವಹರಿಸಿದರೆಒಳಿತಾಗುವುದು.ಅವಕಾಶವಾದಿಗಳು ನಿಮ್ಮ ಸುತ್ತಲೇ ಗಿರಕಿ ಹೊಡೆಯಬಹುದು. ವ್ಯಾವಹಾರಿಕ ಜಾಣ್ಮೆ ಪ್ರದರ್ಶಿಸದಿದ್ದರೆ ನಿಮಗೆ ದೊಡ್ಡ ಪ್ರಮಾಣದ ಹಾನಿ ಆಗುವುದು. ಹಾವು ಹೊಡೆದು ಹದ್ದಿಗೆ ಹಾಕುವಂತೆ ನಿಮ್ಮ ಶ್ರಮದ ಫಲ ಪರರ ಪಾಲಾಗುವುದು.9845743807 ಅದೃಷ್ಟ ಸಂಖ್ಯೆ:8
ಮಕರ
ಬಂಧುಗಳ ಒಳ ಜಗಳಗಳು ನಿಮ್ಮನ್ನು ಹೈರಾಣ ಮಾಡುವವು. ಯಾರೊಬ್ಬರ ಪರವಾಗಿ ನಿಂತರೂ ಮತ್ತೊಬ್ಬರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಬಹು ವಿವೇಚನೆಯಿಂದ ಪರಿಸ್ಥಿತಿ ನಿಭಾಯಿಸುವಿರಿ. ಇದಕ್ಕೆ ಗುರುವಿನ ಬೆಂಬಲ ಪಡೆಯಿರಿ.ವೃಥಾ ಮನೋವ್ಯಾಕುಲ, ಅಂಜಿಕೆ, ಅಭದ್ರತೆಗಳು ಬೇಡ. ದುರ್ಗಾದೇವಿಯನ್ನು ಪ್ರಾರ್ಥಿಸಿ. ಗುರುವಿನ ಶುಭ ಆಶೀರ್ವಾದದಿಂದ ಒಳಿತಾಗುವುದು. ಆಹಾರ ದಾನ ಮಾಡಿ. ಅಗತ್ಯಕ್ಕೆ ತಕ್ಕಷ್ಟು ಹಣ ವಿನಿಯೋಗಿಸಿ.9845743807 ಅದೃಷ್ಟ ಸಂಖ್ಯೆ:4
ಕುಂಭ
ಕೆಲಸಗಳು ಮಂದಗತಿಯಲ್ಲಿ ಸಾಗುವವು. ಹಣಕಾಸಿನ ಮುಗ್ಗಟ್ಟು ನಿಮ್ಮ ಮನೋಧೈರ್ಯವನ್ನು ಕುಗ್ಗಿಸುವುದು. ಶಿವ ಪಂಚಾಕ್ಷ ರಿ ಮಂತ್ರ ಜಪಿಸಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ಪ್ರತಿಯೊಬ್ಬರ ಮನೆಯ ದೋಸೆಯೂ ತೂತೇ. ಆದರೆ ನಿಮ್ಮ ಮನೆಯ ಕಾವಲಿಯೇ ತೂತಾಗಿರುವುದರಿಂದ ಅನ್ಯರ ವಿಚಾರಧಾರೆಗಳ ಕುರಿತು ಟೀಕೆ ಮಾಡಬೇಡಿ. ಮಾಡಿದರೆ ಅಪಹಾಸ್ಯಕ್ಕೆ ಗುರಿಯಾಗುವಿರಿ.9845743807 ಅದೃಷ್ಟ ಸಂಖ್ಯೆ:2
ಮೀನ
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಎಚ್ಚರವಿರಲಿ. ಶಾಲಾ ಕಾಲೇಜುಗಳಿಂದ ಬರಬೇಕಾಗಿದ್ದ ಗೌರವ ಧನ ಸದ್ಯದಲ್ಲಿಯೇ ನಿಮ್ಮ ಕೈ ಸೇರುವುದು. ವಿವಾಹಕ್ಕೆ ಇನ್ನೂ ಕೆಲಕಾಲ ಕಾಯಬೇಕಾಗುವುದು.ನೀವು ಆದರಿಸುವ ಜನರಿಂದಲೇ ವಿಶ್ವಾಸದ್ರೋಹ ಆಗುವ ಸಾಧ್ಯತೆ ಇದೆ. ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬುದನ್ನು ತಿಳಿಯಿರಿ. ಗುರು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ. ಇದರಿಂದ ನಿಮ್ಮ ಕಾರ್ಯಗಳು ಕೈಗೂಡುವವು.9845743807 ಅದೃಷ್ಟ ಸಂಖ್ಯೆ:1