Just In
- 4 min ago ದಿನ ಭವಿಷ್ಯ ಮಾರ್ಚ್ 30: ಮಂಗಳವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 7 min ago 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- 2 hrs ago ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- 2 hrs ago ಕೇತು ಕನ್ಯಾ ರಾಶಿಯಲ್ಲಿರುವ ಇನ್ನು 285 ದಿನ 12 ರಾಶಿಗಳ ಮೇಲೆ ಅದರ ಪ್ರಭಾವ ಹೀಗಿರಲಿದೆ
Don't Miss
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
18-4-2019- ಗುರುವಾರದ ದಿನ ಭವಿಷ್ಯ
ಗುರುವಿಗೆ ಶರಣಾದರೆ ಭವಿಷ್ಯವು ಉಜ್ವಲವಾಗುವುದು ಎನ್ನುವ ಮಾತನ್ನು ನಾವೆಲ್ಲಾ ಕೇಳಿರುತ್ತೇವೆ. ಈ ಮಾತು ಅಪ್ಪಟ ಸತ್ಯವೂ ಹೌದು. ಕುಂಡಲಿಯಲ್ಲಿ ಇರುವ ಗ್ರಹಗತಿಗಳ ಸಂಚಾರದಿಂದ ನಮ್ಮ ಭವಿಷ್ಯ ಬದಲಾಗುತ್ತಲೇ ಇರುತ್ತದೆ. ಹಾಗೆಯೇ ಗುರುವಿನಿಂದ ಪಡೆದ ಜ್ಞಾನ ಹಾಗೂ ಉತ್ತಮ ವರ್ತನೆಗಳು ನಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತದೆ.
ಒಂಬತ್ತು ಗ್ರಹಗಳಲ್ಲಿ ಗುರುವು ಹೆಚ್ಚು ಪ್ರಭಾವಶಾಲಿಯಾದವನು ಎನ್ನಬಹುದು. ಉತ್ತಮ ಸ್ಥಾನದಲ್ಲಿ ಗುರುವಿದ್ದಾಗ ಜೀವನದಲ್ಲಿ ಯಶಸ್ಸು ಉಂಟಾಗುವುದು ಎನ್ನಲಾಗುತ್ತದೆ. ಗುರುವಾರವಾದ ಇಂದು ನಿಮ್ಮ ಭವಿಷ್ಯ ಹೇಗಿದೆ? ಗುರುವು ಈ ದಿನ ನಿಮ್ಮ ಭವಿಷ್ಯದ ಮೇಲೆ ಯಾವ ಪರಿಣಾಮ ಬೀರಿದ್ದಾನೆ ಎನ್ನುವುದನ್ನು ಅರಿಯಬೇಕೆಂದರೆ ಈ ಮುಂದಿರುವ ದಿನ ಭವಿಷ್ಯದ ವಿವರಣೆಯನ್ನು ಅರಿಯಿರಿ....ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ (18 ಏಪ್ರಿಲ್ 2019)
ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾಗ್ರತೆಯಿಂದ ರೂಪಿಸಿ. ಇದರಿಂದ ಗೆಲುವು ದೊರೆಯಲಿದೆ. ನಿಮ್ಮ ಹಿಂಬಾಲಕರು ನಿಮ್ಮ ಕಾರ್ಯ ಯೋಜನೆಗಳಿಗೆ ಬೆಂಬಲ ಸೂಚಿಸುವರು. ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುತ್ತದೆ.ಮನೋ ನಿಯಾಮಕ ರುದ್ರದೇವರ ಸ್ಮರಣೆ ಮತ್ತು ಪ್ರಾರ್ಥನೆಯಿಂದ ಮನಸ್ಸಿನಲ್ಲಿ ಕವಿದಿರುವ ಕಾರ್ಮೋಡಗಳು ದೂರಕ್ಕೆ ಸರಿಯಲಿವೆ. ಮಗನಿಗೆ ಉತ್ತಮ ಸಂಬಂಧ ಕೂಡಿ ಬರುವುದರಿಂದ ಮನೆಯಲ್ಲಿ ಸಂತಸ ಮೂಡುವುದು. 9845743807 ಅದೃಷ್ಟ ಸಂಖ್ಯೆ:2
ವೃಷಭ
ವ್ಯಾಪಾರ ವಿಷಯದಲ್ಲಿ ಎಲ್ಲಾ ನಿಟ್ಟಿನಿಂದಲೂ ಜಾಗ್ರತೆ ಇರಲಿ. ನಿರ್ಲಕ್ಷ್ಯದಿಂದ ನಷ್ಟ ಆಗುವ ಸಂದರ್ಭವಿದೆ. ಮಕ್ಕಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಕೊಳ್ಳುವರು. ಕುಟುಂಬದವರೊಂದಿಗೆ ಸ್ನೇಹದಿಂದ ವರ್ತಿಸಿ.ಹತ್ತಿರದ ಊರುಗಳಿಗೆ ಹೋಗುವ ಪ್ರವಾಸಗಳಿಂದಾಗಿ ವ್ಯವಹಾರಿಕ ಗೆಲುವು ಸಾಧ್ಯವಾಗಲಿದೆ. ಮಕ್ಕಳ ಆಟ ಪಾಠಗಳಿಂದ ನಿಮ್ಮ ಮನಸ್ಸು ಪ್ರಫುಲ್ಲವಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. ಜನ್ಮಸ್ಥ ರಾಹು ಮಾನಸಿಕ ಕಿರಿಕಿರಿಯನ್ನುಂಟು ಮಾಡುವನು.9845743807 ಅದೃಷ್ಟ ಸಂಖ್ಯೆ:4
ಮಿಥುನ
ದೂರದ ಬಂಧುಗಳ ಆಗಮನದಿಂದಾಗಿ ಹೊಸ ಅವಕಾಶದ ಬಾಗಿಲು ತೆರೆಯಲು ಸಾಧ್ಯವಿದೆ. ಅಸಾಧ್ಯವಾದುದನ್ನು ಸಾಧಿಸಿದ ತೃಪ್ತಿ ನಿಮ್ಮದಾಗುವುದು. ಒಡಹುಟ್ಟಿದವರು ನಿಮ್ಮ ಸಂತೋಷವನ್ನು ಹೆಚ್ಚಿಸುವರು.ಹಣವನ್ನು ಕೊಡುವ, ಕೊಡಿಸುವ ಕೆಲಸ ಮಾತ್ರ ಮಾಡಲೇಬೇಡಿ. ತೊಂದರೆಗೆ ಸಿಲುಕಿಕೊಳ್ಳುವಿರಿ. ಕೆಲವೊಮ್ಮೆ ನೀವೇ ಹಣವನ್ನು ಪಾವತಿಸುವ ಸಂದರ್ಭ ಎದುರಾಗುವುದು. ಇಲ್ಲಸಲ್ಲದ ಸಬೂಬು ಹೇಳಿ ಬಂದವರನ್ನು ನಯವಾಗಿ ಸಾಗ ಹಾಕುವುದು ಉತ್ತಮ.9845743807 ಅದೃಷ್ಟ ಸಂಖ್ಯೆ:9
ಕಟಕ
ಮಾತುಮಾತಿಗೆ ಸಿಟ್ಟು ಮಾಡಿಕೊಳ್ಳುವಂತಹ ಅತಿರೇಕಗಳು ಬೇಡ. ತಾಳ್ಮೆಯಿಂದಲೇ ಹೆಚ್ಚಿನ ಸಿದ್ಧಿ ದೊರೆಯಲಿದೆ. ಆಂಜನೇಯ ಸ್ವಾಮಿ ಸ್ತೋತ್ರವನ್ನು ಪಠಿಸಿ. ಅಗತ್ಯವಿದ್ದಲ್ಲಿ ಮಾತ್ರ ಹೆಚ್ಚಿನ ಹಣ ವ್ಯಯಿಸಿ. ಅನವಶ್ಯಕ ಖರೀದಿಗಳಿಗೆ ಕಡಿವಾಣ ಹಾಕುವುದು ಒಳ್ಳೆಯದು.ತುರ್ತಾಗಿ ಮಕ್ಕಳ ಬಗೆಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುವುದು. ಸದಾ ಕೆಲಸ ಕೆಲಸ ಎಂದು ದುಡಿಮೆಯ ಕಡೆಗೆ ಲಕ್ಷ್ಯ ನೀಡುವ ನೀವು ಮಡದಿ ಮಕ್ಕಳ ಆರೋಗ್ಯದ ಕಡೆಗೂ ಗಮನ ಹರಿಸುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:6
ಸಿಂಹ
ಗೆಳೆಯರ ಬಗೆಗೆ ನೀವು ಮೃದು ಹೃದಯ ಹೊಂದಿದಲ್ಲಿ ಅದರಿಂದ ಹಾನಿಯನ್ನೇ ಅನುಭವಿಸುವಿರಿ. ಅವರು ನಿಮ್ಮ ನಂಬಿಕೆಗೆ ದ್ರೋಹ ಬಗೆಯುವರು. ಆದಷ್ಟು ದುಷ್ಟ ಸ್ನೇಹಿತರಿಂದ ದೂರ ಇರುವುದು ಒಳ್ಳೆಯದು. ನೀರಿನ ವಿಚಾರದಲ್ಲಿ ಕಾಳಜಿ ಇರಲಿ. ಜಲಾಶಯ, ಸಮುದ್ರದ ಕಡೆ ಸಂಚರಿಸುವಾಗ ಎಚ್ಚರಿಕೆ ಇರಲಿ. ಮನೆಯಿಂದ ಹೊರಡುವಾಗ ಲಕ್ಷ್ಮೀನರಸಿಂಹ ದೇವರನ್ನು ನೆನೆಯಿರಿ ಮತ್ತು ಆರೋಗ್ಯದ ಕಡೆ ಗಮನ ಕೊಡುವುದು ಉತ್ತಮ.9845743807 ಅದೃಷ್ಟ ಸಂಖ್ಯೆ:5
ಕನ್ಯಾ
ವಿನಾಕಾರಣ ಒಡಹುಟ್ಟಿದವರೇ ಮನಸ್ಸಿಗೆ ನೋವು ತರುವ ಸಾಧ್ಯತೆ ಇದೆ. ಅವರ ವಿಚಾರಧಾರೆ ಅವರಿಗೆ ಬಿಟ್ಟದ್ದು. ಅವರಿಗೆ ಸಲಹೆ ನೀಡದಿರುವುದು ಒಳ್ಳೆಯದು. ನಿಮಗೇ ಬೇಕಾದಷ್ಟು ಕೆಲಸವಿರುವಾಗ ಪರರ ಉಸಾಬರಿ ಏಕೆ?.ನೀರಾವರಿ ಕೃಷಿಕರಿಗೆ ಹೆಚ್ಚಿನ ಲಾಭವುಂಟಾಗುವುದು. ರೈತಾಪಿ ಜನರಿಗೆ ತಾವು ಬೆಳೆದ ಧಾನ್ಯಗಳಿಗೆ ಉತ್ತಮ ಬೆಂಬಲ ಬೆಲೆ ದೊರೆಯುವುದು. ಕೆಲವರಿಗೆ ಸರಕಾರದಿಂದ ಹಣಕಾಸು ಬರುವುದು.9845743807 ಅದೃಷ್ಟ ಸಂಖ್ಯೆ:4
ತುಲಾ
ನಿಮ್ಮ ಶಕ್ತಿಯ ವಿಚಾರದಲ್ಲಿ ನಂಬಿಕೆ ಕಳೆದುಕೊಳ್ಳಬೇಡಿ. ನಿಮ್ಮ ಸರಳತೆಯ ಜೀವನದಿಂದ ನೀವು ಪರರಿಗೆ ಮಾರ್ಗಸೂಚಕರಾಗುವಿರಿ. ನಿಮ್ಮ ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು. ಮಾತಾ ದುರ್ಗಾದೇವಿಯ ಪ್ರಾರ್ಥನೆಯಿಂದ ಸಕಲ ದುರಿತಗಳು ನಾಶವಾಗುವವು. ಮಕ್ಕಳಿಂದ ಶುಭವಾರ್ತೆ ಕೇಳುವಿರಿ. ಕೆಮ್ಮು ಕಫದಂತಹ ತೊಂದರೆಗಳು ಕಾಡುವ ಸಾಧ್ಯತೆ ಇದೆ. ಇದಕ್ಕೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.9845743807
ಅದೃಷ್ಟ ಸಂಖ್ಯೆ:2
ವೃಶ್ಚಿಕ
ಕೊರತೆಯಲ್ಲಿನ ಹಣಕಾಸಿನ ವೃದ್ಧಿಗೆ ಒಂಟಿ ಹೋರಾಟ ಬೇಡ. ಎಲ್ಲಾ ವಿಚಾರದಲ್ಲೂ ಬಾಳಸಂಗಾತಿಯ ಸಹಕಾರ ಪಡೆದು ಮುಂದುವರಿಯಿರಿ. ಕೆಲವು ವಿಷಯಗಳಲ್ಲಿ ಸಂಗಾತಿಯ ತೀರ್ಮಾನವೇ ಅಂತ್ಯವಾಗುವುದು. ನಿಮ್ಮ ಪ್ರತಿಭಾವಂತಿಕೆಯನ್ನು ಸಕಾರಾತ್ಮಕವಾಗಿ ನಿರೂಪಿಸಿ ಯಶ ಗಳಿಸಲು ಸೂಕ್ತ ಸಮಯವಾಗಿದೆ. ಆಕಸ್ಮಿಕವಾಗಿ ಹಣಕಾಸು ಬರುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. 9845743807 ಅದೃಷ್ಟ ಸಂಖ್ಯೆ:6
ಧನುಸ್ಸು
ಆಪ್ತ ಗೆಳೆಯನ ಭೇಟಿ ಸಾಧ್ಯತೆ ಇದೆ. ಆತನ ಕರುಣಾಜನಕ ಕಥೆ ಕೇಳಿ ಮನಸ್ಸು ಮರುಗುವುದು. ಆತನಿಗೆ ನಿಮ್ಮಿಂದ ಸಹಾಯ ಬೇಕಾಗಿರುತ್ತದೆ. ನಿಸ್ವಾರ್ಥದಿಂದ ಆತನಿಗೆ ಸಹಾಯ ಹಸ್ತ ನೀಡಿ. ಮುಂದೆ ಆತನಿಂದ ಅನುಕೂಲವಾಗುವುದು.ವ್ಯಾಜ್ಯದ ವಿಚಾರದಲ್ಲಿ ಸೋತು ಗೆಲ್ಲುವ ಯೋಚನೆ ಇರಲಿ. ಮುಂದಿನ ದಾರಿ ಯಶಸ್ಸಿಗೆ ಮುಖ ಮಾಡಲಿದೆ. ಮುಷ್ಠಿಕಾಳು ಚೆಲ್ಲಿ ಮೂಟೆ ಕಾಳು ಬಾಚುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸನ್ನು ಹೊಂದಲು ಹಣವನ್ನು ಚೆಲ್ಲುವುದು ಅನಿವಾರ್ಯವಾಗಲಿದೆ.9845743807 ಅದೃಷ್ಟ ಸಂಖ್ಯೆ:8
ಮಕರ
ವ್ಯಾಪಾರ ವ್ಯವಹಾರದಲ್ಲಿ ಮುಂದಾಲೋಚನೆಯಿಲ್ಲದೆ ಹಣ ಹೂಡಿದ ಪರಿಣಾಮ ನಷ್ಟ ಎದುರಿಸುವಿರಿ. ನಷ್ಟ ಸರಿದೂಗಿಸಲು ಸಾಲ ಮಾಡಬೇಕಾದ ಪ್ರಸಂಗ ಬರುವುದು. ಆದರೆ ಈಗಾಗಲೇ ಮಾಡಿರುವ ಸಾಲವೇ ಬಹಳಷ್ಟು ಇರುವಾಗ ನಿಮಗೆ ಬೇರೆಯವರು ಸಾಲ ನೀಡಲಾರರು. ಮಳೆ ನಿಂತರೂ ಮಳೆ ಹನಿ ನಿಲ್ಲುವುದಿಲ್ಲ ಎನ್ನುವಂತೆ ಜನ್ಮಶನಿಯಿಂದ ಬಿಡುಗಡೆ ಆಗಿದ್ದರೂ ಸಾಡೇಸಾತ್ ಶನಿಯ ಕಾಟ ಇದ್ದೇ ಇರುತ್ತದೆ. ಹಾಗಾಗಿ ಮಹತ್ತರ ಕಾರ್ಯಗಳನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಹಣ ಉಳಿತಾಯ ಮಾಡಲಾಗುವುದಿಲ್ಲ.9845743807 ಅದೃಷ್ಟ ಸಂಖ್ಯೆ:6
ಕುಂಭ
ನಿಮ್ಮನ್ನು ಪರರಿಗೆ ಹೋಲಿಸಿಕೊಂಡು ಖಿನ್ನರಾಗದಿರಿ. ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಒಂದು ವ್ಯಕ್ತಿತ್ವ ನೀಡಿರುವನು. ಆ ಪ್ರತ್ಯೇಕತೆಯ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುವಿರಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಶಕ್ತಿದೇವಿಯ ಆರಾಧನೆಗೆ ಒಳ್ಳೆಯ ದಿನ. ಹಾಗಾಗಿ ಶಕ್ತಿದೇವಿಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.9845743807 ಅದೃಷ್ಟ ಸಂಖ್ಯೆ:2
ಮೀನ
ಹಣಕಾಸಿನ ಮುಗ್ಗಟ್ಟು ಅನುಭವಿಸುವಿರಿ. ಆದರೆ ಸಕಾಲದಲ್ಲಿ ನೆಂಟರ ಅಥವಾ ಸ್ನೇಹಿತರಿಂದ ಸಹಕಾರ ದೊರೆಯುವುದು. ಹಾಗಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ವಿಷ್ಣುಸಹಸ್ರನಾಮ ಪಠಿಸಿ. ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧರಿಸುತ್ತಾರೆ ಎಂದು ತಿಳಿದು ಕಾರ್ಯದಿಂದ ಹಿಂದೆ ಸರಿಯಬೇಡಿ. ಮುನ್ನುಗ್ಗಿ ಪ್ರವೃತ್ತರಾದಲ್ಲಿ ದೈವಕೃಪೆಯಿಂದ ಇಚ್ಛಿತ ಗುರಿ ತಲುಪುವಿರಿ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp