For Quick Alerts
ALLOW NOTIFICATIONS  
For Daily Alerts

18-7-2019: ಗುರುವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯ�
|

ಸಂಬಂಧಗಳು ಸುಂದರವಾಗಿದ್ದಾಗ ನಾವು ಮಾಡಿದ್ದು, ಆಡಿದ್ದು ತಪ್ಪೇ ಆಗಿದ್ದರೂ ಅವೆಲ್ಲವೂ ಸರಿಯಾಗಿಯೇ ಕಾಣಿಸುತ್ತವೆ. ಅದೇ ಸಂಬಂಧಗಳು ಹಳಸಿರುವಾ ಅಥವಾ ಹಾಳಾಗಿದ್ದಾಗ ನಾವು ಮಾಡಿದ್ದು, ಹೇಳಿದ್ದು ಸರಿಯಾಗಿಯೇ ಇದ್ದರೂ ಕೂಡ ಅದು ತಪ್ಪಾಗಿ ಕಾಣಿಸುತ್ತವೆ ಎನ್ನುವ ಮಾತಿದೆ. ಹೌದು, ನಾವು ಏನನ್ನು ಮಾಡುತ್ತೇವೆ? ಏನನ್ನು ನೋಡುತ್ತೇವೆ? ಎನ್ನುವುದೆಲ್ಲವೂ ನಮ್ಮ ಭಾವನೆಯ ಮೇಲೆ ಆಧರಿಸಿಕೊಂಡಿರುತ್ತದೆ. ಹಾಗಾಗಿ ಪ್ರೀತಿಯಲ್ಲಿದ್ದಾರೆ ಎಂದ ಮಾತ್ರಕ್ಕೆ ಇಲ್ಲ ಸಲ್ಲದ ಮಾತುಗಳನ್ನು ಆಡುವುದು ಅಥವಾ ದ್ವೇಷದಲ್ಲಿದ್ದೇವೆ ಎಂದ ಮಾತ್ರಕ್ಕೆ ನಿಂದನೆ ಮಾಡುವ ಕೆಲಸಕ್ಕೆ ಹೋಗಬಾರದು.

horoscope

ನಮ್ಮಲ್ಲಿ ವಿಶಾಲ ಭಾವನೆ ಇರಬೇಕು. ಪ್ರತಿಯೊಬ್ಬರ ತಪ್ಪಿಗೂ ಕ್ಷಮಿಸುವ ಗುಣವನ್ನು ರೂಢಿಸಿಕೊಳ್ಳಬೇಕು. ಒಬ್ಬರನ್ನು ಅತಿಯಾಗಿ ಹೊಗಳುವುದು, ಇನ್ನೊಬ್ಬರನ್ನು ಅತಿಯಾಗಿ ದೂರುವ ಕೃತ್ಯ ಎಸಗಬಾರದು. ಸನ್ನಿವೇಶಗಳನ್ನು ಪರಾಮರ್ಶಿಸುವ ಸಾಮಥ್ರ್ಯದಿಂದ ಎಲ್ಲವನ್ನೂ ಅರಿತುಕೊಳ್ಳಬೇಕು. ಆಗ ಜೀವನ ಸಾರ್ಥಕ ಎನಿಸಿಕೊಳ್ಳುವುದು. ಸಮಾಜವೂ ನಮ್ಮನ್ನು ಗೌರವಿಸುವುದು. ಗುರುವಾರವಾದ ಇಂದು ಗುರು ರಾಯರ ಸ್ಮರಣೆಯಿಂದ ದಿನವನ್ನು ಆರಂಭಿಸಿ. ಈ ದಿನದಲ್ಲಿ ಉಂಟಾಗುವ ಆಗುಹೋಗುಗಳು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರಲಿವೆ? ಎನ್ನುವುದನ್ನು ತಿಳಿಯಲು ಈ ಮುಂದೆ ನೀಡಿರುವ ದಿನ ಭವಿಷ್ಯದ ವಿವರಣೆಯನ್ನು ಅರಿಯಿರಿ...

ಮೇಷ (18 july 2019)

ಮೇಷ (18 july 2019)

ಸಮಾಧಾನ ಚಿತ್ತ ಇರಲಿ. ಮನೆಯಲ್ಲಿ ಶಾಂತಿ ಕದಡದ ಹಾಗೆ ನಿಗಾ ವಹಿಸಿ. ಆರ್ಥಿಕ ಪರಿಸ್ಥಿತಿಗೆ ತೊಂದರೆಯಿಲ್ಲ. ಗುರು ಹಿರಿಯರ ಅಣತಿಯಂತೆ ನಡೆದುಕೊಂಡಲ್ಲಿ ಒಳಿತಾಗುವುದು.ಬಂಧು ಬಾಂಧವರು ಇಲ್ಲವೇ ಹತ್ತಿರದವರಿಂದಲೇ ನೋವನ್ನು ಎದುರಿಸುವ ಸಂದರ್ಭ ಬರುವ ಸಾಧ್ಯತೆ ಇದೆ. ಆದರೆ ನಿರಾಸೆ ಬೇಡ. ನಿಮ್ಮ ಪಾಲಿನ ಕರ್ತವ್ಯವನ್ನು ನೀವು ನಿರ್ವಂಚನೆಯಿಂದ ಮಾಡಿ. ಒಳಿತಾಗುವುದು. ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ಅನೇಕ ರೀತಿಯ ಪ್ರಶಂಸೆಗಳು, ಕಾಣಿಕೆ, ಉಡುಗೊರೆಗಳನ್ನು ಪಡೆಯುವಂತಹ ಅಪರೂಪದ ಸಾಧನೆಯೊಂದು ಸದ್ಯವೇ ನಡೆಯಲಿದೆ. ಇದರಿಂದ ಹಿಗ್ಗದೆ ತಾಳ್ಮೆಯಿಂದ ಇರಿ. ಎಲ್ಲವೂ ಭಗವಂತನ ಲೀಲೆಯಂತೆ ನಡೆಯುವುದು.ಈಚಲುಮರದ ಕೆಳಗೆ ಮಜ್ಜಿಗೆ ಕುಡಿಯುವಂತಹ ಸಾಹಸವನ್ನು ಮಾಡಬೇಡಿ. ಅದರಿಂದ ತೊಂದರೆ ಎದುರಾಗುವುದು ಮತ್ತು ಅಪವಾದವೂ ನಿಮ್ಮನ್ನು ಸುತ್ತಿಕೊಳ್ಳಲಿದೆ. ಆದಷ್ಟು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಹತ್ತಿರದ ಸಂಬಂಧಿಗಳನ್ನು ನೀವು ದೂರ ಇರಿಸಿದಷ್ಟೂ ಮತ್ತೆ ಹತ್ತಿರಕ್ಕೆ ಬರಲಿದ್ದಾರೆ. ಅವರನ್ನು ಜಾಣ್ಮೆಯ ಮಾತಿನಿಂದ ದೂರ ಇಡಿ. ಇದರಿಂದ ನಿಮಗೂ ನೆಮ್ಮದಿ ಅವರಿಗೂ ನೆಮ್ಮದಿ ದೊರೆಯುವುದು.ನಿಮ್ಮ ಜ್ಞಾನದ ಶಿಖರ ಬಹು ಎತ್ತರದ್ದು. ಆದರೆ ಸ್ವಸಾಮರ್ಥ್ಯ‌ವನ್ನು ಅರಿತು ಮುಂದುವರೆಯಿರಿ. ಇದರಿಂದ ಯಶಸ್ಸು ಹೊಂದಬಹುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಅದೃಷ್ಟ ಸಂಖ್ಯೆ:2

ಕಟಕ

ಕಟಕ

ಮನೆಯ ಮತ್ತು ಹೊರಗಿನ ವ್ಯಾಜ್ಯಗಳಲ್ಲಿ ಹಣ್ಣಾಗಿದ್ದೀರಿ. ಹೀಗಾಗಿ ಕೆಲವು ಹಿರಿಯರ ಮಧ್ಯಸ್ಥಿಕೆಯಿಂದ ಹೊಂದಾಣಿಕೆ ಮಾಡಿಕೊಳ್ಳಲು ಇದು ಸೂಕ್ತ ಕಾಲ. ನಿಮ್ಮದೆ ಸರಿ ಎಂದು ಹಠಕ್ಕೆ ಬಿದ್ದು ವಾದ ಮಾಡದಿರಿ. ಇದರಿಂದ ತೊಂದರೆ ಎದುರಾಗುವುದು. ಆಪತ್‌ ಕಾಲದಲ್ಲಿ ಆದವನೇ ನೆಂಟ ಎಂಬಂತೆ ನಿಮ್ಮ ಹಳೆಯ ಗೆಳೆಯನೊಬ್ಬ ಅದ್ಭುತವಾದ ಬೆಂಬಲವನ್ನು ಒದಗಿಸಿ ಮನದ ಸಂತೋಷವನ್ನು ಹೆಚ್ಚಿಸುವನು ಮತ್ತು ಬಹುದಿನಗಳಿಂದ ನೆನೆಗುದಿಗೆ ಬಿದ್ದ ಕಾರ್ಯವು ಚಾಲನೆಗೊಳ್ಳುವುದು. ಅದೃಷ್ಟ ಸಂಖ್ಯೆ:3

ಸಿಂಹ

ಸಿಂಹ

ವಿದೇಶ ಪ್ರವಾಸವನ್ನು ಮಾಡಬೇಕೆಂದು ಚಿಂತಿಸದೆ ಇದ್ದ ನಿಮಗೆ ದಿಢೀರನೇ ಬರುವ ಆಮಂತ್ರಣವನ್ನು ಒಪ್ಪಿಕೊಳ್ಳಲು ಹಿಂಜರಿಕೆ ಆಗುವುದು. ಆದರೆ ಹೆದರುವ ಅವಶ್ಯಕತೆ ಇರುವುದಿಲ್ಲ. ಭಗವಂತ ಒಳಿತನ್ನು ಮಾಡುವನು.ಭ್ರಮೆಯ ಕಾರಣದಿಂದ ಹಗ್ಗ ಹಾವಿನ ಹಾಗೆ ಭಯ ಹುಟ್ಟಿಸುತ್ತಿದೆ. ಇದರಿಂದ ಅನಗತ್ಯ ಗೊಂದಲ ಉಂಟಾಗುವುದು. ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಅದೃಷ್ಟ ಸಂಖ್ಯೆ:4

ಕನ್ಯಾ

ಕನ್ಯಾ

ಹುಡುಕುತ್ತಿದ್ದ ಬಳ್ಳಿ ಕಾಲಿಗೆ ತೊಡರಿಕೊಂಡಂತೆ ನಿಮ್ಮ ಮನೋಕಾಮನೆಗಳು ಗುರುವಿನ ಅನುಗ್ರಹದಿಂದ ಅತಿ ಶೀಘ್ರದಲ್ಲಿಯೇ ನೆರವೇರುವವು. ನಿಮ್ಮ ಈ ಪ್ರಗತಿ ಕಂಡು ಇತರರು ಅಸೂಯೆ ಪಡುವರು. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಅಪವಾದ ತಪ್ಪಿದ್ದಲ್ಲ. ಮೇಲಾಗಿ ನಿಮ್ಮ ಗ್ರಹಗತಿಗಳು ಅಷ್ಟೇನೂ ಶುಭ ಫಲದಾಯಕವಾಗಿಲ್ಲ. ತಾಳ್ಮೆಯಿಂದ ಇರಿ. ಎಲ್ಲವೂ ಈಶನ ಇಚ್ಛೆಯಂತೆ ಜರುಗುವುದು. ಅದೃಷ್ಟ ಸಂಖ್ಯೆ:5

ತುಲಾ

ತುಲಾ

ಜಯ ಇರುವವರೆಗೂ ಭಯವಿಲ್ಲ. ಅಂತೆಯೇ ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿ ದಿನವೂ ಸಂತೋಷದ ದಿನವೇ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸದ ಕ್ಷ ಣಗಳನ್ನು ಕಳೆಯುವಿರಿ. ಮಕ್ಕಳ ಮೊಂಡಾಟ ನಿಮಗೆ ಕೋಪ ತರಿಸುವುದು. ಮಕ್ಕಳ ಶಾಲಾ ಪ್ರಗತಿಯ ನ್ಯೂನತೆ ಸರಿಪಡಿಸಲು ಶಾಲೆಯಿಂದ ನಿಮಗೆ ನೋಟೀಸ್‌ ಬರುವ ಸಾಧ್ಯತೆ ಇದೆ. ಈ ವಿಚಾರವಾಗಿ ಮಕ್ಕಳನ್ನು ಶಿಕ್ಷಿಸದೆ ಪ್ರೀತಿಯಿಂದ ಬುದ್ಧಿ ಹೇಳಿ. ಅದೃಷ್ಟ ಸಂಖ್ಯೆ:9

ವೃಶ್ಚಿಕ

ವೃಶ್ಚಿಕ

ಹೊಸ ಕಾರ್ಯಕ್ರಮದ ಅಂತಿಮ ಪಟ್ಟಿಯನ್ನು ನಿರ್ಣಯಿಸಲು ಕಾಲಾವಕಾಶ ತೆಗೆದುಕೊಳ್ಳಿ. ನಿಮ್ಮಿಂದ ಶಿಸ್ತುಬದ್ಧ ಕಾರ್ಯಕ್ರಮವನ್ನು ವೀಕ್ಷಿಸಲು ಕಾತುರರಾಗಿದ್ದಾರೆ. ಅವರಿಗೆ ಭ್ರಮ ನಿರಸನ ಮಾಡಬೇಡಿ.ಬಂಧು ಒಬ್ಬರ ಅನಾರೋಗ್ಯ ನಿಮಿತ್ತ ಆಸ್ಪತ್ರೆಗಳಿಗೆ ಓಡಾಟ, ಗಡಿಬಿಡಿ ಜಾಸ್ತಿಯಾಗಲಿದೆ. ಆದರೆ ಎಲ್ಲದಕ್ಕೂ ಸಮಯದ ಕೊರತೆ ಎದ್ದು ಕಾಣುವುದು. ಇತರೆ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ರೋಗಿಯ ಆರೈಕೆ ಮಾಡುವುದು ಆದ್ಯ ಕರ್ತವ್ಯವಾಗಿದೆ. ಅದೃಷ್ಟ ಸಂಖ್ಯೆ:8

ಧನುಸ್ಸು

ಧನುಸ್ಸು

ನಿಮ್ಮ ಜವಾಬ್ದಾರಿಗಳು ಪ್ರತಿದಿನ ಮಾನಸಿಕ ಒತ್ತಡವನ್ನು ತರುತ್ತಿವೆ. ಒಂದು ಸಮಸ್ಯೆಯನ್ನು ಬಗೆಹರಿಸುವಷ್ಟರಲ್ಲಿ ಮತ್ತೊಂದು ಸಮಸ್ಯೆ ಎದುರಾಗುವುದು. ಈ ಜವಾಬ್ದಾರಿ ಕೆಲಸ ಬೇಡವೇ ಬೇಡಪ್ಪ ಎಂದೆನಿಸುವುದು.ಯಾವುದೇ ಕಾರ್ಯಯೋಜನೆಗಳನ್ನು ಹಮ್ಮಿಕೊಂಡರೂ ಸಹಧರ್ಮಿಣಿ ಸಲಹೆ ಪಡೆಯಿರಿ. ಅದರಿಂದ ನಿಮ್ಮ ಕಾರ್ಯ ಯೋಜನೆಗಳು ಯಶಸ್ಸಿನತ್ತ ಸಾಗುವವು. ದೂರದ ಪ್ರಯಾಣವೊಂದಕ್ಕೆ ರೆಡಿ ಆಗುವಿರಿ. ಅದೃಷ್ಟ ಸಂಖ್ಯೆ:6

ಮಕರ

ಮಕರ

ಪದೇ ಪದೆ ವಿರೋಧಿಗಳಿಂದ ಬರುತ್ತಿರುವ ಕಿರಿಕಿರಿಗಳು ಗೆಳೆಯನ ಬೆಂಬಲದಿಂದ ಪರಿಹಾರಗೊಳ್ಳುವವು. ಈ ಸಂಕಷ್ಟಗಳಿಗೆ ಮನೆಯ ವಾಸ್ತುವೇ ಕಾರಣ ಎಂದು ಮನೆ ಬದಲಾಯಿಸಲು ಮನಸ್ಸು ಮಾಡುವುದು ಸೂಕ್ತವಲ್ಲ.ಒಳ್ಳೆಯತನ ಪ್ರದರ್ಶಿಸುವ ನಿಮ್ಮ ವಿನಯ, ಯಶಸ್ಸಿನ ದಾರಿಯನ್ನು ತೋರಿಸಿಕೊಡಲಿದೆ. ಆದಾಯಕ್ಕೆ ತಕ್ಕಷ್ಟೆ ಖರ್ಚು ಬರುವುದರಿಂದ ಹಣಕಾಸಿನ ವಿಷಯದಲ್ಲಿ ಕೈಹಿಡಿತ ಮಾಡುವುದು ಒಳ್ಳೆಯದು. ಅದೃಷ್ಟ ಸಂಖ್ಯೆ:4

ಕುಂಭ

ಕುಂಭ

ಸದ್ಯದ ಪರಿಸ್ಥಿತಿಯಲ್ಲಿ ಸ್ವತಂತ್ರ ನಿರ್ಣಯ ತೆಗೆದುಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ಸ್ನೇಹಿತರ ಮತ್ತು ಬಂಧುಗಳಿಂದ ಸಲಹೆಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ. ಪರರ ಸಲಹೆ ಪಡೆಯುವುದು ಅವಮಾನವಲ್ಲ.ಗೆಳೆಯರು ಬೆಂಬಲದ ಭರವಸೆ ಕೊಟ್ಟು ಹಿಂಜರಿಯುತ್ತಾರೆ. ಈ ಬಗ್ಗೆ ನಿರಾಶರಾಗದಿರಿ. ಸರ್ವ ವಿಘ್ನ ನಿವಾರಕನಾದ ಗಣೇಶನನ್ನು ಪ್ರಾರ್ಥಿಸಿ. ಸಂಜೆ ಬಡವರಿಗೆ ಆಹಾರ ನೀಡಿ. ಅದೃಷ್ಟ ಸಂಖ್ಯೆ:2

ಮೀನ

ಮೀನ

ಬಹು ಮುಖ್ಯವಾದ ಕಾಗದ ಪತ್ರಗಳನ್ನು ಜೋಪಾನವಾಗಿ ಇಟ್ಟುಕೊಳ್ಳಿ. ಕಚೇರಿಯಲ್ಲಿ ಮತ್ತು ಮನೆಯಲ್ಲಿ ನಿಮ್ಮ ಮಾತಿಗೆ ಎಲ್ಲರೂ ಬೆಲೆ ಕೊಡುವರು. ಮೇಲಧಿಕಾರಿಗಳ ಕೃಪೆಗೆ ಪಾತ್ರರಾಗುವಿರಿ. ನಿಮ್ಮ ಕಾರ್ಯವೈಖರಿಯನ್ನು ಯಾರೂ ಪತ್ತೆ ಮಾಡಲು ಸಾಧ್ಯವಿಲ್ಲ. ನೀರಿನಲ್ಲಿ ಮೀನಿನ ಹೆಜ್ಜೆಯನ್ನು ಗುರುತು ಹಿಡಿಯಲು ಕಷ್ಟ ಎಂಬಂತೆ ನಿಮ್ಮ ಮನಸ್ಸು ವಿಚಿತ್ರವಾದುದು. ಹಾಗಾಗಿ ಕೆಲವರು ನಿಮ್ಮನ್ನು ತಪ್ಪಾಗಿ ಅಥೈರ್‍ಸಿಕೊಳ್ಳುವರು.ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp

English summary

your daily horoscope 18 July 2019

Know what astrology and the planets have in store for you today. Choose your zodiac sign and read the details..
Story first published: Thursday, July 18, 2019, 10:38 [IST]
X
Desktop Bottom Promotion