Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 1 hr ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 15 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 15 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
Don't Miss
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Movies ನಟಿ ಪ್ರೀತಿ ಜಿಂಟಾ ಮದುವೆ ಮುನ್ನವೇ 34 ಮಕ್ಕಳಿಗೆ ತಾಯಿ ಪ್ರೀತಿ ನೀಡಿದ ವಿಷಯ ನಿಮಗೆ ಗೊತ್ತೇ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
27-5-2019- ಸೋಮವಾರದ ದಿನ ಭವಿಷ್ಯ
ಜೀವನ ಎನ್ನುವುದು ಒಂದು ರಸ್ತೆ ಇದ್ದಂತೆ. ನಿರಾಸೆ ಎನ್ನುವುದು ರಸ್ತೆಯ ಉಬ್ಬು ತಗ್ಗುಗಳು. ನಾವು ಸಾಗುವ ದಾರಿಯಲ್ಲಿ ಉಬ್ಬು ತಗ್ಗುಗಳು ಬಂತೆಂದು ಮಾನಸಿಕವಾಗಿ ಕಿರಿಕಿರಿಗೆ ಒಳಗಾಗಿ ನಮ್ಮ ಸಂಚಾರವನ್ನು ನಿಲ್ಲಿಸಬಾರದು. ಎಂತಹದ್ದೇ ಉಬ್ಬು ತಗ್ಗುಗಳು ಎದುರಾದರೂ ನಿಧಾನವಾಗಿ ಅಥವಾ ಕಾಳಜಿಯಿಂದ ಅದನ್ನು ದಾಟಿ ಮುಂದೆ ಸಾಗಬೇಕು. ಆಗ ನಮ್ಮ ಸಂಚಾರ ಸುಗಮವಾಗುತ್ತದೆ. ನಮ್ಮ ಜೀವನದ್ದಲ್ಲೂ ಹಾಗೆಯೇ. ಯಾವುದಾದರೂ ಕಷ್ಟ, ಅಡೆತಡೆ ಅಥವಾ ಮೂರ್ಖರ ಚುಚ್ಚು ಮಾತುಗಳಿಗೆ ಕಿವಿಕೊಡುವುದು ಅಥವಾ ಅತಿಯಾದ ಚಿಂತೆಗೆ ಒಳಗಾಗಿ ಬೇಸರಗೊಳ್ಳುವ ಗೋಜಿಗೆ ಹೋಗಬಾರದು. ಸತ್ಯದ ದಾರಿಯಲ್ಲಿ, ಸಮತೋಲನದ ಮನಃಸ್ಥಿತಿಯಲ್ಲಿ ಮುಂದೆ ಸಾಗಬೇಕು.
ಆಗ ನಮ್ಮ ಜೀವನ ಸುಖ ಹಾಗೂ ಸಂತೋಷದಿಂದ ಕೂಡಿರುತ್ತದೆ. ಅಲ್ಲದೆ ಇತರ ವ್ಯಕ್ತಿಗಳಿಗೂ ನಾವು ಮಾದರಿಯಾಗುತ್ತೇವೆ. ಸೋಮವಾರವಾದ ಇಂದು ಸಾಮಾನ್ಯವಾಗಿ 2018ರ ಮೊದಲ ದಿನ. ಬದುಕಿನಲ್ಲಿ ಸುಂದರ ಕನಸು ಹಾಗೂ ಆತ್ಮವಿಶ್ವಾಸವನ್ನು ತುಂಬಿಕೊಂಡು ಕೆಲಸವನ್ನು ಆರಂಭಿಸಿ. ನಿಮ್ಮ ಈ ಸುಂದರ ಬದುಕಿಗೆ ಗ್ರಹಗತಿಗಳ ಸಹಕಾರ ಎಷ್ಟರ ಮಟ್ಟಿಗೆ ಇದೆ ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....
ಮೇಷ ( 27 ಮೇ 2019)
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಹರಿದು ಬರುವುದು. ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:2
ವೃಷಭ
ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆಉತ್ತಮವಾಗಿರುವುದಿಲ್ಲ. ನಿಮ್ಮ ನಿರೀಕ್ಷೆಯನ್ನು ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ತಿಳಿಗೊಳ್ಳುವವು. ಗುರು ರಾಘವೇಂದ್ರ ಸ್ವಾಮಿಯ ಅಶೀರ್ವಾದ ಪಡೆಯಿರಿ ಮತ್ತು ಗುರು ಕಾಣಿಕೆ ಸಲ್ಲಿಸಿ.9845743807 ಅದೃಷ್ಟ ಸಂಖ್ಯೆ:1
ಮಿಥುನ
ವಿನಾಕಾರಣ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ ಆದರಗಳು ದೊರೆಯುವವು. ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ.9845743807 ಅದೃಷ್ಟ ಸಂಖ್ಯೆ:4
ಕಟಕ
ವಾಯುಪ್ರಕೋಪ, ಇಲ್ಲವೆ ಮಿತಿ ಮೀರಿದ ಅಲರ್ಜಿ ತೊಂದರೆಗಳು ನಿಮ್ಮನ್ನು ಕಾಡುವ ಸಾಧ್ಯತೆ ಇವೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮ ಕಾಪಾಡಿಕೊಳ್ಳಿ. ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಇರಲಿ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:6
ಸಿಂಹ
ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ.ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:4
ಕನ್ಯಾ
ನಿಮ್ಮ ಬುದ್ಧಿಮತ್ತೆ ಎಲ್ಲೆಡೆ ಚರ್ಚೆಗೆ ಒಳಪಡುವುದು ಮತ್ತು ಈ ವರ್ಚಸ್ಸಿನ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವು ಇನ್ನೂ ಎತ್ತರಕ್ಕೆ ಏರಲು ಅನುಕೂಲವಾಗುವುದು. ಪರರ ಮಾತುಗಳನ್ನು ಕೇಳಿಸಿಕೊಂಡು ಕ್ರಮ ಕೈಗೊಳ್ಳುವ ವಿಚಾರ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:2
ತುಲಾ
ಸದಾ ನಕಾರಾತ್ಮಕ ಚಿಂತನೆಯಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದಲ್ಲದೆ ಮನೆಯ ಇತರ ಸಮಸ್ಯೆಗೂ ಕಾರಣರಾಗುವಿರಿ. ಆದಷ್ಟು ಒಳಿತನ್ನು ಚಿಂತಿಸಿದರೆ ಒಳಿತಾಗುವುದು. ಆಶಾವಾದಿಗೆ ಜೀವನ ನಿರಾಶಾವಾದಿಗೆ ಅಲ್ಲ ಎನ್ನುವ ತತ್ವವನ್ನು ತಿಳಿಯಿರಿ. ನಿಮ್ಮ ಬಳಿ ಹಲವು ವಿಚಾರಗಳನ್ನು ತಿಳಿಯಲು ಬರುವ ಜನರು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ನೆನೆದು ಅವರಿಗೆ ಸೂಕ್ತ ಉತ್ತರವನ್ನು ಪರಿಹಾರ ರೂಪದಲ್ಲಿ ನೀಡುವಿರಿ. ಇದರಿಂದ ಜನರು ಸಂತುಷ್ಟರಾಗುವರು.9845743807 ಅದೃಷ್ಟ ಸಂಖ್ಯೆ:8
ವೃಶ್ಚಿಕ
ಏಕಕಾಲದಲ್ಲಿ ಎರಡೂ ಕಡೆಯಿಂದ ಉತ್ತಮ ಅವಕಾಶಗಳು ಬರಲಿದ್ದು ಈ ಪೈಕಿ ಒಂದನ್ನು ಶುದ್ಧ ಮನಸ್ಸಿನಿಂದ ಆಯ್ದುಕೊಳ್ಳಿ. ಎರಡು ದೋಣಿಗಳಲ್ಲಿ ಕಾಲಿಟ್ಟು ಪ್ರಯಾಣ ಬೆಳೆಸಿದರೆ ಇಚ್ಛಿತ ಗುರಿ ತಲುಪಲು ಆಗುವುದಿಲ್ಲ.ನಿಮ್ಮ ಮುಂದೆ ಹಲವು ದಾರಿಗಳು ಗೋಚರಿಸುತ್ತಿವೆ. ಯಾವ ಮಾರ್ಗದಲ್ಲಿ ಹೋದರೆ ಉತ್ತಮ ಎಂಬ ಗೊಂದಲಕ್ಕೆ ಒಳಗಾಗುವಿರಿ. ಹಾಗಾಗಿ ಒಂದೇ ಮನಸ್ಸಿನಿಂದ ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ ಅವರು ಮಾರ್ಗ ತೋರುವರು.9845743807 ಅದೃಷ್ಟ ಸಂಖ್ಯೆ:9
ಧನುಸ್ಸು
ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವೂ ಕನ್ನಡಿಯ ಗಂಟಿನಂತೆ ತೋರುತ್ತಿದ್ದರೂ ಅದನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ಹಿರಿಯರ ಅಶೀರ್ವಾದ ಆಶೀರ್ವಾದ ಪಡೆದರೆ ಉತ್ತಮ ಫಲ ಕಾಣುವಿರಿ. ನಿಮ್ಮಿಂದ ದೂರವಾಗಿದ್ದ ವ್ಯಕ್ತಿಗಳೇ ಪುನಃ ನಿಮ್ಮ ಬಳಿ ಬಂದು ಸ್ನೇಹದ ಹಸ್ತ ಚಾಚುವರು. ಅವರ ಅಂತರಂಗದ ಭಾವನೆಗಳು ಶುದ್ಧವೆಂದು ಕಂಡುಬಂದಲ್ಲಿ ಅವರ ಸಖ್ಯವನ್ನು ಬೆಳೆಸಿ. ಹಣಕಾಸು ಸ್ಥಿತಿ ಉತ್ತಮವಾಗುವುದು. 9845743807 ಅದೃಷ್ಟ ಸಂಖ್ಯೆ:4
ಮಕರ
ಕೆಲವೊಂದು ಮಾತಿನ ವ್ಯವಹಾರಗಳನ್ನು ನೇರಾ ನೇರ ಮುಖಕೊಟ್ಟು ಮಾಡುವುದು ಒಳ್ಳೆಯದು. ಇದರಿಂದ ನಿಮ್ಮ ಬಗ್ಗೆ ಹೆಚ್ಚಿನ ಗೌರವ ಮೂಡುವುದು. ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವುಂಟಾಗುವುದು. ಪರರು ನಿಮ್ಮ ಮೇಲೆ ಅಪನಂಬಿಕೆ ಇಟ್ಟಿರುವ ವಿಚಾರ ನಿಮಗೆ ತಿಳಿದೇ ಇದೆ. ಆದರೆ ಅವರ ಅಪನಂಬಿಕೆ ದೂರವಾಗುವಂತಹ ಒಂದು ಪ್ರಮುಖ ಘಟನೆ ಜರುಗುವುದು. ಇದರಿಂದ ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:2
ಕುಂಭ
'ಮಾತು ಬೆಳ್ಳಿ ಮೌನ ಬಂಗಾರ'. ಜನ್ಮಸ್ಥ ಶನಿಯು ಕೆಲವೊಮ್ಮೆ ಅನೃತಗಳನ್ನು ನುಡಿಸುವನು. ಇದರಿಂದ ಸುತ್ತಲಿನ ಪರಿಸರದ ಮೇಲೆ ಪರಿಣಾಮ ಬೀರುವುದು. ಹಾಗಾಗಿ ಮೌನ ವಹಿಸುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಎಚ್ಚರ ಇರಬೇಕು. ಅಗತ್ಯಕ್ಕಿಂತಲೂ ಹೆಚ್ಚು ಖರ್ಚು ಮಾಡುವ ಸಂದರ್ಭ ಎದುರಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಇರಲಿ. ಮನದಲ್ಲಿ ದುರ್ಗಾದೇವಿ ಜಪವನ್ನು ಮಾಡಿ. 9845743807 ಅದೃಷ್ಟ ಸಂಖ್ಯೆ:2
ಮೀನ
ಅಲೆದಾಡುವ ಶ್ರಮವೇ ಜಾಸ್ತಿ. ಆದರೂ ನಿರಾಶಾರಾಗದಿರಿ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯು ಉತ್ತಮಗೊಳ್ಳುವುದು. ಪಿತ್ರಾರ್ಜಿತ ಆಸ್ತಿಯ ವಿಚಾರದಲ್ಲಿ ನಿಮಗೆ ಅನುಕೂಲವಾಗುವುದು. ಹಲವು ವಿಚಾರಗಳಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗುವುದು. ಆದಾಗ್ಯೂ ಕರ್ತವ್ಯದಲ್ಲಿನ ನಿಮ್ಮ ನಿಷ್ಠೆಯು ಸಾಮಾಜಿಕವಾಗಿ ಗೌರವಿಸಲ್ಪಡುವುದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. 9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp