Just In
Don't Miss
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- News ಡಿಕೆ ಸುರೇಶ್ ನಿದ್ದೆಗೆಡಿಸಿದ ಡಾಕ್ಟರ್; ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ: ಭವಿಷ್ಯ ನುಡಿದ ಸಿದ್ದರಾಮ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
28-6-2019: ಶುಕ್ರವಾರದ ದಿನ ಭವಿಷ್ಯ
ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ.
ನಮ್ಮೊಂದಿಗೆ
ಬಂದ
ವ್ಯಕ್ತಿಗಳು
ಹಾಗೂ
ಅನುಭವಿಸಿದ
ಸನ್ನಿವೇಶಗಳ
ಅನುಭವ
ಹಾಗೂ
ನೆನಪುಗಳು
ಮಾತ್ರವೇ
ನಮ್ಮೊಂದಿಗೆ
ಉಳಿದುಕೊಳ್ಳುತ್ತವೆ.
ಆ
ಅನುಭವಗಳೇ
ಜೀವನ
ಎಂದರೇನು?
ಎನ್ನುವ
ಪಾಠವನ್ನು
ಹೇಳಿಕೊಡುತ್ತವೆ.
ಶುಕ್ರವಾರವಾದ
ಈ
ಶುಭ
ದಿನ
ಆ
ಮಹಾ
ಲಕ್ಷ್ಮಿಯು
ನಿಮ್ಮ
ಆರ್ಥಿಕ
ಸ್ಥಿತಿಯಲ್ಲಿ
ಯಾವೆಲ್ಲಾ
ಬದಲಾವಣೆಯನ್ನು
ತರುತ್ತಾಳೆ?
ನಿಮ್ಮ
ಜೀವನದ
ಪಯಣದಲ್ಲಿ
ನಾಳೆ
ಯಾವೆಲ್ಲಾ
ಘಟನೆಗಳು
ನಡೆಯಬಹುದು?
ಅವುಗಳಿಂದ
ನೀವೇನು
ಜೀವನದ
ತಾತ್ಪರ್ಯ
ಪಡೆದುಕೊಳ್ಳುವಿರಿ
ಎನ್ನುವ
ವಿವರಣೆಯನ್ನು
ಬೋಲ್ಡ್
ಸ್ಕೈ
ನೀಡುತ್ತಿದೆ...ಪಂಡಿತ್
ಮಂಜುನಾಥ್
ಶಾಸ್ತ್ರೀ
ದೈವಜ್ಞ
ಜ್ಯೋತಿಷ್ಯರು
9845743807
ಮೇಷ ( 28 June 2019)
ಕಾರಣವಿಲ್ಲದೆ ಜಗಳಕ್ಕೆ ಬರುವವರ ಬಗ್ಗೆ ಎಚ್ಚರವಿರಲಿ. ಭಯಪಡದೆ ಇಂತಹ ಜನರನ್ನು ದೂರ ಇಡುವುದು ಒಳ್ಳೆಯದು. ಸಂಗಾತಿಯ ಸಕಾಲಿಕ ಎಚ್ಚರಿಕೆ ಮಾತನ್ನು ಆಲಿಸಿ ಮತ್ತು ಪಾಲಿಸಿ. ಇದರಿಂದ ಶುಭವಾಗುವುದು.ಕೆಲವು ದಿನಗಳಿಂದ ಬರಲಿಲ್ಲವಲ್ಲ ಎಂದು ತಿಳಿದುಕೊಂಡ ಹಣದ ಬಾಬ್ತನ್ನು ನಿರಾಯಾಸವಾಗಿ ಸ್ವೀಕರಿಸುವಿರಿ. ಇದರಿಂದ ನೀವು ಮಾಡಿದ ಸಾಲದ ತೀರುವಳಿಗೆ ಸಹಾಯ ವಾಗುವುದು. ಮಕ್ಕಳ ಮೂಲಕವಾಗಿ ಹೊಸ ಆಸ್ತಿ, ನಿವೇಶನ ಇತ್ಯಾದಿ ಹೊಂದಲು ಕಾಲ ಕೂಡಿ ಬರುವುದು. ಇದರಿಂದ ಮನೆಯ ಸದಸ್ಯರು ಹರ್ಷಿತರಾಗುವರು. ಗೆಳೆಯರು ಇಲ್ಲವೆ ಆತ್ಮೀಯರು ನಿಮಗೆ ಸಹಾಯಹಸ್ತ ನೀಡುವರು.9845743807 ಅದೃಷ್ಟ ಸಂಖ್ಯೆ:2
ವೃಷಭ
ಹೊಸ ಕಾರ್ಯಕ್ರಮ ಅಥವಾ ಯೋಜನೆಗಳ ಅನುಷ್ಠಾನಕ್ಕೆ ಈ ದಿನ ನಿಮಗೆ ಅನುಕೂಲವಾಗಿದೆ. ವಾಹನ ಖರೀದಿ ಬಗ್ಗೆ ಚಿಂತಿಸುವಿರಿ ಮತ್ತು ನಿಮ್ಮ ಮನಸ್ಸಿಗೆ ಒಪ್ಪುವ ವಾಹನವನ್ನು ಖರೀದಿ ಮಾಡುವಿರಿ. ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ನಿಮ್ಮ ಪರಿಶ್ರಮ ಹಾಗೂ ಬಂಡವಾಳ ಸಫಲತೆಯನ್ನು ಹೊಂದುವುದು. ಹಣಕಾಸಿನ ವಿಷಯದಲ್ಲಿ ಚಾಣಾಕ್ಷ ಮತಿಗಳಾದ ನೀವು ವ್ಯವಹಾರದಲ್ಲಿ ಕುಶಲತೆಯಿಂದ ಇರುವಿರಿ. ನಿಮ್ಮ ಸೀದಾಸಾದಾ ಗುಣ ನಿಮ್ಮನ್ನು ಎಲ್ಲರೂ ಗೌರವಾದರಗಳಿಂದ ಕಾಣುವಂತೆ ಮಾಡುವುದು. ಒಂದು ದೊಡ್ಡ ಸಮಸ್ಯೆ ಮಂಜಿನಂತೆ ಕರಗಿ ಹೋಗುವುದರಿಂದ ಮನಸ್ಸು ನಿರಾಳವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗುವುದು. 9845743807 ಅದೃಷ್ಟ ಸಂಖ್ಯೆ:1
ಮಿಥುನ
ನೀವು ನಂಬಿದ್ದ ನಿಮ್ಮ ಹತ್ತಿರದವರು ನಿಮಗೆ ಬೇಸರವಾಗುವಂತೆ ನಿಮ್ಮ ವಿರುದ್ಧ ವೈರ ಸಾಧಿಸುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಎಚ್ಚರದಿಂದ ಇರುವುದು ಒಳ್ಳೆಯದು. ಮಕ್ಕಳ ಕಲರವ ನಿಮಗೆ ಹೆಚ್ಚಿನ ಸಂತೋಷವನ್ನುಂಟು ಮಾಡುವುದು. ಸುಮ್ಮನೆ ಹತ್ತಿರದವರೊಬ್ಬರನ್ನು ಎದುರು ಹಾಕಿಕೊಳ್ಳುವ ಭಯವಿರುತ್ತದೆ. ಹಾಗಾಗಿ ಇನ್ನೊಬ್ಬರ ವ್ಯವಹಾರದಲ್ಲಿ ಮೂಗು ತೂರಿಸದೆ ಇರುವುದು ಒಳ್ಳೆಯದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಬಡವರಿಗೆ ಆಹಾರವನ್ನು ನೀಡಿ.ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವೊಂದು ಇಂದಿನ ಶ್ರಮದಿಂದಾಗಿ ಸುಖಾಂತ್ಯ ಕಾಣುವುದು. ಹಿರಿಯರ ಆಶೀರ್ವಾದ ಪಡೆದು ಕಾರ್ಯವನ್ನು ಆರಂಭಿಸಿ ದಿನದ ಅಂತ್ಯದ ವೇಳೆಯಲ್ಲಿ ಸಿಹಿ ಸುದ್ದಿ ಕೇಳುವಿರಿ.9845743807 ಅದೃಷ್ಟ ಸಂಖ್ಯೆ:5
ಕಟಕ
ವೃತ್ತಿಯಲ್ಲಿ ಬದಲಾವಣೆಯ ಗಾಳಿ ಬೀಸಲಾರಂಭಿಸಿದೆ. ಹಾಗಾಗಿ ವೃತ್ತಿಯಲ್ಲಿ ಹೊಸ ಗಳಿಕೆಯು ಲಭ್ಯವಾಗಲಿದೆ. ಹೊಸ ವಸ್ತುಗಳನ್ನು ಖರೀದಿ ಮಾಡಲು ನೂತನ ಅವಕಾಶ ಕೂಡಿ ಬರುವುದು. ನಿಮ್ಮ ಸಾಧನೆಗೆ ತಕ್ಕ ಗೌರವ ಆದರಗಳು ಸಿಗುವ ಸಾಧ್ಯತೆಗಳಿವೆ. ಜನರನ್ನು ವಿಶ್ವಾಸಕ್ಕೆ ಪಡೆದು ಅವರಿಂದ ಕಾರ್ಯ ಮಾಡಿಸಿಕೊಳ್ಳುವಿರಿ. ಕಚೇರಿಯಲ್ಲಿನ ಸಹೋದ್ಯೋಗಿಗಳು ನಿಮ್ಮ ಬೆಂಬಲಕ್ಕೆ ನಿಲ್ಲುವರು.ನಿಮ್ಮ ನಿರೀಕ್ಷೆಗೆ ಸರಿಹೊಂದುವ ಬಾಳಸಂಗಾತಿಯ ಆಯ್ಕೆಯ ಬಗೆಗೆ ಸಾಫಲ್ಯತೆ ಪಡೆಯಲು ಅವಕಾಶಗಳಿವೆ. ಹೆಚ್ಚಿನ ಲಾಭಾಂಶ ಪಡೆಯಲು ಆಂಜನೇಯ ಸ್ತೋತ್ರ ಪಠಿಸಿ.9845743807 ಅದೃಷ್ಟ ಸಂಖ್ಯೆ:4
ಸಿಂಹ
ಧೈರ್ಯ ಸಾಹಸ ಪ್ರವೃತ್ತಿಯವರಾದ ನೀವು ಮುನ್ನುಗ್ಗುವುದರಲ್ಲಿ ಹಿಂದೆ ಬೀಳಬೇಡಿ. ಹಾಗಂತ ಆತುರದ ನಿರ್ಧಾರ ಸೂಕ್ತವಲ್ಲ. ಹಿರಿಯರ ಆಶೀರ್ವಾದದಿಂದ ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯುವುದು.ನಕಾರಾತ್ಮಕ ಧೋರಣೆಗಳನ್ನು ಕೈಬಿಡಿ. ಉತ್ತಮ ಜನರಿಂದ ನಿಮಗೆ ಬೆಂಬಲ ದೊರೆಯುವುದು. ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಕ್ಕಳ ಅಭಿವೃದ್ಧಿಯಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು.ದೂರದ ಊರಿನ ಪ್ರವಾಸ ದಿಢೀರಾಗಿ ನಿರ್ಧಾರವಾಗುವುದು. ಅದಕ್ಕಾಗಿ ತಯಾರಿ ಕೂಡಾ ಮಾಡಿಕೊಳ್ಳಬೇಕಾಗುವುದು. ಕುಲದೇವರ ಪ್ರಾರ್ಥನೆಯಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವುವು.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ಮಾತೇ ಮುತ್ತು ಮಾತೇ ಶತ್ರು. ಹಾಗಾಗಿ ಬೇಡದ ಮಾತುಗಳನ್ನು ಮಾತನಾಡಿ ಸುಮ್ಮನೆ ಕಿರಿಕಿರಿಗೆ ಸಿಕ್ಕಿಹಾಕಿಕೊಳ್ಳದಿರಿ. ಕ್ಲಿಷ್ಟ ಸನ್ನಿವೇಶಗಳನ್ನು ಜಾಣ್ಮೆಯಿಂದ ಎದುರಿಸುವುದು ಒಳ್ಳೆಯದು. ಅಡಿಕೆ ಕದ್ದಮಾನ ಆನೆ ಕೊಟ್ಟರೂ ಹೋಗದು ಎಂಬಂತೆ ನೀವು ತಮಾಷೆಗಾಗಿ ಮಾತಾಡಿದ ಒಂದು ಪ್ರಸಂಗ ನಿಮ್ಮ ಗೌರವಕ್ಕೆ ಕುಂದು ತರಬಹುದು. ಹಿರಿಯರಾಗಿ ಹಿರಿತನದಿಂದ ಬಾಳ್ವೆ ನಡೆಸಿ.ಕಾರ್ಯ ಸಾಧನೆಗೆ ನಿಮ್ಮ ತಾಳ್ಮೆಯೆ ಉತ್ತಮ ಅಡಿಪಾಯ. ಹಾಗಾಗಿ ಎದುರಾಗುವ ಸಮಸ್ಯೆಗಳನ್ನು ನಗು ಮುಖದಿಂದಲೇ ಸ್ವೀಕರಿಸಿ. ಕಷ್ಟಗಳು ಮನುಜನ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುವುವು.9845743807 ಅದೃಷ್ಟ ಸಂಖ್ಯೆ:5
ತುಲಾ
ಆರೋಗ್ಯವೇ ಭಾಗ್ಯ ಎಂಬುದನ್ನು ನೆನೆಪಿನಲ್ಲಿಟ್ಟುಕೊಂಡರೆ ಸಾಲದು. ಅದಕ್ಕಾಗಿ ಸೂಕ್ತ ಯೋಗ , ಪ್ರಾಣಾಯಾಮಗಳನ್ನು ಮಾಡುವ ಮೂಲಕ ದೇಹ ದಂಡಿಸಿದರೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.ಖರ್ಚಿನ ದಾರಿಗಾಗಿ ನೂರೆಂಟು ರೀತಿಯ ಪಟ್ಟಿ ನಿಮ್ಮ ಎದುರಿಗೆ ಬಂದು ನಿಲ್ಲುವುದು. ಅತ್ಯಂತ ತುರ್ತು ಸಮಯದಲ್ಲಿ ಮಾತ್ರ ಹಣವನ್ನು ಖರ್ಚು ಮಾಡುವುದು ಒಳ್ಳೆಯದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಮನೆ ಒಳಗಿನ ಅಸಮಾಧಾನದ ಹೊಗೆ ನಿಮಗೆ ಉಸಿರು ಕಟ್ಟಿಸುವ ವಾತಾವರಣವನ್ನು ಸೃಷ್ಟಿಸಿದೆ. ಆದಷ್ಟು ದೇವತಾ ಕ್ಷೇತ್ರಗಳಿಗೆ ಹೋಗಿ ಬನ್ನಿ. ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:7
ವೃಶ್ಚಿಕ
ವಿಶೇಷ ಯೋಜನೆಗಳನ್ನು ಕೈಗೊಂಡು ಅದರಲ್ಲಿ ಯಶಸ್ಸು ಹೊಂದುವ ಕನಸು ಕಾಣುವಿರಿ. ನಿಮ್ಮ ಕನಸು ನನಸಾಗುವಂತೆ ದೇವರಲ್ಲಿ ಪ್ರಾರ್ಥನೆ ಮಾಡಿ ಮತ್ತು ಆಂಜನೇಯ ದೇವಸ್ಥಾನದಲ್ಲಿ ಎಳ್ಳುದೀಪ ಹಚ್ಚಿ. ನಿಮಗೆ ನೂರಾರು ಕಡೆಗಳಿಂದ ಪ್ರಶಂಸೆಗಳು ಬರುವ ಸಾಧ್ಯತೆ ಅಧಿಕ ವಾಗಿರುವುದು. ನೀವು ಮಂಡಿಸಿದ ಪ್ರಬಂಧ ಮೇಲಧಿಕಾರಿಗಳಿಂದ ಒಪ್ಪಿಗೆ ಪಡೆಯುವುದರಿಂದ ಸಂತಸದ ಕ್ಷ ಣಗಳನ್ನು ಅನುಭವಿಸುವಿರಿ.ಮಕ್ಕಳೇ ಮಾಣಿಕ್ಯ ಎಂದರು ಹಿರಿಯರು. ಆದರೆ ಈಗ ಕಾಲ ಬದಲಾಗಿದೆ. ಮಕ್ಕಳೇ ಪೀಡಕರು ಆಗಿ ಮನಸ್ಸಿಗೆ ಘಾಸಿಯನ್ನುಂಟು ಮಾಡುವರು. ಹಾಗಾಗಿ ಭಗವಂತನನ್ನು ಅನನ್ಯ ಭಕ್ತಿಯಿಂದ ಜಪಿಸಿ ಮಾನಸಿಕ ನೆಮ್ಮದಿ ಪಡೆಯಿರಿ.9845743807 ಅದೃಷ್ಟ ಸಂಖ್ಯೆ:9
ಧನುಸ್ಸು
ಪದೋನ್ನತಿಗೆ ಕಾರಣವಾಗುವ ಅನೇಕ ವಿಚಾರಗಳು ಅದೃಷ್ಟವಶಾತ್ ನಿಮ್ಮ ಪ್ರಬಲ ಅಸ್ತ್ರಗಳಾಗಿವೆ. ಇವು ನಿಮ್ಮ ವಿರೋಧಿಗಳ ವಿರುದ್ಧ ವಾಗ್ದಾಳಿ ಮಾಡಲು ಸಹಕಾರಿಯಾಗುವುವು.ಬಾಳ ಪಯಣದ ಸಂದರ್ಭದಲ್ಲಿ ಶುಭಕ್ಕೆ ಮುನ್ನುಡಿ ಬರೆಯುವ ದಿನವಾಗಿದೆ. ಭಗವಂತನ ಆಶೀರ್ವಾದ ನಿಮ್ಮ ಮೇಲಿದೆ. ಉಷ್ಣ ಸಂಬಂಧಿ ತೊಂದರೆಗಳ ನಿವಾರಣೆಗಾಗಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.ಯಾರನ್ನೋ ಮೆಚ್ಚಿಸುವುದಕ್ಕಾಗಿ ನಿಮ್ಮತನವನ್ನು ಬಿಡಲು ಮುಂದಾಗುವಿರಿ. ನಿಮ್ಮ ನಾಯಕನನ್ನು ಆರಿಸುವಲ್ಲಿ ನಿಮ್ಮ ಆತ್ಮಸಾಕ್ಷಿಗೆ ತಕ್ಮಂತೆ ನಡೆದುಕೊಳ್ಳಿ. ಇದರಿಂದ ಸಮಾಜದಲ್ಲಿ ಗೌರವ, ಮನ್ನಣೆ ದೊರೆಯುವುವು.9845743807 ಅದೃಷ್ಟ ಸಂಖ್ಯೆ:6
ಮಕರ
ಶಾಂತರಾಗಲು ನಿಮಗೆ ಹೆಚ್ಚಿನ ಸಮಯ ಬೇಕಾಗುವುದು. ಎದುರಾಳಿಗಳು ಮಾತನಾಡಿದ ರೀತಿ ನಿಮ್ಮ ಮನಸ್ಸಿನಲ್ಲಿ ಕ್ರೋಧವನ್ನು ಹುಟ್ಟುಹಾಕಿದೆ. ಕ್ರೋಧದಿಂದ ಕ್ರೋಧವನ್ನು ಸೋಲಿಸಲು ಆಗುವುದಿಲ್ಲ. ಆದಷ್ಟು ಸಹನೆ, ಪ್ರೀತಿ, ವಾತ್ಸಲ್ಯಗಳನ್ನು ರೂಢಿಸಿಕೊಳ್ಳಿ. ದುಡುಕು ಮಾತುಗಳು ಸಾಕು. ದುಡುಕಿನಿಂದ ಹಲವು ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಸ್ನೇಹಿತರೊಂದಿಗೆ ವಿರಸ ಸೂಕ್ತವಲ್ಲ. ಪ್ರತಿ ದಿನವೂ ಒಂದೇ ತರಹ ಇರುವುದಿಲ್ಲ. ತಾಳ್ಮೆಯನ್ನು ಕಾಪಾಡಿಕೊಳ್ಳಿ.ವಿವೇಕದ ವಿಚಾರವು ಶ್ರೀಮಂತಿಕೆಗಿಂತ ಘನವಾದುದು. ಇದರ ಅರಿವು ನಿಮಗೆ ಲಭ್ಯವಾಗಲಿದೆ. ದೂರ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಪ್ರಯಾಣದಲ್ಲಿ ಬೀದಿಬದಿಯ ಆಹಾರವನ್ನು ಸೇವಿಸದೆ ಇರುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:5
ಕುಂಭ
ನಿನ್ನೆಯ ಸೋಲನ್ನು ಮರೆಯಲಾಗದೆ ಪರಿತಪಿಸುತ್ತಿರುವಿರಿ. ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ನಿನ್ನೆಯ ಸೋಲು ಇಂದಿನ ಗೆಲುವಿಗೆ ಕಾರಣವಾಗುವುದು. ಹಿರಿಯರ ಆಶೀರ್ವಾದ ಪಡೆಯಿರಿ. ಅಗತ್ಯಕ್ಕೆ ತಕ್ಕಷ್ಟು ಹಣವನ್ನು ಖರ್ಚು ಮಾಡಿ. ಅನ್ಯರ ಮಾತುಗಳನ್ನು ಶಾಂತಚಿತ್ತದಿಂದ ಕೇಳಿಸಿಕೊಳ್ಳಿ. ಯಾರನ್ನೂ ಉದಾಸೀನ ಮಾಡದಿರಿ. ಕೆಲವೊಮ್ಮೆ ನಮಗೆ ಯಾರಿಂದ ಒಳಿತಾಗುವುದಿಲ್ಲ ಎಂದು ಭಾವಿಸಿದ್ದೇವೋ ಅಂತಹವರ ನೆರವು ಸಹಕಾರವನ್ನು ಕೇಳಬೇಕಾಗುವುದು.ಆಳಾಗಿ ದುಡಿವ ವ್ಯಕ್ತಿ ಅರಸನಾಗಿಯೂ ಬಾಳಬಲ್ಲ. ಅಂತೆಯೇ ಸದ್ಯದ ಗ್ರಹಸ್ಥಿತಿಯಿಂದ ನೀವು ಸಮಾಜದಲ್ಲಿ ಕನಿಷ್ಠರು ಎಂದಾದರೂ ಮುಂದೆ ನೀವೇ ರಾಜನಾಗಿ ಮೆರೆಯುವ ಕಾಲ ಬರುತ್ತದೆ. ಚಿಂತೆ ಮಾಡಬೇಡಿ ಚಿನ್ಮಯನಿದ್ದಾನೆ.9845743807 ಅದೃಷ್ಟ ಸಂಖ್ಯೆ:2
ಮೀನ
ಧೈರ್ಯಂ ಸರ್ವತ್ರ ಸಾಧನಂ ಎನ್ನುವಂತೆ ನಿಮ್ಮ ಧೈರ್ಯವೇ ನಿಮ್ಮ ಎಲ್ಲಾ ಕೆಲಸಗಳಲ್ಲೂ ವಿಜಯ ಪತಾಕೆಯನ್ನು ಹಾರಿಸಲು ನೆರವಾಗುವುದು. ಕೆಲವರಿಗೆ ಕೆಲಸದಲ್ಲಿ ಬಡ್ತಿ ಮೂಲಕ ಸಂತಸವುಂಟಾಗುವುದು.ವಿಷ್ಣುಸಹಸ್ರನಾಮ ಪಾರಾಯಣ ಮಾಡಿ. ಮಹಾ ಪರಾಕ್ರಮಶಾಲಿಯಾದ ಆಂಜನೇಯ ಸ್ವಾಮಿಯ ಮಂದಿರಕ್ಕೆ ಭೇಟಿ ಕೊಡಿ. ಸಾಧ್ಯವಾದಲ್ಲಿ ವೀಳ್ಯದೆಲೆ ಸರವನ್ನು ಭಗವಂತನಿಗೆ ಅರ್ಪಿಸಿ ನಿಮ್ಮ ಕಾರ್ಯ ಸಾಧುವಾಗುವುದು. ರಾಜಕಾರಣಿಗಳಿಗೆ ಬಿಕ್ಕಟ್ಟುಗಳು ನಿಶ್ಚಿತ. ನಿಮ್ಮನ್ನು ವಿರೋಧಿಸುವವರ ಎದುರು ನಿಮ್ಮ ದೌರ್ಬಲ್ಯವನ್ನು ಪ್ರದರ್ಶಿಸದಿರಿ. ಅವಿವೇಕದ ಕೂಗಾಟದಿಂದ ಕೆಡುಕಿಗೆ ದಾರಿ ಆಗುವ ಸಂದರ್ಭವಿರುತ್ತದೆ.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp