Just In
Don't Miss
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
29-6-2019: ಶನಿವಾರದ ದಿನ ಭವಿಷ್ಯ
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.
ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ದೈವಜ್ಞ ಜ್ಯೋತಿಷ್ಯರು 9845743807
ಮೇಷ( 29 June 2019)
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಬರುವುದು.ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಯಾವುದೇ ಕೆಲಸ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ. ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆ ಉತ್ತಮವಾಗಿರುವುದಿಲ್ಲ. ಅದೃಷ್ಟ ಸಂಖ್ಯೆ:2
ವೃಷಭ
ನಿಮ್ಮ ನಿರೀಕ್ಷೆ ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ಬಗೆ ಹರಿಯುವವು. ಗುರುವಿನ ಅಶೀರ್ವಾದ ಪಡೆದು ಗುರು ಕಾಣಿಕೆ ಸಲ್ಲಿಸಿ. ವಿನಾಕಾರಣಕ್ಕೆ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಗೌರವ, ಆದರಗಳು ದೊರೆಯುವವು.ಪ್ರವಾಸದ ವೇಳೆ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರವಿಡಿ. ನಿಮ್ಮ ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ. ಅದೃಷ್ಟ ಸಂಖ್ಯೆ:1
ಮಿಥುನ
ವಾಯುಪ್ರಕೋಪ ಅಥವಾ ಮಿತಿ ಮೀರಿದ ಅಲರ್ಜಿ ತೊಂದರೆ ನಿಮ್ಮನ್ನು ಕಾಡುವ ಸಾಧ್ಯತೆ ಇದೆ. ಊಟದಲ್ಲಿ ಆದಷ್ಟು ಶಿಸ್ತು ಕಾಪಾಡಿಕೊಳ್ಳಿ. ಮಾತನಾಡುವುದು ಅನಿವಾರ್ಯ ಆದಾಗಲೂ ಮೌನವಾಗಿರಲು ಅಭ್ಯಾಸ ಮಾಡಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಅಗತ್ಯ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಡಿ. ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಮಂತ್ರ ಜಪಿಸಿ. ಅದೃಷ್ಟ ಸಂಖ್ಯೆ:4
ಕಟಕ
ದೂರದ ಬೆಟ್ಟ ನುಣ್ಣಗೆ ಎಂದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲು ಅನುಭವಿಸುವಿರಿ. ಸದ್ಯಕ್ಕೆ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು. ನಿಮ್ಮ ಬುದ್ಧಿಮತ್ತೆ ಬಗ್ಗೆ ಎಲ್ಲೆಡೆ ಚರ್ಚೆಯಾಗುವುದು. ಈ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬಂದು ನೀವು ಇನ್ನೂ ಎತ್ತರಕ್ಕೆ ಏರಲು ಅನುಕೂಲವಾಗುವುದು. ಪರರ ಮಾತುಗಳನ್ನು ಕೇಳಿ ಕ್ರಮ ಕೈಗೊಳ್ಳುವ ವಿಚಾರ ನಿಮ್ಮ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದು ಕೊಂಡರೆ ಒಳ್ಳೆಯದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಅದೃಷ್ಟ ಸಂಖ್ಯೆ:6
ಸಿಂಹ
ನಿಮ್ಮ ಬಳಿ ಹಲವು ವಿಚಾರಗಳನ್ನು ತಿಳಿಯಲು ಬರುವ ಜನರು ನಿಮ್ಮನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇರುತ್ತದೆ. ಮಾತಾ ದುರ್ಗಾದೇವಿಯನ್ನು ನೆನೆದು ಅವರಿಗೆ ಸೂಕ್ತ ಉತ್ತರವನ್ನು ಪರಿಹಾರ ರೂಪದಲ್ಲಿ ನೀಡುವಿರಿ. ಇದರಿಂದ ಜನರು ಸಂತುಷ್ಟರಾಗುವರು.ಸದಾ ನಕಾರಾತ್ಮಕ ಚಿಂತನೆಯಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದಲ್ಲದೆ ಮನೆಯ ಇತರ ಸಮಸ್ಯೆಗೂ ಕಾರಣರಾಗುವಿರಿ. ಆದಷ್ಟು ಒಳಿತನ್ನು ಚಿಂತಿಸಿ. ಒಳಿತಾಗುವುದು. ಆಶಾವಾದಿಗೆ ಜೀವನ, ನಿರಾಶಾವಾದಿಗೆ ಅಲ್ಲ ಎನ್ನುವ ತತ್ವವನ್ನು ತಿಳಿಯಿರಿ.ಗುರುವಿನ ಬಲ ಕಡಿಮೆ ಆಗಿದೆ. ನಿಮ್ಮ ಮುಂದೆ ಹಲವು ದಾರಿಗಳು ಗೋಚರಿಸುತ್ತಿವೆ. ಯಾವ ಮಾರ್ಗದಲ್ಲಿ ಹೋದರೆ ಸೂಕ್ತ ಎಂಬುದಕ್ಕೆ ಗುರುವಿನ ಅಪ್ಪಣೆ ಬೇಕಾಗುವುದು. ಹಾಗಾಗಿ ಒಂದೇ ಮನಸ್ಸಿನಿಂದ ಗುರುವಿನ ಮಂತ್ರ ಜಪಿಸಿ. ಅವನು ಮಾರ್ಗ ತೋರುವನು. ಅದೃಷ್ಟ ಸಂಖ್ಯೆ:4
ಕನ್ಯಾ
ಏಕಕಾಲದಲ್ಲಿ ಎರಡೂ ಕಡೆಯಿಂದ ಉತ್ತಮ ಅವಕಾಶಗಳು ಬರಲಿದ್ದು ಅವುಗಳಲ್ಲಿ ಒಂದನ್ನು ಶುದ್ಧ ಮನಸ್ಸಿನಿಂದ ಆಯ್ದುಕೊಳ್ಳಿ. ಇಲ್ಲವೇ ಎರಡು ದೋಣಿಗಳಲ್ಲಿ ಕಾಲಿಟ್ಟು ಪ್ರಯಾಣ ಬೆಳೆಸಿದರೆ ಇಚ್ಛಿತ ಗುರಿಯನ್ನು ತಲುಪಲು ಸಾಧ್ಯವಿಲ್ಲ.ಸದ್ಯದ ಪರಿಸ್ಥಿತಿಯಲ್ಲಿ ಎಲ್ಲವೂ ಕನ್ನಡಿಯ ಗಂಟಿನಂತೆ ತೋರುತ್ತಿದ್ದರೂ ಅದನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ಹಿರಿಯರ ಅಶೀರ್ವಾದವನ್ನು ಪಡೆಯಿರಿ. ಅವರ ಆಶೀರ್ವಾದದಿಂದ ಸ್ವಲ್ಪ ಉತ್ತಮ ಫಲವನ್ನು ಕಾಣುವಿರಿ.ನಿಮ್ಮಿಂದ ದೂರವಾಗಿದ್ದ ವ್ಯಕ್ತಿಗಳೇ ನಿಮ್ಮ ಬಳಿ ಪುನಃ ಬಂದು ಸ್ನೇಹದ ಹಸ್ತವನ್ನು ಚಾಚುವರು. ಅವರ ಅಂತರಂಗದ ಭಾವನೆಗಳು ಶುದ್ಧವೆಂದು ಕಂಡುಬಂದಲ್ಲಿ ಅವರ ಸಖ್ಯವನ್ನು ಬೆಳೆಸಿ. ಹಣಕಾಸು ಸ್ಥಿತಿ ಉತ್ತಮವಾಗುವುದು. ಅದೃಷ್ಟ ಸಂಖ್ಯೆ:8
ತುಲಾ
ಪರರು ನಿಮ್ಮ ಮೇಲೆ ಅಪನಂಬಿಕೆ ಇಟ್ಟಿರುವ ವಿಚಾರ ನಿಮಗೆ ತಿಳಿದೇ ಇದೆ. ಆದರೆ ಅವರ ಅಪನಂಬಿಕೆಯು ದೂರವಾಗುವಂತಹ ಒಂದು ಪ್ರಮುಖ ಘಟನೆಯು ಜರುಗುವುದು. ಇದರಿಂದ ಒಳಿತಾಗುವುದು. ಕೆಲವೊಂದು ವಿಚಾರ ವ್ಯವಹಾರಗಳನ್ನು ನೇರಾ ನೇರ ಮುಖಕೊಟ್ಟು ಮಾಡುವುದು ಒಳ್ಳೆಯದು. ಇದರಿಂದ ನಿಮ್ಮ ಬಗ್ಗೆ ಹೆಚ್ಚಿನ ಗೌರವ ಮೂಡುವುದು. ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭ ವುಂಟಾಗುವುದು.'ಮಾತು ಬೆಳ್ಳಿ ಮೌನ ಬಂಗಾರ' ಜನ್ಮಸ್ಥ ಶನಿ ಕೆಲವೊಮ್ಮೆ ಅನೃತಗಳನ್ನು ನುಡಿಸುವನು. ಇದರಿಂದ ಸುತ್ತಲಿನ ಪರಿಸರದ ಮೇಲೆ ಪರಿಣಾಮ ಬೀರುವುದು. ಹಾಗಾಗಿ ಮೌನ ವಹಿಸುವುದು ಒಳ್ಳೆಯದು. ಅದೃಷ್ಟ ಸಂಖ್ಯೆ:6
ವೃಶ್ಚಿಕ
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಎಚ್ಚರ ಇರಬೇಕು. ಅಗತ್ಯಕ್ಕಿಂತಲೂ ಹೆಚ್ಚು ಖರ್ಚು ಮಾಡುವ ಸಂದರ್ಭ ಎದುರಾಗುವುದು. ಪ್ರಯಾಣದಲ್ಲಿ ತುಸು ಎಚ್ಚರಿಕೆ ಇರಲಿ. ಮನದಲ್ಲಿ ದುರ್ಗಾದೇವಿ ಜಪವನ್ನು ಮಾಡಿ.ಹಲವು ವಿಚಾರಗಳಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸಬೇಕಾಗುವುದು. ಆದಾಗ್ಯೂ ಕರ್ತವ್ಯದಲ್ಲಿನ ನಿಮ್ಮ ನಿಷ್ಠೆಯು ಸಾಮಾಜಿಕವಾಗಿ ಗೌರವಿಸಲ್ಪಡುವುದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿದ್ದು ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಅಲೆದಾಡುವ ಶ್ರಮವೇ ಜಾಸ್ತಿ. ಆದರೂ ನಿರಾಶಾರಾಗದಿರಿ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳುವುದು. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ನಿಮಗೆ ಅನುಕೂಲವಾಗುವುದು. ಅದೃಷ್ಟ ಸಂಖ್ಯೆ:9
ಧನುಸ್ಸು
ನಿಮ್ಮ ಇತ್ತೀಚಿನ ಕಾರ್ಯಕ್ರಮವು ಜನಮನ್ನಣೆ ಗಳಿಸಿದೆ. ಆದರೆ ಅದರಲ್ಲೂ ತಪ್ಪು ಹುಡುಕುವವರಿದ್ದಾರೆ. ಅನ್ಯರು ನಿಮ್ಮನ್ನು ಹೊಗಳಲಿ ಅಥವಾ ತೆಗಳಲಿ ಎಲ್ಲವನ್ನು ನಗುಮುಖದಿಂದ ಸ್ವಾಗತಿಸುವಿರಿ. ಇದರಿಂದ ನಿಮ್ಮ ಘನತೆ ಹೆಚ್ಚುವುದು. ಹಲವು ದಿನಗಳಿಂದ ಒಂದು ಸ್ಪಷ್ಟ ಸ್ವರೂಪ ಕೊಡಲು ಸಾಧ್ಯವಾಗದ ಒಂದು ಸಂಗತಿಗೆ ನಿಶ್ಚಿತ ರೂಪ ದೊರೆಯಲಿದೆ. ಇದರಿಂದ ಆರ್ಥಿಕ ಸಂಕಷ್ಟ ಕಡಿಮೆ ಆಗಲಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಮೂಡುವುದು.ಮಾತು ಮನೆ ಕೆಡಿಸಿತು. ತೂತು ಒಲೆ ಕೆಡಿಸಿತು ಎಂಬಂತೆ ನೀವು ಆಡುವ ಮಾತು ನಿಮ್ಮ ಹತ್ತಿರದ ವೃಕ್ತಿಗೆ ಘಾಸಿಯನ್ನುಂಟು ಮಾಡುವುದು. ಅದರಿಂದ ಆತ ಕುಪಿತನಾಗಿ ನಿಮ್ಮ ಮೇಲೆ ಜಗಳಕ್ಕೆ ಬರುವ ಸಾಧ್ಯತೆ ಇರುತ್ತದೆ. ಆದಷ್ಟು ತಾಳ್ಮೆಯಿಂದ ಇರಿ. ಅದೃಷ್ಟ ಸಂಖ್ಯೆ:4
ಮಕರ
ನಿಮ್ಮ ವಿಶೇಷವಾದ ಪ್ರವಾಸ ಕಾರ್ಯಕ್ರಮ ನಿಗದಿಗೊಳ್ಳಲು ಅವಕಾಶ ದಿಢೀರಾಗಿ ಕೂಡಿಬರುತ್ತದೆ. ಇದನ್ನು ಉಪಯೋಗಿಸಿಕೊಂಡಲ್ಲಿ ನಿಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಅನುಕೂಲವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ಅನವಶ್ಯಕ ಖರ್ಚುಗಳು ನಿಮ್ಮನ್ನು ಹೈರಾಣ ಮಾಡುವುದು. ಬರಬೇಕಾದ ಹಣ ಸಕಾಲದಲ್ಲಿ ಬರದೆ ಇರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗುವುದು. ಮನೋನಿಯಾಮಕ ರುದ್ರದೇವರನ್ನು ಮನಸಾ ಸ್ಮರಿಸಿ, ಒಳಿತಾಗುವುದು. ನೀವು ನಿಮ್ಮ ಮಕ್ಕಳಿಗೆ ತಿಳಿಸಬೇಕೆಂದಿರುವ ಮಹತ್ವದ ವಿಷಯವನ್ನು ತಿಳಿಸಲು ಇಂದು ಉತ್ತಮ ದಿನವಾಗಿದೆ. ಇದರಿಂದ ಮುಂದಿನ ದಿನಗಳನ್ನು ಸರಾಗವಾಗಿ ರೂಪಿಸಿಕೊಳ್ಳಲು ಸಹಾಯವಾಗುವುದು. ಮಕ್ಕಳಿಗೂ ಸ್ವಲ್ಪ ಜವಾಬ್ದಾರಿಯನ್ನು ಕಲಿಸಿಕೊಡಿ. ಅದೃಷ್ಟ ಸಂಖ್ಯೆ:9
ಕುಂಭ
ಏನೋ ಆತಂಕ ಎದುರಾಗಲಿದೆ ಎಂದು ವಿಚಲಿತರಾಗುವ ಸಾಧ್ಯತೆ ಇದ್ದು ಎಲ್ಲವೂ ದೈವಕೃಪೆಯಿಂದ ಪರಿಹಾರವಾಗಲಿದೆ ಮತ್ತು ಆತಂಕದಿಂದ ದೂರ ಉಳಿಯುವಿರಿ. ಹಾಸಿಗೆ ಇದ್ದಷ್ಟು ಕಾಲು ಚಾಚುವುದನ್ನು ಅಭ್ಯಾಸ ಮಾಡಿಕೊಳ್ಳಿ. ಅಜೀರ್ಣ ಅಥವಾ ವಾಯು ತೊಂದರೆ ಎದುರಾಗುವ ಸಾಧ್ಯತೆ ಇರುವುದು. ವೈದ್ಯರ ಸಲಹೆಯಂತೆ ಔಷಧೋಪಚಾರ ಪಡೆದುಕೊಳ್ಳಿ ಮತ್ತು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ. ಕುಟುಂಬಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಟಿಲ ಸಮಸ್ಯೆಗಳು ಎದುರಾಗುವವು. ಭಗವಂತನ ಮೊರೆ ಹೋಗಿ. ಪ್ರತಿನಿತ್ಯ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ಸ್ನೇಹಿತರ ಹಣಕಾಸು ವಿಚಾರದಲ್ಲಿ ಮಧ್ಯವರ್ತಿಯಾಗಿ ಕಾಗದ ಪತ್ರಗಳಿಗೆ ಸಹಿ ಮಾಡದಿರಿ. ಅದೃಷ್ಟ ಸಂಖ್ಯೆ:2
ಮೀನ
ನಿಮಗೆ ಸಂಬಂಧಪಡದ ವ್ಯಕ್ತಿಗಳು ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಮೂಗು ತೂರಿಸುವುದರಿಂದ ಮುಜುಗರಕ್ಕೆ ಒಳಗಾಗುವಿರಿ. ಅಂತಹ ವ್ಯಕ್ತಿಗಳಿಗೆ ಕಠಿಣ ಪದಗಳನ್ನು ಉಪಯೋಗಿಸಿ ದೂರ ಇರಲು ತಿಳಿಸಿ. ಅನುಕೂಲವಾಗುವುದು.ಯಾರೇ ನಿಮ್ಮ ನಿಲುವನ್ನು ಟೀಕಿಸಲಿ, ತರ್ಕಪೂರ್ಣವಾಗಿದ್ದಲ್ಲಿ ನಿಮ್ಮ ಹೆಜ್ಜೆಯನ್ನು ಹಿಂದೆ ಇಡಲೇ ಬೇಡಿ. ಸಾಹಸವಂತನಿಗೆ ಭಗವಂತನು ಸಹಾಯಹಸ್ತ ನೀಡುವನು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ನಿಮ್ಮ ವಿಚಾರದಲ್ಲಿ ಜನರು ತಿಳಿದುಕೊಂಡ ತಪ್ಪು ಗ್ರಹಿಕೆಗಳು ದೂರವಾಗಲು ಇಂದು ಶುಭದಿನವಾಗಿದೆ. ಹಾಗಾಗಿ ನಿಮ್ಮ ಮನಸ್ಸು ಹಕ್ಕಿಯಂತೆ ಹಾರಾಡುವುದು. ನೂತನ ಕೆಲಸ ಮಾಡಲು ಹೊಸ ಉತ್ಸಾಹ ಮೂಡುವುದು. ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp