Just In
- 21 min ago ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- 1 hr ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 2 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 4 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Don't Miss
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
5-7-2019: ಶುಕ್ರವಾರದ ದಿನ ಭವಿಷ್ಯ
ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ.
ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ ಅನುಭವ ಹಾಗೂ ನೆನಪುಗಳು ಮಾತ್ರವೇ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ. ಆ ಅನುಭವಗಳೇ ಜೀವನ ಎಂದರೇನು? ಎನ್ನುವ ಪಾಠವನ್ನು ಹೇಳಿಕೊಡುತ್ತವೆ. ಶುಕ್ರವಾರವಾದ ಈ ಶುಭ ದಿನ ಆ ಮಹಾ ಲಕ್ಷ್ಮಿಯು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಯಾವೆಲ್ಲಾ ಬದಲಾವಣೆಯನ್ನು ತರುತ್ತಾಳೆ? ನಿಮ್ಮ ಜೀವನದ ಪಯಣದಲ್ಲಿ ನಾಳೆ ಯಾವೆಲ್ಲಾ ಘಟನೆಗಳು ನಡೆಯಬಹುದು? ಅವುಗಳಿಂದ ನೀವೇನು ಜೀವನದ ತಾತ್ಪರ್ಯ ಪಡೆದುಕೊಳ್ಳುವಿರಿ ಎನ್ನುವ ವಿವರಣೆಯನ್ನು ಬೋಲ್ಡ್ ಸ್ಕೈ ನೀಡುತ್ತಿದೆ...
ಮೇಷ (5 july 2019)
ಹುಟ್ಟುಗುಣ ಘಟ್ಟ ಹತ್ತಿದರೂ ಹೋಗದು ಎಂಬ ಮಾತನ್ನು ನೆನಪಿಡಿ. ಹೊಸ ಪರಿಸರ ಅಥವಾ ಹೊಸ ಜನರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂದು ತಿಳಿಯಿರಿ. ಬದಲಾವಣೆಗೆ ಅವಕಾಶ ಇರಲಿ. ಇದರಿಂದ ಮಹತ್ತರವಾದುದನ್ನು ಸಾಧಿಸಬಹುದು. ವ್ಯಾಜ್ಯಗಳು ಇದ್ದರೂ ಗೊಂದಲಕ್ಕೆ ಅವಕಾಶ ಬೇಡ. ಸ್ನೇಹಿತರ ಸೂಕ್ತವಾದ ಸಹಾಯದಿಂದ ಒತ್ತಡಗಳಿಗೆ ವಿರಾಮ ಹಾಕುವಿರಿ. ಮಕ್ಕಳ ಪ್ರಗತಿಯು ಮತ್ತು ಮೊಮ್ಮಕ್ಕಳ ತುಂಟತನವು ನಿಮ್ಮ ಮುಖದಲ್ಲಿ ಮಂದಹಾಸ ಮೂಡಿಸುವುದು.9845743807 ಅದೃಷ್ಟ ಸಂಖ್ಯೆ:5
ವೃಷಭ
ಕೆಲಸದ ಸ್ಥಳದಲ್ಲಿ ಬಾಸ್ ಅನವಶ್ಯಕ ಕಿರಿಕಿರಿ ಎಬ್ಬಿಸಿದರೂ ರೇಗಾಟ ಮಾಡಬೇಡಿ. ಮೈಕೊಡವಿ ಬಾಸ್ ಮೆಚ್ಚುವಂತೆ ಕೆಲಸ ಮಾಡಿ. ಅದರಿಂದ ಪ್ರಶಂಸೆ ಪಡೆಯುವಿರಿ. ಅನ್ಯರೊಡನೆ ವಾದ ವಿವಾದದಿಂದ ದೂರವಿರಿ.ನಾಗಬನದಲ್ಲಿ ನಾಗರ ಕಲ್ಲುಗಳಿಗೆ ಅಕ್ಷ ತೆ ಮತ್ತು ಗರಿಕೆ ಏರಿಸಿ ಬನ್ನಿ. ಇದರಿಂದ ಜನ್ಮಸ್ಥ ರಾಹು ನಿಮಗೆ ನೆಮ್ಮದಿಯನ್ನು ನೀಡುವ ಸಾಧ್ಯತೆ ಇದೆ ಮತ್ತು ಗುರುವಿನ ಆಶೀರ್ವಾದವು ದೊರೆಯುವ ಸಾಧ್ಯತೆ ಇರುವುದು.9845743807 ಅದೃಷ್ಟ ಸಂಖ್ಯೆ:9
ಮಿಥುನ
ಮುಂದಿನ ದಿನಗಳ ಪ್ರಮುಖ ಕಾರ್ಯ ಯೋಜನೆಗಳಿಗಾಗಿನ ಪೂರ್ವಭಾವಿ ಮಾತುಕತೆಗಳಿಗೆ ಸಕಾಲವಾಗಿದೆ. ನಿಮ್ಮ ಬಳಗದ ಸ್ನೇಹಿತರು ಮತ್ತು ಸಮಾನ ಮನಸ್ಕರೊಡನೆ ಕುಳಿತು ಚರ್ಚಿಸಿ ಕಾರ್ಯಕ್ರಮಗಳ ರೂಪುರೇಷೆಗಳನ್ನು ನಿರ್ಧರಿಸಿ. ನೆರೆಹೊರೆಯವರಲ್ಲಿ ಹೆಚ್ಚಿನ ಮಾತುಕತೆಯಿರಲಿ ಹಾಗೂ ಅದು ಸ್ನೇಹಪೂರ್ಣವಾಗಿರಲಿ ಮತ್ತು ಸೌಜನ್ಯ ಪೂರಕವಾಗಿರಲಿ. ಆದರೆ ಎಲ್ಲರನ್ನೂ ಪೂರ್ತಿಯಾಗಿ ನಂಬದಿರಿ. ಸಲಹೆಗಳು ನಿಮ್ಮದು ತೀರ್ಮಾನ ನನ್ನದು ಎಂಬ ಧೋರಣೆ ಇರಲಿ.9845743807 ಅದೃಷ್ಟ ಸಂಖ್ಯೆ:6
ಕಟಕ
ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯನ್ನು ನೀಡುತ್ತಿರುವುದು ನಿಮ್ಮ ಒಳ್ಳೆಯದಕ್ಕೆ. ಬೆಳ್ಳಗಿರುವುದೆಲ್ಲಾ ಹಾಲು ಎಂದು ನಂಬಿ ಹೋಗುವ ನಿಮ್ಮ ಮನಸ್ಥಿತಿಯನ್ನು ಪರಿವರ್ತಿಸಿಕೊಳ್ಳಬೇಕಾಗಿದೆ. ಹಣದ ಉಳಿತಾಯದ ಬಗ್ಗೆ ಗಮನ ಹರಿಸಿ. ಪ್ರತ್ಯೇಕ ಪ್ರಕರಣಗಳಲ್ಲಿ ಸಿಹಿ ಮತ್ತು ಕಹಿ ಸುದ್ದಿಗಳೆರಡರ ಮಿಶ್ರಣ ಲಭ್ಯವಾಗಲಿದೆ. ನೀವು ಹಮ್ಮಿಕೊಳ್ಳಬೇಕೆಂದಿರುವ ಬೃಹತ್ ಯೋಜನೆಗೆ ಸರ್ಕಾರ ಅನುಮೋದನೆ ನೀಡುವ ಸಿಹಿ ಸುದ್ದಿ ಒಂದೆಡೆ ಆದರೆ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಹಣದ ಕೊರತೆಯು ಕಹಿ ಎನಿಸುವುದು.9845743807 ಅದೃಷ್ಟ ಸಂಖ್ಯೆ:8
ಸಿಂಹ
ನಿಮ್ಮದೇ ಆದ ಮನೆ ರೂಪಿಸುವ ವಿಚಾರದಲ್ಲಿ ಮಹತ್ವದ ಬೆಳವಣಿಗೆಯೊಂದು ನಿಮಗೆ ಸಹಕಾರಿಯಾಗಲಿದೆ. ಆದರೆ ಅದಕ್ಕಾಗಿ ಸಾಲ ಮಾಡಬೇಕಾಗುವುದು. ಎಷ್ಟೇ ಶ್ರೀಮಂತಿಕೆ ಇದ್ದರೂ ಮನೆ ಕಟ್ಟುವ ವಿಚಾರದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಾಲ ಮಾಡುವರು.ಕಚೇರಿಯ ಆವರಣದಲ್ಲಿ ನಿಮ್ಮ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಸಂಚು ಬಯಲಾಗುವುದು. ಇದರಿಂದ ಬೇಸತ್ತ ನೀವು ನಿಮ್ಮ ಕೆಲಸಕ್ಕೆ ರಾಜೀನಾಮೆ ಕೊಡುವ ತೀರ್ಮಾನ ಮಾಡುವಿರಿ. ಇದಕ್ಕಿಂತ ನೀವು ಬೇರೆಡೆಗೆ ವರ್ಗಾವಣೆ ಕೇಳುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ಅನೇಕ ದೊಡ್ಡ ಯೋಜನೆಗಳನ್ನು ನಿರ್ವಹಿಸಿ ಅಗಾಧವಾದುದನ್ನು ಸಂಪಾದಿಸಲು ಕಾಲಘಟ್ಟ ಸೂಕ್ತವಾಗಿದೆ. ಆದರೂ ಕಾಣದ ಯಾವುದೋ ಒಂದು ಕೈ ತಮ್ಮ ಪ್ರಗತಿಯನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸುತ್ತಿದೆ. ಗುರು ರಾಘವೇಂದ್ರರನ್ನು ಪಾಹಿ ಪ್ರಭೋ ಎಂದು ಪ್ರಾರ್ಥಿಸಿ.ಗೆಳೆಯರ ಬಳಿ ಸ್ನೇಹದಿಂದ ಇರುವುದು ಉತ್ತಮ. ಆದರೆ ಯಾರಿಗೂ ಸಾಲ ಕೊಡುವುದು ಕೊಡಿಸುವುದು ಮಾಡದಿರಿ. ನೀವೂ ಸಾಲ ಪಡೆಯದಿರಿ. ಮನೆಯ ಲೆಕ್ಕಪತ್ರ ಅಥವಾ ಕಡತಗಳ ವಿಚಾರ ವಿವಾದಗಳಿಗೆ ಕಾರಣವಾಗುವ ಸಂದರ್ಭ ಎದುರಾಗುವುದು. 9845743807 ಅದೃಷ್ಟ ಸಂಖ್ಯೆ:7
ತುಲಾ
ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವವು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಹರಿದು ಬರುವುದು.ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.9845743807 ಅದೃಷ್ಟ ಸಂಖ್ಯೆ:2
ವೃಶ್ಚಿಕ
ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆ ಉತ್ತಮವಾಗಿರುವುದಿಲ್ಲ.ನಿಮ್ಮ ನಿರೀಕ್ಷೆಯನ್ನು ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ತಿಳಿಗೊಳ್ಳುವವು. ಗುರು ರಾಘವೇಂದ್ರ ಸ್ವಾಮಿಯ ಅಶೀರ್ವಾದ ಪಡೆಯಿರಿ ಮತ್ತು ಗುರು ಕಾಣಿಕೆ ಸಲ್ಲಿಸಿ.9845743807 ಅದೃಷ್ಟ ಸಂಖ್ಯೆ:1
ಧನುಸ್ಸು
ವಿನಾಕಾರಣ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗ ಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ ಆದರಗಳು ದೊರೆಯುವವು.ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಗಮನ ನೀಡಿ.9845743807 ಅದೃಷ್ಟ ಸಂಖ್ಯೆ:4
ಮಕರ
ವಾಯುಪ್ರಕೋಪ, ಇಲ್ಲವೆ ಮಿತಿ ಮೀರಿದ ಅಲರ್ಜಿ ತೊಂದರೆಗಳು ನಿಮ್ಮನ್ನು ಕಾಡುವ ಸಾಧ್ಯತೆ ಇವೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮ ಕಾಪಾಡಿಕೊಳ್ಳಿ.ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವವು. ಪ್ರಯಾಣ ಕಾಲದಲ್ಲಿ ಎಚ್ಚರ ಇರಲಿ. ಸಾಧ್ಯವಾದಲ್ಲಿ 18 ಉದ್ದಿನಕಾಳನ್ನು ಜೇಬಿನಲ್ಲಿಟ್ಟುಕೊಳ್ಳಿ.9845743807 ಅದೃಷ್ಟ ಸಂಖ್ಯೆ:5
ಕುಂಭ
ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷ ಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ.ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರೆಸಿಕೊಂಡು ಹೋಗುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2
ಮೀನ
ನಿಮ್ಮ ಬುದ್ಧಿಮತ್ತೆ ಎಲ್ಲೆಡೆ ಚರ್ಚೆಗೆ ಒಳಪಡುವುದು ಮತ್ತು ಈ ವರ್ಚಸ್ಸಿನ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವು ಇನ್ನೂ ಎತ್ತರಕ್ಕೆ ಏರಲು ಅನುಕೂಲವಾಗುವುದು.ಪರರ ಮಾತುಗಳನ್ನು ಕೇಳಿಸಿಕೊಂಡು ಕ್ರಮ ಕೈಗೊಳ್ಳುವ ವಿಚಾರ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ ಬಹುದು .ಮದುವೆ, ಸಂತಾನ ಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp