Just In
- 36 min ago 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- 1 hr ago ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- 2 hrs ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 4 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
Don't Miss
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
5-3-2019- ಮಂಗಳವಾರದ ದಿನ ಭವಿಷ್ಯ
ಪ್ರತಿಯೊಬ್ಬರಿಗೂ ಅವರದ್ದೇ ಆದ ತೊಂದರೆಗಳಿರುತ್ತವೆ. ಕೆಲವರು ತಮ್ಮ ನೋವು ನಲಿವನ್ನು ಬಹುಬೇಗ ವ್ಯಕ್ತ ಪಡಿಸುತ್ತಾರೆ. ಹಾಗಂತ ಅವರು ಅತ್ಯಂತ ದುರ್ಬಲ ಮನೋಪ್ರವೃತ್ತಿಯವರು ಎಂದಲ್ಲ. ಕೆಲವರು ತಮ್ಮ ಭಾವನೆಗಳನ್ನು ಅಷ್ಟು ಸುಲಭವಾಗಿ ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ. ಅಲ್ಲದೆ ತೋರಿಸಿಕೊಳ್ಳುವ ಗೋಜಿಗೂ ಹೋಗುವುದಿಲ್ಲ. ಹಾಗಂತ ಅವರು ಬಹಳ ಗಟ್ಟಿ ಮನಸ್ಸಿನವರು ಎಂದಲ್ಲಾ. ಪ್ರತಿಯೊಬ್ಬರಲ್ಲೂ ಒಂದೊಂದು ವಿಶೇಷ ಕೌಶಲ್ಯ ಹಾಗೂ ವ್ಯಕ್ತಿತ್ವ ಇರುತ್ತದೆ.
ಪ್ರತಿಯೊಬ್ಬರನ್ನೂ
ಸಮಾನವಾಗಿ
ಕಾಣುವುದು
ಹಾಗೂ
ಗೌರವಿಸಬೇಕು.
ಆಗಲೇ
ನಮ್ಮದು
ಒಂದು
ಉತ್ತಮವಾದ
ವ್ಯಕ್ತಿತ್ವವಾಗಿ
ಪ್ರತಿಬಿಂಬಿಸುತ್ತದೆ.
ಮಂಗಳವಾರವಾದ
ಈ
ಶುಭದಿನದಂದು
ಯಾವೆಲ್ಲಾ
ಬದಲಾವಣೆಗಳು
ನಿಮ್ಮ
ಭವಿಷ್ಯದಲ್ಲಿ
ಉಂಟಾಗಲಿದೆ.
ಅದಕ್ಕಾಗಿ
ನೀವು
ಮಾನಸಿಕ
ಹಾಗೂ
ದೈಹಿಕವಾಗಿ
ಹೇಗೆ
ಸಬಲರಾಗಿರಬೇಕು
ಎನ್ನುವುದನ್ನು
ಈ
ಮುಂದಿನ
ದಿನ
ಭವಿಷ್ಯ
ನೋಡಿ
ಅರಿಯಿರಿ....
ಪಂಡಿತ್
ಮಂಜುನಾಥ್
ಶಾಸ್ತ್ರೀ
ದೈವಜ್ಞ
ಜ್ಯೋತಿಷ್ಯರು
9845743807
ಮೇಷ(5 ಮಾರ್ಚ್ 2019)
ನಿಮ್ಮ ಅನೇಕ ರೀತಿಯ ತಾಂತ್ರಿಕ ಪರಿಜ್ಞಾನ ಪರಿಪಕ್ವವಾಗುತ್ತಿರುವ ಈ ಸಂದರ್ಭದಲ್ಲಿ ನಿಮಗೆ ಅದನ್ನು ನಿಭಾಯಿಸಲು ಹಣದ ಅಡಚಣೆ ಆಗುವುದು. ನಿಮ್ಮ ಆಪ್ತ ಗೆಳೆಯರೇ ನಿಮಗೆ ಸಹಾಯ ಮಾಡಲು ಹಿಂಜರಿಯುವರು.ಆಳು ಮಾಡಿದ್ದು ಹಾಳು ಎನ್ನುವ ಗಾದೆ ಮಾತನ್ನು ನೆನಪಿಗೆ ತರುವ ಘಟನೆ ಜರುಗುವುದು. ಹಾಗಾಗುವ ಮುನ್ನ ನೀವೇ ಆ ಕೆಲಸವನ್ನು ಮಾಡಲು ತೊಡಗಿದಲ್ಲಿ ಯಶಸ್ಸು ದೊರೆಯುವುದು. ಕಾರ್ಯ ಒತ್ತಡದಲ್ಲಿ ಪರರಿಗೆ ವಹಿಸಿದ ಕೆಲಸ ಪೂರ್ಣಗೊಳ್ಳುವುದಿಲ್ಲ.9845743807 ಅದೃಷ್ಟ ಸಂಖ್ಯೆ:2
ವೃಷಭ
ಒಂದನ್ನು ಪಡೆಯಲು ಮತ್ತೊಂದರ ತ್ಯಾಗದ ಅನಿವಾರ್ಯತೆ ಇರುತ್ತದೆ. ಹಾಗಾಗಿ ಮುಷ್ಟಿಕಾಳು ಚೆಲ್ಲಿ ಮೂಟೆ ಕಾಳನ್ನು ಬಾಚಿಕೊಳ್ಳುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸು ಸಾಧಿಸಲು ಹಣ ನೀರಿನಂತೆ ಖರ್ಚಾಗುವುದು. ಈ ಬಗ್ಗೆ ಬೇಸರ ಬೇಡ. ಬಂಧು ಬಾಂಧವರೊಂದಿಗೆ ಸೌಹಾರ್ದದಿಂದ ವರ್ತಿಸಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಬರಹಗಾರರಿಗೆ ಸರ್ಕಾರದಿಂದ ಸನ್ಮಾನ ಹಾಗೂ ಹೆಚ್ಚಿನ ಸೌಲಭ್ಯಗಳು ದೊರೆಯಲಿವೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ವಹಿಸಿ.9845743807 ಅದೃಷ್ಟ ಸಂಖ್ಯೆ:1
ಮಿಥುನ
ಒಂಟಿತನ ನಿಮ್ಮನ್ನು ಕಾಡುವುದು. ಕೆಲಸ ಕಾರ್ಯಗಳಲ್ಲಿನ ಹಿನ್ನಡೆಯಿಂದಾಗಿ ಮನೆಯಿಂದ ಹೊರಗೆ ಹೋಗಲಾರದೆ ಗೃಹಬಂಧನಕ್ಕೆ ಒಳಪಟ್ಟಂತೆ ಆಗುವುದು. ನಿಮ್ಮ ಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವುದು ಉತ್ತಮ.ನಿಮ್ಮ ನಡೆನುಡಿಗಳಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿರುವ ಈ ಸಂದರ್ಭದಲ್ಲಿ ನಿಮ್ಮನ್ನು ಮೆಚ್ಚದಿರಲು ಸಾಧ್ಯವೇ ಇಲ್ಲ. ಜನರೊಡನೆ ಸಂಪರ್ಕಿಸುವ ಮತ್ತು ಸಂವಹನ ನಡೆಸುವ ಕ್ರಿಯೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ.9845743807 ಅದೃಷ್ಟ ಸಂಖ್ಯೆ:2
ಕಟಕ
ನಿಮ್ಮ ದ್ವಂದ್ವ ನಿಲುವಿನ ವಿಚಾರಧಾರೆಯಿಂದ ನಿಮ್ಮನ್ನು ಇತರರು ತಪ್ಪಾಗಿ ಅಥೈರ್ಸಿಕೊಳ್ಳುವ ಸಾಧ್ಯತೆ ಇದೆ. ಮನಸ್ಸಿನ ಏಕಾಗ್ರತೆಗಾಗಿ ಪರಮಶಿವನ ಧ್ಯಾನ ಮಾಡಿ. ಯಾರೊಟ್ಟಿಗೂ ಅನವಶ್ಯಕ ಮಾತುಗಳನ್ನು ಆಡದಿರಿ. ಕಾಲಚಕ್ರದ ಉರುಳುವಿಕೆಯ ದೆಸೆಯಿಂದ ಕೆಲವು ಕಾರ್ಯಗಳು ದಿಢೀರನೆ ಯಶಸ್ಸನ್ನು ಮತ್ತು ಬದಲಾವಣೆಯನ್ನು ತಂದುಕೊಡುವವು. ಇದರಿಂದ ಮಾನಸಿಕ ನೆಮ್ಮದಿ, ಸಂತೋಷ ಉಂಟಾಗುವವು. ಮಡದಿ ಮಕ್ಕಳ ಸಂಭ್ರಮಕ್ಕೆ ಕಾರಣವಾಗುವುದು.9845743807 ಅದೃಷ್ಟ ಸಂಖ್ಯೆ:4
ಸಿಂಹ
ಸಿಟ್ಟನ್ನು ನಿಯಂತ್ರಿಸಿಕೊಳ್ಳುವುದು ಅನಿವಾರ್ಯ. ಗ್ರಹಗಳು ನಿಮ್ಮನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿ ಶಿಕ್ಷಿಸಲು ಕಾದಿವೆ. ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂದು ಭಗವಂತನನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ. ನಿಮ್ಮ ಸುತ್ತಮುತ್ತಲಿನ ಇಷ್ಟಕಷ್ಟಗಳನ್ನು ನೀವು ಜಾಣತನದಿಂದ ಅರ್ಥ ಮಾಡಿಕೊಳ್ಳುವಿರಿ ಮತ್ತು ಇದರಿಂದ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.9845743807 ಅದೃಷ್ಟ ಸಂಖ್ಯೆ:5
ಕನ್ಯಾ
ಭಗವಂತನ ಕೃಪೆ ನಿಮ್ಮ ಮೇಲಿರುವುದರಿಂದ ನಿಮಗೆ ಬರುವ ಅಪವಾದಗಳಿಂದ ಮುಕ್ತರಾಗುವಿರಿ ಮತ್ತು ನಿಮ್ಮ ಸಹಪಾಠಿಗಳು ಮತ್ತು ಸಹೋದ್ಯೋಗಿಗಳ ನಡುವೆ ಗೌರವ ಸಂಪಾದಿಸುವಿರಿ. ಪದೇ ಪದೆ ನಿಮ್ಮ ವಿರುದ್ಧದ ಮಾತುಗಳು ಕೇಳಿಸುವವು. ಅದನ್ನು ಕೇಳಿ ನಕ್ಕುಬಿಡಿ. ನೀವು ಬದಲಾಗಿರುವ ವಿಚಾರ ಅವರಿಗೆ ತಿಳಿದಿಲ್ಲ ಅಥವಾ ಹಿಂದಿನ ದಿನಗಳ ಸ್ವಭಾವವನ್ನು ಮೆಲುಕು ಹಾಕಿದರೆ ನಿಮಗೇ ನಗು ಬರುವ ಸಂಭವವಿದೆ.9845743807 ಅದೃಷ್ಟ ಸಂಖ್ಯೆ:6
ತುಲಾ
ಕಷ್ಟಪಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈಕೊಡುವ ಸಾಧ್ಯತೆ ಇದೆ. ಆದರೆ ನಿಮ್ಮ ಆತ್ಮಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾ ಕಾರ್ಯವೂ ಸುಲಲಿತವಾಗುವುದು. ನೀರಿನಂತೆ ಹಣ ಖರ್ಚಾಗುವುದು. ಆದಾಗ್ಯೂ ಅದರಿಂದ ಹೆಚ್ಚಿನ ಲಾಭ ಪಡೆಯುವಿರಿ. ಚಿತ್ತ ಚಾಂಚಲ್ಯವುಂಟಾಗುವ ಸಾಧ್ಯತೆ ಇದೆ. ಸುಬ್ರಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ. ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:4
ವೃಶ್ಚಿಕ
ತಾಯಿ ವರ್ಗದವರಿಂದ ಅಲ್ಪ ಕಿರಿಕಿರಿ ಆಗುವುದು. ಮಾತಿನ ಜಾಣ್ಮೆ ಹಾಗೂ ಹಿರಿತನದಿಂದಾಗಿ ಕುಟುಂಬದಲ್ಲಿನ ಬಿಗುವಿನ ವಾತಾವರಣ ದೂರ ಮಾಡಬಲ್ಲಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು.ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲ. ಅವರಿಗೆ ನಿಮ್ಮ ಮೇಲೆ ಪ್ರೀತಿ ಇಲ್ಲ ಎಂದು ನೊಂದುಕೊಳ್ಳದಿರಿ. ಕೆಲವರಿಗೆ ತಮ್ಮ ಪ್ರೀತಿ ವಿಶ್ವಾಸವನ್ನು ಅಭಿವ್ಯಕ್ತಗೊಳಿಸುವ ಕ್ರಿಯೆ ಗೊತ್ತಿರುವುದಿಲ್ಲ. ಅಂತಹವರು ನಿಮ್ಮನ್ನು ಅಂತರಂಗದಿಂದ ಪ್ರೀತಿಸುವರು.9845743807 ಅದೃಷ್ಟ ಸಂಖ್ಯೆ:2
ಧನುಸ್ಸು
ಫಲಿತಾಂಶದ ಕಡೆಗೆ ತಲೆ ಕೆಡಿಸಿಕೊಳ್ಳದಿರಿ. ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು. ದೈವಕೃಪೆ ನಿಮ್ಮ ಮೇಲೆ ಇರುವುದರಿಂದ ಫಲಿತಾಂಶದ ಕಡೆಗೆ ಅನುಮಾನ ಬೇಡ. ಕಷ್ಟಕಾಲದಲ್ಲಿಯೇ ನಿಜವಾದ ಗೆಳೆಯರ ಸ್ವಭಾವ ಗೊತ್ತಾಗುವುದು. ಹಾಗಾಗಿ ನಿಮ್ಮನ್ನು ಓಲೈಸಿ ನಿಮ್ಮಿಂದ ಸಹಾಯ ಪಡೆಯುವ ಗೆಳೆಯರು ನಿಮ್ಮಿಂದ ದೂರವಾಗುವರು. ನಿಮ್ಮ ಕಾರ್ಯದಲ್ಲಿ ತಪ್ಪನ್ನು ತಿಳಿಸುವ ಸ್ನೇಹಿತರೇ ನಿಮಗೆ ಸಹಾಯ ಮಾಡುವರು.9845743807 ಅದೃಷ್ಟ ಸಂಖ್ಯೆ:6
ಮಕರ
ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಪರಿಶ್ರಮವಿರದ ಸರಳ ಪ್ರಯತ್ನದಿಂದ ಲಕ್ಷ್ಮೀ ಪ್ರಸನ್ನಳಾಗಬಹುದೆಂಬ ಭ್ರಮೆಯನ್ನು ಬಿಟ್ಟುಬಿಡಿ. ಸದ್ಯದ ಆರ್ಥಿಕ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಹೆಚ್ಚು ಶ್ರಮ ಪಡಬೇಕಾಗುವುದು.ಸಮಯ ಸಾಧಕರನ್ನು ಎಷ್ಟೆಂದು ದೂರ ಇಡುತ್ತೀರಿ? ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠ ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು.9845743807 ಅದೃಷ್ಟ ಸಂಖ್ಯೆ:4
ಕುಂಭ
ತಣ್ಣೀರನ್ನು ಆರಿಸಿ ಕುಡಿಯುವ ಕಾಲ. ಹಾಗಾಗಿ ನಿಮ್ಮ ಎದುರಾಳಿ ಆಡಿದ ಮಾತಿಗೆ ತಕ್ಷ ಣವೇ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ಇದು ನಿಮ್ಮ ಸೋಲಲ್ಲ. ಸೋತಂತೆ ನಟಿಸಿ ಗೆಲ್ಲುವ ಪ್ರಯತ್ನ.ದೂರದ ಊರಿಗೆ ಕ್ಷಿಪ್ರವಾದ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡುವಿರಿ. ಇದರಿಂದ ಮಡದಿ ಮಕ್ಕಳು ಸಂತೋಷ ಹೊಂದುವರು. ನಿಮಗೂ ಯಾಂತ್ರಿಕ ಜೀವನದಿಂದ ಕೆಲಕಾಲ ವಿಶ್ರಾಂತಿ ದೊರೆಯುವುದು.9845743807 ಅದೃಷ್ಟ ಸಂಖ್ಯೆ:2
ಮೀನ
ವೈದ್ಯರ ಸಲಹೆ ಸೂಚನೆಗಳನ್ನು ಶಿಸ್ತಿನಿಂದ ಪರಿಪಾಲಿಸಿ. ಇದರಿಂದ ವಿಮುಖರಾದರೆ ಕಷ್ಟವೇ ಎದುರಾಗುವುದು. ಹಣ ನೀರಿನಂತೆ ಖರ್ಚಾಗುವುದು. ಅನವಶ್ಯಕ ವಾದ ವಿವಾದಗಳಿಂದ ದೂರವಿರಿ. ಯುದ್ಧದ ಮೊದಲೇ ಸೋಲುವ ಕುರಿತು ಚಿಂತಿಸದಿರಿ. ಮಾಡು ಇಲ್ಲವೆ ಮಡಿ ಎನ್ನುವ ಧ್ಯೇಯೋದ್ದೇಶದಿಂದ ಹೋರಾಟ ಮಾಡಿ. ಯಶಸ್ಸು ದೊರೆತರೆ ಜನರು ಹರ್ಷಿಸುವರು. ಸೋತರೆ ಜೀವನಕ್ಕೊಂದು ಪಾಠ ಆಗುವುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ , ಶತ್ರುಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ, ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp