Just In
- 26 min ago ವಾರ ಭವಿಷ್ಯ (ಏಪ್ರಿಲ್20-27) : ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- 3 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 12 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 13 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
Don't Miss
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
8-4-2019- ಸೋಮವಾರದ ದಿನ ಭವಿಷ್ಯ
ಹಿಂದೂ ಪುರಾಣಗಳ ಪ್ರಕಾರ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಈ ಭೂಮಿಯನ್ನು ಸೃಷ್ಟಿಸಿದ್ದಾರೆ. ಬ್ರಹ್ಮ ಜೀವಿಗಳನ್ನು ಸೃಷ್ಟಿಸಿದರೆ, ವಿಷ್ಣು ಅದಕ್ಕೆ ಜೀವ ನೀಡುತ್ತಾನೆ ಮತ್ತು ಮಹೇಶ್ವರ ಎಲ್ಲವನ್ನೂ ಲಯಗೊಳಿಸುತ್ತಾನೆ ಎಂದು ನಂಬಲಾಗಿದೆ. ಈಶ್ವರ ಸೃಷ್ಟಿಯಲ್ಲಿ ಇರುವ ಕೆಟ್ಟದನ್ನು ತನ್ನ ಮೂರನೇ ಕಣ್ಣಿನಿಂದ ನಾಶಗೊಳಿಸುತ್ತಾನೆ ಎನ್ನಲಾಗುತ್ತದೆ. ಇದಕ್ಕಾಗಿಯೇ ಆತನಿಗೆ ದೇವಾದಿದೇವ ಎನ್ನಲಾಗುತ್ತದೆ. ಇದರ ಅರ್ಥ ದೇವರುಗಳಿಗೆ ದೇವರು.. ಈಶ್ವರನ ಸೃಷ್ಟಿಯ ಬಗ್ಗೆ ಯಾರಿಗೂ ಇದುವರೆಗೆ ತಿಳಿದಿಲ್ಲ. ಮತ್ತು ಆತನಿಗೆ ಕೊನೆಯೆಂಬುವುದು ಇಲ್ಲ.
ಇದಕ್ಕಾಗಿಯೇ ಶಿವನಿಗೆ ಅತೀ ಹೆಚ್ಚಿನ ಭಕ್ತರಿದ್ದಾರೆ.ಓಂ ನಮಃ ಶಿವಾಯ ಮಂತ್ರವನ್ನು ಬದ್ಧತೆ ಮತ್ತು ಏಕಾಗ್ರತೆಯಿಂದ ಪಠಿಸಿದರೆ ಆಗ ನಮಗೆ ಮಾನಸಿಕ ಬಲ, ಶಕ್ತಿ ಮತ್ತು ಪ್ರೇರಣೆ ಸಿಗುತ್ತದೆ. ಇದರಿಂದ ನೀವು ಜೀವನದ ಗುರಿಯನ್ನು ತಲುಪಬಹುದಾಗಿದೆ.ಮನಸ್ಸಿನ ಶಾಂತಿ ಮರಳುವುದು.ಇದರಲ್ಲಿ ಐದು ಅಕ್ಷರಗಳ ಮಹತ್ವವಿದೆ. ನ, ಮ, ಶಿ, ವಾ ಮತ್ತು ಯ. ಹಿಂದೂ ಪುರಾಣಗಳ ಪ್ರಕಾರ ಈ ಐದು ಅಕ್ಷರಗಳು ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶವನ್ನು ಪ್ರತಿನಿಧಿಸುತ್ತದೆ. ಇದನ್ನು ಪಠಿಸುತ್ತಾ ಇದ್ದರೆ ದೇವರು ಎಲ್ಲಾ ಕಡೆ ಇದ್ದಾನೆಂದು ನಿಮಗನಿಸುತ್ತದೆ.ಕೈಲಾಸಪತಿ ಮಹೇಶ್ವರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ. ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು 9845743807
ಮೇಷ( 8 ಏಪ್ರಿಲ್ 2019)
ಧೈರ್ಯ ಸಾಹಸ ಪ್ರವೃತ್ತಿಯವರಾದ ನೀವು ಮುನ್ನುಗ್ಗುವುದರಲ್ಲಿ ಹಿಂದೆ ಬೀಳಬೇಡಿ. ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ಎನ್ನುವುದು ನಿಮ್ಮ ಘೋಷ ವಾಕ್ಯವಾಗಿರಲಿ. ದೂರದ ಊರಿನ ಪ್ರವಾಸ ಕಾರ್ಯಕ್ರಮ ದಿಢೀರಾಗಿ ನಿರ್ಧಾರವಾಗಬಹುದು. ಅದಕ್ಕೆ ಪೂರಕವಾದ ಸಿದ್ಧತೆಗಳನ್ನು ಮಾಡಿಕೊಳ್ಳಿ. ಮಕ್ಕಳು ಮತ್ತು ಮೊಮ್ಮಕ್ಕಳು ನಿಮ್ಮ ಸುಖಕ್ಕೆ ಕಾರಣರಾಗುವರು.9845743807 ಅದೃಷ್ಟ ಸಂಖ್ಯೆ:2
ವೃಷಭ
ಬೇಡದ ಮಾತು ಮಾತನಾಡಿ ಸುಮ್ಮನೆ ಕಿರಿಕಿರಿಗೆ ಸಿಕ್ಕಿಹಾಕಿಕೊಳ್ಳದಿರಿ. ಹಿರಿಯರ ಆಶೀರ್ವಾದವಿರುವುದರಿಂದ ಹೆಚ್ಚಿನ ತೊಂದರೆ ಇರುವುದಿಲ್ಲ. ಸಾಧು, ಸಂತರ ಭೇಟಿ ಆಗಲಿದೆ. ನಕಾರಾತ್ಮಕ ಧೋರಣೆಗಳನ್ನು ಕೈಬಿಡಿ. ಉತ್ತಮವಾದ ಜನರಿಂದ ನಿಮಗೆ ಬೆಂಬಲ ದೊರೆಯಲಿದೆ. ಪ್ರಯಾಣ ಕಾಲದಲ್ಲಿ ತುಸು ಎಚ್ಚರಿಕೆ ಇರಲಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.9845743807 ಅದೃಷ್ಟ ಸಂಖ್ಯೆ:1
ಮಿಥುನ
ನಿಮಗೆ ನೂರಾರು ಕಡೆಗಳಿಂದ ಪ್ರಶಂಸೆಗಳು ಬರುವ ಸಾಧ್ಯತೆ ಇರುವುದು. ಇದು ನಿಮ್ಮ ಕಾರ್ಯ ಕ್ಷೇತ್ರದಲ್ಲಿ ನಿಷ್ಠೆಯಿಂದ ದುಡಿಯಲು ಸಹಕಾರಿ ಆಗುವುದು. ನಿಮ್ಮ ಕೈಕೆಳಗಿನ ಕೆಲಸಗಾರರು ಮುಷ್ಕರ ನಡೆಸುವ ಸಾಧ್ಯತೆ ಇರುವುದು. ಕಾರ್ಯ ಸಾಧನೆಗಾಗಿ ನಿಮ್ಮ ತಾಳ್ಮೆಯೇ ಉತ್ತಮ ಅಡಿಪಾಯ. ತಾಳಿದವನು ಬಾಳಿಯಾನು. ಯಾವುದೇ ದೃಢ ನಿರ್ಧಾರ ತಳೆಯುವ ಮುನ್ನ ನಿಮ್ಮ ಸಹೋದ್ಯೋಗಿಗಳ ಸಲಹೆ ಪಡೆಯಿರಿ.9845743807 ಅದೃಷ್ಟ ಸಂಖ್ಯೆ:2
ಕಟಕ
ಕೋಪದಲ್ಲಿ ಕೊಯ್ದುಕೊಂಡ ಮೂಗನ್ನು ಮರು ಜೋಡಿಸಲು ಆಗುವುದಿಲ್ಲ. ನಿಮ್ಮ ಕೋಪ ತಾಪದ ಮೇಲೆ ಹತೋಟಿ ಇಟ್ಟುಕೊಳ್ಳುವುದು ಒಳ್ಳೆಯದು. ಇಲ್ಲದೆ ಇದ್ದಲ್ಲಿ ಕೌಟುಂಬಿಕವಾಗಿ ತೊಂದರೆ ಎದುರಿಸಬಹುದು.ಆರೋಗ್ಯವೇ ಭಾಗ್ಯ ಎಂಬುದನ್ನು ನೆನಪಿನಲ್ಲಿಟ್ಟುಕೊಂಡರೆ ಸಾಲದು. ದೈಹಿಕ ಆರೋಗ್ಯ ರಕ್ಷ ಣೆಗಾಗಿ ಪ್ರಾಣಾಯಾಮ, ಯೋಗ, ಧ್ಯಾನ ಮುಂತಾದವುಗಳನ್ನು ಚಾಚು ತಪ್ಪದೇ ಮಾಡಬೇಕಾಗುವುದು.9845743807 ಅದೃಷ್ಟ ಸಂಖ್ಯೆ:4
ಸಿಂಹ
ಮನೆಯ ವಾತಾವರಣದಲ್ಲಿ ಒಳಗೊಳಗೇ ಅಸಮಾಧಾನದ ಹೊಗೆ ಏಳುವ ಸಾಧ್ಯತೆ ಇರುತ್ತದೆ. ಇದರ ಮೂಲವನ್ನು ಕಂಡು ಹಿಡಿದು ಅದನ್ನು ಅಲ್ಲಿಯೇ ನಂದಿಸುವುದರಿಂದ ಒಳಿತಾಗುವುದು.ಖರ್ಚಿನ ದಾರಿಗಾಗಿ ನೂರೆಂಟು ರೀತಿಯ ಯಾದಿ ನಿಮ್ಮೆದುರಿಗೆ ಬರುವುದು. ಅದೆಲ್ಲವನ್ನು ನಾಜೂಕಾಗಿ ನೀವು ಬಗೆಹರಿಸಿಕೊಳ್ಳುವಿರಿ. ಆಂಜನೇಯ ಸ್ವಾಮಿಯ ಸ್ತೋತ್ರ ಪಠಿಸುವುದರಿಂದ ಕಾರ್ಯ ಸಿದ್ಧಿ ಆಗುವುದು.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ಹಿರಿಯರ ಮಾತುಗಳನ್ನು ತಾಳ್ಮೆಯಿಂದ ಕೇಳಿಸಿಕೊಳ್ಳಿ. ಅವಸರದ ನಡುವೆಯೂ ನಿಮ್ಮ ಕಾರ್ಯವು ಜನರು ಮೆಚ್ಚುವಂತೆ ಆಗುವುದು. ನಿಮಗೆ ಭಗವಂತನ ಒಲುಮೆ ಇದೆ ಎಂದು ತಿಳಿಯಲು ಇದುವೇ ಸಾಕ್ಷಿ. ಸುಲಭವಾಗಿ ಪರಿಹಾರವಾಗುವ ವಿಷಯಕ್ಕೆ ಜಗ್ಗಾಡದೆ ಅಥವಾ ಕಾದಾಡದೆ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಿ. ಶಿವನ ಒಲುಮೆಯನ್ನು ಸಂಪಾದಿಸಿಕೊಳ್ಳಿ. ಹಣಕಾಸಿನ ಪರಿಸ್ಥಿತಿಯು ಸುಧಾರಣೆಗೊಳ್ಳುವುದು.9845743807 ಅದೃಷ್ಟ ಸಂಖ್ಯೆ:4
ತುಲಾ
ಅಮೃತಪೂರ್ಣ ಸಿಹಿಯೊಂದಿಗಿನ ನಿಮ್ಮ ಮಾತುಗಳು ನಿಮ್ಮ ವಿರೋಧಿಗಳನ್ನು ಕೂಡಾ ನಿಮ್ಮತ್ತ ಸೂಜಿಗಲ್ಲಿನಂತೆ ಸೆಳೆಯುವವು. ಅಜಾತ ಶತ್ರುಗಳಿಂದ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ಹಲವಾರು ಕಾರ್ಯ ಯೋಜನೆಗಳನ್ನು ಒತ್ತಡದಲ್ಲಿ ನಿರ್ವಹಿಸಲು ಮುಂದಾಗುವಿರಿ. ನಿಧಾನವಾಗಿ ಆದರೂ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ಆದರೆ ನಿಮ್ಮ ದೌರ್ಬಲ್ಯವನ್ನು ಪರರ ಮುಂದೆ ಪ್ರದರ್ಶಿಸದಿರುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:8
ವೃಶ್ಚಿಕ
ಬಹು ದೊಡ್ಡ ಬಂಡವಾಳದೊಂದಿಗೆ ವ್ಯಾಪಾರ, ವ್ಯವಹಾರಗಳನ್ನು ಆರಂಭಿಸುವಿರಿ. ಇದರಿಂದ ಹೆಚ್ಚಿನ ಲಾಭ ಕಂಡು ಬರುವುದು. ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸುವುದು ಒಳ್ಳೆಯದು.ನಿಮ್ಮ ವಿಶೇಷವಾದ ಕಾರ್ಯಕ್ಷ ಮತೆ ಕಚೇರಿಯಲ್ಲಿ ಪ್ರಶಂಸೆಗೆ ಒಳಗಾಗುವ ಹೇರಳ ಅವಕಾಶಗಳು ಲಭ್ಯವಾಗಿರುತ್ತವೆ. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ನಡೆಸುವಿರಿ ಮತ್ತು ಅದರಲ್ಲಿ ಸಫಲತೆಯನ್ನು ಕಾಣುವಿರಿ.9845743807 ಅದೃಷ್ಟ ಸಂಖ್ಯೆ:9
ಧನುಸ್ಸು
ಮಕ್ಕಳ ವಿಚಾರವಾಗಿ ಆತಂಕದ ಕ್ಷ ಣಗಳನ್ನು ಎದುರಿಸುವಿರಾದರೂ ಸಂತೋಷದ ವಾರ್ತೆಯೂ ಸಿಗಲಿದೆ. ವಿದ್ಯಾಗುರುಗಳ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗುವಿರಿ. ಇದರಿಂದ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ.ನಿಮ್ಮದೇ ಆದ ಕೆಲವು ನಿರ್ದಿಷ್ಟ ಯೋಜನೆಗಳನ್ನು ನೀವು ಸಾಧಿಸಿ ತೋರಿಸುವ ಮೂಲಕ ಬಂಧು ಬಳಗದವರಲ್ಲಿ ವಿಶೇಷ ಅಭಿಮಾನಕ್ಕೆ ಪಾತ್ರರಾಗುವಿರಿ. ಒಂದು ಮಹತ್ತರ ಕಾರ್ಯವನ್ನು ಮಾಡಿ ಮುಗಿಸಿದ ತೃಪ್ತಿ ನಿಮ್ಮದಾಗುವುದು.9845743807 ಅದೃಷ್ಟ ಸಂಖ್ಯೆ:8
ಮಕರ
ಸಾಮಾಜಿಕವಾದ ನೆಲೆಯಲ್ಲಿ ತೊಂದರೆಗಳಿಗೆ ಹೆಚ್ಚಿನ ಅವಕಾಶಗಳು ಬರುವವು. ಹಣಕಾಸಿನ ವ್ಯವಸ್ಥೆ ಸಾಧಾರಣ ಮಟ್ಟದ್ದಾಗಿದ್ದು ಖರ್ಚು ವೆಚ್ಚಗಳಲ್ಲಿ ಕೈ ಹಿಡಿತ ಮಾಡಬೇಕಾಗುವುದು.ಮನೆಯಲ್ಲಿ ಅಶಾಂತಿಯ ವಾತಾವರಣ ತಲೆದೋರುವ ಸಾಧ್ಯತೆ ಇದೆ. ಮಾತಾ ದುರ್ಗಾದೇವಿಯನ್ನು ಭಕ್ತಿಯಿಂದ ಪೂಜಿಸಿ. ಆಕೆಯು ನಿಮ್ಮ ಸಂಕಷ್ಟಗಳನ್ನು ದೂರಮಾಡಿ ಮನಸ್ಸಿಗೆ ನೆಮ್ಮದಿ ನೀಡುವಳು.9845743807 ಅದೃಷ್ಟ ಸಂಖ್ಯೆ:2
ಕುಂಭ
ನಿಮ್ಮ ಹಲವು ವಿಚಾರಗಳಿಗೆ ಹಿರಿಯರೊಬ್ಬರ ಸಲಹೆಯನ್ನು ಸ್ವೀಕರಿಸಿ ಮತ್ತು ನಿಮಗೆ ಸ್ತ್ರೀ ಸಮೂಹ ಬೆಂಗಾವಲಿಗೆ ನಿಲ್ಲಲಿದೆ. ದೇವಿಯು ನಿಮಗೆ ಮಹಿಳೆ ರೂಪದಲ್ಲಿ ಸಹಾಯ ಮಾಡುವಳು.ಮಹತ್ತರವಾದ ಕಾರ್ಯಗಳನ್ನು ಮುಂದೂಡುವುದು ಒಳಿತು. 5 ವರ್ಷದ ಒಳಗೆ ಇರುವ ಹೆಣ್ಣು ಮಕ್ಕಳಿಗೆ ಸಿಹಿ ಹಂಚಿರಿ. ಹಣಕಾಸಿನ ವ್ಯವಸ್ಥೆ ಸಾಧಾರಣ ಮಟ್ಟದ್ದಾಗಿದ್ದು ಕೈ ಹಿಡಿತ ಮಾಡಬೇಕಾಗುವುದು.9845743807 ಅದೃಷ್ಟ ಸಂಖ್ಯೆ:2
ಮೀನ
ಪ್ರಜ್ಞಾರೂಪದಿಂದ ಇಡೀ ಜಗತ್ತನ್ನೇ ವ್ಯಾಪಿಸಿಕೊಂಡಿರುವ ಶ್ರೀದೇವಿಯು ನಿಮಗೆ ಅಭಯ ಹಸ್ತ ನೀಡಿರುವಳು. ಆಕೆಯ ಕೃಪಾ ಕಟಾಕ್ಷ ದಿಂದ ನಿಮ್ಮೆಲ್ಲಾ ಕಾರ್ಯಗಳು ಸುಗಮವಾಗಿ ಸಾಗುವವು.
ಹಾಸಿಗೆ ಇದ್ದಷ್ಟು ಕಾಲು ಚಾಚು ಎಂದರು ಹಿರಿಯರು. ಹಾಗಾಗಿ ನೀವು ನಿಮ್ಮ ಇತಿಮಿತಿಗಳನ್ನು ಅರಿತು ಕಾರ್ಯ ರೂಪಿಸಿಕೊಳ್ಳಿ. ಇದರಿಂದ ಹೆಚ್ಚಿನ ಆತಂಕದಿಂದ ದೂರ ಉಳಿಯಬಹುದು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು. ಮದುವೆ, ಸಂತಾನಕೊರತೆ ,ಶತ್ರುಕಾಟ, ಕುಜದೋಷಪರಿಣಾಮ, ಮಕ್ಕಳು ತೊಂದರೆ, ಸ್ತ್ರೀಪುರುಷ ಪ್ರೇಮವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆಕಟ್ಟುವ ಯೋಗ, ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/whatsapp