Latest Updates
-
ನೈನಿತಾಲ್ನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ, ಪ್ರವಾಸಿಗರಿಗೆ ಹೈ ಅಲರ್ಟ್! -
ರಾಷ್ಟ್ರಧ್ವಜ ಅಂಗೀಕಾರ ದಿನ: ಧ್ವಜಾರೋಹಣದ ವೇಳೆ ಲವಲವಿಕೆಯಿಂದ ಇರಲು ಈ 'ತ್ರಿವರ್ಣ' ವ್ಯಾಯಾಮಗಳನ್ನು ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ಕೊನೆ ಕ್ಷಣದ ಗಡಿಬಿಡಿ ತಪ್ಪಿಸಲು ಈ ಸ್ಮಾರ್ಟ್ ಟಿಪ್ಸ್ ಪಾಲಿಸಿ -
ಮಳೆಗಾಲದ ತೇವಾಂಶದಿಂದ ಬಟ್ಟೆ ಹಾಳಾಗುತ್ತಿದೆಯೇ? ನಿಮ್ಮ ಕಬೋರ್ಡ್ ಮತ್ತು ಬಟ್ಟೆಗಳನ್ನು ರಕ್ಷಿಸಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಇನ್ಮುಂದೆ ಸ್ನ್ಯಾಕ್ಸ್ ಪ್ಯಾಕೆಟ್ ಮೇಲೆ ಎಚ್ಚರಿಕೆ! FSSAI ತರುತ್ತಿದೆ ಹೊಸ ನಿಯಮ, ಗ್ರಾಹಕರಿಗೆ ಲಾಭವೇನು? -
ಮುಂಬೈನಲ್ಲಿ ವರುಣನ ಅಬ್ಬರ: IMDಯಿಂದ ಆರೆಂಜ್ ಅಲರ್ಟ್ ಘೋಷಣೆ, ಕನ್ನಡಿಗರು ಎಚ್ಚರ! -
ವಿಶ್ವ ಮೆದುಳು ದಿನ: ದಿನವಿಡೀ ಚುರುಕಾಗಿರಲು ಬೆಳಿಗ್ಗೆ ಈ 10 ನಿಮಿಷದ 'ನ್ಯೂರೋ-ವಾರ್ಮಪ್' ಮಾಡಿ! -
ದೆಹಲಿ ಮೆಟ್ರೋ ಸಂಚಾರ ವ್ಯತ್ಯಯ: ಸಂಗಾತಿಯೊಂದಿಗೆ ಟೆನ್ಷನ್ ಇಲ್ಲದೆ ಪ್ರಯಾಣಿಸುವುದು ಹೇಗೆ? -
ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್: ಭಾರಿ ಮಳೆ ಮತ್ತು ಭೂಕುಸಿತದಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ದೆಹಲಿಯಲ್ಲಿ ಯೆಲ್ಲೋ ಅಲರ್ಟ್: ಮಳೆಗಾಲದಲ್ಲಿ ಕಚೇರಿಗೆ ಹೋಗುವವರು ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ
Akshaya Tritiya 2021 : ಪೂಜಾ ವಿಧಿ, ಶುಭ ಮುಹೂರ್ತ, ಲಕ್ಷ್ಮಿ ಕುಬೇರ ಮಂತ್ರ
ಅಕ್ಷಯ ತೃತೀಯ ಎಂಬುವುದು ಹಿಂದೂಗಳಿಗೆ ತುಂಬಾ ಮಹತ್ವವಾದ ದಿನವಾಗಿದೆ. 2021, ಮೇ 14ರಂದು ಅಕ್ಷಯ ತೃತೀಯ. ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೆಯ ದಿನದಂದು ಅಕ್ಷಯ ತೃತೀಯವನ್ನು ಆಚರಿಸಲಾಗುತ್ತದೆ.
ಅಕ್ಷಯ ತೃತೀಯ ಎಂದರೆ ಶುಭದ ಸಂಕೇತವಾಗಿದೆ. ಅಕ್ಷಯ ಎಂದರೆ ಕೊನೆಯಿಲ್ಲ ಎಂದರ್ಥ. ಆದ್ದರಿಂದ ಈ ದಿನ ಯಾವುದೇ ಒಳ್ಳೆಯ ಕಾರ್ಯಕ್ಕೆ ಅಥವಾ ಚಿನ್ನ, ಬೆಳ್ಳಿ ಖರೀದಿಗೆ ತುಂಬಾ ಶ್ರೇಷ್ಠವಾದ ದಿನವಾಗಿದೆ. ಈ ದಿನದಂದು ನೀವು ಏನು ಮಾಡಿದರೂ ಅದು ದುಪ್ಪಟ್ಟವಾಗುವುದು ಎಂಬ ನಂಬಿಕೆಯಿದೆ.

ಈ ದಿನ ಹೊಸ ಗಾಡಿ, ಆಸ್ತಿ, ಚಿನ್ನಾಭರಣಗಳನ್ನು ಕೊಳ್ಳಲು ಮಾತ್ರವಲ್ಲ ದಾನಕ್ಕೂ ತುಂಬಾ ಶ್ರೇಷ್ಠವಾಗಿದೆ. ಈ ದಿನ ದಾನ ಮಾಡಿದರೆ ಇದರಿಂದ ಶುಭ ಫಲ ದೊರೆಯುವುದು. ಅಲ್ಲದೆ ಈ ದಿನ ವಿವಾಹವಾಗುವವರ ದಾಂಪತ್ಯ ಹೆಚ್ಚು ಬಲವಾಗಿರುತ್ತದೆ ಮತ್ತು ಅನ್ಯೋನ್ಯವಾಗಿರುತ್ತದೆ ಎಂಬುದು ಜನಜನಿತವಾದ ಮಾತಾಗಿದೆ. ನಾವು ಈ ಲೇಖನದಲ್ಲಿ ಅಕ್ಷಯ ತೃತೀಯ ಪೂಜಾ ವಿಧಿ, ಶುಭ ಮುಹೂರ್ತ, ಲಕ್ಷ್ಮಿ ಕುಬೇರ ಪೂಜೆ, ಪೂಜೆಗೆ ಬೇಕಾಗುವ ಸಾಮಗ್ರಿ ಇವುಗಳ ಕುರಿತು ಹೇಳಲಾಗಿದೆ ನೋಡಿ:

ಅಕ್ಷಯ ತೃತೀಯ ಪೂಜಾ ಮುಹೂರ್ತ
ಅಕ್ಷಯ ತೃತೀಯ ತಿಥಿ: ಮೇ 14, 20201 ಬೆಳಗ್ಗೆ 05:38ಕ್ಕೆ
ಪೂಜಾ ಮುಹೂರ್ತ: ಮೇ 14, 20201 ಬೆಳಗ್ಗೆ 06:04ರಿಂದ ಮಧ್ಯಾಹ್ನ 12:35ರವರೆಗೆ
ಅಕ್ಷಯ ತೃತೀಯ ತಿಥಿ ಮುಕ್ತಾಯ:ಮೇ 15, 2021 ಬೆಳಗ್ಗೆ 07:59ಕ್ಕೆ
ಚಿನ್ನ ಕೊಳ್ಳಲು ಶುಭ ಸಮಯ: ಮೇ 14, 2021 ಬೆಳಗ್ಗೆ 06:04ರಿಂದ ಸಂಜೆ 06:04ರವರೆಗೆ

ಅಕ್ಷಯ ತೃತೀಯಾ ಪೂಜಾ ವಿಧಿ
ಬೆಳಗ್ಗೆ ಎದ್ದು ಸ್ನಾನ ಮಾಡಿ, ಮನೆಯನ್ನು ಶುದ್ಧ ಮಾಡಿ ವಿಷ್ಣು, ಮಹಾ ಲಕ್ಮೀ, ಕುಬೇರನ ಫೋಟೋ ಅಥವಾ ಮೂರ್ತಿಗಳನ್ನು ಒರೆಸಿ. ನಂತರ ವಿಷ್ಣು ಹಾಗೂ ಲಕ್ಷ್ಮಿಗೆ ಅಭಿಷೇಕ ಮಾಡಿ. ವಿಷ್ಣುವಿಗೆ ಶ್ರೀಗಂಧ, ಲಕ್ಷ್ಮಿಗೆ ಕುಂಕುಮ ಅರ್ಪಿಸಿ. ಹೂಗಳನ್ನು ಅರ್ಪಿಸಿ. ನವದಾನ್ಯಗಳು ಹಾಗೂ ಮನೆಯಲ್ಲಿ ತಯಾರಿಸಿದ ಸಿಹಿ ಅಡಿಗೆಯಿಂದ ನೈವೇದ್ಯ ಅರ್ಪಿಸಿ. ಈ ದಿನ ವಿಷ್ಣು, ಲಕ್ಷ್ಮಿ, ಕುಬೇರ ಮಂತ್ರ ಪಠಿಸಿ.

ಪೂಜೆಗೆ ಬೇಕಾಗುವ ಸಾಮಗ್ರಿ
ಹಾಲು
ಜೇನು
ತುಪ್ಪ
ಮೊಸರು
ಸಕ್ಕರೆ
ನೀರು
ತುಳಸಿ
ಶ್ರೀಗಂಧ
ಕುಂಕುಮ
ಹೂಗಳು

ಅಕ್ಷಯ ತೃತೀಯ ಪೂಜೆಯ ಪ್ರಯೋಜನಗಳು
* ವಿಷ್ಣು, ಲಕ್ಷ್ಮಿ, ಕುಬೇರನ ಕೃಪೆಗೆ ಪಾತ್ರರಾಗುವಿರಿ.
* ಐಶ್ವರ್ಯ, ಅದೃಷ್ಟ ಲಭಿಸುವುದು
* ವೃತ್ತಿಯಲ್ಲಿ ಬೆಳವಣಿಗೆಯಾಗುವುದು

ಅಕ್ಷಯ ತೃತೀಯದಂದು ಈ ಮಂತ್ರ ಪಠಿಸಿ
ವಿಷ್ಣು ಮಂತ್ರ
ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ ಚ ಸಖಾ ತ್ವಮೇವ
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ
ಲಕ್ಷ್ಮಿ ಮಂತ್ರ
ಲಕ್ಷ್ಮೀ ಸ್ತ್ರೋತ್ರ ಸುಮನಸವಂದಿತ ಮಾಧವಿ
ಚಂದ್ರ ಸಹೋದರಿ ಹೇಮಮಯೀ
ಮುನಿಗಣ ಮಂಡಿತ ಮೋಕ್ಷ ಪ್ರದಾಯಿನಿ
ಮಂಜುಳಾ ಭಾಷಿಣಿ ವೇದನುತೆ
ಪಂಕಜವಾಸಿನಿ ದೇವಸುಪೂಜಿತ
ಸದ್ಗುಣ ವರ್ಷಿಣಿ ಸನ್ನಿಯುತೆ
ಜಯ ಜಯ ಹೇ ಮಧುಸೂದನ ಕಾಮಿನಿ
ಆದಿಲಕ್ಷ್ಮೀ ಸದಾ ಪಾಲಯಮಾಂ...
ಆಯೋ ಕಲಿ ಕಲ್ಮಶ ನಾಶಿನಿ ಕಾಮಿನಿ ವೈದಿಕ ರೂಪಿಣಿ
ಕುಬೇರ ಮಂತ್ರ
ಲಕ್ಷ್ಮಿ ಕುಬೇರ ಮಂತ್ರ: .
"ಓಂ ಹ್ರೀಂ ಶ್ರೀಂ ಕ್ರೀಂ ಶ್ರೀಂ ಕುಬೇರಾಯ, ಅಷ್ಟ ಲಕ್ಷ್ಮಿ ಮಮ ಗೃಹೆ ಧನಂ ಪುರಾಯ ಪುರಾಯ ನಮಃ"
ಮಹಾಲಕ್ಷ್ಮಿ ಮಂತ್ರ:
"ಓಂ ಶ್ರೀಂ ಹ್ರೀಂ ಶ್ರೀಂ ಕಮಲೆ ಕಮಲಲಾಯೆ ಪ್ರಸೀದ, ಪ್ರಸೀದ ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೆ ನಮಃ"
ಕುಬೇರ ಮಂತ್ರ:
ಓಂ ಶ್ರೀಂ ಒಂ ಹ್ರೀಂ ಶ್ರೀಂ ಓಂ ಹ್ರೀಂ ಶ್ರೀಂ ಕ್ಲೀಮ್ ವಿತ್ತೆಶ್ವರಾಯ ನಮಃ
ಓಂ ಯಕ್ಷಾಯ ಕುಬೇರಾಯ ವೈಶ್ರವಣಾಯ ಧನಧಾನ್ಯಾಧಿಪತಯೇ ಧನಧಾನ್ಯಸಮೃದ್ಧಿಂ ಮೇ ದೇಹಿ ದಾಪಯ ಸ್ವಾಹಾ



Click it and Unblock the Notifications