Latest Updates
-
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು!
Angarki sankashti chaturthi 2021: ಮಂಗಳವಾರದ ಈ ಸಂಕಷ್ಟಿ ತುಂಬಾ ಮಹತ್ವವಾದದ್ದು , ಏಕೆ?
ಮಾರ್ಚ್ 2, ಅಂಗಾರಕ ಚತುರ್ಥಿ, ಈ ದಿನ ಹಿಂದೂಗಳಿಗೆ ತುಂಬಾ ಮಹತ್ವವಾದ ದಿನವಾಗಿದ್ದು ಉಪವಾಸವಿದ್ದು ವಿಘ್ನ ನಿವಾರಕನನ್ನು ಆರಾಧಿಸಲಾಗುವುದು. ಸಂಕಷ್ಟಿ ಮಂಗಳವಾರ ಬಂದರೆ ಅದನ್ನು ಅಂಗಾರಕ ಚತುರ್ಥಿ ಎಂದು ಕರೆಯಲಾಗುತ್ತದೆ.
ಈ ದಿನ ಬಿಟ್ಟರೆ ಈ ವರ್ಷ ಜುಲೈ 22 ಹಾಗೂ ನವೆಂಬರ್ 23ರಂದು ಅಂಗಾರಕ ಚತುರ್ಥಿ ಇದೆ.

ಅಂಗಾರಕ ಚತುರ್ಥಿ ಶುಭ ಮುಹೂರ್ತ
ಸಂಕಷ್ಟಿ ಚತುರ್ಥಿ ತಿಥಿ: 2 ಮಾರ್ಚ್, 2021
ಚತುರ್ಥಿ ತಿಥಿ ಆರಂಭ: 02 ಮಾರ್ಚ್, ಮಂಗಳವಾರ ಬೆಳಗ್ಗೆ 5.46 ನಿಮಿಷಕ್ಕೆ
ಚತುರ್ಥಿ ತಿಥಿ ಮುಕ್ತಾಯ:03 ಮಾರ್ಚ್, ಬುಧವಾರ ರಾತ್ರಿ 2:59ಕ್ಕೆ

ಅಂಗಾರಕ ಚತುರ್ಥಿ ಪೂಜಾ ವಿಧಾನ
ಅಂಗಾರಕ ಚತುರ್ಥಿಯಂದು ಬೆಳಗ್ಗೆ ಸ್ನಾನ ಮಾಡಿ ಗಣೇಶನಿಗೆ ಗರಿಕೆ, ಮೋದಕ ಅರ್ಪಿಸಿ ಪೂಜಿಸಲಾಗುತ್ತದೆ. ಈ ದಿನ ಉಪವಾಸವಿದ್ದು ಗಣೇಶನ ಸ್ತುತಿಸುತ್ತಾ ಇರಬೇಕು. ರಾತ್ರಿ ಚಂದ್ರ ದರ್ಶನದ ಬಳಿಕ ವ್ರತ ಸಂಪನ್ನಗೊಳಿಸಿ ಆಹಾರ ಸೇವಿಸಬೇಕು. ಉಪವಾಸ ಮಾಡುವಾಗ ಅಧಿಕ ಪಾನೀಯ ಕುಡಿಯುವುದು , ಎಲೆ ಅಡಿಕೆ ತಿನ್ನುವುದು ಇವೆಲ್ಲಾ ಉಪವಾಸ ಮುರಿಯುವುದಕ್ಕೆ ಸಮ. ಆದ್ದರಿಂದ ಉಪವಾಸ ಕಟ್ಟುನಿಟ್ಟಾಗಿರಬೇಕು.

ಅಂಗಾರಕ ಚತುರ್ಥಿ ಮಹತ್ವ
ಅಂಗಾರಕ ಎಂದರೆ ಮಂಗಳಕರ ಎಂಬ ಅರ್ಥ. ಮಂಗಳವಾರದಂದು ಬರುವ ಸಂಕಷ್ಟಿಯನ್ನು ಅಂಗಾರಕ ಚತುರ್ಥಿ ಎಂದು ಹೇಳಲಾಗುವುದು. ಅಂಗಾರಕ ಚತುರ್ಥಿ ಆಚರಿಸಿದರೆ ಅದು 21 ವ್ರತಗಳನ್ನು ಪಾಲಿಸಿದ್ದಕ್ಕೆ ಸಮ. ಈ ದಿನ ವ್ರತವಿದ್ದು ಪೂಜಿಸಿದರೆ ನಾವು ಮಾಡಿದ ಸಂಕಲ್ಪ ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ನಂಬಿಕೆ.

ಈ ಸ್ತೋತ್ರ ಪಠಿಸಿ
ಸಂಕಟ ಹರ ಗಣೇಶ ಸ್ತೋತ್ರ:
ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ
ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ
ಲಂಬೋಧರಂ ಪಂಚಮಂ ಚ ಷಷ್ಠಂ ವಿಕಟಮೇವಚ ಸಪ್ತಮಂ ವಿಘ್ನ ರಾಜಂಚ ಧೂಮ್ರವರ್ಣಂ ತಥಾಷ್ಠಕಂ
ನವಮಂ ಫಲ ಚಂದ್ರಂಚ ದಶಮಂ ತು ವಿನಾಯಕಂ ಏಕಾದಶಂ ಗಣಪತಿಂ ದ್ವಾದಶಂತು ಗಜಾನನಂ
ದ್ವಾದಶೈತಾನಿ ನಾಮಾನಿ ತ್ರಿ ಸಂಧ್ಯಂ ಯಃ ಪಠೇನ್ನರಃ ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ
ವಿದ್ಯಾರ್ಥಿ ಲಭತೆ ವಿದ್ಯಂ ವಿದ್ಯಾಂ ಧನಾರ್ಥಿ ಲಭತೆ ಧನಂ ಪುತ್ರಾರ್ಥಿ ಲಭತೆ ಪುತ್ರಂ ಮೋಕ್ಷಾರ್ಥಿ ಲಭತೆ ಗತಿಂ ಜಪೇತ್ ಗಣಪತಿ ಸ್ತೋತ್ರಂ ಷಡ್ಭೀರ್ಮಾಸೈ ಫಲಂ ಲಭೇತ್, ಸಂವತ್ಸರೇಣ ಸಿದ್ಧಿಂ ಚ ಲಭತೆ ನಾತ್ರ ಸಮಸ್ಯಾಃ ಅಷ್ಟಾಭ್ಯೋ ಬ್ರಹ್ಮಣೇಭ್ಯಾಷ ಚ ಲಿಖಿತ್ವ ಯಃ ಸಮರ್ಪಯೇತ್ ತಸ್ಯ ವಿದ್ಯಾ ಭವೇತ್ಸರ್ವ ಗಣೇಶಸ್ಯ ಪ್ರಸಾದತಃ
ಇತಿ ಶ್ರೀ ನಾರದ ಪುರಾಣೆ ಸಂಕಷ್ಟ ನಾಶನ ಗಣಪತಿ ಸ್ತೋತ್ರಂ ಸಂಪೂರ್ಣಂ ||



Click it and Unblock the Notifications