Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಜೂನ್ 6ಕ್ಕೆ ಅಪರಾ ಏಕಾದಶಿ: ಪೂಜಾವಿಧಿ ಹಾಗೂ ವ್ರತ ಕತೆಯ ಮಹತ್ವವೇನು?
ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಅಪರಾ ಅಥವಾ ಅಚಲ ಏಕಾದಶಿಯಂದು ಕರೆಯುತ್ತಾರೆ. ಈ ವರ್ಷ ಅಪರಾ ಏಕಾದಶಿಯನ್ನು ಜೂ. 6ಕ್ಕೆ ಆಚರಿಸಲಾಗುವುದು.
ಅಪರಾ ಏಕಾದಶಿ ಆಚರಣೆ ಮಾಡುವುದರಿಂದ ಜೀವನದಲ್ಲಿರುವ ದುಃಖ, ಕಷ್ಟ ಇವೆಲ್ಲಾ ದೂರವಾಗಿ ನೆಮ್ಮದಿಯ ಬದುಕು ಸಿಗುವುದು ಎಂಬ ನಂಬಿಕೆ. ಈ ಏಕಾದಶಿಯಂದು ಶ್ರೀ ವಿಷ್ಣುವಿನ ಮತ್ತೊಂದು ಅವತಾರವಾದ ವಾಮನ ಅವತಾರವನ್ನು ಪೂಜಿಸಲಾಗುವುದು. ಈ ದಿನ ವ್ರತ ಪಾಲಿಸುವುದರಿಂದ ಎಲ್ಲಾ ಪಾಪ ಕರ್ಮಗಳಿಂದ ಮುಕ್ತಿ ಸಿಗುವುದು ಎಂದು ಹೇಳಲಾಗುವುದು.
ಅಪರಾ ಏಕಾದಶಿಯ ಪೂಜಾ ವಿಧಿ, ಪೂಜೆಗೆ ಬೇಕಾದ ಸಾಮಗ್ರಿಗಳು, ಈ ವ್ರತದ ಹಿಂದಿರುವ ಪೌರಾಣಿಕ ಕತೆ ಇವುಗಳ ಬಗ್ಗೆ ತಿಳಿಯೋಣ:

ಅಪರಾ ಏಕಾದಶಿ ಸಮಯ
ಏಕಾದಶಿ ತಿಥಿ ಪ್ರಾರಂಭ: ಜೂನ್ 5, ಬೆಳಗ್ಗೆ 04:5ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಜೂನ್ 6, ಬೆಳಗ್ಗೆ 06:19ಕ್ಕೆ

ಅಪರಾ ಏಕಾದಶಿ ಪೂಜಾ ಸಾಮಗ್ರಿ ಮತ್ತು ಪೂಜಾ ವಿಧಿ
* ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಬಕೆಟ್ ನೀರಿಗೆ ಗಂಗಾ ಜಲ ಹಾಕಿ ಆ ನೀರಿನಲ್ಲಿ ಸ್ನಾನ ಮಾಡಿ.
* ನಂತರ ಮಡಿ ಬಟ್ಟೆ ಧರಿಸಿ.
* ದೇವರಿಗೆ ತುಪ್ಪ ಅಥವಾ ಸಾಸಿವೆಯೆಣ್ಣೆಯ ದೀಪ ಹಚ್ಚಿ.
* ನಂತರ ವಿಷ್ಣುವನ್ನು ಪೂಜಿಸಿ
* 'ಓಂ ನಮೋ ಭಗವತೀ ವಾಸುದೇವಾಯ' ಅಂತ ಮಂತ್ರ ಪಠಿಸುತ್ತಾ ದೇವರಿಗೆ ನೀರು, ಹಣ್ಣು, ಹೂ, ಸುಗಂಧ ದ್ರವ್ಯಗಳನ್ನ ಅರ್ಪಿಸಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ.
* ದೇವರಿಗೆ ವೀಳ್ಯೆದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಶ್ರೀಗಂಧ, ಅರಿಶಿಣ-ಕುಂಕುಮ ಅರ್ಪಿಸಿ
* ನಂತರ ಅಪರಾ ಏಕಾದಶಿ ಕತೆ ಓದಿ ಅಥವಾ ವಿಷ್ಣು ಸಹಸ್ರನಾಮ ಜಪ ಮಾಡಿ.

ಅಪರಾ ಏಕಾದಶಿ ಕತೆ
ಶ್ರೀ ಕೃಷ್ಣ ಯುಧಿಷ್ಠಿರನಿಗೆ " ಹೇ ರಾಜ ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯ ಹೆಸರು ಅಪರಾ ಏಕಾದಶಯೆಂದು. ಈ ಏಕಾದಶಿ ವ್ರತ ಆಚರಿಸಿದರೆ ಅಪಾರ ಧನ ಲಭಿಸುವುದು, ಪಾಪಗಳಿಂದ ಮುಕ್ತಿ ಸಿಗುವುದು
* ಯಾರು ಪರಸ್ತ್ರೀ ಜೊತೆಗಿನ ಸಂಬಂಧ ಹೊಂದಿರುತ್ತರೋ ಅವರು ಸುಳ್ಳು ಮತನಾಡುವುದು, ಅಸತ್ಯವನ್ನು ನುಡಿಯುವವರೂ ಆಗಿರುತ್ತಾರೆ. ಈ ವ್ರತ ಪಾಲಿಸಿದರೆ ಆ ಪಾಪಗಳಿಗೆ ಮುಕ್ತಿ ಸಿಗುವುದು.
* ಯಾರು ಯುದ್ಧ ಮಾಡುವಾಗ ಹೇಡಿಯಂತೆ ಓಡಿ ಹೋಗುತ್ತಾನೋ, ಅವನಿಗೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಈ ವ್ರತ ಪಾಲಿಸಿದರೆ ಅಂಥವರಿಗೆ ಸ್ವರ್ಗ ಸಿಗುವುದು.
* ಗುರುವಿನ ನಿಂದಿಸಿದ ಶಿಷ್ಯನ ಪಾಪವು ಈ ವ್ರತ ಆಚರಣೆಯಿಂದ ತೊಳೆದು ಹೋಗುತ್ತದೆ.
* ಕಾರ್ತಿಕ ಮಾಸದಲ್ಲಿ ಮಾಡುವ ಪುಣ್ಯ ಸ್ನಾನದ ಫಲ, ಪಿತೃ ದರ್ಪಣ ಮಾಡುವ ಪುಣ್ಯ ಫಲದಷ್ಟೇ ಈ ವ್ರತಾಚರಣೆಯಿಂದ ಪುಣ್ಯ ಲಭಿಸುವುದು.
* ಯಜ್ಞ-ಯಾಗ ಮಾಡುವಾಗ ಸಿಗುವ ಫಲ ಅಪರಾ ಏಕಾದಶಿ ಆಚರಣೆಯಿಂದ ಲಭಿಸುವುದು.
ಈ ವ್ರತ ಎಲ್ಲಾ ವ್ರತಕ್ಕಿಂತ ಶ್ರೇಷ್ಠವಾದದ್ದು. ಈ ದಿನ ಭಕ್ತಿಯಿಂದ ವಿಷ್ಣುವನ್ನು ಆರಾಧಿಸಿದರೆ ವಿಷ್ಣು ಪದವಿಯು ಪ್ರಾಪ್ತಿಯಾಗುವುದು ಎಂದು ಶ್ರೀ ಕೃಷ್ಣ ಹೇಳಿದ್ದಾನೆ'

ವ್ರತ ಕತೆ ಓದುವುದು ಹಾಗೂ ಕೇಳುವುದರ ಮಹತ್ವ
ಶ್ರೀ ಕೃಷ್ಣನು " ಇದನ್ನು ನಾನು ಲೋಕದ ಹಿತಕ್ಕಾಗಿ ಹೇಳುತ್ತಿದ್ದೇನೆ, ಅಪರಾ ಏಕಾದಶಿ ವ್ರತ ಓದುವುದರಿಂದ ಅಥವಾ ಕೇಳುವುದರಿಂದ ಕೂಡ ಪಾಪ ವಿಮೋಚನೆಯಾಗುವುದು" ಎಂದಿದ್ದಾನೆ.



Click it and Unblock the Notifications
