Latest Updates
-
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್
ಜೂನ್ 6ಕ್ಕೆ ಅಪರಾ ಏಕಾದಶಿ: ಪೂಜಾವಿಧಿ ಹಾಗೂ ವ್ರತ ಕತೆಯ ಮಹತ್ವವೇನು?
ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಅಪರಾ ಅಥವಾ ಅಚಲ ಏಕಾದಶಿಯಂದು ಕರೆಯುತ್ತಾರೆ. ಈ ವರ್ಷ ಅಪರಾ ಏಕಾದಶಿಯನ್ನು ಜೂ. 6ಕ್ಕೆ ಆಚರಿಸಲಾಗುವುದು.
ಅಪರಾ ಏಕಾದಶಿ ಆಚರಣೆ ಮಾಡುವುದರಿಂದ ಜೀವನದಲ್ಲಿರುವ ದುಃಖ, ಕಷ್ಟ ಇವೆಲ್ಲಾ ದೂರವಾಗಿ ನೆಮ್ಮದಿಯ ಬದುಕು ಸಿಗುವುದು ಎಂಬ ನಂಬಿಕೆ. ಈ ಏಕಾದಶಿಯಂದು ಶ್ರೀ ವಿಷ್ಣುವಿನ ಮತ್ತೊಂದು ಅವತಾರವಾದ ವಾಮನ ಅವತಾರವನ್ನು ಪೂಜಿಸಲಾಗುವುದು. ಈ ದಿನ ವ್ರತ ಪಾಲಿಸುವುದರಿಂದ ಎಲ್ಲಾ ಪಾಪ ಕರ್ಮಗಳಿಂದ ಮುಕ್ತಿ ಸಿಗುವುದು ಎಂದು ಹೇಳಲಾಗುವುದು.
ಅಪರಾ ಏಕಾದಶಿಯ ಪೂಜಾ ವಿಧಿ, ಪೂಜೆಗೆ ಬೇಕಾದ ಸಾಮಗ್ರಿಗಳು, ಈ ವ್ರತದ ಹಿಂದಿರುವ ಪೌರಾಣಿಕ ಕತೆ ಇವುಗಳ ಬಗ್ಗೆ ತಿಳಿಯೋಣ:

ಅಪರಾ ಏಕಾದಶಿ ಸಮಯ
ಏಕಾದಶಿ ತಿಥಿ ಪ್ರಾರಂಭ: ಜೂನ್ 5, ಬೆಳಗ್ಗೆ 04:5ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಜೂನ್ 6, ಬೆಳಗ್ಗೆ 06:19ಕ್ಕೆ

ಅಪರಾ ಏಕಾದಶಿ ಪೂಜಾ ಸಾಮಗ್ರಿ ಮತ್ತು ಪೂಜಾ ವಿಧಿ
* ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಬಕೆಟ್ ನೀರಿಗೆ ಗಂಗಾ ಜಲ ಹಾಕಿ ಆ ನೀರಿನಲ್ಲಿ ಸ್ನಾನ ಮಾಡಿ.
* ನಂತರ ಮಡಿ ಬಟ್ಟೆ ಧರಿಸಿ.
* ದೇವರಿಗೆ ತುಪ್ಪ ಅಥವಾ ಸಾಸಿವೆಯೆಣ್ಣೆಯ ದೀಪ ಹಚ್ಚಿ.
* ನಂತರ ವಿಷ್ಣುವನ್ನು ಪೂಜಿಸಿ
* 'ಓಂ ನಮೋ ಭಗವತೀ ವಾಸುದೇವಾಯ' ಅಂತ ಮಂತ್ರ ಪಠಿಸುತ್ತಾ ದೇವರಿಗೆ ನೀರು, ಹಣ್ಣು, ಹೂ, ಸುಗಂಧ ದ್ರವ್ಯಗಳನ್ನ ಅರ್ಪಿಸಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ.
* ದೇವರಿಗೆ ವೀಳ್ಯೆದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಶ್ರೀಗಂಧ, ಅರಿಶಿಣ-ಕುಂಕುಮ ಅರ್ಪಿಸಿ
* ನಂತರ ಅಪರಾ ಏಕಾದಶಿ ಕತೆ ಓದಿ ಅಥವಾ ವಿಷ್ಣು ಸಹಸ್ರನಾಮ ಜಪ ಮಾಡಿ.

ಅಪರಾ ಏಕಾದಶಿ ಕತೆ
ಶ್ರೀ ಕೃಷ್ಣ ಯುಧಿಷ್ಠಿರನಿಗೆ " ಹೇ ರಾಜ ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯ ಹೆಸರು ಅಪರಾ ಏಕಾದಶಯೆಂದು. ಈ ಏಕಾದಶಿ ವ್ರತ ಆಚರಿಸಿದರೆ ಅಪಾರ ಧನ ಲಭಿಸುವುದು, ಪಾಪಗಳಿಂದ ಮುಕ್ತಿ ಸಿಗುವುದು
* ಯಾರು ಪರಸ್ತ್ರೀ ಜೊತೆಗಿನ ಸಂಬಂಧ ಹೊಂದಿರುತ್ತರೋ ಅವರು ಸುಳ್ಳು ಮತನಾಡುವುದು, ಅಸತ್ಯವನ್ನು ನುಡಿಯುವವರೂ ಆಗಿರುತ್ತಾರೆ. ಈ ವ್ರತ ಪಾಲಿಸಿದರೆ ಆ ಪಾಪಗಳಿಗೆ ಮುಕ್ತಿ ಸಿಗುವುದು.
* ಯಾರು ಯುದ್ಧ ಮಾಡುವಾಗ ಹೇಡಿಯಂತೆ ಓಡಿ ಹೋಗುತ್ತಾನೋ, ಅವನಿಗೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಈ ವ್ರತ ಪಾಲಿಸಿದರೆ ಅಂಥವರಿಗೆ ಸ್ವರ್ಗ ಸಿಗುವುದು.
* ಗುರುವಿನ ನಿಂದಿಸಿದ ಶಿಷ್ಯನ ಪಾಪವು ಈ ವ್ರತ ಆಚರಣೆಯಿಂದ ತೊಳೆದು ಹೋಗುತ್ತದೆ.
* ಕಾರ್ತಿಕ ಮಾಸದಲ್ಲಿ ಮಾಡುವ ಪುಣ್ಯ ಸ್ನಾನದ ಫಲ, ಪಿತೃ ದರ್ಪಣ ಮಾಡುವ ಪುಣ್ಯ ಫಲದಷ್ಟೇ ಈ ವ್ರತಾಚರಣೆಯಿಂದ ಪುಣ್ಯ ಲಭಿಸುವುದು.
* ಯಜ್ಞ-ಯಾಗ ಮಾಡುವಾಗ ಸಿಗುವ ಫಲ ಅಪರಾ ಏಕಾದಶಿ ಆಚರಣೆಯಿಂದ ಲಭಿಸುವುದು.
ಈ ವ್ರತ ಎಲ್ಲಾ ವ್ರತಕ್ಕಿಂತ ಶ್ರೇಷ್ಠವಾದದ್ದು. ಈ ದಿನ ಭಕ್ತಿಯಿಂದ ವಿಷ್ಣುವನ್ನು ಆರಾಧಿಸಿದರೆ ವಿಷ್ಣು ಪದವಿಯು ಪ್ರಾಪ್ತಿಯಾಗುವುದು ಎಂದು ಶ್ರೀ ಕೃಷ್ಣ ಹೇಳಿದ್ದಾನೆ'

ವ್ರತ ಕತೆ ಓದುವುದು ಹಾಗೂ ಕೇಳುವುದರ ಮಹತ್ವ
ಶ್ರೀ ಕೃಷ್ಣನು " ಇದನ್ನು ನಾನು ಲೋಕದ ಹಿತಕ್ಕಾಗಿ ಹೇಳುತ್ತಿದ್ದೇನೆ, ಅಪರಾ ಏಕಾದಶಿ ವ್ರತ ಓದುವುದರಿಂದ ಅಥವಾ ಕೇಳುವುದರಿಂದ ಕೂಡ ಪಾಪ ವಿಮೋಚನೆಯಾಗುವುದು" ಎಂದಿದ್ದಾನೆ.



Click it and Unblock the Notifications











