Just In
- 4 hrs ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 4 hrs ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 5 hrs ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 5 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೂನ್ 6ಕ್ಕೆ ಅಪರಾ ಏಕಾದಶಿ: ಪೂಜಾವಿಧಿ ಹಾಗೂ ವ್ರತ ಕತೆಯ ಮಹತ್ವವೇನು?
ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಅಪರಾ ಅಥವಾ ಅಚಲ ಏಕಾದಶಿಯಂದು ಕರೆಯುತ್ತಾರೆ. ಈ ವರ್ಷ ಅಪರಾ ಏಕಾದಶಿಯನ್ನು ಜೂ. 6ಕ್ಕೆ ಆಚರಿಸಲಾಗುವುದು.
ಅಪರಾ ಏಕಾದಶಿ ಆಚರಣೆ ಮಾಡುವುದರಿಂದ ಜೀವನದಲ್ಲಿರುವ ದುಃಖ, ಕಷ್ಟ ಇವೆಲ್ಲಾ ದೂರವಾಗಿ ನೆಮ್ಮದಿಯ ಬದುಕು ಸಿಗುವುದು ಎಂಬ ನಂಬಿಕೆ. ಈ ಏಕಾದಶಿಯಂದು ಶ್ರೀ ವಿಷ್ಣುವಿನ ಮತ್ತೊಂದು ಅವತಾರವಾದ ವಾಮನ ಅವತಾರವನ್ನು ಪೂಜಿಸಲಾಗುವುದು. ಈ ದಿನ ವ್ರತ ಪಾಲಿಸುವುದರಿಂದ ಎಲ್ಲಾ ಪಾಪ ಕರ್ಮಗಳಿಂದ ಮುಕ್ತಿ ಸಿಗುವುದು ಎಂದು ಹೇಳಲಾಗುವುದು.
ಅಪರಾ ಏಕಾದಶಿಯ ಪೂಜಾ ವಿಧಿ, ಪೂಜೆಗೆ ಬೇಕಾದ ಸಾಮಗ್ರಿಗಳು, ಈ ವ್ರತದ ಹಿಂದಿರುವ ಪೌರಾಣಿಕ ಕತೆ ಇವುಗಳ ಬಗ್ಗೆ ತಿಳಿಯೋಣ:
ಅಪರಾ ಏಕಾದಶಿ ಸಮಯ
ಏಕಾದಶಿ ತಿಥಿ ಪ್ರಾರಂಭ: ಜೂನ್ 5, ಬೆಳಗ್ಗೆ 04:5ಕ್ಕೆ
ಏಕಾದಶಿ ತಿಥಿ ಮುಕ್ತಾಯ: ಜೂನ್ 6, ಬೆಳಗ್ಗೆ 06:19ಕ್ಕೆ
ಅಪರಾ ಏಕಾದಶಿ ಪೂಜಾ ಸಾಮಗ್ರಿ ಮತ್ತು ಪೂಜಾ ವಿಧಿ
* ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಬಕೆಟ್ ನೀರಿಗೆ ಗಂಗಾ ಜಲ ಹಾಕಿ ಆ ನೀರಿನಲ್ಲಿ ಸ್ನಾನ ಮಾಡಿ.
* ನಂತರ ಮಡಿ ಬಟ್ಟೆ ಧರಿಸಿ.
* ದೇವರಿಗೆ ತುಪ್ಪ ಅಥವಾ ಸಾಸಿವೆಯೆಣ್ಣೆಯ ದೀಪ ಹಚ್ಚಿ.
* ನಂತರ ವಿಷ್ಣುವನ್ನು ಪೂಜಿಸಿ
* 'ಓಂ ನಮೋ ಭಗವತೀ ವಾಸುದೇವಾಯ' ಅಂತ ಮಂತ್ರ ಪಠಿಸುತ್ತಾ ದೇವರಿಗೆ ನೀರು, ಹಣ್ಣು, ಹೂ, ಸುಗಂಧ ದ್ರವ್ಯಗಳನ್ನ ಅರ್ಪಿಸಿ.
* ನಂತರ ದೇವರಿಗೆ ನೈವೇದ್ಯ ಅರ್ಪಿಸಿ.
* ದೇವರಿಗೆ ವೀಳ್ಯೆದೆಲೆ, ಅಡಿಕೆ, ಬಾಳೆಹಣ್ಣು, ತೆಂಗಿನಕಾಯಿ, ಶ್ರೀಗಂಧ, ಅರಿಶಿಣ-ಕುಂಕುಮ ಅರ್ಪಿಸಿ
* ನಂತರ ಅಪರಾ ಏಕಾದಶಿ ಕತೆ ಓದಿ ಅಥವಾ ವಿಷ್ಣು ಸಹಸ್ರನಾಮ ಜಪ ಮಾಡಿ.
ಅಪರಾ ಏಕಾದಶಿ ಕತೆ
ಶ್ರೀ ಕೃಷ್ಣ ಯುಧಿಷ್ಠಿರನಿಗೆ " ಹೇ ರಾಜ ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶಿಯ ಹೆಸರು ಅಪರಾ ಏಕಾದಶಯೆಂದು. ಈ ಏಕಾದಶಿ ವ್ರತ ಆಚರಿಸಿದರೆ ಅಪಾರ ಧನ ಲಭಿಸುವುದು, ಪಾಪಗಳಿಂದ ಮುಕ್ತಿ ಸಿಗುವುದು
* ಯಾರು ಪರಸ್ತ್ರೀ ಜೊತೆಗಿನ ಸಂಬಂಧ ಹೊಂದಿರುತ್ತರೋ ಅವರು ಸುಳ್ಳು ಮತನಾಡುವುದು, ಅಸತ್ಯವನ್ನು ನುಡಿಯುವವರೂ ಆಗಿರುತ್ತಾರೆ. ಈ ವ್ರತ ಪಾಲಿಸಿದರೆ ಆ ಪಾಪಗಳಿಗೆ ಮುಕ್ತಿ ಸಿಗುವುದು.
* ಯಾರು ಯುದ್ಧ ಮಾಡುವಾಗ ಹೇಡಿಯಂತೆ ಓಡಿ ಹೋಗುತ್ತಾನೋ, ಅವನಿಗೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಈ ವ್ರತ ಪಾಲಿಸಿದರೆ ಅಂಥವರಿಗೆ ಸ್ವರ್ಗ ಸಿಗುವುದು.
* ಗುರುವಿನ ನಿಂದಿಸಿದ ಶಿಷ್ಯನ ಪಾಪವು ಈ ವ್ರತ ಆಚರಣೆಯಿಂದ ತೊಳೆದು ಹೋಗುತ್ತದೆ.
* ಕಾರ್ತಿಕ ಮಾಸದಲ್ಲಿ ಮಾಡುವ ಪುಣ್ಯ ಸ್ನಾನದ ಫಲ, ಪಿತೃ ದರ್ಪಣ ಮಾಡುವ ಪುಣ್ಯ ಫಲದಷ್ಟೇ ಈ ವ್ರತಾಚರಣೆಯಿಂದ ಪುಣ್ಯ ಲಭಿಸುವುದು.
* ಯಜ್ಞ-ಯಾಗ ಮಾಡುವಾಗ ಸಿಗುವ ಫಲ ಅಪರಾ ಏಕಾದಶಿ ಆಚರಣೆಯಿಂದ ಲಭಿಸುವುದು.
ಈ ವ್ರತ ಎಲ್ಲಾ ವ್ರತಕ್ಕಿಂತ ಶ್ರೇಷ್ಠವಾದದ್ದು. ಈ ದಿನ ಭಕ್ತಿಯಿಂದ ವಿಷ್ಣುವನ್ನು ಆರಾಧಿಸಿದರೆ ವಿಷ್ಣು ಪದವಿಯು ಪ್ರಾಪ್ತಿಯಾಗುವುದು ಎಂದು ಶ್ರೀ ಕೃಷ್ಣ ಹೇಳಿದ್ದಾನೆ'
ವ್ರತ ಕತೆ ಓದುವುದು ಹಾಗೂ ಕೇಳುವುದರ ಮಹತ್ವ
ಶ್ರೀ ಕೃಷ್ಣನು " ಇದನ್ನು ನಾನು ಲೋಕದ ಹಿತಕ್ಕಾಗಿ ಹೇಳುತ್ತಿದ್ದೇನೆ, ಅಪರಾ ಏಕಾದಶಿ ವ್ರತ ಓದುವುದರಿಂದ ಅಥವಾ ಕೇಳುವುದರಿಂದ ಕೂಡ ಪಾಪ ವಿಮೋಚನೆಯಾಗುವುದು" ಎಂದಿದ್ದಾನೆ.