Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications