Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications