Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications











