Latest Updates
-
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications