Latest Updates
-
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ!
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications