Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಆಷಾಢ ಅಮಾವಾಸ್ಯೆ: ಈ ದಿನ ಏನು ಮಾಡಬೇಕು, ಏನು ಮಾಡಲೇಬಾರದು?
ಹಿಂದೂ ಧರ್ಮದಲ್ಲಿ ಆಷಾಢ ಅಮಾವಾಸ್ಯೆಗೆ ತುಂಬಾನೇ ಪ್ರಾಮುಖ್ಯತೆ ಇದೆ. ಆಷಾಢ ಅಮವಾಸ್ಯೆಯನ್ನು ಒಂದೊಂದು ಕಡೆ ಒಂದೊಂದು ರೀತಿಯಯಲ್ಲಿ ಆಚರಿಸಲಾಗುವುದು. ಈ ದಿನ ಭೀಮನ ಅಮಾವಾಸ್ಯೆಯೆಂದೂ ಆಚರಿಸಲಾಗುವುದು. ಈ ದಿನ ವ್ರತ ಆಚರಿಸುವುದರಿಂದ ಕನ್ಯೆಯರಿಗೆ ಒಳ್ಳೆಯ ಸಂಬಂಧ ಕೂಡಿ ಬರುವುದು, ವಿವಾಹಿತ ಹೆಣ್ಣು ಮಕ್ಕಳ ಮುತ್ತೈದೆ ಭಾಗ್ಯ ಬಲವಾಗುವುದು.
ಇನ್ನು ಪಿತೃದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯವಾಗಿದೆ. ಈ ದಿನದಂದು ಕೆಲವರು ಪಿತೃತರ್ಪಣ ಮಾಡುತ್ತಾರೆ, ಈ ಮೂಲಕ ತಮ್ಮ ಹಿರಿಯರಿಗೆ ಮೋಕ್ಷ ನೀಡಿ ಪುಣ್ಯದ ಫಲ ಪಡೆಯುತ್ತಾರೆ.

ಇನ್ನು ದಕ್ಷಿಣ ಕನ್ನಡ ಕಡೆ ಆಟಿ ಅಮವಾಸ್ಯೆಯೆಂದು ಆಚರಿಸಲಾಗುವುದು. ಈ ದಿನ ಪಾಲೆ ಮರದ ತೊಗಟೆ ಕೆತ್ತಿ ತಂದು ಅದರಿಂದ ಕಷಾಯ ಮಾಡಿ ಸೇವಿಸುತ್ತಾರೆ. ಇ ಕಷಾಯ ಮಳೆಗಾಲದಲ್ಲಿ ಕಾಡುವ ರೋಗಗಳನ್ನು ತಡೆಗಟ್ಟಿ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿದೆ.
ಹೀಗೆ ಆಷಾಢ ಅಮಾವಾಸ್ಯೆ ಅಥವಾ ಆಟಿ ಅಮಾವಾಸ್ಯೆ ಹಲವು ವಿಶೇಷತೆಗಳಿಂದ ಕೂಡಿದೆ, ಇನ್ನು ಈ ದಿನ ಕೆಲವೊಂದು ಕಾರ್ಯಗಳನ್ನು ಮಾಡವುದರಿಂದ ಪುಣ್ಯ ಫಲ ಹೆಚ್ಚುವುದು.
ಈ ದಿನ ಏನು ಮಾಡಬೇಕು, ಏನು ಮಾಡಬಾರದು ಎಂದು ನೋಡೋಣ:

ಪಿತೃ ತರ್ಪಣ ಮಾಡಿ:
ಈ ದಿನ ಪಿತೃ ತರ್ಪಣ ಮಾಡುವುದರಿಂದ ಪಿತೃ ದೋಷದಿಂದ ಮುಕ್ತರಾಗುತ್ತೀರಿ. ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ವ್ರತ ಮಾಡಬೇಕು, ಈ ದಿನ ಪಿತೃಗಳಿಗೆ ತರ್ಪಣ ನೀಡಿ.

ದಾನ ಮಾಡಿ
ಆಷಾಢ ಅಮಾವಾಸ್ಯೆಯಂದು ದಾನ ಮಾಡುವುದು ಶ್ರೇಷ್ಠ ಎಂದು ನಂಬಲಾಗಿದೆ. ಈ ದಿನ ಬ್ರಾಹ್ಮಣರಿಗೆ ದಾನ ಮಾಡಿ, ಬಡವರಿಗೆ ಕೂಡ ಈ ದಿನ ಮಾಡುವುದರಿಂದ ಪುಣ್ಯ ಲಭಿಸುವುದು.

ಕೃಷಿ ಉಪಕರಣಗಳನ್ನು ಪೂಜಿಸಿದರೆ ಒಳ್ಳೆಯದು
ಈ ದಿನದಂದು ಕೆಲವರು ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ, ಹೀಗೆ ಪೂಜಿಸುವುದರಿಂದ ಇಳುವರಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ.

ದೀಪ ದಾನ ಮಾಡಿ
ಈ ದಿನ ದೀಪ ದಾನಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ಎಲೆಗಳ ಬಟ್ಟಲಿನಲ್ಲಿ ದೀಪ ಹಾಗೂ ಹೂಗಳನ್ನು ಹಾಕಿ ಅದನ್ನು ನೀರಿನಲ್ಲಿ ಹರಿಯ ಬಿಡಬೇಕು. ಈ ರೀತಿ ಮಾಡುವುದರಿಂದ ಕಷ್ಟಗಳು ದೂರಾಗಿ, ಸಂಪತ್ತು ವೃದ್ಧಿಯಾಗುವುದು.

ಈ ದಿನ ಏನು ಮಾಡಬಾರದು?
* ಈ ದಿನ ಮದ್ಯ ಸೇವನೆ ಮಾಡಬಾರದು
* ಬಡರ್ವರು, ನಿರ್ಗತಿಕರನ್ನು ಅವಮಾನಿಸಬಾರದು.
* ಈ ದಿನ ತಲೆಗೆ ಎಣ್ಣೆ ಹಚ್ಚಬಾರದು, ಇದರ ಬದಲಿಗೆ ಎಣ್ಣೆಯನ್ನು ದಾನ ಮಾಡಿ
* ಹಿರಿಯರನ್ನು ಅವಮಾನಿಸಬಾರದು
* ಈ ದಿನ ಪಿತೃ ಕರ್ಮಕ್ಕೆ ಮೀಸಲಾಗಿರುವುದರಿಂದ ದೇವರ ಪೂಜೆಗೆ ಸಂಬಂಧಿಸಿ ವಸ್ತುಗಳನ್ನು ಖರೀದಿಸಬಾರದು.
* ಈ ದಿನ ಮನೆಗೆ ಪೊರಕೆ ತರಬಾರದು.



Click it and Unblock the Notifications