Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆ ಯಾವಾಗ? ಜೂನ್ನಲ್ಲೋ-ಜುಲೈನಲ್ಲೋ?
ಹಿಂದೂ ಧರ್ಮದಲ್ಲಿ ಆಷಾಢ ಮಾಸಕ್ಕೆ ತುಂಬಾನೇ ಮಹತ್ವವಿದೆ. ಈ ದಿನ ವಿಶೇಷ ಪೂಜೆ ಕಾರ್ಯಗಳನ್ನು ಮಾಡಲಾಗುವುದು, ಪಿತೃ ತರ್ಪಣ ನೀಡಲಾಗುವುದು. ಆಷಾಢ ಮಾಸ ಎಂಬುವುದು ಕನ್ನಡದ ನಾಲ್ಕನ ತಿಂಗಳಾಗಿದೆ. ಆಷಾಢ ಮಾಸದಲ್ಲಿ ಕುಮಾರ ಷಷ್ಠಿ, ಬಾನು ಸಪ್ತಮಿ, ಚಾತುರ್ಮಾಸ ವ್ರತ, ಆಷಾಢ ಅಮವಾಸ್ಯೆ ಹೀಗೆ ವಿಶೇಷ ದಿನಗಳಿವೆ.
ಕರ್ನಾಟಕದಲ್ಲಿ ಆಷಾಢ ಯಾವಾಗ ಪ್ರಾರಂಭ, ಆಷಾಢ ಅಮವಾಸ್ಯೆ ಯಾವಾಗ? ಎಂಬೆಲ್ಲಾ ಮಾಹಿತಿ ಈ ಲೇಖನದಲ್ಲಿದೆ ನೋಡಿ:

ಕರ್ನಾಟಕದಲ್ಲಿ ಆಷಾಢ ಮಾಸ ಪ್ರಾರಂಭ
ಜೂನ್ 30ರಿಂದ -ಜುಲೈ 28
ಈ ಬಾರಿ ಕರ್ನಾಟಕದಲ್ಲಿ ಆಷಾಢ ಅಮವಾಸ್ಯೆ ಯಾವಾಗ?
ಉತ್ತರ ಭಾರತದ ಕಡೆ ಜೂನ್ 28ಕ್ಕೆ ಆಷಾಢ ಅಮವಾಸ್ಯೆ ಆಚರಿಸಲಾಗುತ್ತಿದೆ, ಕರ್ನಾಟಕದಲ್ಲಿ ಜುಲೈ 28ಕ್ಕೆ ಆಷಾಢ ಅಮವಾಸ್ಯೆ.

ಆಷಾಢ ಅಮವಾಸ್ಯೆಯ ಮಹತ್ವ
ಆಷಾಢ ಅಮವಾಸ್ಯೆಯಂದು ಪಿತೃಗಳಿಗೆ ತರ್ಪಣ ನೀಡಲಾಗುವುದು. ಪಿತೃ ದೋಷವಿದ್ದರೆ ಜೀವನದಲ್ಲಿ ಅನೇಕ ಕಷ್ಟಗಳು ಎದುರಾಗುವುದು. ಪಿತೃಗಳ ಆಶೀರ್ವಾದ ನಮ್ಮ ಮೇಲಿದ್ದರೆ ಸಂತಾನ ಭಾಗ್ಯ ಉಂಟಾಗುವುದು, ಕಷ್ಟಗಳು ದೂರಾಗುವುದು, ಜೀವನದಲ್ಲಿ ಖುಷಿ, ನೆಮ್ಮದಿ ಇರುತ್ತದೆ. ಆದ್ದರಿಂದ ಪಿತೃಗಳಿಗೆ ಮೋಕ್ಷ ಕೊಡಿಸಿ ಅವರ ಆಶೀರ್ವಾದ ಪಡೆಯಲು ಈ ದಿನ ಅವರಿಗೆ ತರ್ಪಣ ನೀಡಲಾಗುವುದು.

ಆಷಾಢ ಅಮಾವಾಸ್ಯೆ ಮುಹೂರ್ತ
ಅಮವಾಸ್ಯೆ ತಿಥಿ ಆರಂಭ: ಜುಲೈ 27 ರಾತ್ರಿ 09:12ಕ್ಕೆ
ಅಮವಾಸ್ಯೆ ದಿನಾಂಕ ಕೊನೆಗೊಳ್ಳುತ್ತದೆ: ಜುಲೈ 28 ರಾತ್ರಿ 11:25ಕ್ಕೆ

ಆಷಾಢ ಅಮಾವಾಸ್ಯೆಯಂದು ಈ ಕೆಲಸ ಮಾಡಿ
* ಧಾರ್ಮಿಕ ಗ್ರಂಥಗಳಲ್ಲಿ ಹೇಳಿರುವ ಪ್ರಕಾರ ಪವಿತ್ರ ನದಿಯಲ್ಲಿ ಸ್ನಾನ ಮಾಡಿ.
* ನಂತರ ಉಪವಾಸವಿದ್ದು ಪೂರ್ವಜರ ಆತ್ಮಕ್ಕೆ ಶಾಂತಿಗಾಗಿ ತರ್ಪಣವನ್ನು ನೀಡಿ. ಇದಲ್ಲದೆ ನಿಮ್ಮ ಜಾತಕದಲ್ಲಿ ಪಿತ್ರದೋಷವಿದ್ದರೆ ಆಷಾಢ ಅಮವಾಸ್ಯೆಯಂದು ಪಿತೃಗಳಿಗೆ ತರ್ಪಣ ಮಾಡುವುದರಿಂದ ನಿಮ್ಮನ್ನು ಆವರಿಸಿದ ದೋಷ ದೂರಾಗುವುದು.
* ಆಷಾಢ ಅಮಾವಾಸ್ಯೆಯಂದು ಸೂರ್ಯ, ಶಿವ, ಮಾತೆ ಗೌರಿ ಮತ್ತು ತುಳಸಿಯನ್ನು 11 ಬಾರಿ ಪ್ರದಕ್ಷಿಣೆ ಮಾಡಬೇಕು. ಇದಲ್ಲದೇ ಆಷಾಢ ಅಮಾವಾಸ್ಯೆಯಂದು ಬಡವರಿಗೆ ಅಥವಾ ನಿರ್ಗತಿಕರಿಗೆ ದಾನ-ದಕ್ಷಿಣೆ ನೀಡಿ.
* ಈ ದಿನದಂದು ನಿರ್ಗತಿಕರಿಗೆ ಆಹಾರ ನೀಡಿ. ಅಮವಾಸ್ಯೆಯಂದು ಮರ, ಗಿಡಗಳನ್ನು ನೆಡಲಾಗುತ್ತದೆ. ಹೀಗೆ ಮಾಡುವುದರಿಂದ ತಿಳಿದೋ ತಿಳಿಯದೆಯೋ ಮಾಡಿದ ಅನೇಕ ರೀತಿಯ ದೋಷಗಳು ಮತ್ತು ಪಾಪಗಳು ಕೊನೆಗೊಳ್ಳುತ್ತವೆ ಎಂದು ನಂಬಲಾಗಿದೆ.
ಈ ದಿನದಂದು ಯಾವುದೇ ಶುಭ ಕಾರ್ಯವನ್ನು ದೇವರಿಗೆ ಸ್ತೋತ್ರಗಳು ಮತ್ತು ಸ್ತುತಿಗಳೊಂದಿಗೆ ಪ್ರಾರಂಭಿಸಬೇಕು. ಹಾಗೆಯೇ ನಿತ್ಯ ಜೀವನದಲ್ಲಿ ಬಳಕೆಯಾಗುವ ವಸ್ತುಗಳಿಗೆ ಸೂಕ್ತ ಗೌರವ ನೀಡಬೇಕು.



Click it and Unblock the Notifications