Latest Updates
-
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು!
ಜ್ಯೋತಿಷ್ಯ ಪ್ರಕಾರ ಬುಧವಾರದಂದು ಏನು ಮಾಡಬಾರದು?
ಜ್ಯೋತಿಷ್ಯದಲ್ಲಿ ಪ್ರತಿಯೊಂದು ದಿನಕ್ಕೂ ಒಂದೊಂದು ವಿಶೇಷವಿದೆ, ಗ್ರಹಗಳ ಚಲನೆ, ಆ ದಿನದ ಅಧಿಪತಿ ಯಾರು ಎಂಬುವುದರ ಆಧಾರದ ಮೇಲೆ ಆ ದಿನ ವಿಶೇಷತೆ ಹಾಗೂ ಏನು ಮಾಡಬೇಕು, ಏನು ಮಾಡಬಾರದು ಎಂಬುವುದಾಗಿ ಹೇಳಲಾಗುವುದು.
ಬುಧವಾರದ ಅಧಿಪತಿ ಬುಧ. ಅಲ್ಲದೆ ಈ ದಿನ ವಿಘ್ನ ನಿವಾರಕ ಗಣಪತಿಗೆ ಈ ದಿನ ಗರಿಕೆ ಹುಲ್ಲನ್ನು ಅರ್ಪಿಸಬೇಕು. ನಾವಿಲ್ಲಿ ಜ್ಯೋತಿಷ್ಯ ಪ್ರಕಾರ ಬುಧವಾರ ಏನು ಮಾಡಬಾರದು ಎಂಬುವುದಾಗಿ ಹೇಳಿದ್ದೇವೆ ನೋಡಿ.

ಮಹಿಳೆಯರನ್ನು ಅವಮಾನಿಸಬಾರದು
ತಾಯಿ, ಸಹೋದರಿ, ಮಗಳು ಹೀಗೆ ಮಹಿಳೆಯರನ್ನು ಬುಧವಾರ ಅವಮಾನಿಸಬಾರದು. ಬುಧವಾರ ಹಸಿರು ಬಳೆಯನ್ನು ಮಹಿಳೆಯರಿಗೆ ನೀಡುವುದು ಒಳ್ಳೆಯದು.

ಸಾಲ ಪಡೆಯಬಾರದು
ಬುಧವಾರ ಸಾಲ ಪಡೆಯುವುದು ಅಥವಾ ಸಾಲ ಕೊಡುವುದು ಮಾಡಬಾರದು. ಈ ದಿನ ಹಣ ಸಾಲ ಪಡೆದರೆ ಆರ್ಥಿಕ ಲಾಭ ಉಂಟಾಗುವುದಿಲ್ಲ ಎಂದು ಹೇಳಲಾಗುವುದು. ಆದ್ದರಿಂದ ಈ ದಿನದಂದು ಯಾರ ಕೈಯಿಂದ ಸಾಲ ಪಡೆಯಬಾರದು ಎಂದು ಹೇಳಲಾಗುವುದು.

ಕೆಟ್ಟ ಪದಗಳನ್ನು ಬಳಸಬಾರದು
ಯಾರಿಗಾದರೂ ಬೈಯ್ಯುವುದು, ಕೆಟ್ಟ ಪದಗಳಿಂದ ನಿಂದಿಸುವುದು ಮಾಡಿದರೆ ನಿಮಗೆ ಬುಧನ ಬಲ ಕುಗ್ಗುವುದು. ಈ ರೀತಿ ಮಾಡಿದರೆ ಆರ್ಥಿಕ ಸಂಕಷ್ಟ ಎದುರಾಗುವುದು ಅಲ್ಲದೆ ಐಶ್ವರ್ಯ, ಸಂಪತ್ತು ನಶಿಸಿ ಹೋಗುವುದು ಎಂದು ಹೇಳಲಾಗಿದೆ. ಆದ್ದರಿಂದ ಬುಧವಾರ ಕೆಟ್ಟ ಪದಗಳನ್ನು ಬಳಸಿ ಯಾರ ಮನಸ್ಸನ್ನೂ ನೋಯಿಸಬೇಡಿ.

ಹೂಡಿಕೆ ಮಾಡಬೇಡಿ
ಬುಧವಾರ ಹೂಡಿಕೆ ಮಾಡಲು ಸೂಕ್ತವಲ್ಲ ಎಂದು ಹೇಳಲಾಗುವುದು. ಹೂಡಿಕೆಗೆ ಸೂಕ್ತ ದಿನ ಶುಕ್ರವಾರ.

ಮಂಗಳಮುಖಿಯರನ್ನು ಅವಮಾನಿಸಬಾರದು
ಈ ದಿನ ಮಂಗಳಮುಖಿಯರನ್ನು ಅವಮಾನಿಸಬಾರದು, ಬದಲಿಗೆ ಅವರಿಗೆ ಹಣವನ್ನು ನೀಡಿ ಅವರಿಂದ ಆಶೀರ್ವಾದ ಪಡೆಯಬೇಕು. ಇದರಿಂದ ನಿಮ್ಮ ಕಾರ್ಯಗಳು ಯಶಸ್ವಿಯಾಗುವುದು.

ಪಶ್ಚಿಮದ ಕಡೆ ಪ್ರಯಾಣ ಒಳ್ಳೆಯದಲ್ಲ
ಬುಧವಾರ ಪಶ್ಚಿಮದ ಕಡೆ ಪ್ರಯಾಣ ಮಾಡುವುದು ಶುಭವಲ್ಲ ಎಂದು ಹೇಳಲಾಗುವುದು.

ಮುತ್ತೈದೆಯರು ಕಪ್ಪು ಬಟ್ಟೆ ಧರಿಸಬಾರದು
ಕಪ್ಪುವಾರದಂದು ವಿವಾಹಿತ ಮಹಿಳೆಯರು ಕಪ್ಪು ಬಟ್ಟೆ ಧರಿಸಬಾರದು ಎನ್ನುತ್ತಾರೆ. ಹಸಿರು ವಸ್ತ್ರ ಒಳ್ಳೆಯದು ಎಂದು ಹೇಳಲಾಗುವುದು.
ಕೊನೆಯದಾಗಿ: ಇಲ್ಲಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧವಾರದಂದು ಏನು ಮಾಡಬಾರದು ಎಂದು ಹೇಳಲಾಗಿದೆ. ಇಲ್ಲಿ ಹೇಳಿರುವ ವಿಷಯಗಳನ್ನು ನಂಬುವುದು, ಬಿಡುವುದು ನಿಮಗೆ ಬಿಟ್ಟದ್ದು....



Click it and Unblock the Notifications