ಜ್ಯೋತಿಷ್ಯ ಪ್ರಕಾರ ಬುಧವಾರದಂದು ಏನು ಮಾಡಬಾರದು?

ಜ್ಯೋತಿಷ್ಯದಲ್ಲಿ ಪ್ರತಿಯೊಂದು ದಿನಕ್ಕೂ ಒಂದೊಂದು ವಿಶೇಷವಿದೆ, ಗ್ರಹಗಳ ಚಲನೆ, ಆ ದಿನದ ಅಧಿಪತಿ ಯಾರು ಎಂಬುವುದರ ಆಧಾರದ ಮೇಲೆ ಆ ದಿನ ವಿಶೇಷತೆ ಹಾಗೂ ಏನು ಮಾಡಬೇಕು, ಏನು ಮಾಡಬಾರದು ಎಂಬುವುದಾಗಿ ಹೇಳಲಾಗುವುದು.

ಬುಧವಾರದ ಅಧಿಪತಿ ಬುಧ. ಅಲ್ಲದೆ ಈ ದಿನ ವಿಘ್ನ ನಿವಾರಕ ಗಣಪತಿಗೆ ಈ ದಿನ ಗರಿಕೆ ಹುಲ್ಲನ್ನು ಅರ್ಪಿಸಬೇಕು. ನಾವಿಲ್ಲಿ ಜ್ಯೋತಿಷ್ಯ ಪ್ರಕಾರ ಬುಧವಾರ ಏನು ಮಾಡಬಾರದು ಎಂಬುವುದಾಗಿ ಹೇಳಿದ್ದೇವೆ ನೋಡಿ.

ಮಹಿಳೆಯರನ್ನು ಅವಮಾನಿಸಬಾರದು

ಮಹಿಳೆಯರನ್ನು ಅವಮಾನಿಸಬಾರದು

ತಾಯಿ, ಸಹೋದರಿ, ಮಗಳು ಹೀಗೆ ಮಹಿಳೆಯರನ್ನು ಬುಧವಾರ ಅವಮಾನಿಸಬಾರದು. ಬುಧವಾರ ಹಸಿರು ಬಳೆಯನ್ನು ಮಹಿಳೆಯರಿಗೆ ನೀಡುವುದು ಒಳ್ಳೆಯದು.

ಸಾಲ ಪಡೆಯಬಾರದು

ಸಾಲ ಪಡೆಯಬಾರದು

ಬುಧವಾರ ಸಾಲ ಪಡೆಯುವುದು ಅಥವಾ ಸಾಲ ಕೊಡುವುದು ಮಾಡಬಾರದು. ಈ ದಿನ ಹಣ ಸಾಲ ಪಡೆದರೆ ಆರ್ಥಿಕ ಲಾಭ ಉಂಟಾಗುವುದಿಲ್ಲ ಎಂದು ಹೇಳಲಾಗುವುದು. ಆದ್ದರಿಂದ ಈ ದಿನದಂದು ಯಾರ ಕೈಯಿಂದ ಸಾಲ ಪಡೆಯಬಾರದು ಎಂದು ಹೇಳಲಾಗುವುದು.

ಕೆಟ್ಟ ಪದಗಳನ್ನು ಬಳಸಬಾರದು

ಕೆಟ್ಟ ಪದಗಳನ್ನು ಬಳಸಬಾರದು

ಯಾರಿಗಾದರೂ ಬೈಯ್ಯುವುದು, ಕೆಟ್ಟ ಪದಗಳಿಂದ ನಿಂದಿಸುವುದು ಮಾಡಿದರೆ ನಿಮಗೆ ಬುಧನ ಬಲ ಕುಗ್ಗುವುದು. ಈ ರೀತಿ ಮಾಡಿದರೆ ಆರ್ಥಿಕ ಸಂಕಷ್ಟ ಎದುರಾಗುವುದು ಅಲ್ಲದೆ ಐಶ್ವರ್ಯ, ಸಂಪತ್ತು ನಶಿಸಿ ಹೋಗುವುದು ಎಂದು ಹೇಳಲಾಗಿದೆ. ಆದ್ದರಿಂದ ಬುಧವಾರ ಕೆಟ್ಟ ಪದಗಳನ್ನು ಬಳಸಿ ಯಾರ ಮನಸ್ಸನ್ನೂ ನೋಯಿಸಬೇಡಿ.

ಹೂಡಿಕೆ ಮಾಡಬೇಡಿ

ಹೂಡಿಕೆ ಮಾಡಬೇಡಿ

ಬುಧವಾರ ಹೂಡಿಕೆ ಮಾಡಲು ಸೂಕ್ತವಲ್ಲ ಎಂದು ಹೇಳಲಾಗುವುದು. ಹೂಡಿಕೆಗೆ ಸೂಕ್ತ ದಿನ ಶುಕ್ರವಾರ.

ಮಂಗಳಮುಖಿಯರನ್ನು ಅವಮಾನಿಸಬಾರದು

ಮಂಗಳಮುಖಿಯರನ್ನು ಅವಮಾನಿಸಬಾರದು

ಈ ದಿನ ಮಂಗಳಮುಖಿಯರನ್ನು ಅವಮಾನಿಸಬಾರದು, ಬದಲಿಗೆ ಅವರಿಗೆ ಹಣವನ್ನು ನೀಡಿ ಅವರಿಂದ ಆಶೀರ್ವಾದ ಪಡೆಯಬೇಕು. ಇದರಿಂದ ನಿಮ್ಮ ಕಾರ್ಯಗಳು ಯಶಸ್ವಿಯಾಗುವುದು.

ಪಶ್ಚಿಮದ ಕಡೆ ಪ್ರಯಾಣ ಒಳ್ಳೆಯದಲ್ಲ

ಪಶ್ಚಿಮದ ಕಡೆ ಪ್ರಯಾಣ ಒಳ್ಳೆಯದಲ್ಲ

ಬುಧವಾರ ಪಶ್ಚಿಮದ ಕಡೆ ಪ್ರಯಾಣ ಮಾಡುವುದು ಶುಭವಲ್ಲ ಎಂದು ಹೇಳಲಾಗುವುದು.

ಮುತ್ತೈದೆಯರು ಕಪ್ಪು ಬಟ್ಟೆ ಧರಿಸಬಾರದು

ಮುತ್ತೈದೆಯರು ಕಪ್ಪು ಬಟ್ಟೆ ಧರಿಸಬಾರದು

ಕಪ್ಪುವಾರದಂದು ವಿವಾಹಿತ ಮಹಿಳೆಯರು ಕಪ್ಪು ಬಟ್ಟೆ ಧರಿಸಬಾರದು ಎನ್ನುತ್ತಾರೆ. ಹಸಿರು ವಸ್ತ್ರ ಒಳ್ಳೆಯದು ಎಂದು ಹೇಳಲಾಗುವುದು.

ಕೊನೆಯದಾಗಿ: ಇಲ್ಲಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧವಾರದಂದು ಏನು ಮಾಡಬಾರದು ಎಂದು ಹೇಳಲಾಗಿದೆ. ಇಲ್ಲಿ ಹೇಳಿರುವ ವಿಷಯಗಳನ್ನು ನಂಬುವುದು, ಬಿಡುವುದು ನಿಮಗೆ ಬಿಟ್ಟದ್ದು....

English summary

Astrology: Things You Should Never Do On Wednesday In Kannada

Astrology: Things you should never do on Wednesday in Kannada, read on...
Story first published: Wednesday, July 7, 2021, 10:30 [IST]
X
Desktop Bottom Promotion