Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ಆಯುಧ ಪೂಜೆ: ಎಷ್ಟು ಹೊತ್ತಿಗೆ ಪೂಜೆ ಮಾಡಬೇಕು? ಆಯುಧ ಪೂಜೆಯ ಮಹತ್ವವೇನು?
ನವರಾತ್ರಿಯ 9ನೇ ದಿನ ಮಾಡುವ ಆಯುಧ ಪೂಜೆಯನ್ನು ಆಚರಿಸಲಾಗುವುದು.ಈ ದಿನ ನಾವು ದಿನನಿತ್ಯ ಜೀವನದಲ್ಲಿ ಬಳಸುವ ಕೃಷಿ ಉಪಕರಣಗಳು, ಗಾಡಿಗಳು, ಯಂತ್ರಗಳನ್ನು ಪೂಜಿಸಲಾಗುವುದು.
ಆಯುಧ ಪೂಜೆಯಂದು ನಾವು ಮಾಡುವ ವೃತ್ತಿಗೆ ಅನುಗುಣವಾಗಿ ಆಯುಧಗಳನ್ನು ಪೂಜಿಸುತ್ತೇವೆ. ಕೃಷಿಕನಿಗೆ ಕತ್ತಿ, ಗುದ್ದಲಿ, ಪಿಕಾಸು ಇವುಗಳು ಪೂಜಿಸಿದರೆ ಐಟಿ ಕ್ಷೇತ್ರದಲ್ಲಿ ದುಡಿಯುವವನಿಗೆ ಲ್ಯಾಪ್ಟಾಪ್ ಅವಶ್ಯಕ ಅದನ್ನು ಪೂಜಿಸುತ್ತಾರೆ, ಇನ್ನು ಡ್ರೈವರ್ಗಳು ಗಾಡಿಯನ್ನು, ಟೈಲರಿಂಗ್ ಮಾಡುವವರು ಹೊಲಿಗೆ ಯಂತ್ರಗಳನ್ನು ಹೀಗೆ ತಮ್ಮ ವೃತ್ತಗೆ ಸಹಾಯವಾಗುವ ಉಪಕರಣಗಳನ್ನು ಪೂಜಿಸಲಾಗುವುದು.

ಹೀಗಾಗಿ ನಮ್ಮ ಬದುಕು ನಡೆಸಲು ಅನಕೂಲಕರವಾಗಿರುವ ಉಪಕರಣಗಳನ್ನುಪೂಜಿಸಲಾಗುವುದು. ಈ ವರ್ಷ ಅಕ್ಟೋಬರ್ 4ರಂದು ಆಯುಧ ಪೂಜೆ ಮಾಡಲಾಗುವುದು, ಪೂಜೆಗೆ ಶುಭ ಮುಹೂರ್ತ ಯಾವಾಗ, ಪೂಜಾ ವಿಧಿ-ವಿಧಾನಗಳೇನು ಎಂದು ನೋಡೋಣ:

ಆಯುಧ ಪೂಜಾ ಮುಹೂರ್ತ
ನವಮಿ ತಿಥಿ ಪ್ರಾರಂಭ: ಅಕ್ಟೋಬರ್ 3 ಸಂಜೆ 4:35ರಿಂದ
ನವಮಿ ತಿಥಿ ಮುಕ್ತಾಯ: ಅಕ್ಟೋಬರ್ 4 ಮಧ್ಯಾಹ್ನ 2:20ರವರೆಗೆ

ಆಯುಧ ಪೂಜೆಯ ಪೌರಾಣಿಕ ಹಿನ್ನೆಲೆ
ದುರ್ಗೆಯು ಚಾಮುಂಡಿಯ ಅವತಾರ ತಾಳಿ ರಾಕ್ಷಸ ಮಹಿಷಾಸುರನನ್ನು ಸಂಹರಿಸುತ್ತಾಳೆ, ನಂತರ ತಾನು ರಾಕ್ಷಸನನ್ನು ಸಂಹರಿಸಲು ಬಳಸಿದ ಆಯುಧವನ್ನು ಭೂಮಿಯಲ್ಲೇ ಬಿಟ್ಟು ಹೋದಳು, ಆ ಆಯುಧವನ್ನು ತಂದು ಪೂಜಿಸಲಾಯಿತು, ಅಲ್ಲಿಂದ ಆಯುಧ ಪೂಜೆ ಆಚರಣೆಗೆ ಬಂತು ಎಂದು ಹೇಳಲಾಗುವುದು.

ಆಯುಧ ಪೂಜೆ ಬರೀ ಪೂಜೆಯಲ್ಲ, ನಮ್ಮ ಭಾವನೆಯೊಂದಿಗೂ ಸಂಬಂಧವಿದೆ
ಆಯುಧ ಪೂಜೆ ಯಾವುದೋ ಆಯುಧವಿಟ್ಟು ಪೂಜೆ ಮಾಡುವುದಲ್ಲ, ನಾವು ನಮ್ಮ ವೃತ್ತಿ ಬದುಕಿಗೆ ಬಳಸುವ ಆಯುಧ-ಉಪಕರಣಗಳನ್ನು ಪೂಜಿಸಲಾಗುವುದು, ಆದ್ದರಿಂದ ಈ ಪೂಜೆಗೂ ನಮ್ಮ ಭಾವನೆಗಳಿಗೂ ತುಂಬಾನೇ ಸಂಬಂಧವಿದೆ. ನಮಗೆ ಅನ್ನ ಹಾಕುತ್ತಿರುವ, ನಮ್ಮ ಬದುಕನ್ನು ಮತ್ತಷ್ಟು ಸರಳವಾಗಿಸಿರುವ ಉಪಕರಣಗಳನ್ನು ಪೂಜಿಸಲಾಗುವುದು.

ಆಯುಧ ಪೂಜೆಯನ್ನು ಹೇಗೆ ಆಚರಿಸಬೇಕು?
ಆಯುಧ ಪೂಜೆಯ ಹಿಂದಿನ ದಿನವೇ ಮನೆಯನ್ನು ಶುದ್ಧ ಮಾಡಬೇಕು. ಎಲ್ಲಾ ಉಪಕರಣಗಳನ್ನು ಶುದ್ಧ ಮಾಡಬೇಕು. ನಂತರ ಅವುಗಳಿಗೆ ಕುಂಕುಮ ಹಚ್ಚಿ, ಆರತಿ ಎತ್ತಬೇಕು. ಗಾಡಿಯ ಮುಂದೆ ಕುಂಬಳಕಾಯಿಗೆ ಕುಂಕುಮ, ನಾಣ್ಯ ಹಾಕಿ ಅದನ್ನು ಗಾಡಿ ಮುಂದೆ ಒಡೆಯಲಾಗುವುದು. ಈ ದಿನ ಕಬ್ಬು, ಬಾಳೆಹಣ್ಣು, ಅವಲಕ್ಕಿ, ಸಿಹಿ ತಿನಿಸುಗಳನ್ನು ಬಳಸಿ ಪ್ರಸಾದ ತಯಾರಿಸಲಾಗುವುದು.



Click it and Unblock the Notifications