Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ಆಯುಧ ಪೂಜೆ: ಎಷ್ಟು ಹೊತ್ತಿಗೆ ಪೂಜೆ ಮಾಡಬೇಕು? ಆಯುಧ ಪೂಜೆಯ ಮಹತ್ವವೇನು?
ನವರಾತ್ರಿಯ 9ನೇ ದಿನ ಮಾಡುವ ಆಯುಧ ಪೂಜೆಯನ್ನು ಆಚರಿಸಲಾಗುವುದು.ಈ ದಿನ ನಾವು ದಿನನಿತ್ಯ ಜೀವನದಲ್ಲಿ ಬಳಸುವ ಕೃಷಿ ಉಪಕರಣಗಳು, ಗಾಡಿಗಳು, ಯಂತ್ರಗಳನ್ನು ಪೂಜಿಸಲಾಗುವುದು.
ಆಯುಧ ಪೂಜೆಯಂದು ನಾವು ಮಾಡುವ ವೃತ್ತಿಗೆ ಅನುಗುಣವಾಗಿ ಆಯುಧಗಳನ್ನು ಪೂಜಿಸುತ್ತೇವೆ. ಕೃಷಿಕನಿಗೆ ಕತ್ತಿ, ಗುದ್ದಲಿ, ಪಿಕಾಸು ಇವುಗಳು ಪೂಜಿಸಿದರೆ ಐಟಿ ಕ್ಷೇತ್ರದಲ್ಲಿ ದುಡಿಯುವವನಿಗೆ ಲ್ಯಾಪ್ಟಾಪ್ ಅವಶ್ಯಕ ಅದನ್ನು ಪೂಜಿಸುತ್ತಾರೆ, ಇನ್ನು ಡ್ರೈವರ್ಗಳು ಗಾಡಿಯನ್ನು, ಟೈಲರಿಂಗ್ ಮಾಡುವವರು ಹೊಲಿಗೆ ಯಂತ್ರಗಳನ್ನು ಹೀಗೆ ತಮ್ಮ ವೃತ್ತಗೆ ಸಹಾಯವಾಗುವ ಉಪಕರಣಗಳನ್ನು ಪೂಜಿಸಲಾಗುವುದು.

ಹೀಗಾಗಿ ನಮ್ಮ ಬದುಕು ನಡೆಸಲು ಅನಕೂಲಕರವಾಗಿರುವ ಉಪಕರಣಗಳನ್ನುಪೂಜಿಸಲಾಗುವುದು. ಈ ವರ್ಷ ಅಕ್ಟೋಬರ್ 4ರಂದು ಆಯುಧ ಪೂಜೆ ಮಾಡಲಾಗುವುದು, ಪೂಜೆಗೆ ಶುಭ ಮುಹೂರ್ತ ಯಾವಾಗ, ಪೂಜಾ ವಿಧಿ-ವಿಧಾನಗಳೇನು ಎಂದು ನೋಡೋಣ:

ಆಯುಧ ಪೂಜಾ ಮುಹೂರ್ತ
ನವಮಿ ತಿಥಿ ಪ್ರಾರಂಭ: ಅಕ್ಟೋಬರ್ 3 ಸಂಜೆ 4:35ರಿಂದ
ನವಮಿ ತಿಥಿ ಮುಕ್ತಾಯ: ಅಕ್ಟೋಬರ್ 4 ಮಧ್ಯಾಹ್ನ 2:20ರವರೆಗೆ

ಆಯುಧ ಪೂಜೆಯ ಪೌರಾಣಿಕ ಹಿನ್ನೆಲೆ
ದುರ್ಗೆಯು ಚಾಮುಂಡಿಯ ಅವತಾರ ತಾಳಿ ರಾಕ್ಷಸ ಮಹಿಷಾಸುರನನ್ನು ಸಂಹರಿಸುತ್ತಾಳೆ, ನಂತರ ತಾನು ರಾಕ್ಷಸನನ್ನು ಸಂಹರಿಸಲು ಬಳಸಿದ ಆಯುಧವನ್ನು ಭೂಮಿಯಲ್ಲೇ ಬಿಟ್ಟು ಹೋದಳು, ಆ ಆಯುಧವನ್ನು ತಂದು ಪೂಜಿಸಲಾಯಿತು, ಅಲ್ಲಿಂದ ಆಯುಧ ಪೂಜೆ ಆಚರಣೆಗೆ ಬಂತು ಎಂದು ಹೇಳಲಾಗುವುದು.

ಆಯುಧ ಪೂಜೆ ಬರೀ ಪೂಜೆಯಲ್ಲ, ನಮ್ಮ ಭಾವನೆಯೊಂದಿಗೂ ಸಂಬಂಧವಿದೆ
ಆಯುಧ ಪೂಜೆ ಯಾವುದೋ ಆಯುಧವಿಟ್ಟು ಪೂಜೆ ಮಾಡುವುದಲ್ಲ, ನಾವು ನಮ್ಮ ವೃತ್ತಿ ಬದುಕಿಗೆ ಬಳಸುವ ಆಯುಧ-ಉಪಕರಣಗಳನ್ನು ಪೂಜಿಸಲಾಗುವುದು, ಆದ್ದರಿಂದ ಈ ಪೂಜೆಗೂ ನಮ್ಮ ಭಾವನೆಗಳಿಗೂ ತುಂಬಾನೇ ಸಂಬಂಧವಿದೆ. ನಮಗೆ ಅನ್ನ ಹಾಕುತ್ತಿರುವ, ನಮ್ಮ ಬದುಕನ್ನು ಮತ್ತಷ್ಟು ಸರಳವಾಗಿಸಿರುವ ಉಪಕರಣಗಳನ್ನು ಪೂಜಿಸಲಾಗುವುದು.

ಆಯುಧ ಪೂಜೆಯನ್ನು ಹೇಗೆ ಆಚರಿಸಬೇಕು?
ಆಯುಧ ಪೂಜೆಯ ಹಿಂದಿನ ದಿನವೇ ಮನೆಯನ್ನು ಶುದ್ಧ ಮಾಡಬೇಕು. ಎಲ್ಲಾ ಉಪಕರಣಗಳನ್ನು ಶುದ್ಧ ಮಾಡಬೇಕು. ನಂತರ ಅವುಗಳಿಗೆ ಕುಂಕುಮ ಹಚ್ಚಿ, ಆರತಿ ಎತ್ತಬೇಕು. ಗಾಡಿಯ ಮುಂದೆ ಕುಂಬಳಕಾಯಿಗೆ ಕುಂಕುಮ, ನಾಣ್ಯ ಹಾಕಿ ಅದನ್ನು ಗಾಡಿ ಮುಂದೆ ಒಡೆಯಲಾಗುವುದು. ಈ ದಿನ ಕಬ್ಬು, ಬಾಳೆಹಣ್ಣು, ಅವಲಕ್ಕಿ, ಸಿಹಿ ತಿನಿಸುಗಳನ್ನು ಬಳಸಿ ಪ್ರಸಾದ ತಯಾರಿಸಲಾಗುವುದು.



Click it and Unblock the Notifications