Just In
- 22 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 1 hr ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 2 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
- 3 hrs ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
Don't Miss
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಯುಧ ಪೂಜೆ: ಎಷ್ಟು ಹೊತ್ತಿಗೆ ಪೂಜೆ ಮಾಡಬೇಕು? ಆಯುಧ ಪೂಜೆಯ ಮಹತ್ವವೇನು?
ನವರಾತ್ರಿಯ 9ನೇ ದಿನ ಮಾಡುವ ಆಯುಧ ಪೂಜೆಯನ್ನು ಆಚರಿಸಲಾಗುವುದು.ಈ ದಿನ ನಾವು ದಿನನಿತ್ಯ ಜೀವನದಲ್ಲಿ ಬಳಸುವ ಕೃಷಿ ಉಪಕರಣಗಳು, ಗಾಡಿಗಳು, ಯಂತ್ರಗಳನ್ನು ಪೂಜಿಸಲಾಗುವುದು.
ಆಯುಧ ಪೂಜೆಯಂದು ನಾವು ಮಾಡುವ ವೃತ್ತಿಗೆ ಅನುಗುಣವಾಗಿ ಆಯುಧಗಳನ್ನು ಪೂಜಿಸುತ್ತೇವೆ. ಕೃಷಿಕನಿಗೆ ಕತ್ತಿ, ಗುದ್ದಲಿ, ಪಿಕಾಸು ಇವುಗಳು ಪೂಜಿಸಿದರೆ ಐಟಿ ಕ್ಷೇತ್ರದಲ್ಲಿ ದುಡಿಯುವವನಿಗೆ ಲ್ಯಾಪ್ಟಾಪ್ ಅವಶ್ಯಕ ಅದನ್ನು ಪೂಜಿಸುತ್ತಾರೆ, ಇನ್ನು ಡ್ರೈವರ್ಗಳು ಗಾಡಿಯನ್ನು, ಟೈಲರಿಂಗ್ ಮಾಡುವವರು ಹೊಲಿಗೆ ಯಂತ್ರಗಳನ್ನು ಹೀಗೆ ತಮ್ಮ ವೃತ್ತಗೆ ಸಹಾಯವಾಗುವ ಉಪಕರಣಗಳನ್ನು ಪೂಜಿಸಲಾಗುವುದು.
ಹೀಗಾಗಿ ನಮ್ಮ ಬದುಕು ನಡೆಸಲು ಅನಕೂಲಕರವಾಗಿರುವ ಉಪಕರಣಗಳನ್ನುಪೂಜಿಸಲಾಗುವುದು. ಈ ವರ್ಷ ಅಕ್ಟೋಬರ್ 4ರಂದು ಆಯುಧ ಪೂಜೆ ಮಾಡಲಾಗುವುದು, ಪೂಜೆಗೆ ಶುಭ ಮುಹೂರ್ತ ಯಾವಾಗ, ಪೂಜಾ ವಿಧಿ-ವಿಧಾನಗಳೇನು ಎಂದು ನೋಡೋಣ:
ಆಯುಧ ಪೂಜಾ ಮುಹೂರ್ತ
ನವಮಿ ತಿಥಿ ಪ್ರಾರಂಭ: ಅಕ್ಟೋಬರ್ 3 ಸಂಜೆ 4:35ರಿಂದ
ನವಮಿ ತಿಥಿ ಮುಕ್ತಾಯ: ಅಕ್ಟೋಬರ್ 4 ಮಧ್ಯಾಹ್ನ 2:20ರವರೆಗೆ
ಆಯುಧ ಪೂಜೆಯ ಪೌರಾಣಿಕ ಹಿನ್ನೆಲೆ
ದುರ್ಗೆಯು ಚಾಮುಂಡಿಯ ಅವತಾರ ತಾಳಿ ರಾಕ್ಷಸ ಮಹಿಷಾಸುರನನ್ನು ಸಂಹರಿಸುತ್ತಾಳೆ, ನಂತರ ತಾನು ರಾಕ್ಷಸನನ್ನು ಸಂಹರಿಸಲು ಬಳಸಿದ ಆಯುಧವನ್ನು ಭೂಮಿಯಲ್ಲೇ ಬಿಟ್ಟು ಹೋದಳು, ಆ ಆಯುಧವನ್ನು ತಂದು ಪೂಜಿಸಲಾಯಿತು, ಅಲ್ಲಿಂದ ಆಯುಧ ಪೂಜೆ ಆಚರಣೆಗೆ ಬಂತು ಎಂದು ಹೇಳಲಾಗುವುದು.
ಆಯುಧ ಪೂಜೆ ಬರೀ ಪೂಜೆಯಲ್ಲ, ನಮ್ಮ ಭಾವನೆಯೊಂದಿಗೂ ಸಂಬಂಧವಿದೆ
ಆಯುಧ ಪೂಜೆ ಯಾವುದೋ ಆಯುಧವಿಟ್ಟು ಪೂಜೆ ಮಾಡುವುದಲ್ಲ, ನಾವು ನಮ್ಮ ವೃತ್ತಿ ಬದುಕಿಗೆ ಬಳಸುವ ಆಯುಧ-ಉಪಕರಣಗಳನ್ನು ಪೂಜಿಸಲಾಗುವುದು, ಆದ್ದರಿಂದ ಈ ಪೂಜೆಗೂ ನಮ್ಮ ಭಾವನೆಗಳಿಗೂ ತುಂಬಾನೇ ಸಂಬಂಧವಿದೆ. ನಮಗೆ ಅನ್ನ ಹಾಕುತ್ತಿರುವ, ನಮ್ಮ ಬದುಕನ್ನು ಮತ್ತಷ್ಟು ಸರಳವಾಗಿಸಿರುವ ಉಪಕರಣಗಳನ್ನು ಪೂಜಿಸಲಾಗುವುದು.
ಆಯುಧ ಪೂಜೆಯನ್ನು ಹೇಗೆ ಆಚರಿಸಬೇಕು?
ಆಯುಧ ಪೂಜೆಯ ಹಿಂದಿನ ದಿನವೇ ಮನೆಯನ್ನು ಶುದ್ಧ ಮಾಡಬೇಕು. ಎಲ್ಲಾ ಉಪಕರಣಗಳನ್ನು ಶುದ್ಧ ಮಾಡಬೇಕು. ನಂತರ ಅವುಗಳಿಗೆ ಕುಂಕುಮ ಹಚ್ಚಿ, ಆರತಿ ಎತ್ತಬೇಕು. ಗಾಡಿಯ ಮುಂದೆ ಕುಂಬಳಕಾಯಿಗೆ ಕುಂಕುಮ, ನಾಣ್ಯ ಹಾಕಿ ಅದನ್ನು ಗಾಡಿ ಮುಂದೆ ಒಡೆಯಲಾಗುವುದು. ಈ ದಿನ ಕಬ್ಬು, ಬಾಳೆಹಣ್ಣು, ಅವಲಕ್ಕಿ, ಸಿಹಿ ತಿನಿಸುಗಳನ್ನು ಬಳಸಿ ಪ್ರಸಾದ ತಯಾರಿಸಲಾಗುವುದು.