Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಪಿತೃಪಕ್ಷದಲ್ಲಿ ಜನಿಸಿದ ಮಕ್ಕಳ ಭವಿಷ್ಯದ ಬಗ್ಗೆ ಇರುವ ನಂಬಿಕೆಗಳಿವು
ಪಿತೃಪಕ್ಷ ಹಿಂದೂಗಳಿಗೆ ತುಂಬಾ ಮಹತ್ವದ ದಿನಗಳಾಗಿವೆ. ಪಿತೃಪಕ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದಲ್ಲಿ ಪಿತೃಪಕ್ಷ ಬರುತ್ತದೆ, ಈ ವರ್ಷ ಸೆಪ್ಟೆಂಬರ್ 10ರಿಂದ ಪಿತೃಪಕ್ಷ ಪ್ರಾರಂಭವಾಗಿ ಸೆಪ್ಟೆಂಬರ್ 25ಕ್ಕೆ ಮುಗಿಯಲಿದೆ.
ಈ 15 ದಿನಗಳು ಪಿತೃದೋಷ ಪರಿಹಾರಕ್ಕೆ ತುಂಬಾನೇ ಮಹತ್ವವಾದ ದಿನಗಳಾಗಿವೆ. ಪಿತೃದೋಷವಿದ್ದರೆ ಮನುಷ್ಯರಿಗೆ ಅನೇಕ ಸಮಸ್ಯೆಗಳು ಬರುತ್ತದೆ. ಅನಾರೋಗ್ಯ, ವ್ಯವಹಾರದಲ್ಲಿ ಅಡಚಣೆ, ಸಂತಾನ ಭಾಗ್ಯ ಇಲ್ಲದಿರುವುದು ಮುಂತಾದ ಅನೇಕ ತೊಂದರೆಗಳು ಎದುರಾಗುವುದು.

ಈ ಎಲ್ಲಾ ದೋಷ ನಿವಾರಣೆಗೆ ಪಿತೃಪಕ್ಷದಲ್ಲಿ ತರ್ಪಣ ನೀಡಿದರೆ ಹಿರಿಯರ ಆಶೀರ್ವಾದದಿಂದ ಎಲ್ಲವೂ ಸರಿಹೋಗುವುದು ಎಂಬ ನಂಬಿಕೆ. ಈ ಪಿತೃಪಕ್ಷ ಅವಧಿಯಲ್ಲಿ ಯಾವುದೇ ಶುಭ ಕಾರ್ಯ ಮಾಡುವುದಿಲ್ಲ. ಮಕ್ಕಳ ನಾಮಕರಣ, ಗೃಹ ಪ್ರವೇಶ, ಹೋಮ ಹೀಗೆ ಯಾವುದೇ ಶುಭ ಕಾರ್ಯಗಳನ್ನು ಮಾಡುವುದಿಲ್ಲ.

ಪಿತೃಪಕ್ಷದಲ್ಲಿ ಶ್ರಾದ್ಧ ಕಾರ್ಯದ ಮಹತ್ವ
ಈ ಅವಧಿಯಲ್ಲಿ ಪೂರ್ವಜರಿಗೆ ಶ್ರಾದ್ಧ ಕಾರ್ಯ ಮಾಡಿದರೆ ಅವರ ಆಶೀರ್ವಾದ ನಮಗೆ ದೊರೆಯುವುದು. ಇದರಿಂದ ಮನೆಯಲ್ಲಿ ಖುಷಿ, ನೆಮ್ಮದಿ ಇರುತ್ತದೆ. ಮನೆಯಲ್ಲಿ ಮದುವೆ ವಯಸ್ಸಿನವರಿಗೆ ಕಂಕಣ ಭಾಗ್ಯ ಕೂಡಿ ಬರುವುದು, ನಮ್ಮ ಕಾರ್ಯದಲ್ಲಿ ಪ್ರಗತಿಯನ್ನು ಕಾಣಬಹುದು.

ಪಿತೃಪಕ್ಷದಲ್ಲಿ ಮಕ್ಕಳ ಜನನ ಅದೃಷ್ಟವೇ?
ಧಾರ್ಮಿಕ ನಂಬಿಕೆಗಳ ಪ್ರಕಾರ ಪಿತೃಪಕ್ಷದಲ್ಲಿ ಜನಿಸಿದ ಮಕ್ಕಳು ಅದೃಷ್ಟವಂತರು. ಆ ಮಕ್ಕಳು ಭವಿಷ್ಯದಲ್ಲಿ ದೊಡ್ಡ ವ್ಯಕ್ತಿಗಳಾಗಿ ಬೆಳೆಯುತ್ತಾರೆ, ಅವರು ಜೀವನದಲ್ಲಿ ತುಂಬಾ ಸಾಧನೆ ಮಾಡುತ್ತಾರೆ ಎಂದು ಹೇಳಲಾಗುವುದು.

ಪಿತೃಪಕ್ಷದಲ್ಲಿ ಜನಿಸಿದ ಮಕ್ಕಳಿಗೆ ಹಿರಿಯರ ಆಶೀರ್ವಾದವಿರುತ್ತೆ
ಪಿತೃಪಕ್ಷದಲ್ಲಿ ಹಿರಿಯರು ಭೂಮಿಗೆ ಬರುತ್ತಾರೆ ಎಂಬ ಎಂಬ ನಂಬಿಕೆ ಇದೆ, ಈ ಪಿತೃಪಕ್ಷದಲ್ಲಿ ಜನಿಸುವ ಮಕ್ಕಳಿಗೆ ಹಿರಿಯರ ಆಶೀರ್ವಾದ ಕೂಡ ಸಿಗುವುದು, ಇದರಿಂದ ಆ ಮಕ್ಕಳಿಗೆ ತುಂಬಾ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ.
ಪಿತೃಪಕ್ಷದಲ್ಲಿ ಜನಿಸಿದ ಮಕ್ಕಳು ಮನೆಗೆ ಸಂತೋಷ ತರುತ್ತಾರೆ, ಆ ಮಕ್ಕಳಿಂದ ಮನೆಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ.
ಸೂಚನೆ: ಇಲ್ಲಿ ನೀಡಿರುವ ಅಂಶವನ್ನು ಜನರ ನಂಬಿಕೆಗಳ ಅಧಾರದ ಮೇಲೆ ಹೇಳಲಾಗಿದೆ, ಪಿತೃಪಕ್ಷದಲ್ಲಿ ಮಕ್ಕಳು ಜನಿಸಿದರೆ ಆ ಮನೆಯಲ್ಲಿ ಬೆಳವಣಿಗೆಯಾಗುತ್ತದೆ ಎಂದು ಹಿರಿಯರು ಹೇಳುವುದನ್ನು ನೀವೂ ಕೇಳಿರಬಹುದು ಅಲ್ವಾ? ಇಲ್ಲಿ ನೀಡಿರುವ ಅಂಶ ನಿಮ್ಮ ನಂಬಿಕೆ ಬಿಟ್ಟದ್ದು.



Click it and Unblock the Notifications
