Just In
Don't Miss
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿವಾರದ ದಿನ ಭವಿಷ್ಯ (09-11-2019)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ. ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.
ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ. ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಂಜನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.
ಮೇಷ ರಾಶಿ: 21 ಮಾರ್ಚ್ - 19 ಏಪ್ರಿಲ್
ಹೊಸ ಕೆಲಸವನ್ನು ಪ್ರಾರಂಭಿಸಲು ಇಂದು ಶುಭ ದಿನ. ಸಣ್ಣ ಉದ್ಯಮವನ್ನು ಪ್ರಾರಂಭಿಸಲು ಬಯಸಿದರೆ ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗುತ್ತೇವೆ ಎಂದು ನಿರೀಕ್ಷಿಸಲಾಗಿದೆ. ವೈವಾಹಿಕ ಜೀವನದಲ್ಲಿ ತೊಂದರೆಗಳು ಹೆಚ್ಚಾಗುತ್ತವೆ ಮತ್ತು ಸಂಗಾತಿಯೊಂದಿಗೆ ಕೆಲವು ವಾದ ಉಂಟಾಗುವ ಸಾಧ್ಯತೆಯಿದೆ. ನಿಮ್ಮ ಧ್ವನಿಯನ್ನು ನಿಯಂತ್ರಣದಲ್ಲಿಡುವುದು ಉತ್ತಮ ಮತ್ತು ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರೆ ಒಳಿತು. ಹಣದ ವಿಚಾರದಲ್ಲಿ ಇಂದು ವೆಚ್ಚಗಳು ಕಡಿಮೆಯಾಗುತ್ತವೆ, ಇದರಿಂದ ಉಳಿಸಲು ಸಾಧ್ಯವಾಗುತ್ತದೆ. ಇಂದು ಪ್ರಯಾಣಿಸಲು ಹೋಗುತ್ತಿದ್ದರೆ, ಪ್ರಯಾಣವು ಶುಭವಾಗುವುದಲ್ಲದೆ ಬಹಳ ಮನರಂಜನೆಯಾಗಿರುತ್ತದೆ. ವಾಹನವನ್ನು ಬಳಸುವಾಗ ಜಾಗರೂಕರಾಗಿರಿ.
ಅದೃಷ್ಟ ಬಣ್ಣ: ಗಾಢ ಹಸಿರು
ಅದೃಷ್ಟ ಸಂಖ್ಯೆ: 12
ಅದೃಷ್ಟ ಸಮಯ: ಮಧ್ಯಾಹ್ನ 2:00 ರಿಂದ 5:30 ರವರೆಗೆ
ವೃಷಭ ರಾಶಿ: 20 ಏಪ್ರಿಲ್ - 20 ಮೇ
ಕೆಲಸದ ಸ್ಥಳದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ ಮತ್ತು ಆದಾಯದ ಬೆಳವಣಿಗೆ ಸಾಧ್ಯತೆಗಳಿವೆ. ಉದ್ಯಮಿಗಳು ಲಾಭ ಪಡೆಯುವ ನಿರೀಕ್ಷೆಯಿದೆ. ಕುಟುಂಬ ಜೀವನವು ಸಾಮಾನ್ಯವಾಗಿರುತ್ತದೆ ಮತ್ತು ಕುಟುಂಬ ಸದಸ್ಯರೊಂದಿಗೆ ಪ್ರೀತಿ ಮತ್ತು ಸಂವಹನ ಹೆಚ್ಚಾಗುತ್ತದೆ. ಇದು ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ. ಪೋಷಕರು ನೀಡಿದ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ದಂಪತಿಗಳು ಸಂಗಾತಿಯೊಂದಿಗೆ ಬಹಳ ಸ್ಮರಣೀಯ ಸಮಯವನ್ನು ಕಳೆಯಬಹುದು. ಮದ್ಯ ಸೇವಿಸುವುದನ್ನು ತಪ್ಪಿಸಿ.
ಅದೃಷ್ಟ ಬಣ್ಣ: ಕಂದು
ಅದೃಷ್ಟ ಸಂಖ್ಯೆ: 10
ಅದೃಷ್ಟ ಸಮಯ: ಬೆಳಿಗ್ಗೆ 8:20 ರಿಂದ ಮಧ್ಯಾಹ್ನ 12:30 ರವರೆಗೆ
ಮಿಥುನ ರಾಶಿ: 21 ಮೇ - 20 ಜೂನ್
ಇಂದು ದಿನವು ನಿಮ್ಮ ಪರವಾಗಿರುತ್ತದೆ. ಕಷ್ಟಪಟ್ಟು ಕೆಲಸ ಮಾಡುತ್ತೀರಿ ಮತ್ತು ಯಶಸ್ಸು ಖಂಡಿತವಾಗಿಯೂ ನಿಮ್ಮನ್ನು ಅನುಸರಿಸುತ್ತದೆ. ಉದ್ಯಮಿಗಳು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರುತ್ತವೆ. ಹೊಸ ಮನೆ ಅಥವಾ ವಾಹನವನ್ನು ಖರೀದಿಸುವ ಬಲವಾದ ಸಾಧ್ಯತೆಯಿದೆ. ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ ಮತ್ತು ಅವರ ಆರೋಗ್ಯದ ಬಗ್ಗೆ ಜಾಗೃತರಾಗಿರಿ. ಅವಿವಾಹಿತರಾಗಿದ್ದರೆ ಯಾವುದೇ ವಿವಾಹ ಪ್ರಸ್ತಾಪವು ಇಂದು ನಿಮಗಾಗಿ ಬರಬಹುದು. ಆದಾರೂ ಆತುರಪಡಬೇಡಿ ಮತ್ತು ನಿಮ್ಮ ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ.
ಅದೃಷ್ಟ ಬಣ್ಣ:ಬಿಳಿ
ಅದೃಷ್ಟ ಸಂಖ್ಯೆ:8
ಅದೃಷ್ಟ ಸಮಯ: ಸಂಜೆ 5:00 ರಿಂದ 10:00 ರವರೆಗೆ
ಕರ್ಕ ರಾಶಿ: 21 ಜೂನ್ - 22 ಜುಲೈ
ಇಂದು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಸರಿಯಾದ ಆಹಾರದೊಂದಿಗೆ ಸ್ವಲ್ಪ ಹಗುರವಾದ ವ್ಯಾಯಾಮ ಮಾಡಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಉಳಿಯುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ. ಕೆಲವು ಕೆಲಸಗಳಿಂದಾಗಿ ನೀವು ವಿದೇಶಕ್ಕೂ ಪ್ರಯಾಣಿಸಬಹುದು. ಉದ್ಯಮಿಗಳು ಇಂದು ಜಾಗರೂಕರಾಗಿರಬೇಕು, ಯಾರನ್ನೂ ಕುರುಡಾಗಿ ನಂಬಬೇಡಿ ಮೋಸ ಹೋಗಬಹುದು. ಹಣಕಾಸಿನ ದೃಷ್ಟಿಯಿಂದ ಹಠಾತ್ ಹಣ ನಷ್ಟವಾಗುವ ಸಾಧ್ಯತೆಯಿದೆ. ಮನೆಯಲ್ಲಿ ಶಾಂತಿ ಕಾಪಾಡಲು ಕುಟುಂಬ ಸದಸ್ಯರೊಂದಿಗೆ ಯಾವುದೇ ರೀತಿಯ ವಾದಗಳನ್ನು ತಪ್ಪಿಸಿ. ಸಂಗಾತಿಯನ್ನು ಅನಗತ್ಯವಾಗಿ ಅನುಮಾನಿಸುವ ನಿಮ್ಮ ಅಭ್ಯಾಸವು ಅವರನ್ನು ನಿಮ್ಮಿಂದ ದೂರವಿರಿಸುತ್ತದೆ.
ಅದೃಷ್ಟ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 16
ಅದೃಷ್ಟ ಸಮಯ: ಬೆಳಿಗ್ಗೆ 4:05 ರಿಂದ 10:30 ರವರೆಗೆ
ಸಿಂಹ ರಾಶಿ: 23 ಜುಲೈ - 22 ಆಗಸ್ಟ್
ಇಂದು ನಿಮ್ಮ ಅನಿಯಂತ್ರಿತ ಕೋಪವು ನಿಮ್ಮನ್ನು ಕಠಿಣ ಸಂದರ್ಭಗಳಿಗೆ ದೂಡಬಹುದು. ನಿಮ್ಮ ನಾಲಿಗೆಯನ್ನು ನಿಯಂತ್ರಿಸದಿದ್ದರೆ ನಿಮ್ಮ ಖ್ಯಾತಿಗೆ ಅಡ್ಡಿಯಾಗಬಹುದು. ಅನಗತ್ಯ ವಿಷಯಗಳಿಗೆ ಸಮಯ ವ್ಯರ್ಥ ಮಾಡಬೇಡಿ, ಬದಲಾಗಿ ಹೊರಗೆ ಹೋಗಿ ಕೆಲವು ಹೊಸ ಸ್ನೇಹಿತರನ್ನು ಮಾಡಿ. ಇದು ಮುಂದಿನ ದಿನಗಳಲ್ಲಿ ನಿಮಗೆ ಪ್ರಯೋಜನಕಾರಿಯಾಗುತ್ತದೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯುತ್ತದೆ. ಇಂದು ನಿಮ್ಮ ಹಣಕಾಸಿನ ಪರಿಸ್ಥಿತಿಯಲ್ಲಿನ ಕೆಲವು ಸುಧಾರಣೆಯಿಂದಾಗಿ, ಬಾಕಿ ಇರುವ ಎಲ್ಲಾ ಬಿಲ್ಗಳನ್ನು ನೀವು ಸುಲಭವಾಗಿ ಮರುಪಾವತಿಸಲು ಸಾಧ್ಯವಾಗುತ್ತದೆ. ಸ್ನೇಹಿತರೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುವುದರಿಂದ ನಿಮ್ಮ ಎಲ್ಲಾ ಒತ್ತಡವನ್ನು ನಿವಾರಣೆಯಾಗುತ್ತದೆ. ವೈವಾಹಿಕ ಜೀವನವು ಸಂತೋಷವಾಗಿರುತ್ತದೆ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 20
ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 6:00 ರವರೆಗೆ
ಕನ್ಯಾ ರಾಶಿ: 23 ಆಗಸ್ಟ್ - 22 ಸೆಪ್ಟೆಂಬರ್
ಕೆಲವು ಸಮಯದಿಂದ ನಿಮ್ಮ ಹಣಕಾಸಿನ ಪರಿಸ್ಥಿತಿಯು ನಿರಂತರವಾಗಿ ಏರಿಳಿತಗೊಳ್ಳುತ್ತಿದ್ದು ಅದು ನಿಮ್ಮ ಒತ್ತಡವನ್ನು ಹೆಚ್ಚಿಸುತ್ತದೆ. ಅನಗತ್ಯವಾಗಿ ಚಿಂತಿಸಬೇಡಿ ಮತ್ತು ನಿಮ್ಮ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುವ ವಿಷಯಗಳತ್ತ ಗಮನಹರಿಸಬೇಡಿ ಎಂದು ನಿಮಗೆ ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ನಿಮ್ಮ ಕೆಲಸದಲ್ಲಿ ಯಾವುದೇ ಅಡಚಣೆಗಳಿದ್ದರೆ ಅದನ್ನು ಇಂದು ನಿವಾರಿಸಬಹುದು. ಕುಟುಂಬ ಜೀವನವು ಸಂತೋಷವಾಗಿರುತ್ತದೆ. ಇಂದು ನಿಮ್ಮ ಮನೆಯಲ್ಲಿ ಕೆಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು, ಅದು ನಿಮಗೆ ಸಂತೋಷವನ್ನು ನೀಡುತ್ತದೆ. ಆರ್ಥಿಕವಾಗಿ ಇಂದು ಲಾಭದಾಯಕ ದಿನವಾಗಿರುತ್ತದೆ. ಇಂದು ಹೆಚ್ಚುವರಿ ಹಣವನ್ನು ಗಳಿಸುವ ಅವಕಾಶವನ್ನು ಪಡೆಯಬಹುದು.
ಅದೃಷ್ಟ ಬಣ್ಣ: ತಿಳಿಬಣ್ಣ
ಅದೃಷ್ಟ ಸಂಖ್ಯೆ: 22
ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 6:15 ರವರೆಗೆ
ತುಲಾ: 23 ಸೆಪ್ಟೆಂಬರ್ - 22 ಅಕ್ಟೋಬರ್
ಇಂದು ಕುಟುಂಬದಲ್ಲಿ ಹೋರಾಟವನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ಯಾರೊಂದಿಗಾದರೂ ಸಂಘರ್ಷವನ್ನು ಹೊಂದಿರಬಹುದು, ಇದರಿಂದ ಮನೆಯಲ್ಲಿ ಶಾಂತಿಯುತ ವಾತಾವರಣವನ್ನು ಹಾಳು ಮಾಡುತ್ತದೆ. ನಿಮ್ಮ ಅಹಂ ಅನ್ನು ತ್ಯಾಗ ಮಾಡುವುದು ಮತ್ತು ಅನಗತ್ಯವಾಗಿ ವಾದಿಸುವುದನ್ನು ತಪ್ಪಿಸುವುದು ಪ್ರೀತಿಪಾತ್ರರ ವಿಷಯದಲ್ಲಿ ಉತ್ತಮ ಫಲಿತಾಂಶ ನೀಡುತ್ತದೆ. ಹಿರಿಯರೊಂದಿಗೆ ಮಾತನಾಡುವಾಗ ಮಾತುಗಳನ್ನು ಚಿಂತನಶೀಲವಾಗಿ ಬಳಸಿ. ಹಣಕಾಸಿನ ಪರಿಸ್ಥಿತಿಗಳು ಉತ್ತಮವಾಗಿರುತ್ತವೆ ಮತ್ತು ತಂದೆಯಿಂದ ಹಣಕಾಸಿನ ಸಹಾಯವನ್ನು ಪಡೆಯಬಹುದು. ಹೆಚ್ಚುವರಿ ಕೆಲಸದ ಹೊರೆ ತೆಗೆದುಕೊಳ್ಳುವುದನ್ನು ತಪ್ಪಿಸಿ ಮತ್ತು ಆರೋಗ್ಯದ ಬಗ್ಗೆಯೂ ಗಮನ ಕೊಡಿ.
ಅದೃಷ್ಟ ಬಣ್ಣ: ಕೆಂಪು
ಅದೃಷ್ಟ ಸಂಖ್ಯೆ: 30
ಅದೃಷ್ಟ ಸಮಯ: ಬೆಳಿಗ್ಗೆ 6:20 ರಿಂದ 10:45 ರವರೆಗೆ
ವೃಶ್ಚಿಕ ರಾಶಿ: 23 ಅಕ್ಟೋಬರ್ - 21 ನವೆಂಬರ್
ದಿನವು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ ಮತ್ತು ಇಂದು ಸಣ್ಣ ಹೂಡಿಕೆಗಳನ್ನು ಮಾಡಬಹುದು. ಇಂದು ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು ಮತ್ತು ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕುಟುಂಬಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಉದ್ಭವಿಸಬಹುದು. ನಿಮ್ಮ ಕೆಲವು ಅಭಿಪ್ರಾಯಗಳನ್ನು ಕುಟುಂಬವು ಒಪ್ಪುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಶಾಂತವಾಗಿರಿ ಮತ್ತು ಸಮಾಧಾನದಿಂದ ನಿಮ್ಮ ದೃಷ್ಟಿಕೋನವನ್ನು ತಿಳಿಸಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ ಮತ್ತು ನಿಮ್ಮಿಬ್ಬರ ನಡುವಿನ ಪರಸ್ಪರ ತಿಳುವಳಿಕೆ ಹೆಚ್ಚಾಗುತ್ತದೆ. ನಿಮ್ಮ ಸಂಗಾತಿಯ ನಿಗೂಢ ನಡವಳಿಕೆಯು ನಿಮ್ಮನ್ನು ತೊಂದರೆಗೊಳಿಸಬಹುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಉದ್ಭವಿಸಬಹುದು.
ಅದೃಷ್ಟ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 7
ಅದೃಷ್ಟ ಸಮಯ: ಬೆಳಿಗ್ಗೆ 11:30 ರಿಂದ ಸಂಜೆ 5:20 ರವರೆಗೆ
ಧನು ರಾಶಿ: 22 ನವೆಂಬರ್ - 21 ಡಿಸೆಂಬರ್
ಕೆಲವು ಒಳ್ಳೆಯ ಸುದ್ದಿಗಳನ್ನು ಸ್ವೀಕರಿಸಿದ ನಂತರ ನಿಮ್ಮ ದಿನವು ಅತ್ಯಾಕರ್ಷಕವಾಗಿ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಫಲವನ್ನು ಪಡೆಯಬಹುದು. ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುತ್ತವೆ ಅದು ನಿಮಗೆ ಪ್ರಯೋಜನಕಾರಿ ಫಲಿತಾಂಶಗಳನ್ನು ನೀಡುತ್ತದೆ. ಆದರೆ, ಬಜೆಟ್ ಪ್ರಕಾರ ಖರ್ಚು ಮಾಡಬೇಕಾಗುತ್ತದೆ ಮತ್ತು ಇತರ ಖರ್ಚುಗಳನ್ನು ನಿಯಂತ್ರಿಸಬೇಕು. ನೌಕರರನ್ನು ಇಂದು ಕಚೇರಿಯಲ್ಲಿ ಗೌರವಿಸಲಾಗುವುದು. ಇವೆಲ್ಲವೂ ನಿಮ್ಮ ಪ್ರಾಮಾಣಿಕ ಕಠಿಣ ಪರಿಶ್ರಮದ ಫಲ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಶಾಂತಿ ಇರುತ್ತದೆ, ಸಂಗಾತಿಯೊಂದಿಗೆ ಆರಾಮವಾಗಿರುವ ದಿನವನ್ನು ಕಳೆಯುತ್ತೀರಿ. ಪ್ರಣಯ ಜೀವನದಲ್ಲಿ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳು ಇಂದು ಕೊನೆಗೊಳ್ಳುತ್ತವೆ ಮತ್ತು ನಿಮ್ಮಿಬ್ಬರ ನಡುವಿನ ತಪ್ಪು ಕಲ್ಪನೆಗಳನ್ನು ತೆಗೆದುಹಾಕಲಾಗುತ್ತದೆ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 24
ಅದೃಷ್ಟ ಸಮಯ: ಬೆಳಿಗ್ಗೆ 8:20 ರಿಂದ ಮಧ್ಯಾಹ್ನ 2:00 ರವರೆಗೆ
ಮಕರ ರಾಶಿ: 22 ಡಿಸೆಂಬರ್ - 19 ಜನವರಿ
ಪ್ರಮುಖ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುವ ಸಮಯ ಇದು, ವಿಶೇಷವಾಗಿ ಕುಟುಂಬಕ್ಕೆ ಸಂಬಂಧಿಸಿದ ವಿಷಯಗಳು. ಭವಿಷ್ಯದ ಯೋಜನೆಗಳಿಗೆ ಅಡ್ಡಿಯಾಗುವುದರಿಂದ ಹೆಚ್ಚು ಸಮಯ ಕಳೆಯುವುದನ್ನು ತಪ್ಪಿಸಿ. ಕಚೇರಿಯಲ್ಲಿ ನಿಮ್ಮ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ದಿನವು ಒಳ್ಳೆಯದು. ಉದ್ಯಮಿಗಳು ಇಂದು ಕೆಲವು ಉತ್ತಮ ಅವಕಾಶಗಳನ್ನು ಪಡೆಯಬಹುದು ಅದು ಅವರ ವ್ಯವಹಾರವನ್ನು ಹೆಚ್ಚಿಸುತ್ತದೆ. ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸಬಹುದು. ಅವುಗಳನ್ನು ಅರ್ಥಮಾಡಿಕೊಳ್ಳುವುದು ನಿಮಗೆ ತುಂಬಾ ಕಷ್ಟಕರವಾಗಿರುತ್ತದೆ. ಆರೋಗ್ಯ ಇಂದು ಉತ್ತಮವಾಗಿರುತ್ತದೆ.
ಅದೃಷ್ಟ ಬಣ್ಣ: ತಿಳಿ ನೇರಳೆ
ಅದೃಷ್ಟ ಸಂಖ್ಯೆ: 10
ಅದೃಷ್ಟ ಸಮಯ: ಮಧ್ಯಾಹ್ನ 12:25 ರಿಂದ 4:00 ರವರೆಗೆ
ಕುಂಭ ರಾಶಿ: 20 ಜನವರಿ - 18 ಫೆಬ್ರವರಿ
ಇಂದು ವೈವಾಹಿಕ ಜೀವನದಲ್ಲಿ ತೊಂದರೆ ಇರುತ್ತದೆ. ಕೆಲವು ಸಣ್ಣ ಸಮಸ್ಯೆಗಳು ನಿಮ್ಮ ಸಂಗಾತಿಗೆ ಕಿರಿಕಿರಿ ಉಂಟುಮಾಡಬಹುದು ಮತ್ತು ಇದು ನಿಮ್ಮ ಸಂಬಂಧದಲ್ಲಿ ಸಮಸ್ಯೆಗಳನ್ನು ಸಹ ಉಂಟುಮಾಡಬಹುದು. ಪ್ರಣಯ ದಂಪತಿಗಳಿಗೆ ದಿನ ಅದ್ಭುತವಾಗಿರಲಿದೆ. ನಿಮ್ಮ ಸಂಗಾತಿಗೆ ಯಾವುದೇ ಅಮೂಲ್ಯ ಉಡುಗೊರೆಯನ್ನು ಖರೀದಿಸಬಹುದು. ಕೆಲಸದ ಸ್ಥಳದಲ್ಲಿ ಕೆಲವು ದೊಡ್ಡ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ, ಬಹುಶಃ ವರ್ಗಾವಣೆ ದೇಶ ಇರಬಹುದು. ಉದ್ಯಮಿಗಳು ಇಂದು ತುಂಬಾ ಕಾರ್ಯನಿರತರಾಗುತ್ತಾರೆ. ಆರ್ಥಿಕವಾಗಿ ದಿನ ಸಾಮಾನ್ಯವಾಗಿರಲಿದೆ. ಅನಗತ್ಯವಾಗಿ ಖರ್ಚು ಮಾಡುವುದನ್ನು ತಪ್ಪಿಸಿ. ಇಂದು ವಿದ್ಯಾರ್ಥಿಗಳಿಗೆ ಬಹಳ ಶುಭ ದಿನ. ನಿಮ್ಮ ಗುರುಗಳ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಅದೃಷ್ಟ ಬಣ್ಣ: ತಿಳಿ ನೀಲಿ
ಅದೃಷ್ಟ ಸಂಖ್ಯೆ: 2
ಅದೃಷ್ಟ ಸಮಯ: ಸಂಜೆ 5: 20 ರಿಂದ 9:00 ರವರೆಗೆ
ಮೀನ ರಾಶಿ: 19 ಫೆಬ್ರವರಿ - 20 ಮಾರ್ಚ್
ನೀವು ನಿಮ್ಮ ಕಚೇರಿಯಲ್ಲಿ ರಾಜಕಾರಣಕ್ಕೆ ಬಲಿಯಾಗಬಹು, ಆದ್ದರಿಂದ ಬಹಳ ಜಾಗರೂಕರಾಗಿರಬೇಕು. ನೀವು ದಿನವಿಡೀ ನಿಮ್ಮ ಪ್ರೀತಿಯ ಆಲೋಚನೆಗಳಲ್ಲಿ ಮುಳುಗುತ್ತೀರಿ. ಸಂಗಾತಿಯ ಸಹಾಯದಿಂದ ನಿಮಗೆ ಮಾನಸಿಕ ಶಾಂತಿಯನ್ನು ನೀಡುವ ಪ್ರಮುಖ ಕಾರ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. ಬಹುಶಃ ಎಲ್ಲರೂ ಹೊರಗೆ ಹೋಗಬಹುದು. ದೊಡ್ಡ ಆರ್ಥಿಕ ಲಾಭವನ್ನು ಪಡೆಯುವುದು ಇದ್ದಕ್ಕಿದ್ದಂತೆ ನಿಮ್ಮ ಹಣಕಾಸಿನ ಸ್ಥಿತಿಯನ್ನು ಬಲಪಡಿಸುತ್ತದೆ ಮತ್ತು ಎಲ್ಲಾ ಬಾಕಿಗಳನ್ನು ತೆರವುಗೊಳಿಸುತ್ತದೆ. ಮಗುವಿನ ಕಡೆಯಿಂದ ಕೆಲವು ಸಮಸ್ಯೆಗಳು ಬರಬಹುದು. ಈ ಸಮಯದಲ್ಲಿ ನೀವು ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಿದೆ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 36
ಅದೃಷ್ಟ ಸಮಯ: ಬೆಳಿಗ್ಗೆ 11:00 ರಿಂದ ರಾತ್ರಿ 8:00 ರವರೆಗೆ