Just In
- 46 min ago ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- 1 hr ago ಮೀನ ರಾಶಿಯಲ್ಲಿ ಬುಧ ವಕ್ರೀಯ ಚಲನೆ ಮಾಡುವಾಗ ಈ 5 ರಾಶಿಯವರು ವೃತ್ತಿ ಜೀವನದ ಬಗ್ಗೆ ಜಾಗ್ರತೆ
- 1 hr ago ದಿನ ಭವಿಷ್ಯ ಮಾರ್ಚ್ 29: ಶುಕ್ರವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
- 2 hrs ago ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
Don't Miss
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನಿವಾರದ ದಿನ ಭವಿಷ್ಯ (15-02-2020)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿಯ ದಿನ. ವಾನರ ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆ ಎಂದು ಹನುಮಂತನನ್ನು ಪೂಜಿಸಲಾಗುತ್ತದೆ. ವಾನದ ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ. ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ. ಆಂಜನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.
ಸಂವತ್ಸರ:
ವಿಕಾರಿನಾಮ
ಆಯನ:
ಉತ್ತರಾಯನ
ಋತು:
ಶಿಶಿರ
ಮಾಸ:
ಮಾಘ
ಪಕ್ಷ:
ಕೃಷ್ಣ
ತಿಥಿ:
ಪ್ರಷ್ಠಿ
ನಕ್ಷತ್ರ:
ವಿಷಕ
ರಾಹುಕಾಲ:
ಬೆಳಿಗ್ಗೆ
9.48
ರಿಂದ
11.12
ರವರೆಗೆ
ಗುಳಿಕಕಾಲ:
ಬೆಳಿಗ್ಗೆ
7.00
ರಿಂದ
ಮಧ್ಯಾಹ್ನ
8.24
ರವರೆಗೆ
ಯಮಗಂಡಕಾಲ:
ಮಧ್ಯಾಹ್ನ
1.59
ರಿಂದ
3.23
ರವರೆಗೆ
ದುರ್ಮುಹೂರ್ತ:
ಬೆಳಿಗ್ಗೆ
7.00
ರಿಂದ
7.45
ರವರೆಗೆ
ಸೂರ್ಯೋದಯ:
ಬೆಳಿಗ್ಗೆ
7.00
ಸೂರ್ಯಾಸ್ತ:
ಸಂಜೆ
6.11
ಮೇಷ ರಾಶಿ
ಇಂದು ನಿಮ್ಮ ಅಣ್ಣನ ಆರೋಗ್ಯದ ವಿಷಯದಲ್ಲಿ ಜಾಗರೂಕರಾಗಿರಿ. ಕಷ್ಟಪಟ್ಟು ಕೆಲಸ ಮಾಡಿದರೆ ದೊಡ್ಡ ಬದಲಾವಣೆಯನ್ನು ನೋಡಬಹುದು. ನಿಮ್ಮ ವರ್ಗಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ಸಹ ನಿರೀಕ್ಷಿಸಬಹುದು. ನೀವು ಸಂಪತ್ತನ್ನು ಗಳಿಸುವಿರಿ ಆದರೆ ಅದು ಖರ್ಚಾಗಬಹುದು. ಇಂದು ಹೆಚ್ಚು ಶಾಂತ ಮತ್ತು ಉತ್ತಮ ಭಾವನೆ ಅನುಭವಿಸುವಿರಿ. ಯಾವುದೇ ಪರಿಸ್ಥಿತಿ ಆಗಿರಲಿ ಅದನ್ನು ಬಹಳ ಸುಲಭವಾಗಿ ಎದುರಿಸುತ್ತೀರಿ. ವಿವಾಹಿತ ದಂಪತಿಗಳು ತಮ್ಮ ಸಂಗಾತಿಯ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ನಿಮಗೆ ಶೀಘ್ರದಲ್ಲೇ ಬಡ್ತಿ ಸಿಗಬಹುದು. ನೀವು ವ್ಯವಹಾರದಲ್ಲಿ ಸಹ ಯಶಸ್ಸನ್ನು ಪಡೆಯಬಹುದು.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 9
ಅದೃಷ್ಟ ಸಮಯ: ಮಧ್ಯಾಹ್ನ 3:30 ರಿಂದ 8:00 ರವರೆಗೆ
ವೃಷಭ ರಾಶಿ
ಇಂದು ನೀವು ನಿಮ್ಮ ಶ್ರಮದ ಫಲವನ್ನು ಪಡೆಯುವ ಸಾಧ್ಯತೆಯಿದೆ. ನಿಮಗೆ ಬಡ್ತಿ ಸಿಗಬಹುದು. ಭವಿಷ್ಯದಲ್ಲಿ ತೊಂದರೆಗಳನ್ನು ಎದುರಿಸಬೇಕಾಗಿರುವುದರಿಂದ ಹಣವನ್ನು ಖರ್ಚು ಮಾಡುವ ಮುನ್ನ ಚೆನ್ನಾಗಿ ಯೋಚಿಸುವುದು ಉತ್ತಮ. ನಿಮ್ಮ ಸಂಗಾತಿಯು ಉತ್ತಮ ಮನಸ್ಥಿತಿಯಲ್ಲಿರುತ್ತಾರೆ, ಇದರಿಂದಾಗಿ ನಿಮ್ಮ ಮತ್ತು ಇಬ್ಬರ ನಡುವೆ ಪ್ರೀತಿ ಇರುತ್ತದೆ. ಸಂಬಂಧದಲ್ಲಿರುವವರಿಗೆ ಇಂದು ಬಹಳ ರೋಮ್ಯಾಂಟಿಕ್ ದಿನವಾಗಿರುತ್ತದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 10
ಅದೃಷ್ಟ ಸಮಯ: ಸಂಜೆ 4:00 ರಿಂದ 9:20 ರವರೆಗೆ
ಮಿಥುನ ರಾಶಿ
ಇಂದು ನಿಮ್ಮ ವೃತ್ತಿಜೀವನವು ಹೊಸ ತಿರುವನ್ನು ಪಡೆಯುತ್ತದೆ. ನೀವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದೀರಿ ಎಂದು ನೀವು ಭಾವಿಸುವಿರಿ ಮತ್ತು ನೀವು ಈ ರೀತಿ ಕೆಲಸ ಮಾಡುತ್ತಿದ್ದರೆ ಶೀಘ್ರದಲ್ಲೇ ನಿಮ್ಮ ಎಲ್ಲಾ ಕನಸುಗಳು ಈಡೇರುತ್ತವೆ. ವ್ಯಾಪಾರಸ್ಥರು ಇಂದು ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಹೂಡಿಕೆಗೆ ವಿಷಯದಲ್ಲಿ ಬಹಳ ಚಿಂತನಶೀಲವಾಗಿ ನಿರ್ಧರಿಸಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ವಿದ್ಯಾರ್ಥಿಗಳು ಅಧ್ಯಯನಕ್ಕೆ ವಿಶೇಷ ಗಮನ ಹರಿಸಬೇಕು. ಇಂದು ಸ್ವಾರ್ಥ ಜನರಿಂದ ದೂರವಿರಿ, ಏಕೆಂದರೆ ಅಂತಹ ಜನರು ನಿಮ್ಮಿಂದ ಲಾಭ ಪಡೆಯಲು ಪ್ರಯತ್ನಿಸಬಹುದು. ನಿಮ್ಮ ಆರೋಗ್ಯವು ಪರಿಪೂರ್ಣವಾಗಿರುತ್ತದೆ.
ಅದೃಷ್ಟ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 7
ಅದೃಷ್ಟ ಸಮಯ: ಸಂಜೆ 6:00 ರಿಂದ 11:00 ರವರೆಗೆ
ಕರ್ಕ ರಾಶಿ
ವೈವಾಹಿಕ ಜೀವನವು ಸಂತೋಷವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತೀರಿ. ನೀವಿಬ್ಬರೂ ನಿಮ್ಮ ನೆಚ್ಚಿನ ಸ್ಥಳಕ್ಕೂ ಭೇಟಿ ನೀಡಬಹುದು. ಇದು ಹಣಕಾಸಿಗೆ ಉತ್ತಮ ದಿನವಾಗಿರುತ್ತದೆ. ದಿನದ ದ್ವಿತೀಯಾರ್ಧದಲ್ಲಿ ಕೆಲವು ಪ್ರಯೋಜನಗಳು ನಿಮ್ಮದಾಗಬಹುದು. ಇಂದು ಕಚೇರಿಯಲ್ಲಿ ಸಹೋದ್ಯೋಗಿಗಳ ತಪ್ಪುಗಳನ್ನು ಎತ್ತಿ ತೋರಿಸುವುದನ್ನು ತಪ್ಪಿಸಿ. ನೀವು ನಿಮ್ಮ ಕೆಲಸವನ್ನು ಶಾಂತಿಯಿಂದ ಮಾಡುತ್ತೀರಿ. ವ್ಯಾಪಾರಿಗಳಿಗೆ ಇಂದು ಉತ್ತಮ ದಿನವಾಗಲಿದೆ. ನೀವು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಆರೋಗ್ಯದ ದೃಷ್ಟಿಯಿಂದ ಇದು ಒಳ್ಳೆಯ ದಿನ.
ಅದೃಷ್ಟ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 12
ಅದೃಷ್ಟ ಸಮಯ: ಬೆಳಿಗ್ಗೆ 4:15 ರಿಂದ ಸಂಜೆ 5:00 ರವರೆಗೆ
ಸಿಂಹ ರಾಶಿ
ಕಠಿಣ ಪರಿಶ್ರಮದ ಜೊತೆಗೆ ನೀವು ಯಶಸ್ವಿಯಾಗಲು ಸಕಾರಾತ್ಮಕ ಚಿಂತನೆಯೂ ಅಗತ್ಯವಾಗಿರುತ್ತದೆ. ನೀವು ಉತ್ತಮ ಪ್ರದರ್ಶನ ನೀಡಲು ಬಯಸಿದರೆ, ಉತ್ತಮ ಆಹಾರ ಮತ್ತು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ. ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದಿಲ್ಲ. ನಿಮ್ಮ ಹಣ ಕಳೆದುಹೋಗಬಹುದು, ಜಾಗರೂಕರಾಗಿರಬೇಕು. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಪೋಷಕರು ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ ಮತ್ತು ನೀವು ಅವರ ಆಶೀರ್ವಾದವನ್ನೂ ಪಡೆಯುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯ ಇರುತ್ತದೆ. ಸಂಬಂಧದಲ್ಲಿರುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಸಮಯ ಕಳೆಯುವುದರಿಂದ ನಿಮ್ಮ ಸಂತೋಷ ಹೆಚ್ಚಾಗುತ್ತದೆ.
ಅದೃಷ್ಟ ಬಣ್ಣ: ಮರೂನ್
ಅದೃಷ್ಟ ಸಂಖ್ಯೆ: 22
ಅದೃಷ್ಟ ಸಮಯ: ಬೆಳಿಗ್ಗೆ 6:15 ರಿಂದ 1:40 ರವರೆಗೆ
ಕನ್ಯಾ ರಾಶಿ
ಹಿರಿಯರು ನಿಮ್ಮ ಕೆಲಸದಲ್ಲಿ ಹೆಚ್ಚು ಸಂತೋಷವಾಗುವುದಿಲ್ಲ. ಅವರು ನಿಮ್ಮಿಂದ ಆಗಾಗ ಆಗುತ್ತಿರುವ ತಪ್ಪುಗಳನ್ನು ಬಹಳ ಸಮಯದಿಂದ ನಿರ್ಲಕ್ಷಿಸುತ್ತಿದ್ದಾರೆ, ಆದರೆ ಇಂದು ಅವರು ನಿಮ್ಮ ಮೇಲೆ ನಿಜವಾಗಿಯೂ ಕೋಪಗೊಳ್ಳಬಹುದು. ಇಂದು ಜಾಗರೂಕರಾಗಿರುವುದು ಉತ್ತಮ. ನಿಮ್ಮ ಸಂಗಾತಿಯನ್ನು ನಿಯಂತ್ರಿಸುವುದನ್ನು ತಪ್ಪಿಸಿದರೆ ವೈವಾಹಿಕ ಜೀವನದಲ್ಲಿ ಶಾಂತಿ ಇರುತ್ತದೆ. ನಿಮ್ಮಿಬ್ಬರ ನಡುವೆ ಸಣ್ಣ ಜಗಳವಾಗಬಹುದು. ಆರ್ಥಿಕ ದೃಷ್ಟಿಯಿಂದ ದಿನವು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಇಂದು ಲಾಟರಿ ಮತ್ತು ಬೆಟ್ಟಿಂಗ್ ನಿಂದ ದೂರವಿರಿ. ಮಧ್ಯಾಹ್ನದ ನಂತರ ಕೆಲವು ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಇಂದು ಮಾನಸಿಕ ಒತ್ತಡವನ್ನು ಅನುಭವಿಸಬಹುದು. ನಿಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿದರೆ ಉತ್ತಮ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 6
ಅದೃಷ್ಟ ಸಮಯ: ಮಧ್ಯಾಹ್ನ 2:30 ರಿಂದ 6:00 ರವರೆಗೆ
ತುಲಾ ರಾಶಿ
ವಿವಾಹಿತ ದಂಪತಿಗಳಿಗೆ ಇದು ಒಳ್ಳೆಯ ದಿನ. ಸಂಗಾತಿಯೊಂದಿಗೆ ನೀವು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಇಂದು ನಿಮ್ಮ ಸಂಬಂಧ ಸುಧಾರಿಸುವ ಸಾಧ್ಯತೆಯಿದೆ. ಸಂಗಾತಿಯ ಮಾತುಗಳನ್ನು ಎಚ್ಚರಿಕೆಯಿಂದ ಕೇಳಿ ಮತ್ತು ಅರ್ಥಮಾಡಿಕೊಳ್ಳುವುದು ಉತ್ತಮ. ನೀವು ಸವಾಲುಗಳನ್ನು ಎದುರಿಸಬಹುದು. ನಿಮ್ಮ ವರ್ತನೆ ಸಕಾರಾತ್ಮಕವಾಗಿರಿಸಿಕೊಳ್ಳಿ. ವಿಷಯಗಳು ನಿಮ್ಮ ಪರವಾಗಿವೆ ಎಂದು ನೀವು ಭಾವಿಸುವಿರಿ. ಹಣದ ವಿಷಯದಲ್ಲಿ ಜಾಗರೂಕರಾಗಿರಬೇಕು. ನಿಮ್ಮ ಹಣವನ್ನು ಕದಿಯಬಹುದು ಅಥವಾ ನೀವು ಕಳೆದುಕೊಳ್ಳಬಹುದು. ನೀವು ಇಂದು ಸ್ವಲ್ಪ ಆಲಸ್ಯ ಅನುಭವಿಸುವಿರಿ.
ಅದೃಷ್ಟ ಬಣ್ಣ: ಹಸಿರು
ಅದೃಷ್ಟ ಸಂಖ್ಯೆ: 20
ಅದೃಷ್ಟ ಸಮಯ: ಬೆಳಿಗ್ಗೆ 10:35 ರಿಂದ ಸಂಜೆ 7:00 ರವರೆಗೆ
ವೃಶ್ಚಿಕ ರಾಶಿ
ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಸಾಕಷ್ಟು ಉತ್ಸಾಹ ಮತ್ತು ಶಕ್ತಿಯು ನಿಮ್ಮದಾಗಲಿದೆ. ಸಣ್ಣ ಕಾರ್ಯಗಳನ್ನು ನೀವು ಸುಲಭವಾಗಿ ನಿರ್ವಹಿಸುವಿರಿ. ನಿಮ್ಮ ಹಿರಿಯರು ನಿಮ್ಮೊಂದಿಗೆ ತುಂಬಾ ಸಂತೋಷ ಮತ್ತು ತೃಪ್ತರಾಗಿದ್ದಾರೆ. ಪೋಷಕರ ಆಶೀರ್ವಾದ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ನೀವು ಯಾವುದೇ ಹಳೆಯ ಸಾಲಗಳನ್ನು ತೊಡೆದುಹಾಕುವ ನಿರೀಕ್ಷೆಯಿದೆ. ಹೊಸ ಉದ್ಯೋಗ ಅಥವಾ ವ್ಯವಹಾರವನ್ನು ಪ್ರಾರಂಭಿಸಲು ಇದು ಒಳ್ಳೆಯ ದಿನ. ಇಂದು ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟ ಬಣ್ಣ: ಗಾಢ ಕೆಂಪು
ಅದೃಷ್ಟ ಸಂಖ್ಯೆ: 4
ಅದೃಷ್ಟ ಸಮಯ: ಸಂಜೆ 5:00 ರಿಂದ 8:30 ರವರೆಗೆ
ಧನು ರಾಶಿ
ಇಂದು ಕೆಲವು ಸವಾಲುಗಳನ್ನು ಎದುರಿಸಬಹುದು, ಇದರಿಂದಾಗಿ ಒತ್ತಡಕ್ಕೊಳಗಾಗಬಹುದು. ಮನೆಯ ವಾತಾವರಣ ಪ್ರಕ್ಷುಬ್ಧವಾಗಿರುತ್ತದೆ. ವಿಷಯಗಳನ್ನು ಶಾಂತಿಯುತವಾಗಿ ಪರಿಹರಿಸಬೇಕಾಗುತ್ತದೆ. ಹಣಕಾಸಿನ ವಿಷಯಗಳಲ್ಲಿ ಜಾಗರೂಕರಾಗಿರಬೇಕು. ಇಂದು ಹೂಡಿಕೆ ಮಾಡುವುದನ್ನು ತಪ್ಪಿಸಿದರೆ ಉತ್ತಮ. ಕೆಲಸದ ಹೊರೆ ಹೆಚ್ಚು ಆಗುವುದರಿಂದ ನೀವು ದಣಿಯುವಿರಿ. ನಿಮ್ಮ ಬಗ್ಗೆಯೂ ನೀವು ಗಮನ ಹರಿಸಬೇಕು. ಆರೋಗ್ಯವು ಉತ್ತಮವಾಗಿರುತ್ತದೆ. ನೀವು ಇಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 11
ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 7:00 ರವರೆಗೆ
ಮಕರ ರಾಶಿ
ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿರುತ್ತವೆ,ಕಷ್ಟದ ಸಂದರ್ಭಗಳಲ್ಲಿ ಶಾಂತವಾಗಿರಿ. ಇಂದು ವಿನೋದ ಮತ್ತು ಸಂತೋಷದ ದಿನ. ಇಂದು ನೀವು ಹೊಸ ಆದಾಯದ ಮೂಲಗಳನ್ನು ಪಡೆಯುತ್ತೀರಿ. ಆದರೆ ಮನೆಯ ಜನರು ನಿಮ್ಮ ದುಬಾರಿ ಮನಸ್ಥಿತಿಯನ್ನು ಟೀಕಿಸುತ್ತಾರೆ. ಇತರರ ನ್ಯೂನತೆಗಳನ್ನು ಕಂಡುಹಿಡಿಯುವಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ನಿಮ್ಮ ಕೆಲಸದ ಬಗ್ಗೆ ಗಮನಹರಿಸಿ. ಪ್ರಯಾಣವು ನಿಮಗೆ ದಣಿವು ಮತ್ತು ಒತ್ತಡವನ್ನುಂಟು ಮಾಡುತ್ತದೆ ಆದರೆ ಅದು ಆರ್ಥಿಕವಾಗಿ ಲಾಭದಾಯಕವಾಗಿರುತ್ತದೆ. ಕೆಲಸದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ಪೋಷಕರ ಆರೋಗ್ಯವು ಉತ್ತಮವಾಗಿರುತ್ತದೆ ಮತ್ತು ಅವರು ನಿಮ್ಮ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಾಕಷ್ಟು ವಿಶ್ರಾಂತಿ ಪಡೆಯಿರಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 23
ಅದೃಷ್ಟ ಸಮಯ: ಬೆಳಿಗ್ಗೆ 5:00 ರಿಂದ ಸಂಜೆ 5:00 ರವರೆಗೆ
ಕುಂಭ ರಾಶಿ
ನಿಮ್ಮ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಆಶಾವಾದಿ ಜನರೊಂದಿಗೆ ಸಮಯ ಕಳೆಯಿರಿ. ಹಣಕಾಸಿನ ವಿಷಯದಲ್ಲಿ ಇಂದು ಉತ್ತಮ ದಿನ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ಆದರೂ ಒಡಹುಟ್ಟಿದವರೊಂದಿಗೆ ವ್ಯತ್ಯಾಸಗಳಿರಬಹುದು, ಈ ವಿಷಯವನ್ನು ಬಹಳ ಬುದ್ಧಿವಂತಿಕೆಯಿಂದ ನಿಭಾಯಿಸಿ. ಇಲ್ಲದಿದ್ದರೆ ಮನೆಯ ಶಾಂತಿಗೆ ಧಕ್ಕೆ ಉಂಟಾಗಬಹುದು, ಅದು ನಿಮ್ಮ ಹೆತ್ತವರ ಒತ್ತಡವನ್ನು ಹೆಚ್ಚಿಸುತ್ತದೆ. ಇಂದು ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 31
ಅದೃಷ್ಟ ಸಮಯ: ಮಧ್ಯಾಹ್ನ 2:00 ರಿಂದ 9:00 ರವರೆಗೆ
ಮೀನ ರಾಶಿ
ನಿಮ್ಮ ಆರೋಗ್ಯವು ಸುಧಾರಿಸುತ್ತದೆ ಮತ್ತು ಕೆಲವು ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಇಂದು ಆರ್ಥಿಕ ಸಹಾಯ ಪಡೆಯುವ ನಿರೀಕ್ಷೆಯಿದೆ. ಸಂಗಾತಿಯೊಂದಿಗಿನ ಸಂಬಂಧವು ಉತ್ತಮವಾಗಿರುತ್ತದೆ ಮತ್ತು ಮನೆಯಲ್ಲಿ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಪ್ರೇಮಿಗಳಿಗೆ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಕೆಲಸದ ವಾತಾವರಣವು ಉತ್ತಮವಾಗಿರುತ್ತದೆ ಮತ್ತು ಹಿರಿಯರು ನಿಮ್ಮನ್ನು ಮೆಚ್ಚುತ್ತಾರೆ.
ಅದೃಷ್ಟ ಬಣ್ಣ: ಕ್ರೀಮ್
ಅದೃಷ್ಟ ಸಂಖ್ಯೆ: 10
ಅದೃಷ್ಟ ಸಮಯ: ಮಧ್ಯಾಹ್ನ 3:00 ರಿಂದ 9:00 ರವರೆಗೆ
ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಶಾಸ್ತ್ರಂ ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸನ್ ನಿಮ್ಮ 9886665656 ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಹಣಕಾಸು ಸತಿ ಪತಿ ಕಲಹ ಅತ್ತೆ-ಸೊಸೆ ಕಿರಿಕಿರಿ ಯಾವುದೇ ಸಮಸ್ಯೆಗಳಿಗೆ ಅಷ್ಟಮಂಗಳ 9886155755 ಪ್ರಶ್ನೆ ಹಾಕಿ ತಿಳಿಸುವರು # 37/17 27th ,12th main near adigas 4th block East jayanagar Bangalore 560011