Just In
- 7 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 8 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 8 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 9 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೋಮವಾರದ ದಿನ ಭವಿಷ್ಯ (24-02-2020)
ಜೀವನ ಎನ್ನುವುದು ಒಂದು ರಸ್ತೆ ಇದ್ದಂತೆ. ನಿರಾಸೆ ಎನ್ನುವುದು ರಸ್ತೆಯ ಉಬ್ಬು ತಗ್ಗುಗಳು. ನಾವು ಸಾಗುವ ದಾರಿಯಲ್ಲಿ ಉಬ್ಬು ತಗ್ಗುಗಳು ಬಂತೆಂದು ಮಾನಸಿಕವಾಗಿ ಕಿರಿಕಿರಿಗೆ ಒಳಗಾಗಿ ನಮ್ಮ ಸಂಚಾರವನ್ನು ನಿಲ್ಲಿಸಬಾರದು.
ಎಂತಹದ್ದೇ ಉಬ್ಬು ತಗ್ಗುಗಳು ಎದುರಾದರೂ ನಿಧಾನವಾಗಿ ಅಥವಾ ಕಾಳಜಿಯಿಂದ ಅದನ್ನು ದಾಟಿ ಮುಂದೆ ಸಾಗಬೇಕು. ಆಗ ನಮ್ಮ ಸಂಚಾರ ಸುಗಮವಾಗುತ್ತದೆ. ನಮ್ಮ ಜೀವನದ್ದಲ್ಲೂ ಹಾಗೆಯೇ. ಯಾವುದಾದರೂ ಕಷ್ಟ, ಅಡೆತಡೆ ಅಥವಾ ಮೂರ್ಖರ ಚುಚ್ಚು ಮಾತುಗಳಿಗೆ ಕಿವಿಕೊಡುವುದು ಅಥವಾ ಅತಿಯಾದ ಚಿಂತೆಗೆ ಒಳಗಾಗಿ ಬೇಸರಗೊಳ್ಳುವ ಗೋಜಿಗೆ ಹೋಗಬಾರದು.
ಸತ್ಯದ ದಾರಿಯಲ್ಲಿ, ಸಮತೋಲನದ ಮನಃಸ್ಥಿತಿಯಲ್ಲಿ ಮುಂದೆ ಸಾಗಬೇಕು. ಆಗ ನಮ್ಮ ಜೀವನ ಸುಖ ಹಾಗೂ ಸಂತೋಷದಿಂದ ಕೂಡಿರುತ್ತದೆ. ಅಲ್ಲದೆ ಇತರ ವ್ಯಕ್ತಿಗಳಿಗೂ ನಾವು ಮಾದರಿಯಾಗುತ್ತೇವೆ. ಬದುಕಿನಲ್ಲಿ ಸುಂದರ ಕನಸು ಹಾಗೂ ಆತ್ಮವಿಶ್ವಾಸವನ್ನು ತುಂಬಿಕೊಂಡು ಕೆಲಸವನ್ನು ಆರಂಭಿಸಿ. ನಿಮ್ಮ ಈ ಸುಂದರ ಬದುಕಿಗೆ ಗ್ರಹಗತಿಗಳ ಸಹಕಾರ ಎಷ್ಟರ ಮಟ್ಟಿಗೆ ಇದೆ ಎನ್ನುವುದನ್ನು ನೀವು ತಿಳಿದು ಕೊಳ್ಳಬೇಕೆಂದುಕೊಂಡಿದ್ದರೆ, ಬೋಲ್ಡ್ ಸ್ಕೈ ನಿಮಗಾಗಿ ನೀಡಿರುವ ಈ ಮುಂದಿನ ರಾಶಿ ಭವಿಷ್ಯವನ್ನು ಪರಿಶೀಲಿಸಿ....
ಸಂವತ್ಸರ:
ವಿಕಾರಿನಾಮ
ಆಯನ:
ಉತ್ತರಾಯನ
ಋತು:
ಶಿಶಿರ
ಮಾಸ:
ಮಾಘ
ಪಕ್ಷ:
ಕೃಷ್ಣ
ತಿಥಿ:
ಪ್ರಥಮ್
ನಕ್ಷತ್ರ:
ಶತಭಿಷಾ
ರಾಹುಕಾಲ:
ಬೆಳಿಗ್ಗೆ
8.18
ರಿಂದ
9.43
ರವರೆಗೆ
ಗುಳಿಕಕಾಲ:
ಮಧ್ಯಾಹ್ನ
2.00
ರಿಂದ
3.26
ರವರೆಗೆ
ಯಮಗಂಡಕಾಲ:
ಬೆಳಿಗ್ಗೆ
11.09
ರಿಂದ
12.35
ರವರೆಗೆ
ದುರ್ಮುಹೂರ್ತ:
ಮಧ್ಯಾಹ್ನ
12.57
ರಿಂದ
1.43
ರವರೆಗೆ
ಸೂರ್ಯೋದಯ:
ಬೆಳಿಗ್ಗೆ
6.52
ಸೂರ್ಯಾಸ್ತ:
ಸಂಜೆ
6.17
ಮೇಷ ರಾಶಿ
ನಿಮ್ಮ ವೈಯಕ್ತಿಕ ಜೀವನದಲ್ಲಿ ಆಗುತ್ತಿರುವ ತೊಂದರೆಗಳಿಂದಾಗಿ ನೀವು ಇಂದು ಆಯಾಸವನ್ನು ಅನುಭವಿಸುವಿರಿ. ನಿಮ್ಮ ಹೆಚ್ಚುತ್ತಿರುವ ಒತ್ತಡವು ನಿಮ್ಮ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ನಿಮ್ಮ ಬಗ್ಗೆ ಗಮನಹರಿಸಬೇಕು . ನಿಮ್ಮ ನಡವಳಿಕೆಯನ್ನು ಮೃದುಗೊಳಿಸಲು ಪ್ರಯತ್ನಿಸಿ. ಪ್ರೀತಿಪಾತ್ರರ ಜೊತೆ ನೀವು ಕೆಲವು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದರೆ, ಕೋಪಗೊಳ್ಳುವ ಬದಲು ಪ್ರೀತಿ ಮತ್ತು ತಿಳುವಳಿಕೆಯೊಂದಿಗೆ ವಿಷಯವನ್ನು ಪರಿಹರಿಸಲು ಪ್ರಯತ್ನಿಸಿ. ನಿಮ್ಮ ಆಲೋಚನೆಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಬಹುದು ಮತ್ತು ಅವರಿಗೆ ಅರ್ಥವಾಗುವಂತೆ ಮಾಡಬಹುದು. ಪ್ರೀತಿಯ ಜೀವನದಲ್ಲಿ ಕೆಲವು ಸಮಸ್ಯೆಗಳಿರಬಹುದು. ಸಂಬಂಧದಲ್ಲಿ ಪಾರದರ್ಶಕವಾಗಿರಿ ಮತ್ತು ನಿಮ್ಮ ಅಭಿಪ್ರಾಯಗಳನ್ನು ಸಂಗಾತಿಗೆ ಬಹಿರಂಗವಾಗಿ ವ್ಯಕ್ತಪಡಿಸಿ. ಯಾವುದೇ ರೀತಿಯ ಸುಳ್ಳನ್ನು ತಪ್ಪಿಸಿ. ಹಣಕಾಸಿನ ಪರಿಸ್ಥಿತಿಯನ್ನು ಇನ್ನಷ್ಟು ಬಲಪಡಿಸಲು ಯೋಜನೆಗಳು ಮತ್ತು ಗುರಿಗಳನ್ನು ಮತ್ತೊಮ್ಮೆ ನೀವು ಮರುಹೊಂದಿಸಬಹುದು.
ಅದೃಷ್ಟ ಬಣ್ಣ: ಗಾಢ ನೀಲಿ
ಅದೃಷ್ಟ ಸಂಖ್ಯೆ: 1
ಅದೃಷ್ಟ ಸಮಯ: ಮಧ್ಯಾಹ್ನ 12:40 ರಿಂದ 6:00 ರವರೆಗೆ
ವೃಷಭ ರಾಶಿ
ದಿನವು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ, ನೀವು ಕೆಲವು ವಿಚಾರಗಳ ಬಗ್ಗೆ ಕೋಪಗೊಳ್ಳುತ್ತೀರಿ. ಮನೆಯಲ್ಲಿ ವಾತಾವರಣ ಬಿಗಡಾಯಿಸಿರುತ್ತದೆ. ಇಂದು, ಕುಟುಂಬ ಸದಸ್ಯರು ನಿಮ್ಮ ಮೇಲೆ ಒತ್ತಡ ಹೇರಬಹುದು. ಆರ್ಥಿಕವಾಗಿ ದಿನವು ಸಾಮಾನ್ಯವಾಗಿರುತ್ತದೆ. ಖರ್ಚಿನ ಮೇಲೆ ನಿಗಾ ಇಟ್ಟರೆ ಯಾವುದೇ ತೊಂದರೆ ಇರುವುದಿಲ್ಲ. ಸಂಗಾತಿಯು ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ ಮತ್ತು ಅವರ ಸಂಪೂರ್ಣ ಬೆಂಬಲವನ್ನು ನೀಡಲು ಪ್ರಯತ್ನಿಸುತ್ತಾರೆ. ನೀವು ಕಚೇರಿಯಲ್ಲಿ ನಿಮ್ಮ ಕೆಲಸದ ಬಗ್ಗೆ ಗಮನಹರಿಸಿದರೆ ಮತ್ತು ಸಹೋದ್ಯೋಗಿಗಳನ್ನು ಟೀಕಿಸುವ ಕೆಲಸ ನಿಮ್ಮದಲ್ಲ, ಅಂಥಾ ಸಮಯವನ್ನು ವ್ಯರ್ಥ ಮಾಡದಿದ್ದರೆ ಉತ್ತಮ. ಇಂದು ನಿಮ್ಮ ಮೇಲಧಿಕಾರಿಗಳೊಂದಿಗೆ ಸಂಭಾಷಣೆ ನಡೆಸುತ್ತಿರುವಾಗ ನಿಮ್ಮ ಪದಗಳನ್ನು ಬಹಳ ಚಿಂತನಶೀಲವಾಗಿ ಬಳಸಿ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 17
ಅದೃಷ್ಟ ಸಮಯ: ಬೆಳಿಗ್ಗೆ 9:00 ರಿಂದ 8:00 ರವರೆಗೆ
ಮಿಥುನ ರಾಶಿ
ಇಂದು ನಿಮ್ಮ ಪೋಷಕರು ಮತ್ತು ಇತರ ಸಂಬಂಧಿಕರು ನಿಮ್ಮ ನಿರ್ಧಾರದಿಂದ ಅತೃಪ್ತರಾಗುತ್ತಾರೆ. ಬುದ್ಧಿವಂತಿಕೆಯಿಂದ ವರ್ತಿಸಿದರೆ ಸಮಸ್ಯೆ ಬಗೆಹರಿಯಬಹುದು. ಪ್ರೀತಿಯ ವಿಷಯದಲ್ಲಿ ಇಂದು ಉತ್ತಮ ದಿನವಲ್ಲ. ನಿಮ್ಮ ಪ್ರೇಮಿಯ ಮುಂದೆ ಪ್ರೀತಿಯ ಪ್ರಸ್ತಾಪವನ್ನು ಮಾಡಲು ಬಯಸಿದರೆ ಸ್ವಲ್ಪ ಸಮಯ ಕಾಯಿರಿ. ವಿವಾಹಿತರು ತಮ್ಮ ಸಂಗಾತಿಯೊಂದಿಗೆ ಅನಗತ್ಯವಾಗಿ ವಾದಿಸುವುದನ್ನು ತಪ್ಪಿಸಬೇಕಾಗುತ್ತದೆ, ಇಲ್ಲದಿದ್ದರೆ ಮನೆಯಲ್ಲಿ ದೊಡ್ಡ ವಿವಾದ ಉಂಟಾಗಬಹುದು. ಇಂದು ನಿಮ್ಮ ಕೆಲಸದಲ್ಲಿ ಏರಿಳಿತ ಇರುತ್ತದೆ. ವ್ಯಾಪಾರಿಗಳಿಗೆ ಯಾವುದೇ ವಿಶೇಷ ಲಾಭ ದೊರೆಯುವುದಿಲ್ಲ ಅಥವಾ ಯಾವುದೇ ಹಣವನ್ನು ಕಳೆದುಕೊಳ್ಳುವುದೂ ಇಲ್ಲ. ನೌಕರರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ನಿರೀಕ್ಷಿಸಬಹುದು. ಮುಂಬರುವ ದಿನಗಳಲ್ಲಿ ನಿಮ್ಮ ಬಡ್ತಿಯ ಸಾಧ್ಯತೆಯೂ ಇದೆ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 5
ಅದೃಷ್ಟ ಸಮಯ: ಸಂಜೆ 5:00 ರಿಂದ 9:40 ರವರೆಗೆ
ಕರ್ಕ ರಾಶಿ
ಸಂಕೀರ್ಣವಾದ ವಿಷಯವನ್ನು ಪರಿಹರಿಸಿ, ಇದರಿಂದ ನಿಮಗೆ ಹೆಚ್ಚಿನ ಪರಿಹಾರ ಸಿಗುತ್ತದೆ. ಇದು ನಿಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿರಬಹುದು.ದಂಪತಿಗಳಿಗೆ ದಿನವು ತುಂಬಾ ವಿಶೇಷವಾಗಿರುತ್ತದೆ. ನೀವು ಯಾರನ್ನಾದರೂ ಇಷ್ಟಪಟ್ಟರೆ, ನಿಮ್ಮ ಹೃದಯದ ಮಾತುಗಳನ್ನು ಹೇಳಲು ತುಂಬಾ ಅನುಕೂಲಕರ ಸಮಯ. ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆಯಿದೆ. ಪ್ರೀತಿಯ ಸಂಬಂಧವನ್ನು ಕುಟುಂಬ ಸದಸ್ಯರು ಸಹ ಅನುಮೋದಿಸಬಹುದು. ವಿವಾಹಿತರಿಗೆ ಉತ್ತಮ ದಿನವಾಗಲಿದೆ. ಸಂಗಾತಿಯೊಂದಿಗೆ ವಿಶ್ರಾಂತಿಯ ಸಮಯವನ್ನು ಕಳೆಯುತ್ತೀರಿ. ಇಂದು ಹಣ ನಷ್ಟವಾಗುವ ಸಾಧ್ಯತೆಯಿದೆ ಆದ್ದರಿಂದ ಹಣದ ವಿಷಯದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ಹಣಕಾಸಿನ ನಿರ್ಧಾರವನ್ನು ಅವಸರದಲ್ಲಿ ತೆಗೆದುಕೊಂಡರೆ ದೊಡ್ಡ ನಷ್ಟವನ್ನು ಅನುಭವಿಸಬಹುದು. ಕೆಲಸದ ಸ್ಥಳದಲ್ಲಿ ಕೆಲವು ಸಮಸ್ಯೆಗಳಿರಬಹುದು. ನಿಮ್ಮ ಪ್ರಮುಖ ಕೆಲಸ ಪೂರ್ಣಗೊಳ್ಳದ ಕಾರಣ ನೀವು ಸ್ವಲ್ಪ ಚಿಂತೆ ಮಾಡುತ್ತೀರಿ. ನಿಮ್ಮ ತಾಯಿಯ ಆರೋಗ್ಯವನ್ನು ನೋಡಿಕೊಳ್ಳಿ.
ಅದೃಷ್ಟ ಬಣ್ಣ: ಕಿತ್ತಳೆ
ಅದೃಷ್ಟ ಸಂಖ್ಯೆ: 18
ಅದೃಷ್ಟ ಸಮಯ: ಬೆಳಿಗ್ಗೆ 7:00 ರಿಂದ ಸಂಜೆ 6:00 ರವರೆಗೆ
ಸಿಂಹ ರಾಶಿ
ನಿಮ್ಮ ಮನಸ್ಸಿನಲ್ಲಿರುವ ಆಲೋಚನೆಗಳಿಂದಾಗಿ ನೀವು ಗೊಂದಲದ ಸ್ಥಿತಿಗೆ ಒಳಗಾಗಬಹುದು. ತಾಳ್ಮೆಯಿಂದಿರಿ ಮತ್ತು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳುವುದು ಉತ್ತಮ. ಇಂದು ನೀವು ನಿಮ್ಮ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು. ನೀವು ಬಯಸಿದರೆ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ಹಿರಿಯರನ್ನು ಸಂಪರ್ಕಿಸಬಹುದು. ಕೆಲವು ನಕಾರಾತ್ಮಕ ಆಲೋಚನೆಗಳಿಂದ ಸುತ್ತುವರೆದಿರುವಿರಿ ಆದರೆ ಅವುಗಳ ವಿರುದ್ಧ ಹೋರಾಡಲು ನಿಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತೀರಿ. ಆರ್ಥಿಕ ರಂಗದಲ್ಲಿ ದಿನವು ಶುಭವಾಗಿದೆ. ಆದರೆ ಸ್ನೇಹಿತರು ನಿಮ್ಮ ಖರ್ಚುಗಳನ್ನು ಹೆಚ್ಚಿಸಬಹುದು. ನೀವು ವ್ಯವಹಾರದೊಂದಿಗೆ ಸಂಬಂಧ ಹೊಂದಿದ್ದರೆ, ಇಂದು ನೀವು ಯಾವುದೇ ಹೊಸ ಕೆಲಸದಲ್ಲಿ ಸ್ವಲ್ಪ ಹಣವನ್ನು ಹೂಡಿಕೆ ಮಾಡಬಹುದು. ಉದ್ಯೋಗಿಗಳ ಕೆಲಸದಲ್ಲಿ ಕೆಲವು ಅಡಚಣೆಗಳಿರಬಹುದು, ನಿಮ್ಮ ಉನ್ನತ ಅಧಿಕಾರಿಗಳಿಂದ ಸಹಾಯ ಪಡೆಯುವುದು ಉತ್ತಮ.
ಅದೃಷ್ಟ ಬಣ್ಣ: ಗಾಢ ಹಸಿರು
ಅದೃಷ್ಟ ಸಂಖ್ಯೆ: 31
ಅದೃಷ್ಟ ಸಮಯ: ಬೆಳಿಗ್ಗೆ 9:45 ರಿಂದ 10:10 ರವರೆಗೆ
ಕನ್ಯಾ ರಾಶಿ
ಕೆಲಸದ ವಿಚಾರದಲ್ಲಿ ಇಂದು ನಿಮಗೆ ಬಹಳ ಮುಖ್ಯವಾಗುತ್ತದೆ. ನೌಕರರು ಕೆಲವು ಪ್ರಮುಖ ಸಾಧನೆಗಳನ್ನು ಸಾಧಿಸಬಹುದು. ನಿಮ್ಮ ಉನ್ನತ ಅಧಿಕಾರಿಗಳು ನಿಮ್ಮ ಸಾಮರ್ಥ್ಯವನ್ನು ಬಹಳವಾಗಿ ಪ್ರಶಂಸಿಸುತ್ತಾರೆ, ಇದರಿಂದ ಶೀಘ್ರದಲ್ಲೇ ನಿಮ್ಮ ಪ್ರಗತಿಯ ಬಾಗಿಲು ತೆರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಬಹುದು. ಹಣಕಾಸಿನ ಬಿಕ್ಕಟ್ಟಿನಿಂದಾಗಿ ಅಪೂರ್ಣ ಕಾರ್ಯಗಳನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸಬಹುದು. ವೈವಾಹಿಕ ಜೀವನದಲ್ಲಿ ಹೊಂದಾಣಿಕೆ ಉಳಿಯುತ್ತದೆ. ಸಂಗಾತಿಯೊಂದಿಗೆ ಅದ್ಭುತ ದಿನವಾಗಿರುತ್ತದೆ, ಪ್ರವಾಸಗಳಿಗೆ ಈ ಸಮಯವೂ ಒಳ್ಳೆಯದು. ಎಲ್ಲರಿಂದ ಬೆಂಬಲ ಮತ್ತು ಪ್ರೀತಿ ಸಿಗುತ್ತದೆ. ನಿಮ್ಮ ಆರೋಗ್ಯವು ಸುಧಾರಿಸಿದಂತೆ ನೀವು ಹೆಚ್ಚು ಉತ್ತಮವಾಗುತ್ತೀರಿ.
ಅದೃಷ್ಟ ಬಣ್ಣ: ಬಿಳಿ
ಅದೃಷ್ಟ ಸಂಖ್ಯೆ: 10
ಅದೃಷ್ಟ ಸಮಯ: ಸಂಜೆ 6:00 ರಿಂದ 9:00 ರವರೆಗೆ
ತುಲಾ ರಾಶಿ
ಆಪ್ತರೊಂದಿಗಿನ ವ್ಯತ್ಯಾಸಗಳು ನಿಮ್ಮ ಭಾವನೆಗಳನ್ನು ಘಾಸಿಗೊಳಿಸಬಹುದು, ಆದರೆ ನೀವು ಉತ್ತಮವಾಗಿ ವರ್ತಿಸಿ. ಆರೋಗ್ಯದ ವಿಚಾರದಲ್ಲಿ ಇಂದು ಒಳ್ಳೆಯ ದಿನವಲ್ಲ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಬರಬಹುದು. ಸೃಜನಾತ್ಮಕ ಹವ್ಯಾಸಗಳು ನಿಮಗೆ ನಿರಾಳತೆಯನ್ನುಂಟು ಮಾಡುತ್ತದೆ. ಹಣಕಾಸಿನ ವಿಷಯಗಳ ಬಗ್ಗೆ ಸ್ವಲ್ಪ ಜಾಗೃತರಾಗಿರಬೇಕು. ಹಠಾತ್ ಹಣದ ನಷ್ಟದ ಜೊತೆಗೆ ಹಣ ಸಂಪಾದಿಸುವಲ್ಲಿ ನೀವು ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ತಂದೆ ನಿಮ್ಮ ವ್ಯವಹಾರದೊಂದಿಗೆ ಸಂಬಂಧ ಹೊಂದಿದ್ದರೆ, ಅವರಿಂದ ಸ್ವಲ್ಪ ಸಹಾಯ ಪಡೆಯುವ ಸಾಧ್ಯತೆಯಿದೆ. ಸಂಗಾತಿಯೊಂದಿಗೆ ಮಾತನಾಡುವ ಮೂಲಕ ವೈವಾಹಿಕ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ.
ಅದೃಷ್ಟ ಬಣ್ಣ: ಗುಲಾಬಿ
ಅದೃಷ್ಟ ಸಂಖ್ಯೆ: 22
ಅದೃಷ್ಟ ಸಮಯ: ಬೆಳಿಗ್ಗೆ 8:20 ರಿಂದ ರಾತ್ರಿ 8:40
ವೃಶ್ಚಿಕ ರಾಶಿ
ಇಂದು ವಿಷಯಗಳು ನಿಮ್ಮ ಪರವಾಗಿ ಇರುವಂತೆ ತೋರುತ್ತಿದೆ. ನಿಮ್ಮ ಯೋಜನೆಯ ಪ್ರಕಾರ ಪ್ರತಿಯೊಂದು ಕೆಲಸವೂ ಪೂರ್ಣಗೊಳ್ಳುವುದರಿಂದ ನೀವು ತುಂಬಾ ಆರಾಮಾಗಿರುತ್ತೀರಿ. ಕೆಲಸದ ವಿಷಯದಲ್ಲಿ ನಿರಂತರ ಪರಿಶ್ರಮ ಮತ್ತು ಪ್ರಯತ್ನವು ಅದ್ಭುತ ಫಲಿತಾಂಶಗಳನ್ನು ತರುತ್ತದೆ, ವಿಶೇಷವಾಗಿ ವ್ಯವಹಾರಕ್ಕೆ ಸಂಬಂಧಿಸಿದವರು ದೀರ್ಘಕಾಲದಿಂದ ಕಾಯುತ್ತಿದ್ದ ಫಲಿತಾಂಶವನ್ನು ಪಡೆಯಬಹುದು. ಉದ್ಯೋಗದಲ್ಲಿರುವ ಜನರು ಇಂದು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ವಿದೇಶಕ್ಕೆ ಹೋಗಬೇಕೆಂಬ ನಿಮ್ಮ ಆಸೆ ಈಡೇರಬಹುದು. ಪ್ರಯಾಣವು ಕೆಲಸಕ್ಕೆ ಸಂಬಂಧಿಸಿದ್ದರೂ ನಿಮಗೆ ತುಂಬಾ ಶುಭವಾಗಿರುತ್ತದೆ. ಇಂದು ವೈಯಕ್ತಿಕ ಜೀವನದ ಸಮಸ್ಯೆಗಳನ್ನು ಪರಿಹರಿಸಲಾಗುವುದು ಮತ್ತು ಚಿಂತೆಯಿಲ್ಲದೆ ನೆಮ್ಮದಿಯಾಗಿರುತ್ತೀರಿ.
ಅದೃಷ್ಟ ಬಣ್ಣ: ಕ್ರೀಮ್
ಅದೃಷ್ಟ ಸಂಖ್ಯೆ: 2
ಅದೃಷ್ಟ ಸಮಯ: ಸಂಜೆ 4:00 ರಿಂದ 11:10 ರವರೆಗೆ
ಧನು ರಾಶಿ
ಇಂದು ಕುಟುಂಬ ಜೀವನದಲ್ಲಿ ಕೆಲವು ಸಮಸ್ಯೆಗಳಿರಬಹುದು. ಕೆಲವು ಹಳೆಯ ಸಮಸ್ಯೆಗಳು ಉದ್ಭವಿಸುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಮನೆಯಲ್ಲಿ ಸಮಸ್ಯೆ ಉಂಟಾಗುತ್ತದೆ ಮತ್ತು ಮಾನಸಿಕ ಶಾಂತಿಯನ್ನು ಕಳೆದುಕೊಳ್ಳುತ್ತೀರಿ. ಯಾವುದೇ ರೀತಿಯ ಸವಾಲನ್ನು ಮೊದಲೇ ಎದುರಿಸಲು ನೀವೇ ತಯಾರಿ ಮಾಡಿಕೊಳ್ಳುವುದು ಉತ್ತಮ. ಯೋಚಿಸದೆ ಖರ್ಚು ಮಾಡಬೇಡಿ ಮತ್ತು ಅಗತ್ಯ ವಿಷಯಗಳಿಗೆ ಮಾತ್ರ ಖರ್ಚು ಮಾಡಿ. ಮಧ್ಯಾಹ್ನದ ನಂತರ ಕೆಲಸಕ್ಕೆ ಸಂಬಂಧಿತ ಪ್ರವಾಸಗಳು ಎದುರಾಗಬಹುದು. ಪ್ರೀತಿಯ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ತೊಂದರೆ ಅನುಭವಿಸುತ್ತಿದ್ದರೆ ಇಂದು ಸ್ವಲ್ಪ ಸುಧಾರಣೆಯಾಗಬಹುದು. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ಇಂದು ಗ್ರಹಗಳ ಸ್ಥಾನಗಳು ಕೆಲವು ಪ್ರಮುಖ ಸಮಸ್ಯೆಗಳತ್ತ ಬದಲಾಗುತ್ತಿವೆ.
ಅದೃಷ್ಟ ಬಣ್ಣ: ನೇರಳೆ
ಅದೃಷ್ಟ ಸಂಖ್ಯೆ: 30
ಅದೃಷ್ಟ ಸಮಯ: ಮಧ್ಯಾಹ್ನ 12:00 ರಿಂದ 7:30 ರವರೆಗೆ
ಮಕರ ರಾಶಿ
ಇಂದು ನೀವು ಮಾನಸಿಕ ಶಾಂತಿಯನ್ನು ಅನುಭವಿಸಲು ಧಾರ್ಮಿಕ ಸ್ಥಳದಲ್ಲಿ ಸ್ವಲ್ಪ ಸಮಯ ಕಳೆಯುವದು ಉತ್ತಮ. ಕೆಲವು ದಿನಗಳಿಂದ ನೀವು ಯಾವುದರ ಬಗ್ಗೆಯಾದರೂ ಚಿಂತೆ ಮಾಡುತ್ತಿದ್ದರೆ ಇಂದು ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಮೇಲಧಿಕಾರಿಗಳ ಸಂಪೂರ್ಣ ಬೆಂಬಲವನ್ನು ನೀವು ಪಡೆಯುವ ಕಾರಣ ಕೆಲಸದ ಒತ್ತಡವೂ ಇಂದು ಕಡಿಮೆಯಾಗುತ್ತದೆ. ಹಣಕಾಸಿನ ಸ್ಥಿತಿ ಇಂದು ಉತ್ತಮವಾಗಿರುತ್ತದೆ ಮತ್ತು ನೀವು ಸಹ ಹಣದಿಂದ ಸಾಕಷ್ಟು ತೃಪ್ತರಾಗುತ್ತೀರಿ. ವೈಯಕ್ತಿಕ ಜೀವನದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ ಆದ್ದರಿಂದ ಕುಟುಂಬಕ್ಕೆ ಹೆಚ್ಚಿನ ಸಮಯವನ್ನು ನೀಡಲು ಸಾಧ್ಯವಾಗುವುದಿಲ್ಲ. ಇಂದು ಭಾರವಾದ ವಸ್ತುಗಳನ್ನು ಎತ್ತುವುದನ್ನು ತಪ್ಪಿಸಿ.
ಅದೃಷ್ಟ ಬಣ್ಣ: ನೀಲಿ
ಅದೃಷ್ಟ ಸಂಖ್ಯೆ: 21
ಅದೃಷ್ಟ ಸಮಯ: ಬೆಳಿಗ್ಗೆ 5:15 ರಿಂದ ಮಧ್ಯಾಹ್ನ 12:00 ರವರೆಗೆ
ಕುಂಭ ರಾಶಿ
ಇಂದು ಹೆಚ್ಚು ಜಾಗರೂಕರಾಗಿರಿ. ಸಣ್ಣ ತೊಂದರೆಗಳು ನಿಮ್ಮ ಒತ್ತಡವನ್ನು ಹೆಚ್ಚಿಸಬಹುದು. ಮನೆಯಲ್ಲಿ ಯಾವುದೇ ತರ್ಕಬದ್ಧವಲ್ಲದ ಸಮಸ್ಯೆಗಳನ್ನು ಚರ್ಚಿಸುವುದನ್ನು ತಪ್ಪಿಸಬೇಕು. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳನ್ನು ಹೊಂದುವ ಸಾಧ್ಯತೆಯಿದೆ. ಇದು ನಿಮ್ಮ ಮನೆಯ ಶಾಂತಿಗೆ ಭಂಗವಾಗಬಹುದು. ಕೆಲಸದಲ್ಲಿ ಇಂದು ನೀವು ಸಾಕಷ್ಟು ಒತ್ತಡವನ್ನು ಅನುಭವಿಸುವಿರಿ. ವೈಯಕ್ತಿಕ ಜೀವನದ ಸಮಸ್ಯೆಗಳಿಂದಾಗಿ ಕೆಲಸದ ಮೇಲೆ ಕೇಂದ್ರೀಕರಿಸಲು ನಿಮಗೆ ಸಾಧ್ಯವಾಗುವುದಿಲ್ಲ. ಉನ್ನತ ಅಧಿಕಾರಿಗಳು ನಿಮ್ಮೊಂದಿಗೆ ಸರಿಯಾಗಿ ವ್ಯವಹರಿಸದಿರಬಹುದು, ಆದರೆ ಉದ್ಯಮಿಗಳು ಇಂದು ಸ್ವಲ್ಪ ನಷ್ಟವನ್ನು ಅನುಭವಿಸಬಹುದು. ಹಿಂದೆ ತೆಗೆದುಕೊಂಡ ನಿರ್ಧಾರವು ಇಂದು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯದ ಕಾರಣ ನಿಮ್ಮನ್ನು ನಿರಾಶೆಗೊಳಿಸಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಇಂದು ಹೂಡಿಕೆ ಮಾಡಲು ನಿಮಗೆ ಅವಕಾಶ ಸಿಕ್ಕರೆ ಎಚ್ಚರಿಕೆಯಿಂದ ಯೋಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಿ.
ಅದೃಷ್ಟ ಬಣ್ಣ: ಮರೂನ್
ಅದೃಷ್ಟ ಸಂಖ್ಯೆ: 6
ಅದೃಷ್ಟ ಸಮಯ: ಸಂಜೆ 7:15 ರಿಂದ 9:00 ರವರೆಗೆ
ಮೀನ ರಾಶಿ
ಇಂದು ನಿಮ್ಮ ಜೀವನದಲ್ಲಿ ಏನಾದರೂ ಮಹತ್ತರವಾದದ್ದು ಆಗಲಿದೆ. ನಿಮ್ಮ ಹೃದಯದ ಮಾತುಗಳನ್ನು ವಿಶೇಷ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಹುದು. ಪ್ರೀತಿಯ ವಿಷಯದಲ್ಲಿ ಸಮಯವು ಅನುಕೂಲಕರವಾಗಿರುವುದರಿಂದ ಉತ್ತರವು ಸಕಾರಾತ್ಮಕವಾಗಿರುವ ಸಾಧ್ಯವಿದೆ. ವಿವಾಹಿತರಿಗೆ ಇಂದು ತಮ್ಮ ಸಂಗಾತಿಯೊಂದಿಗೆ ಸ್ವಲ್ಪ ಪ್ರಣಯ ಸಮಯವನ್ನು ಕಳೆಯುವ ಅವಕಾಶವೂ ಸಿಗುತ್ತದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳು ಇಂದು ನಿಮ್ಮ ಮೇಲೆ ಸ್ವಲ್ಪ ಒತ್ತಡ ಹೇರಬಹುದು, ಇದ್ದಕ್ಕಿದ್ದಂತೆ ನಿಮಗೆ ದೊಡ್ಡ ಜವಾಬ್ದಾರಿಯನ್ನು ವಹಿಸಿಕೊಡಬಹುದು. ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸಲು ಉತ್ತಮ ಯೋಜನೆ ರೂಪಿಸಿ. ಆರೋಗ್ಯ ವಿಷಯಗಳು ಇಂದು ಉತ್ತಮವಾಗಿರುತ್ತವೆ. ಇಂದು ವಿಶ್ರಾಂತಿಗೆ ಸಾಕಷ್ಟು ಸಮಯವನ್ನು ಇಲ್ಲದೇ ಇರಬಹುದು, ಆದರೂ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.
ಅದೃಷ್ಟ ಬಣ್ಣ: ಗಾಢ ಕೆಂಪು
ಅದೃಷ್ಟ ಸಂಖ್ಯೆ: 3
ಅದೃಷ್ಟ ಸಮಯ: ಸಂಜೆ 4:30 ರಿಂದ 10:00 ರವರೆಗೆ
ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಶಾಸ್ತ್ರಂ ಪ್ರಧಾನ ಜ್ಯೋತಿಷ್ಯರು ಶ್ರೀ ಶ್ರೀನಿವಾಸನ್ ನಿಮ್ಮ 9886665656 ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಹಣಕಾಸು ಸತಿ ಪತಿ ಕಲಹ ಅತ್ತೆ-ಸೊಸೆ ಕಿರಿಕಿರಿ ಯಾವುದೇ ಸಮಸ್ಯೆಗಳಿಗೆ ಅಷ್ಟಮಂಗಳ 9886155755 ಪ್ರಶ್ನೆ ಹಾಕಿ ತಿಳಿಸುವರು # 37/17 27th ,12th main near adigas 4th block East jayanagar Bangalore 560011