Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಧನು ಸಂಕ್ರಾಂತಿ 2022: ಸೂರ್ಯನ ಸಂಚಾರ ಈ 4 ರಾಶಿಯವರಿಗೆ ಅದೃಷ್ಟ ತರಲಿದೆ
ಹಿಂದೂ ಆಚರಣೆಯಲ್ಲಿ ಧನು ಸಂಕ್ರಾತಿಗೆ ವಿಶೇಷ ಮಹತ್ವವಿದೆ. 2022ರಲ್ಲಿ ಪೌಷ ಮಾಸದ ಡಿಸೆಂಬರ್ 16ರಂದು ಸೂರ್ಯ ದೇವರು ಧನು ರಾಶಿಯಲ್ಲಿ ಸಂಕ್ರಮಿಸಲಿದ್ದಾನೆ. ಸಂಕ್ರಮಣವು 12 ರಾಶಿಚಕ್ರದ ಮೇಲೂ ಪ್ರಭಾವ ಬೀರಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಧನು ಸಂಕ್ರಾಂತಿಯ ಪ್ರಭಾವದಿಂದ ಕೆಲವು ರಾಶಿಗಳಿಗೆ ಅಶುಭವಾದರೆ ಇನ್ನು ಕೆಲವು ರಾಶಿಚಕ್ರದವರು ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಧನು ಸಂಕ್ರಾಂತಿಯ ಪರಿಣಾಮ ಜ್ಯೋತಿಶಾಸ್ತ್ರದ ಪ್ರಕಾರ ಸಿಂಹ, ಧನು, ಕುಂಭ, ಮೀನ ರಾಶಿಯ ಜನರು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಈ ರಾಶಿಯವರ ಜೀವನದಲ್ಲಿ ಸಕಾರಾತ್ಮಕವಾಗಿ ಬರುವ ಸೂಚನೆಗಳೇನು ಮುಂದೆ ನೋಡೋಣ:

ಧನು ಸಂಕ್ರಾಂತಿಯ ಮುಹೂರ್ತ
ಧನು ಸಂಕ್ರಾಂತಿಯ ಆರಂಭವಾಗುವ ಮುಹೂರ್ತ: 2022 ಡಿಸೆಂಬರ್ 16 ಬೆಳಗ್ಗೆ 10:02ಕ್ಕೆ
ಸೂರ್ಯೋದಯ: 2022 ಡಿಸೆಂಬರ್ 16 ಬೆಳಗ್ಗೆ 7:05ಕ್ಕೆ
ಸೂರ್ಯಾಸ್ತ: 2022 ಡಿಸೆಂಬರ್ 16 ಸಂಜೆ 5:39ಕ್ಕೆ
ಪುಣ್ಯ ಕಾಲ ಮುಹೂರ್ತ: 2022 ಡಿಸೆಂಬರ್ 16, ಬೆಳಗ್ಗೆ 10:02 ರಿಂದ ಡಿಸೆಂಬರ್ 16 ಸಂಜೆ 5:39 ರವರೆಗೆ
ಮಹಾ ಪುಣ್ಯ ಕಾಲ ಮುಹೂರ್ತ: ಡಿಸೆಂಬರ್ 16, ಬೆಳಗ್ಗೆ 10:02 ರಿಂದ ಡಿಸೆಂಬರ್ 16 ಬೆಳಗ್ಗೆ 10:26 ರವರೆಗೆ

ಸಿಂಹ ರಾಶಿ
ಸೂರ್ಯ ದೇವರು ಧನು ರಾಶಿಯಲ್ಲಿ ಸಂಕ್ರಮಿಸಿದಾಗ, ಅದು ಸಿಂಹ ರಾಶಿಯವರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ, ವಿದ್ಯಾರ್ಥಿಗಳು ವಿಶೇಷ ಪ್ರಯೋಜನಗಳನ್ನು ಪಡೆಯುತ್ತಾರೆ ಮತ್ತು ಅವರು ವಿವಿಧ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಇದರೊಂದಿಗೆ ಸಿಂಹ ರಾಶಿಯ ಜನರು ಈ ಅವಧಿಯಲ್ಲಿ ಆರ್ಥಿಕ ಲಾಭವನ್ನೂ ಪಡೆಯಬಹುದು.

ಧನು ರಾಶಿ
ಸೂರ್ಯ ದೇವನು ಈ ಅವಧಿಯಲ್ಲಿ ಧನು ರಾಶಿಯಲ್ಲಿಯೇ ಸಾಗುವುದರಿಂದ ಈ ರಾಶಿಯ ಜನರು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ. ಈ ಸಮಯದಲ್ಲಿ ಅವರು ತಮ್ಮ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಸಮಯದಲ್ಲಿ ಧನು ರಾಶಿಯವರ ಎಲ್ಲಾ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಅವರು ತಮ್ಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬಹುದು. ಇದರಿಂದ ಸಮಾಜದಲ್ಲಿ ಗೌರವ ಸಹ ಲಭಿಸುತ್ತದೆ.

ಕುಂಭ ರಾಶಿ
ಧನು ಸಂಕ್ರಾಂತಿಯ ಪ್ರಭಾವವು ಕುಂಭ ರಾಶಿಯವರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ತರುತ್ತವೆ. ಈ ಅವಧಿಯಲ್ಲಿ ಅವರು ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಈ ಸಮಯದಲ್ಲಿ ಕಠಿಣ ಪರಿಶ್ರಮಕ್ಕೆ ಅನುಗುಣವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

ಮೀನ ರಾಶಿ
ಧನು ಸಂಕ್ರಾಂತಿಯ ಪರಿಣಾಮದಿಂದ ಮೀನ ರಾಶಿಯವರ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಅವರು ತಮ್ಮ ಕೆಲಸದಲ್ಲಿ ಪ್ರಗತಿಯನ್ನು ಪಡೆಯುತ್ತಾರೆ ಮತ್ತು ಈ ಅವಧಿಯಲ್ಲಿ ಉದ್ಯೋಗಿಗಳು ಬಡ್ತಿ ಪಡೆಯಬಹುದು. ಉದ್ಯೋಗ ಹುಡುಕುತ್ತಿರುವ ಜನರು ಈ ಅವಧಿಯಲ್ಲಿ ಯಶಸ್ಸನ್ನು ಪಡೆಯಬಹುದು.



Click it and Unblock the Notifications
